Homeಮುಖಪುಟಕುರಿ-ಆಡು ರಕ್ತದ ಫ್ರೈ ಲಾಕಿ ಮಾಡುವುದು ಹೇಗೆ?: ಇಲ್ಲಿದೆ ಬೊಂಬಾಟ್ ರೆಸಿಪಿ

ಕುರಿ-ಆಡು ರಕ್ತದ ಫ್ರೈ ಲಾಕಿ ಮಾಡುವುದು ಹೇಗೆ?: ಇಲ್ಲಿದೆ ಬೊಂಬಾಟ್ ರೆಸಿಪಿ

ಹಳ್ಳಿಯ ಕಡೆ ಒಂದು ಮೇಕೆ ಅಥವಾ ಕುರಿ ರಕ್ತಕ್ಕೆ 50 ರೂ ನಿಂದ 100 ರೂ ವರೆಗೆ ಬೆಲೆ ಇರುತ್ತದೆ. ಲಾಕಿಯನ್ನು ಹಲವು ಹೋಟೆಲ್‌ಗಳಲ್ಲಿ ಸಹ ಮಾಡುತ್ತಾರೆ.

- Advertisement -
- Advertisement -

ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಕುರಿ ರಕ್ತದ ಫ್ರೈ ಲಾಕಿ ಬಗ್ಗೆ ಸಾಕಷ್ಟು ಚರ್ಚೆಗಳಾಗುತ್ತಿವೆ. ಸಂಗೀತ ದಿಗ್ಗಜ ಹಂಸಲೇಖರವರು ಮೈಸೂರಿನಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ “ಪೇಜಾವರ ಸ್ವಾಮಿಗಳು ದಲಿತರ ಕೇರಿಗೆ ಹೋಗಿದ್ದರಿಂದ ಏನೂ ಪ್ರಯೋಜನವಿಲ್ಲ. ಅವರಿಗೆ ಕೋಳಿ ಮಾಂಸ ಕೊಟ್ಟಿದ್ದರೆ ಪೇಜಾವರರು ತಿನ್ನುತ್ತಿದ್ದರೆ? ಹೋಗಲಿ ಕುರಿ ರಕ್ತದ ಫ್ರೈ ಕೊಟ್ಟರೆ ತಿನ್ನುತ್ತಿದ್ದರೆ” ಎಂದು ಪ್ರಶ್ನಿಸಿದ್ದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿ ಯಾರಾದರೂ ಕುರಿ ರಕ್ತ ಕುಡಿಯುತ್ತಾರೆಯೇ? ಫ್ರೈ ಮಾಡುತ್ತಾರೆಯೇ ಎಂದು ಪ್ರಶ್ನಿಸುತ್ತಿದ್ದಾರೆ. ಒಂದಷ್ಟು ಜನರಿಗೆ ಇದರ ಕುರಿತು ಮಾಹಿತಿಯೇ ಇಲ್ಲ. ಇನ್ನು ಮತ್ತಷ್ಟು ಜನರು ಅದರ ಸ್ವಾದದ ಬಗ್ಗೆ ಬರೆಯುತ್ತಿದ್ದಾರೆ. ಆದರೆ ನಿಜವಾಗಿಯೂ ಕುರಿ ರಕ್ತದ ಫ್ರೈ ಎಂಬುದು ಬಹಳ ವರ್ಷದಿಂದ ಚಾಲ್ತಿಯಲ್ಲಿರುವ ಜನಪ್ರಿಯ ಆಹಾರವಾಗಿದೆ. ಹಾಗಾಗಿ ಕುರಿ-ಆಡು ರಕ್ತದ ಫ್ರೈ ಲಾಕಿ ಮಾಡುವುದು ಹೇಗೆ ಎಂಬುದರ ಮಾಹಿತಿ ಇಲ್ಲಿದೆ.

ಕುರಿ ಅಥವಾ ಮೇಕೆಯನ್ನು ಕೊಯ್ಯುವ ಮೊದಲೇ ಅದರ ರಕ್ತ ಯಾರಿಗೆ ಬೇಕೆಂದು ನಿಗಧಿಯಾಗಿರುತ್ತದೆ. ನಮಗೆ ಬೇಕು, ನಮಗೆ ಬೇಕು ಎಂಬ ಪೈಪೋಟಿ ಸಹ ಇರುತ್ತದೆ. ಕುರಿಯನ್ನು ಕೊಯ್ಯುವಾಗ ಶುಚಿಯಾದ ಒಂದು ದೊಡ್ಡ ಬಟ್ಟಲಿನಲ್ಲಿ ಸ್ವಲ್ಪ ಉಪ್ಪು ಮತ್ತು ಹುಣಿಸೆ ರಸ ಹಾಕಿ ಇಟ್ಟುಕೊಂಡು ಅದಕ್ಕೆ ಪೂರ್ತಿ ರಕ್ತವನ್ನು ಬಸಿದುಕೊಳ್ಳಬೇಕು. ನಂತರ ಸ್ವಲ್ಪ ಹೊತ್ತಿನಲ್ಲೇ ಆ ಬಿಸಿ ರಕ್ತ ತಣಿದು ಹೆಪ್ಪುಗಟ್ಟುತ್ತದೆ, ಅಂದರೆ ಗಟ್ಟಿಯಾಗಿರುತ್ತದೆ. ಸ್ವಲ್ಪ ನೀರು ಸಹ ಬಿಟ್ಟಿಕೊಂಡಿರುತ್ತದೆ. ಆ ನೀರನ್ನು ಚೆಲ್ಲಿ ಬದಲಿಗೆ ಶುದ್ಧ ನೀರು ಹಾಕಿ ಅದನ್ನು ಹದವಾಗಿ ಬೇಯಿಸಿಕೊಳ್ಳಬೇಕು. ಎರಡು ಕಡೆ ತಿರುವಿಹಾಕಿ ಒಂದು ಹದಕ್ಕೆ ಬೆಂದ ನಂತರ ನೀರನ್ನು ಚೆಲ್ಲಿಬಿಡಬೇಕು. ನಂತರ ಅದನ್ನು ಚೆನ್ನಾಗಿ ಸ್ಪೂನ್, ಚಾಕು ಅಥವಾ ಕೈಯಲ್ಲಿ ಪುಡಿ ಮಾಡಿಕೊಳ್ಳಬೇಕು.

ನಂತರ ಈರುಳ್ಳಿ, ಹಸಿರು ಮೆಣಸಿನಕಾಯಿಯನ್ನು ಸಣ್ಣಗೆ ಹಚ್ಚಿಕೊಳ್ಳಬೇಕು. ಜೊತೆಗೆ ಅರ್ಧ ಹೋಳು ತೆಂಗಿನ ಕಾಯಿಯನ್ನು ತುರಿದುಕೊಳ್ಳಬೇಕು. ಸ್ಟೌವ್ ಹಚ್ಚಿ ಬಾಣಲಿಯಿಟ್ಟು ಸ್ವಲ್ಪ ಎಣ್ಣೆ ಹಾಕಿ ಒಗ್ಗರಣೆ ಹಾಕಬೇಕು. ಕರಿಬೇವು ಹಾಕಿ, ಹಸಿರು ಮೆಣಸಿನ ಕಾಯಿ, ಈರುಳ್ಳಿ ಬೆಂದ ನಂತರ ರಕ್ತದ ಪುಡಿಯನ್ನು ಸೇರಿಸಿ ತಿರುಗಿಸಬೇಕು. ತೆಂಗಿನ ತುರಿ ಹಾಕಿ, ಸ್ವಲ್ಪ ಅರಿಶಿಣ ಪುಡಿ ಮತ್ತು ಉಪ್ಪು ಹಾಕಿ ಸಣ್ಣ ಉರಿಯಲ್ಲಿ ಚೆನ್ನಾಗಿ ಫ್ರೈ ಮಾಡಬೇಕು. ಖಾರ ಬೇಕೆಂದರೆ ಸ್ವಲ್ಪ ಮೆಣಸಿನಪುಡಿಯನ್ನು ಸೇರಿಸಬಹುದು. ಚೆನ್ನಾಗಿ ಫ್ರೈ ಆದ ನಂತರ ಇಳಿಸಿ ಸೇವಿಸಬಹುದು.

ಇದಕ್ಕೆ ಲಾಕಿ ಎಂದು ಕರೆಯುತ್ತಾರೆ. ಇದರಿಂದ ಎದೆನೋವು ಗುಣವಾಗುತ್ತದೆ, ಬಹಳ ಪೌಷ್ಠಿಕಾಂಶದ ಆಹಾರ ಎಂದು ಹಳ್ಳಿಯ ಕೆಲವರು ಹೇಳುತ್ತಾರೆ. ಎದೆನೋವು ಗುಣದ ಬಗ್ಗೆ ನಮಗೆ ಗೊತ್ತಿಲ್ಲ, ಆದರೆ ಲಾಕಿ ಸಕತ್ ರುಚಿ ಇರುತ್ತದೆ ಎನ್ನುವುದು ಸತ್ಯ.

ಹಳ್ಳಿಯ ಕಡೆ ಒಂದು ಮೇಕೆ ಅಥವಾ ಕುರಿ ರಕ್ತಕ್ಕೆ 50 ರೂ ನಿಂದ 100 ರೂ ವರೆಗೆ ಬೆಲೆ ಇರುತ್ತದೆ. ಲಾಕಿಯನ್ನು ಹಲವು ಹೋಟೆಲ್‌ಗಳಲ್ಲಿ ಸಹ ಮಾಡುತ್ತಾರೆ. ಬೆಂಗಳೂರಿನಲ್ಲಿ ‘ವಿದ್ಯಾ ಪೀಠ’ ವೃತ್ತದ ಪಕ್ಕದಲ್ಲೇ ಇರುವ ಶಂಕರ್‌ನಾಗ್ ವೃತ್ತದಲ್ಲಿನ ಹಲವು ಮಾಂಸಹಾರದ ಹೋಟೆಲ್‌ಗಳಲ್ಲಿ ಪ್ರತಿ ಮಧ್ಯಾಹ್ನ ಲಾಕಿ ದೊರೆಯುತ್ತದೆ. ಆಸಕ್ತಿ ಇರುವವರ ಹೋಗಿ ಸವಿಯಬಹುದು.


ಇದನ್ನೂ ಓದಿ: ತಾತಾ, ನೀವು ಎಂದಾದರೂ ಮಾಂಸ ತಿಂದಿದ್ದೀರಾ ಎಂಬ ಪ್ರಶ್ನೆಗೆ ದೊರೆಸ್ವಾಮಿಯವರ ಉತ್ತರವೇನು ಗೊತ್ತೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...