Homeಮುಖಪುಟಕುರಿ-ಆಡು ರಕ್ತದ ಫ್ರೈ ಲಾಕಿ ಮಾಡುವುದು ಹೇಗೆ?: ಇಲ್ಲಿದೆ ಬೊಂಬಾಟ್ ರೆಸಿಪಿ

ಕುರಿ-ಆಡು ರಕ್ತದ ಫ್ರೈ ಲಾಕಿ ಮಾಡುವುದು ಹೇಗೆ?: ಇಲ್ಲಿದೆ ಬೊಂಬಾಟ್ ರೆಸಿಪಿ

ಹಳ್ಳಿಯ ಕಡೆ ಒಂದು ಮೇಕೆ ಅಥವಾ ಕುರಿ ರಕ್ತಕ್ಕೆ 50 ರೂ ನಿಂದ 100 ರೂ ವರೆಗೆ ಬೆಲೆ ಇರುತ್ತದೆ. ಲಾಕಿಯನ್ನು ಹಲವು ಹೋಟೆಲ್‌ಗಳಲ್ಲಿ ಸಹ ಮಾಡುತ್ತಾರೆ.

- Advertisement -
- Advertisement -

ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಕುರಿ ರಕ್ತದ ಫ್ರೈ ಲಾಕಿ ಬಗ್ಗೆ ಸಾಕಷ್ಟು ಚರ್ಚೆಗಳಾಗುತ್ತಿವೆ. ಸಂಗೀತ ದಿಗ್ಗಜ ಹಂಸಲೇಖರವರು ಮೈಸೂರಿನಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ “ಪೇಜಾವರ ಸ್ವಾಮಿಗಳು ದಲಿತರ ಕೇರಿಗೆ ಹೋಗಿದ್ದರಿಂದ ಏನೂ ಪ್ರಯೋಜನವಿಲ್ಲ. ಅವರಿಗೆ ಕೋಳಿ ಮಾಂಸ ಕೊಟ್ಟಿದ್ದರೆ ಪೇಜಾವರರು ತಿನ್ನುತ್ತಿದ್ದರೆ? ಹೋಗಲಿ ಕುರಿ ರಕ್ತದ ಫ್ರೈ ಕೊಟ್ಟರೆ ತಿನ್ನುತ್ತಿದ್ದರೆ” ಎಂದು ಪ್ರಶ್ನಿಸಿದ್ದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿ ಯಾರಾದರೂ ಕುರಿ ರಕ್ತ ಕುಡಿಯುತ್ತಾರೆಯೇ? ಫ್ರೈ ಮಾಡುತ್ತಾರೆಯೇ ಎಂದು ಪ್ರಶ್ನಿಸುತ್ತಿದ್ದಾರೆ. ಒಂದಷ್ಟು ಜನರಿಗೆ ಇದರ ಕುರಿತು ಮಾಹಿತಿಯೇ ಇಲ್ಲ. ಇನ್ನು ಮತ್ತಷ್ಟು ಜನರು ಅದರ ಸ್ವಾದದ ಬಗ್ಗೆ ಬರೆಯುತ್ತಿದ್ದಾರೆ. ಆದರೆ ನಿಜವಾಗಿಯೂ ಕುರಿ ರಕ್ತದ ಫ್ರೈ ಎಂಬುದು ಬಹಳ ವರ್ಷದಿಂದ ಚಾಲ್ತಿಯಲ್ಲಿರುವ ಜನಪ್ರಿಯ ಆಹಾರವಾಗಿದೆ. ಹಾಗಾಗಿ ಕುರಿ-ಆಡು ರಕ್ತದ ಫ್ರೈ ಲಾಕಿ ಮಾಡುವುದು ಹೇಗೆ ಎಂಬುದರ ಮಾಹಿತಿ ಇಲ್ಲಿದೆ.

ಕುರಿ ಅಥವಾ ಮೇಕೆಯನ್ನು ಕೊಯ್ಯುವ ಮೊದಲೇ ಅದರ ರಕ್ತ ಯಾರಿಗೆ ಬೇಕೆಂದು ನಿಗಧಿಯಾಗಿರುತ್ತದೆ. ನಮಗೆ ಬೇಕು, ನಮಗೆ ಬೇಕು ಎಂಬ ಪೈಪೋಟಿ ಸಹ ಇರುತ್ತದೆ. ಕುರಿಯನ್ನು ಕೊಯ್ಯುವಾಗ ಶುಚಿಯಾದ ಒಂದು ದೊಡ್ಡ ಬಟ್ಟಲಿನಲ್ಲಿ ಸ್ವಲ್ಪ ಉಪ್ಪು ಮತ್ತು ಹುಣಿಸೆ ರಸ ಹಾಕಿ ಇಟ್ಟುಕೊಂಡು ಅದಕ್ಕೆ ಪೂರ್ತಿ ರಕ್ತವನ್ನು ಬಸಿದುಕೊಳ್ಳಬೇಕು. ನಂತರ ಸ್ವಲ್ಪ ಹೊತ್ತಿನಲ್ಲೇ ಆ ಬಿಸಿ ರಕ್ತ ತಣಿದು ಹೆಪ್ಪುಗಟ್ಟುತ್ತದೆ, ಅಂದರೆ ಗಟ್ಟಿಯಾಗಿರುತ್ತದೆ. ಸ್ವಲ್ಪ ನೀರು ಸಹ ಬಿಟ್ಟಿಕೊಂಡಿರುತ್ತದೆ. ಆ ನೀರನ್ನು ಚೆಲ್ಲಿ ಬದಲಿಗೆ ಶುದ್ಧ ನೀರು ಹಾಕಿ ಅದನ್ನು ಹದವಾಗಿ ಬೇಯಿಸಿಕೊಳ್ಳಬೇಕು. ಎರಡು ಕಡೆ ತಿರುವಿಹಾಕಿ ಒಂದು ಹದಕ್ಕೆ ಬೆಂದ ನಂತರ ನೀರನ್ನು ಚೆಲ್ಲಿಬಿಡಬೇಕು. ನಂತರ ಅದನ್ನು ಚೆನ್ನಾಗಿ ಸ್ಪೂನ್, ಚಾಕು ಅಥವಾ ಕೈಯಲ್ಲಿ ಪುಡಿ ಮಾಡಿಕೊಳ್ಳಬೇಕು.

ನಂತರ ಈರುಳ್ಳಿ, ಹಸಿರು ಮೆಣಸಿನಕಾಯಿಯನ್ನು ಸಣ್ಣಗೆ ಹಚ್ಚಿಕೊಳ್ಳಬೇಕು. ಜೊತೆಗೆ ಅರ್ಧ ಹೋಳು ತೆಂಗಿನ ಕಾಯಿಯನ್ನು ತುರಿದುಕೊಳ್ಳಬೇಕು. ಸ್ಟೌವ್ ಹಚ್ಚಿ ಬಾಣಲಿಯಿಟ್ಟು ಸ್ವಲ್ಪ ಎಣ್ಣೆ ಹಾಕಿ ಒಗ್ಗರಣೆ ಹಾಕಬೇಕು. ಕರಿಬೇವು ಹಾಕಿ, ಹಸಿರು ಮೆಣಸಿನ ಕಾಯಿ, ಈರುಳ್ಳಿ ಬೆಂದ ನಂತರ ರಕ್ತದ ಪುಡಿಯನ್ನು ಸೇರಿಸಿ ತಿರುಗಿಸಬೇಕು. ತೆಂಗಿನ ತುರಿ ಹಾಕಿ, ಸ್ವಲ್ಪ ಅರಿಶಿಣ ಪುಡಿ ಮತ್ತು ಉಪ್ಪು ಹಾಕಿ ಸಣ್ಣ ಉರಿಯಲ್ಲಿ ಚೆನ್ನಾಗಿ ಫ್ರೈ ಮಾಡಬೇಕು. ಖಾರ ಬೇಕೆಂದರೆ ಸ್ವಲ್ಪ ಮೆಣಸಿನಪುಡಿಯನ್ನು ಸೇರಿಸಬಹುದು. ಚೆನ್ನಾಗಿ ಫ್ರೈ ಆದ ನಂತರ ಇಳಿಸಿ ಸೇವಿಸಬಹುದು.

ಇದಕ್ಕೆ ಲಾಕಿ ಎಂದು ಕರೆಯುತ್ತಾರೆ. ಇದರಿಂದ ಎದೆನೋವು ಗುಣವಾಗುತ್ತದೆ, ಬಹಳ ಪೌಷ್ಠಿಕಾಂಶದ ಆಹಾರ ಎಂದು ಹಳ್ಳಿಯ ಕೆಲವರು ಹೇಳುತ್ತಾರೆ. ಎದೆನೋವು ಗುಣದ ಬಗ್ಗೆ ನಮಗೆ ಗೊತ್ತಿಲ್ಲ, ಆದರೆ ಲಾಕಿ ಸಕತ್ ರುಚಿ ಇರುತ್ತದೆ ಎನ್ನುವುದು ಸತ್ಯ.

ಹಳ್ಳಿಯ ಕಡೆ ಒಂದು ಮೇಕೆ ಅಥವಾ ಕುರಿ ರಕ್ತಕ್ಕೆ 50 ರೂ ನಿಂದ 100 ರೂ ವರೆಗೆ ಬೆಲೆ ಇರುತ್ತದೆ. ಲಾಕಿಯನ್ನು ಹಲವು ಹೋಟೆಲ್‌ಗಳಲ್ಲಿ ಸಹ ಮಾಡುತ್ತಾರೆ. ಬೆಂಗಳೂರಿನಲ್ಲಿ ‘ವಿದ್ಯಾ ಪೀಠ’ ವೃತ್ತದ ಪಕ್ಕದಲ್ಲೇ ಇರುವ ಶಂಕರ್‌ನಾಗ್ ವೃತ್ತದಲ್ಲಿನ ಹಲವು ಮಾಂಸಹಾರದ ಹೋಟೆಲ್‌ಗಳಲ್ಲಿ ಪ್ರತಿ ಮಧ್ಯಾಹ್ನ ಲಾಕಿ ದೊರೆಯುತ್ತದೆ. ಆಸಕ್ತಿ ಇರುವವರ ಹೋಗಿ ಸವಿಯಬಹುದು.


ಇದನ್ನೂ ಓದಿ: ತಾತಾ, ನೀವು ಎಂದಾದರೂ ಮಾಂಸ ತಿಂದಿದ್ದೀರಾ ಎಂಬ ಪ್ರಶ್ನೆಗೆ ದೊರೆಸ್ವಾಮಿಯವರ ಉತ್ತರವೇನು ಗೊತ್ತೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...