Homeಮುಖಪುಟಕುರಿ-ಆಡು ರಕ್ತದ ಫ್ರೈ ಲಾಕಿ ಮಾಡುವುದು ಹೇಗೆ?: ಇಲ್ಲಿದೆ ಬೊಂಬಾಟ್ ರೆಸಿಪಿ

ಕುರಿ-ಆಡು ರಕ್ತದ ಫ್ರೈ ಲಾಕಿ ಮಾಡುವುದು ಹೇಗೆ?: ಇಲ್ಲಿದೆ ಬೊಂಬಾಟ್ ರೆಸಿಪಿ

ಹಳ್ಳಿಯ ಕಡೆ ಒಂದು ಮೇಕೆ ಅಥವಾ ಕುರಿ ರಕ್ತಕ್ಕೆ 50 ರೂ ನಿಂದ 100 ರೂ ವರೆಗೆ ಬೆಲೆ ಇರುತ್ತದೆ. ಲಾಕಿಯನ್ನು ಹಲವು ಹೋಟೆಲ್‌ಗಳಲ್ಲಿ ಸಹ ಮಾಡುತ್ತಾರೆ.

- Advertisement -
- Advertisement -

ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಕುರಿ ರಕ್ತದ ಫ್ರೈ ಲಾಕಿ ಬಗ್ಗೆ ಸಾಕಷ್ಟು ಚರ್ಚೆಗಳಾಗುತ್ತಿವೆ. ಸಂಗೀತ ದಿಗ್ಗಜ ಹಂಸಲೇಖರವರು ಮೈಸೂರಿನಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ “ಪೇಜಾವರ ಸ್ವಾಮಿಗಳು ದಲಿತರ ಕೇರಿಗೆ ಹೋಗಿದ್ದರಿಂದ ಏನೂ ಪ್ರಯೋಜನವಿಲ್ಲ. ಅವರಿಗೆ ಕೋಳಿ ಮಾಂಸ ಕೊಟ್ಟಿದ್ದರೆ ಪೇಜಾವರರು ತಿನ್ನುತ್ತಿದ್ದರೆ? ಹೋಗಲಿ ಕುರಿ ರಕ್ತದ ಫ್ರೈ ಕೊಟ್ಟರೆ ತಿನ್ನುತ್ತಿದ್ದರೆ” ಎಂದು ಪ್ರಶ್ನಿಸಿದ್ದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿ ಯಾರಾದರೂ ಕುರಿ ರಕ್ತ ಕುಡಿಯುತ್ತಾರೆಯೇ? ಫ್ರೈ ಮಾಡುತ್ತಾರೆಯೇ ಎಂದು ಪ್ರಶ್ನಿಸುತ್ತಿದ್ದಾರೆ. ಒಂದಷ್ಟು ಜನರಿಗೆ ಇದರ ಕುರಿತು ಮಾಹಿತಿಯೇ ಇಲ್ಲ. ಇನ್ನು ಮತ್ತಷ್ಟು ಜನರು ಅದರ ಸ್ವಾದದ ಬಗ್ಗೆ ಬರೆಯುತ್ತಿದ್ದಾರೆ. ಆದರೆ ನಿಜವಾಗಿಯೂ ಕುರಿ ರಕ್ತದ ಫ್ರೈ ಎಂಬುದು ಬಹಳ ವರ್ಷದಿಂದ ಚಾಲ್ತಿಯಲ್ಲಿರುವ ಜನಪ್ರಿಯ ಆಹಾರವಾಗಿದೆ. ಹಾಗಾಗಿ ಕುರಿ-ಆಡು ರಕ್ತದ ಫ್ರೈ ಲಾಕಿ ಮಾಡುವುದು ಹೇಗೆ ಎಂಬುದರ ಮಾಹಿತಿ ಇಲ್ಲಿದೆ.

ಕುರಿ ಅಥವಾ ಮೇಕೆಯನ್ನು ಕೊಯ್ಯುವ ಮೊದಲೇ ಅದರ ರಕ್ತ ಯಾರಿಗೆ ಬೇಕೆಂದು ನಿಗಧಿಯಾಗಿರುತ್ತದೆ. ನಮಗೆ ಬೇಕು, ನಮಗೆ ಬೇಕು ಎಂಬ ಪೈಪೋಟಿ ಸಹ ಇರುತ್ತದೆ. ಕುರಿಯನ್ನು ಕೊಯ್ಯುವಾಗ ಶುಚಿಯಾದ ಒಂದು ದೊಡ್ಡ ಬಟ್ಟಲಿನಲ್ಲಿ ಸ್ವಲ್ಪ ಉಪ್ಪು ಮತ್ತು ಹುಣಿಸೆ ರಸ ಹಾಕಿ ಇಟ್ಟುಕೊಂಡು ಅದಕ್ಕೆ ಪೂರ್ತಿ ರಕ್ತವನ್ನು ಬಸಿದುಕೊಳ್ಳಬೇಕು. ನಂತರ ಸ್ವಲ್ಪ ಹೊತ್ತಿನಲ್ಲೇ ಆ ಬಿಸಿ ರಕ್ತ ತಣಿದು ಹೆಪ್ಪುಗಟ್ಟುತ್ತದೆ, ಅಂದರೆ ಗಟ್ಟಿಯಾಗಿರುತ್ತದೆ. ಸ್ವಲ್ಪ ನೀರು ಸಹ ಬಿಟ್ಟಿಕೊಂಡಿರುತ್ತದೆ. ಆ ನೀರನ್ನು ಚೆಲ್ಲಿ ಬದಲಿಗೆ ಶುದ್ಧ ನೀರು ಹಾಕಿ ಅದನ್ನು ಹದವಾಗಿ ಬೇಯಿಸಿಕೊಳ್ಳಬೇಕು. ಎರಡು ಕಡೆ ತಿರುವಿಹಾಕಿ ಒಂದು ಹದಕ್ಕೆ ಬೆಂದ ನಂತರ ನೀರನ್ನು ಚೆಲ್ಲಿಬಿಡಬೇಕು. ನಂತರ ಅದನ್ನು ಚೆನ್ನಾಗಿ ಸ್ಪೂನ್, ಚಾಕು ಅಥವಾ ಕೈಯಲ್ಲಿ ಪುಡಿ ಮಾಡಿಕೊಳ್ಳಬೇಕು.

ನಂತರ ಈರುಳ್ಳಿ, ಹಸಿರು ಮೆಣಸಿನಕಾಯಿಯನ್ನು ಸಣ್ಣಗೆ ಹಚ್ಚಿಕೊಳ್ಳಬೇಕು. ಜೊತೆಗೆ ಅರ್ಧ ಹೋಳು ತೆಂಗಿನ ಕಾಯಿಯನ್ನು ತುರಿದುಕೊಳ್ಳಬೇಕು. ಸ್ಟೌವ್ ಹಚ್ಚಿ ಬಾಣಲಿಯಿಟ್ಟು ಸ್ವಲ್ಪ ಎಣ್ಣೆ ಹಾಕಿ ಒಗ್ಗರಣೆ ಹಾಕಬೇಕು. ಕರಿಬೇವು ಹಾಕಿ, ಹಸಿರು ಮೆಣಸಿನ ಕಾಯಿ, ಈರುಳ್ಳಿ ಬೆಂದ ನಂತರ ರಕ್ತದ ಪುಡಿಯನ್ನು ಸೇರಿಸಿ ತಿರುಗಿಸಬೇಕು. ತೆಂಗಿನ ತುರಿ ಹಾಕಿ, ಸ್ವಲ್ಪ ಅರಿಶಿಣ ಪುಡಿ ಮತ್ತು ಉಪ್ಪು ಹಾಕಿ ಸಣ್ಣ ಉರಿಯಲ್ಲಿ ಚೆನ್ನಾಗಿ ಫ್ರೈ ಮಾಡಬೇಕು. ಖಾರ ಬೇಕೆಂದರೆ ಸ್ವಲ್ಪ ಮೆಣಸಿನಪುಡಿಯನ್ನು ಸೇರಿಸಬಹುದು. ಚೆನ್ನಾಗಿ ಫ್ರೈ ಆದ ನಂತರ ಇಳಿಸಿ ಸೇವಿಸಬಹುದು.

ಇದಕ್ಕೆ ಲಾಕಿ ಎಂದು ಕರೆಯುತ್ತಾರೆ. ಇದರಿಂದ ಎದೆನೋವು ಗುಣವಾಗುತ್ತದೆ, ಬಹಳ ಪೌಷ್ಠಿಕಾಂಶದ ಆಹಾರ ಎಂದು ಹಳ್ಳಿಯ ಕೆಲವರು ಹೇಳುತ್ತಾರೆ. ಎದೆನೋವು ಗುಣದ ಬಗ್ಗೆ ನಮಗೆ ಗೊತ್ತಿಲ್ಲ, ಆದರೆ ಲಾಕಿ ಸಕತ್ ರುಚಿ ಇರುತ್ತದೆ ಎನ್ನುವುದು ಸತ್ಯ.

ಹಳ್ಳಿಯ ಕಡೆ ಒಂದು ಮೇಕೆ ಅಥವಾ ಕುರಿ ರಕ್ತಕ್ಕೆ 50 ರೂ ನಿಂದ 100 ರೂ ವರೆಗೆ ಬೆಲೆ ಇರುತ್ತದೆ. ಲಾಕಿಯನ್ನು ಹಲವು ಹೋಟೆಲ್‌ಗಳಲ್ಲಿ ಸಹ ಮಾಡುತ್ತಾರೆ. ಬೆಂಗಳೂರಿನಲ್ಲಿ ‘ವಿದ್ಯಾ ಪೀಠ’ ವೃತ್ತದ ಪಕ್ಕದಲ್ಲೇ ಇರುವ ಶಂಕರ್‌ನಾಗ್ ವೃತ್ತದಲ್ಲಿನ ಹಲವು ಮಾಂಸಹಾರದ ಹೋಟೆಲ್‌ಗಳಲ್ಲಿ ಪ್ರತಿ ಮಧ್ಯಾಹ್ನ ಲಾಕಿ ದೊರೆಯುತ್ತದೆ. ಆಸಕ್ತಿ ಇರುವವರ ಹೋಗಿ ಸವಿಯಬಹುದು.


ಇದನ್ನೂ ಓದಿ: ತಾತಾ, ನೀವು ಎಂದಾದರೂ ಮಾಂಸ ತಿಂದಿದ್ದೀರಾ ಎಂಬ ಪ್ರಶ್ನೆಗೆ ದೊರೆಸ್ವಾಮಿಯವರ ಉತ್ತರವೇನು ಗೊತ್ತೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...