Homeಅಂಕಣಗಳುನಮ್ಮ ತೋಟದ ಸಾಲಿಗೆ ನೀವೂ ಬನ್ನಿನಮ್ಮ ತೋಟದ ಸಾಲಿಗೆ ನೀವೂ ಬನ್ನಿ-7: ಬೇಲಿಯೆಂದರೆ ಹಸಿರ ಕಲೆ, ಇಲಿ, ಇಲಿಬುಲ್ಡೆ ಇತ್ಯಾದಿ...

ನಮ್ಮ ತೋಟದ ಸಾಲಿಗೆ ನೀವೂ ಬನ್ನಿ-7: ಬೇಲಿಯೆಂದರೆ ಹಸಿರ ಕಲೆ, ಇಲಿ, ಇಲಿಬುಲ್ಡೆ ಇತ್ಯಾದಿ…

ಹಸಿರು ಬೇಲಿಗಳಿರುವ ತೆಂಗಿನ ತೋಟದಲ್ಲಿ ನುಸಿ ರೋಗ ನಿಯಂತ್ರಣದಲ್ಲಿರುತ್ತದೆ ಎಂದು ನಮ್ಮ ಅನುಭವಕ್ಕೆ ಬಂದಿದೆ.

- Advertisement -
- Advertisement -

ಹಸಿರು ಬೇಲಿಗಳು ತೋಟ ಹೊಲಗಳ ಜೀವಾಳ. ಆದರೀಗ ಮುಳ್ಳು ತಂತಿ ಬೇಲಿಗಳು ಹೆಚ್ಚಾಗಿವೆ. ನಾವು ಹಸಿರು ಬೇಲಿಗಳನ್ನು ಉಳಿಸಿಕೊಂಡಿದ್ದೇವೆ  ಏಕೆಂದರೆ ಅವು ನಮಗೆ ಬೇಕಾದಷ್ಟು ಹಸಿರು ಸೊಪ್ಪು ಕೊಡುತ್ತವೆ, ಕೀಟಗಳ ನಿಯಂತ್ರಣ ಮಾಡುತ್ತವೆ, ಗಾಳಿತಡೆಗಳಾಗಿ ನಿಂತು ಮಣ್ಣಿನ ಸವಕಳಿ ಆಗದಂತೆ ನೋಡಿಕೊಳ್ಳುತ್ತವೆ, ಆಗೊಮ್ಮೆ ಈಗೊಮ್ಮೆ ಜೇನು ತುಪ್ಪ ಕೊಡುತ್ತವೆ. ಬೇಲಿಗೆ ಹೊಂದಿಕೊಂಡಂತೆ ಅನೇಕ ಜಾತಿಯ ಗಿಡಮರಗಳು ಅವರಷ್ಟಕ್ಕೆ ಅವು ಬೆಳೆದು ನಿಲ್ಲುತ್ತವೆ.

ಬೇಲಿಯನ್ನು ವರ್ಷಕ್ಕೆ ಎರಡು ಮೂರು ಬಾರಿ ಸವರಿದರೂ ಅದು ಚಿಮ್ಮಿ ಚಿಗುರಿ ಬೆಳೆಯುತ್ತದೆ. ಯಾಕೆಂದರೆ ಅದರ ಅಡಿಯಲ್ಲಿ ಅಪಾರ ತೇವಾಂಶ ಮತ್ತು ಗೊಬ್ಬರ ಇರುತ್ತದೆ. ಅದು ನಾವು ಹಾಕಿದ್ದಲ್ಲ, ಅಲ್ಲೆ ಉತ್ಪತ್ತಿಯಾದದ್ದು ಅದಕ್ಕೆ ಆ ಬೇಲಿಗೆ ಅಷ್ಟು ಶಕ್ತಿ.

ಹಸಿರು ಬೇಲಿಯನ್ನು ಚಪ್ಪರದ ರೀತಿಯಲ್ಲಿ ಬಳಸಿಕೊಂಡು ಮಳೆಗಾಲದಲ್ಲಿ ಬಳ್ಳಿ ತರಕಾರಿ ಬೆಳೆಯಬಹುದು. ಬೇಲಿಗೆ ಹೊಂದಿಕೊಂಡಂತೆ 2 ಅಡಿ ಗುಂಡಿ ತೆಗೆದು ಒಳ್ಳೆ ಗೊಬ್ಬರ ತುಂಬಿ ಬಿಟ್ಟುಕೊಂಡರೆ, ಒಂದೆರಡು ಮಳೆಬಿದ್ದ ನಂತರ ಹದಗೊಂಡ ಆ ಗುಂಡಿಗೆ ತುಪ್ಪೀರೆ, ಹಿತ್ತಲವರೆ, ಕುಂಬಳ,ತೊಂಡೆ, ಶಂಬೆ ಮುಂತಾದ ಬಳ್ಳಿ ತರಕಾರಿ ಬೀಜಗಳನ್ನು ಊರಿದರೆ ಹೆಚ್ಚು ಹಾರೈಕೆಯಿಲ್ಲದೆ ಬೇಲಿಗೆ ಹಬ್ಬಿ ರುಚಿಕರ, ವಿಷರಹಿತ ತರಕಾರಿ ಕೊಡುತ್ತವೆ. ತೋಟಕ್ಕೆ ಹೋದರೆ ಆ ಬೇಲಿಸಾಲಿಗೆ ಹೋಗದೆ ಹಿಂದಿರುಗದಂತಾ ಸುಸಮಯ ಒದಗಿಬರುತ್ತದೆ. ತರತರದ ತರಕಾರಿಗಳು ನಮ್ಮ ತರಕಾರಿ ಬ್ಯಾಗಿಗೆ ಬಂದು ತುಂಬಿಕೊಳ್ಳುತ್ತವೆ. ಮಳೆ ಆಶ್ರಯದಲ್ಲೆಯೇ ಬೆಳೆದ ಈ ತರಕಾರಿ ರುಚಿಗೆ ಯಾವುದೂ ಸಮವಲ್ಲ. ಚಪ್ಪರ ಹಾಕುವ ಉಸಾಬರಿಯಿಲ್ಲ, ಮತ್ತೆ ಗೊಬ್ಬರ ಕೊಡುವ ಗೊಡವೆ ಇಲ್ಲ, ಕೀಟನಾಶಕದ ಸುದ್ದಿಯಿಲ್ಲ, ಅನಿವಾರ್ಯವಾದರೆ ಮಾತ್ರ ಒಂದೆರಡು ಸಲ ನೀರು ಕೊಡಬೇಕಾಗಬಹುದು ಅಷ್ಟೆ.

ನಮ್ಮ ತೋಟಕ್ಕೆ ಬಂದ ಕೆಲವರು “ನಿಮಗೆ ಬುದ್ಧಿ ಗಿದ್ದಿ ಇದೆಯಾ ಈ ದಾರಿ ಕಡೆಯ ಬೇಲಿಗೆ ತರಕಾರಿ ಬಳ್ಳಿಗಳನ್ನ ಹಬ್ಬಿಸಿದ್ದೀರಲ್ಲ, ಜನ ತರಕಾರಿ ಕದಿಯದೆ ಬಿಟ್ಟಾರೆಯೇ?” ಎಂದು ತಗಾದೆ ತೆಗಿಯುತ್ತಾರೆ. ತೋಟದ ಮಧ್ಯೆ ಈ ಬಳ್ಳಿ ಹಬ್ಬಿಸಲು ಪುಕ್ಕಟೆ ಸಲಹೆ ಕೊಡುತ್ತಾರೆ. ನಿಜಕ್ಕು ಇದು ವಿಚಿತ್ರ. ಬಳ್ಳಿಗಳು ಬೇಲಿಯಾಚೆ ಹಬ್ಬಿ ಆಚೆಯ ಬಿಸಿಲಿನ ಬಳಕೆ ಮಾಡಿಕೊಂಡು ಕಾಯಿ ಕಸುರು ಬಿಟ್ಟು ದಾರಿ ಹೋಕರನ್ನು ಕರೆದು ತರಕಾರಿ ಕೊಟ್ಟರೆ ನಮಗೇನು ತೊಂದರೆ, ಇಷ್ಟಕ್ಕೂ ಯಾರು ನಮ್ಮ ಬೇಲಿಗೆ ಕೈಹಾಕಿ ಕದ್ದು ಕಿತ್ತುಕೊಂಡು ಹೋದದ್ದನ್ನು ನಾವು ಕಾಣೆವು. ಪುಕ್ಕಟೆ ಸಲಹೆ ಕೊಡುವ ಜನರೂ ಸೇರಿದಂತೆ ಎಲ್ಲರೂ ಬೇಲಿಗಳಿಗೆ ತರಕಾರಿ ಬಳ್ಳಿ ಹಬ್ಬಿಸಿದರೆ ಅದರ ಮಜ ಹೇಗಿರುತ್ತದೆ?  ಬೀಜ ಬಿತ್ತಬೇಕಷ್ಟೆ. ಅದಕ್ಕೆ ಮನಸ್ಸು ಇರಬೇಕು, ಒಳ್ಳೆಯದನ್ನು ತಿನ್ನುವ ಪುಣ್ಯವಿರಬೇಕು.

ಬೇಲಿಗಳಿರುವ ತೆಂಗಿನ ತೋಟದಲ್ಲಿ ನುಸಿ ರೋಗ ನಿಯಂತ್ರಣದಲ್ಲಿರುತ್ತದೆ ಎಂದು ನಮ್ಮ ಅನುಭವಕ್ಕೆ ಬಂದಿದೆ. ತೋಟದಲ್ಲಿ ಹುಲ್ಲು ಸೊಪ್ಪು ಇದ್ದರೆ ನುಸಿ ತನ್ನ ಜಾಲವನ್ನು ಇಲ್ಲಿಗೆ ವರ್ಗಾಯಿಸುವ ಅವಕಾಶವಿರುತ್ತದೆ.

ಎಷ್ಟೋ ಜನ ಬೇಲಿ ಎಂದರೆ ಮುಳ್ಳು ಎಂದು ತಿಳಿದಿದ್ದಾರೆ. ನಿಜ ಈ ಹಿಂದೆ ಬಿದಿರು ಮುಳ್ಳು, ಎರದೆ ಮುಳ್ಳು, ಜಾಲಿಮುಳ್ಳುಗಳನ್ನು ಬಳಸಿ ಬೇಲಿ ಕಟ್ಟುವ ಸಾಹಸ ಮಾಡುತ್ತಿದ್ದರು, ಅವು ಒಂದೆರಡು ವರ್ಷಕ್ಕೆ ಕರಕಲಾಗಿ ಹೋಗುತ್ತಿದ್ದವು. ಮತ್ತೆ ಮತ್ತೆ ಕಟ್ಟುವ ಉಸಾಬರಿ ಇರುತ್ತಿತ್ತು. ಆಗಲೂ ಬುದ್ಧಿವಂತ ರೈತರು ಈ ಮುಳ್ಳು ಬೇಲಿಯ ತಂಟೆಗೆ ಹೋಗದೆ, ಚಿಗುರು ಕಡ್ಡಿಗಳ ಸಹಾಯದಿಂದ ಹಸಿರು ಬೇಲಿಯನ್ನು ಸೃಷ್ಟಿಸುತ್ತಿದ್ದರು. ಅದರ ಎಲ್ಲಾ ಲಾಭಗಳನ್ನು ಪಡೆಯುತ್ತಿದ್ದರು.

ಈ ಬಗೆಯ ಬೇಲಿಗಳಿದ್ದರೆ ಇಲಿಗಳು ಮಾಮೇರಿ ಹೆಚ್ಚುತ್ತವೆ ಎಂಬ ಆಪಾದನೆ ಇದೆ. ಇದು ನಮ್ಮ ತೋಟದ ವಿಷಯದಲ್ಲಿ ಸಂಪೂರ್ಣ ಸುಳ್ಳು. ನಮ್ಮ ಇಡೀ ತೋಟವೇ ಬೇಲಿಯ ಲಕ್ಷಣಗಳನ್ನು ಹೊಂದಿದೆ. ಇವರ ಪ್ರಕಾರ ಇಲಿಗಳ ಸಾಮ್ರಜ್ಯವೇ ಇಲ್ಲಿ ನೆರೆಯಬೇಕಾಗಿತ್ತು. ನಮ್ಮ ತೋಟದಲ್ಲಿ ಇಲಿಗಳೇ ಇಲ್ಲ ಎನ್ನುವಂತಿಲ್ಲ, ಇವೆ ನಿಯಂತ್ರಣದಲ್ಲಿವೆ.

ನಮ್ಮಪ್ಪ ಉಳುಮೆ ಮಾಡುತ್ತಿದ್ದ ತೋಟದಲ್ಲಿ ಇಲಿಗಳ ಉಪಟಳ ಎಲ್ಲೆ ಮೀರುತ್ತಿತ್ತು. ಅವು ಎಳನೀರು ಕುಡಿದು ಸುರಿಸುವ ಬುಲ್ಡೆಗಳನ್ನು ನೋಡಿ ಅವುಗಳ ಮೇಲೆ ಸಮರ ಸಾರುವ ತೀರ್ಮಾನ ಮಾಡುತ್ತಿತ್ತು. ಹದವಾಗಿ ಹುರಿದ ನೆಲಗಡಲೆ ಕಾಯಿಗಳನ್ನು ಸಿಪ್ಪೆಬೆರೆಸೆ ಕುಟ್ಟಿ ಪುಡಿಮಾಡಿ, ಬರ್ನ್‌ ಆದ ಬುಲ್ಡೆ ಬಲ್ಬುಗಳನ್ನೂ ಸಣ್ಣಗೆ ಪುಡಿಮಾಡಿ, ಎರಡನ್ನು ಮಿಶ್ರಣ ಮಾಡುತ್ತಿದ್ದರು. ಇದಕ್ಕೆ ಹುಚ್ಚಳ್ಳು ಪುಡಿಯನ್ನು ಬೆರಸುತ್ತಿದ್ದರು. ಈ ಬಗೆಯ ಘಮಗುಟ್ಟುವ ಪರಿಕರವು ಇಲಿಗಳನ್ನು ಆಕರ್ಷಿಸಿ ತಿನ್ನುವಂತೆ ಮಾಡುತ್ತದೆಂದೂ, ತಿಂದ ಇಲಿಗಳು ನೆಗೆದು ಬೀಳುತ್ತವೆಂದು ಅವರ ಊಹೆ. ಸದರಿ ʻಇಲಿಬಾಂಬುʼ ತಯಾರಾಗುತ್ತಿರಬೇಕಾದರೆ ಆ ಘಮಗುಟ್ಟುವ ಪದಾರ್ಥದಿಂದ ಆಕರ್ಷಿತರಾಗಿ ನಾವೇ ಅದನ್ನು ತಿಂದುಬಿಡುವ ವಾಂಚಲ್ಯಕ್ಕೆ ಒಳಗಾಗುತ್ತಿದ್ದುದುಂಟು. ಇಂಥ ಇಲಿಪಾತಕ ಪುಡಿಯನ್ನು ಸಣ್ಣ ಸಣ್ಣ ಬಟ್ಟೆ ಗಂಟುಗಳಾಗಿಸಿ ರೆಡಿ ಮಾಡಿಕೊಳ್ಳುತ್ತಿದ್ದ ನಮ್ಮಪ್ಪ ಆ ಸಂದರ್ಭದಲ್ಲಿ ಮಾತೇ ಆಡುತ್ತಿರಲಿಲ್ಲ, ಯಜ್ಞಧ್ಯಾನದಲ್ಲಿ ತೊಡಗುತ್ತಿದ್ದರು.

PC : Gardeners World

ಈ ಪುಟ್ಟ ಪುಟ್ಟ ಬಟ್ಟೆ ಗಂಟುಗಳನ್ನು ಇಲಿಗೆ ಕಾಣುವಂತೆ ಇಡುವುದು ಸವಾಲಿನ ಕೆಲಸವಾಗಿತ್ತು. ಇಲಿಗಳು ಮರಗಳಿಂದ ಇಳಿಯುವುದೇ ಅಪರೂಪವಾದ್ದರಿಂದ ನೆಲದಲ್ಲಿ ಈ ಗಂಟುಗಳನ್ನಿಟ್ಟರೆ ಯಾವ ಪ್ರಯೋಜನವೂ ಇರುವುದಿಲ್ಲ. ಆದ್ದರಿಂದ ಮರದ ಮೇಲಕ್ಕೆ ಗಂಟುಗಳನ್ನು ಎಸೆಯಲು ಶತ ಪ್ರಯತ್ನ ಮಾಡುತ್ತಿದ್ದ ಅಪ್ಪ ಈ ಗಂಟುಗಳಿಗೆ ಕಲ್ಲ ಕಟ್ಟಿ ಎಸೆಯುತ್ತಿತ್ತು. ಬಿದಿರಿನ ಜವಣಿಗೆಯ ತುದಿಗೆ ಗಂಟುಗಳನ್ನು ಸಿಕ್ಕಿಸಿ ನಿಧಾನವಾಗಿ ತೆಂಗಿನ ಸುಳಿಗೆ ಸಾಗಿಸಲು ಯತ್ನಿಸುತ್ತಿತ್ತು. ಈ ಯತ್ನಗಳು ವಿಫಲವಾದ ಮೇಲೆ ತಾನೇ ಆ ಮರಗಳನ್ನು ಹತ್ತಿ ಆ ಗಂಟುಗಳನ್ನು ಇಟ್ಟು ಇಲಿಗಳನ್ನು ಆಹ್ವಾನಿಸುತ್ತಿತ್ತು. ಇಷ್ಟಕ್ಕೆ ಸುಮ್ಮನಾಗದ ಅವರು ತೆಂಗಿನ ಸುಳಿಯಲ್ಲಿ ಕಟ್ಟಿರಬಹುದಾದ ಇಲಿಯ ಗೂಡುಗಳನ್ನು ಕಿತ್ತು ನೇರ ಕಾರ್ಯಾಚರಣೆಗೆ ಇಳಿಯುತ್ತಿತ್ತು. ಒಮ್ಮೊಮೆ ಆ ಗೂಡುಗಳಲ್ಲಿ ನಿದ್ದೆ ಮಾಡುತ್ತಿದ್ದ ಇಲಿಗಳು ದಿಢೀರ್‌ ಆಕ್ರಮಣದಿಂದ ತತ್ತರಿಸಿ ಮರದಿಂದ ಕೆಳಕ್ಕೆ ಹಾರಿಬಿಡುತ್ತಿದ್ದವು. ಕೆಳಗೆ ಕೊರಂಬಳೆ ಕುಂಚಿಕೆಯನ್ನು ಹಿಡಿದು ಸಿದ್ಧವಾಗಿರುತ್ತಿದ್ದ ನಾವು ಕೂಗಾಡುತ್ತಾ ಅವುಗಳನ್ನು ಸದೆಬಡಿಯುವ ಪ್ರಯತ್ನ ಮಾಡುತ್ತಿದ್ದೆವು. ಇಂಥ ಪ್ರಯತ್ನಗಳು ವಿಫಲವಾಗುತ್ತಿದ್ದುದೇ ಹೆಚ್ಚು. ನಮ್ಮಪ್ಪನಾದರೋ ಒಮ್ಮೊಮ್ಮೆ ಇಲಿಗಳನ್ನು ಕೈಯಲ್ಲಿಯೇ ಹಿಡಿದು ಸಾಯಿಸುವಷ್ಟು ಸಿಟ್ಟಿನಿಂದ ವ್ಯಗ್ರಗೊಳ್ಳುತ್ತಿದ್ದರು. ಮರದಡಿಯಲ್ಲಿ ಬೀಳುತ್ತಿದ್ದ ಇಲಿಬುಲ್ಡೆಗಳ ಸುರಿಮಳೆ ಇಲಿಗಳನ್ನು ಹೀಗೆ ಸಾಯಿಸಲು ಪ್ರೇರಣೆಯಾಗಿತ್ತು. ಅವರಂತ ರೈತರು ಬೆಳೆದ ಬೆಳೆಗಳು ಹೀಗೆ ಇಲಿಗಳ ಸಾಕಣೆಗೆ ಬಳಕೆಯಾಗುವುದು ಯಾವ ಸರ್ಕಾರಗಳ ಗಮನಕ್ಕೂ ಬಂದಂತೆ ಕಾಣುವುದಿಲ್ಲ. ಅದಕ್ಕೇ ಅವರು ಹೀಗೆ ಹೇಳುತ್ತಿದ್ದರು, “ಜನರನ್ನೆಲ್ಲ ಸಾಕುವುದರ ಜೊತೆಗೆ, ಇಲಿ, ಹೆಗ್ಗಣ, ನಾಯಿನರಿ, ಹಕ್ಕಿ ಪಕ್ಷಿ, ಹಂದಿ ಕರಡಿ, ಮುಂತಾದುವುಗಳನ್ನು ರೈತರು ಸಾಕುತ್ತಿರುವುದರಿಂದ ಅದಕ್ಕೆ ಅನುದಾನ ಕೊಡಲಿ” ಎಂದು.

ನಾವೀಗ ಇಲಿಗಳಿಗೆ ಈ ಬಗೆಯ ಯಾವ ಪುಡಿಗಳನ್ನು, ವಿಷಗಳನ್ನು ಇಡುತ್ತಿಲ್ಲ. ಮರ ಹತ್ತಿ ಇಲಿಗಳ ಗೂಡಿಗೆ ಕೈ ಹಾಕುವಷ್ಟು ಯೋಗ್ಯತೆಯೂ ನಮ್ಮಲ್ಲಿಲ್ಲ. ಆದರೂ ಇಲಿಗಳು ನಿಯಂತ್ರಣದಲ್ಲಿವೆ. ನಮ್ಮ ತೋಟದಲ್ಲಿ ವಿಷ ಇಡುತ್ತಿಲ್ಲ ಎಂಬ ವಿಷಯ ಗೂಬೆಗಳಿಗೆ, ಸಾಂಬಾರ್ಗಾಗೆಗಳಿಗೆ, ಹಾವುಗಳಿಗೆ, ಹದ್ದು ಲಗಡಗಳಿಗೆ, ಕಾಡುಬೆಕ್ಕುಗಳಿಗೆ ಮುಂತಾಗಿ ಇಲಿ ಹಿಡಿದು ತಿನ್ನುವ ಜೀವಿಗಳಿಗೆ ಗೊತ್ತಾಗಿರಬೇಕು. ಅವು ನಮ್ಮ ಅರಿವಿಗೆ ಬಾರದಂತೆ ಇಲಿಗಳ ಊಟ ಮಾಡುತ್ತಿರಬೇಕು.

  • ಕೃಷ್ಣಮೂರ್ತಿ ಬಿಳಿಗೆರೆ

(ಹುಳಿಯಾರು ಬಿಎಂಎಸ್‌ ಸರ್ಕಾರಿ ಪದವಿ ಕಾಲೇಜಿನ ಪ್ರಾಂಶುಪಾಲರು. ತಮ್ಮ ತೋಟದಲ್ಲಿ ಸಹಜ ಕೃಷಿ ಮಾಡುತ್ತಲೇ ಕೃಷಿ ಶೋಧನೆಯಲ್ಲಿ ತೊಡಗಿಸಿಕೊಂಡಿರುವ ಇವರು ಸಾವಿರ ಕಣ್ಣಿನ ನವಿಲು, ಕಿಂಚಿತ್ತು ಪ್ರೀತಿಯ ಬದುಕು, ದಾಸಯ್ಯ ಇದು ಕನಸೇನಯ್ಯ, ಧರೆ ಮೇಲೆ ಉರಿಪಾದ, ಮಳೆ ನೀರ ಕುಡಿ, ಅನ್ನ ದೇವರ ಮುಂದೆ, ಮರದಡಿಯ ಮನುಷ್ಯ ಸೇರಿದಂತೆ ಹಲವು ಪುಸ್ತಕಗಳನ್ನು ರಚಿಸಿದ್ದಾರೆ.)


ಇದನ್ನೂ ಓದಿ: ನಮ್ಮ ತೋಟದ ಸಾಲಿಗೆ ನೀವೂ ಬನ್ನಿ-2: ಈ ಹಕ್ಕಿಗಳು ಎಲ್ಲಿರುತ್ತವೋ ಏನೋ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣ : ಶಾರ್ಜೀಲ್ ಇಮಾಮ್‌ಗೆ 10 ದಿನಗಳ ಮಧ್ಯಂತರ ಜಾಮೀನು

ದೆಹಲಿ ಗಲಭೆ ಪ್ರಕರಣದಲ್ಲಿ ಬಂಧಿತರಾಗಿರುವ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ಸಂಶೋಧನಾ ವಿದ್ಯಾರ್ಥಿ ಶಾರ್ಜೀಲ್ ಇಮಾಮ್ ಅವರಿಗೆ ನ್ಯಾಯಾಲಯ ಸೋಮವಾರ (ಮಾ.9) 10 ದಿನಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ತನ್ನ ಸಹೋದರನ...

‘ಬಲಾಢ್ಯರ ಓಲೈಕೆಗಾಗಿ ಸಾಮಾಜಿಕ ನ್ಯಾಯದ ಸಮಾಧಿ..’; ಬಜೆಟ್‌ನಲ್ಲಿ ಅಲೆಮಾರಿ ಸಮುದಾಯಗಳಿಗೆ ಅನ್ಯಾಯ

'ಬಲಾಢ್ಯರ ಓಲೈಕೆಗಾಗಿ ಸಾಮಾಜಿಕ ನ್ಯಾಯದ ಸಮಾಧಿ ಮಾಡಲಾಗಿದೆ; ಬಜೆಟ್‌ನಲ್ಲಿ ಅಲೆಮಾರಿ ಸಮುದಾಯಗಳಿಗೆ ಅನ್ಯಾಯ ಮಾಡಲಾಗಿದೆ ಎಂದು 'ಕರ್ನಾಟಕ ಅಸ್ಪೃಶ್ಯ ಅಲೆಮಾರಿ ಸಮುದಾಯಗಳ ಮಹಾಒಕ್ಕೂಟ' ಸಿದ್ದರಾಮಯ್ಯ ಅವರ ಬಜೆಟ್‌ ಕುರಿತು ಅಸಮಾಧಾನ ಹೊರಹಾಕಿದೆ. ಈ ಕುರಿತು...

ಒಳಮೀಸಲಾತಿ ಇಲ್ಲದೇ ಉದ್ಯೋಗ ಭರ್ತಿಗೆ ವಿರೋಧ; ಕಾಂಗ್ರೆಸ್ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ

ಒಳಮೀಸಲಾತಿ ಇಲ್ಲದೇ 56 ಸಾವಿರ ಉದ್ಯೋಗ ಭರ್ತಿಗೆ ಮುಂದಾಗಿರುವ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಒಳಮೀಸಲಾತಿ ಹೋರಾಟಗಾರರು ವಿರೋಧ ವ್ಯಕ್ತಪಡಿಸಿದ್ದು, ಇದೇ ತಿಂಗಳ 12 ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆಗೆ ಕರೆ ಕೊಟ್ಟಿದ್ದಾರೆ. ಈ...

ನಾಸಿರ್–ಜುನೈದ್ ಕೊಲೆ ಪ್ರಕರಣ: ಜಾಮೀನಿನ ಮೇಲೆ ಹೊರಬಂದ ಹಿಂದುತ್ವ ಕಾರ್ಯಕರ್ತ ಮೋನು ಮಾನೇಸರ್ ಗೆ ಗುರುಗ್ರಾಮದಲ್ಲಿ ಭವ್ಯ ಸ್ವಾಗತ 

2023 ರಲ್ಲಿ ಹರಿಯಾಣದಲ್ಲಿ ಗೋರಕ್ಷಣೆ ಹೆಸರಿನಲ್ಲಿ ಇಬ್ಬರು ಮುಸ್ಲಿಂ ಪುರುಷರ ಹತ್ಯೆ ಪ್ರಕರಣದ ಆರೋಪಿಯಾಗಿರುವ ಹಿಂದುತ್ವ ಕಾರ್ಯಕರ್ತ ಮೋನು ಮಾನೇಸರ್ ಅವರಿಗೆ ರಾಜಸ್ಥಾನ ಹೈಕೋರ್ಟ್ ಜಾಮೀನು ನೀಡಿದ ನಂತರ ಶನಿವಾರ ಸಂಜೆ ಭರತ್‌ಪುರ...

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ನಾಯಕರನ್ನು ಗುರಿಯಾಗಿಸುವ ಇಸ್ರೇಲ್ ಬೆದರಿಕೆಗೆ ಚೀನಾ ವಿರೋಧ

ಇರಾನ್‌ನಲ್ಲಿ ಸರ್ವೋಚ್ಛ ನಾಯಕರಾಗಿ ಯಾರೇ ಆಯ್ಕೆಯಾದರು ಅವರು ನಮ್ಮ ಮುಂದಿನ ಗುರಿಯಾಗಿರುತ್ತಾರೆ ಎಂದು ಬೆದರಿಕೆ ಹಾಕಿದ್ದ ಇಸ್ರೇಲ್ ನಡೆಯನ್ನು ಚೀನಾ ಖಂಡಿಸಿದೆ. ಸದ್ಯ ಸರ್ವೋಚ್ಛ ನಾಯಕರಾಗಿ ನೇಮಕವಾಗಿರುವ ಅಲಿ ಖಮೇನಿ ಅವರ ಪುತ್ರ...

ಪಶ್ಚಿಮ ಏಷ್ಯಾ ಸಂಘರ್ಷ ಕುರಿತು ಚರ್ಚೆಗೆ ಒತ್ತಾಯ : ಸಂಸತ್ ಆವರಣದಲ್ಲಿ ವಿಪಕ್ಷ ಸಂಸದರಿಂದ ಪ್ರತಿಭಟನೆ

ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಚರ್ಚೆಗೆ ಒತ್ತಾಯಿಸಿ ಮತ್ತು ಅದಕ್ಕೆ ಸಂಬಂಧಿಸಿದ ನಿರ್ಣಾಯಕ ವಿಷಯಗಳ ಬಗ್ಗೆ ಸರ್ಕಾರ ಮೌನ ವಹಿಸಿರುವುದನ್ನು ಖಂಡಿಸಿ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ವಿಪಕ್ಷ ನಾಯಕ ರಾಹುಲ್...

ಇರಾನಿನ ತೈಲ ಸಂಗ್ರಹಾಗಾರಗಳ ಮೇಲೆ ಇಸ್ರೇಲ್ ದಾಳಿ; ಅಮೆರಿಕಾ ಅಸಮಾಧಾನಗೊಂಡಿರುವುದಾಗಿ ವರದಿ

ವಾಷಿಂಗ್ಟನ್, ಡಿಸಿ: ಇರಾನಿನ ಇಂಧನ ಮೂಲಸೌಕರ್ಯವನ್ನು ಗುರಿಯಾಗಿಸಿಕೊಂಡು ಇಸ್ರೇಲ್ ನಡೆಸಿದ ದೊಡ್ಡ ಪ್ರಮಾಣದ ವೈಮಾನಿಕ ದಾಳಿಯ ಬಗ್ಗೆ ಅಮೆರಿಕ ಮತ್ತು ಇಸ್ರೇಲ್ ನಡುವೆ ಭಿನ್ನಾಭಿಪ್ರಾಯ ಹೊರಹೊಮ್ಮಿದೆ ಎಂದು ವರದಿಯಾಗಿದೆ. ಅಮೆರಿಕದ ಅಧಿಕಾರಿಗಳು ಕಾರ್ಯಾಚರಣೆಯ...

ಪಶ್ಚಿಮ ಏಷ್ಯಾ ಸಂಘರ್ಷ ಕುರಿತು ಚರ್ಚೆಗೆ ಪ್ರತಿಪಕ್ಷಗಳು ಪಟ್ಟು : ಲೋಕಸಭೆ ಕಲಾಪ ಮುಂದೂಡಿಕೆ

ಲೋಕಸಭೆಯ ಬಜೆಟ್ ಅಧಿವೇಶನದ ಎರಡನೇ ಹಂತದ ಕಾರ್ಯ ಕಲಾಪಗಳು ಸೋಮವಾರ (ಮಾ.9) ಭಾರೀ ಗದ್ದಲದೊಂದಿಗೆ ಆರಂಭಗೊಂಡಿತು. ಪಶ್ಚಿಮ ಏಷ್ಯಾದ ಪರಿಸ್ಥಿತಿಯ ಕುರಿತು ಚರ್ಚಿಸಲು ಆಗ್ರಹಿಸಿ ಪ್ರತಿಪಕ್ಷಗಳು ತೀವ್ರ ಪ್ರತಿಭಟನೆ ನಡೆಸಿದ ಹಿನ್ನೆಲೆ, ಸ್ಪೀಕರ್...

Parliament Budget Session | ಇಂಧನ ಭದ್ರತೆ ಕುರಿತು ಮಲ್ಲಿಕಾರ್ಜುನ ಖರ್ಗೆ ಪ್ರಸ್ತಾಪ : ರಾಜ್ಯಸಭೆಯಲ್ಲಿ ಗದ್ದಲ

ಸಂಸತ್ತಿನ 2026-27ನೇ ಸಾಲಿನ ಬಜೆಟ್ ಅಧಿವೇಶನದ ಎರಡನೇ ಹಂತದ ಕಾರ್ಯ ಕಲಾಪಗಳು ಸೋಮವಾರದಿಂದ (ಮಾ.9) ಪ್ರಾರಂಭಗೊಂಡಿವೆ. ಮೊದಲ ದಿನ ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ನಾಯಕ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜು ಖರ್ಗೆ ಅವರು...

ಯುದ್ಧದ ನಡುವೆಯೇ ಇರಾನ್‌ನ ನೂತನ ಸರ್ವೋಚ್ಚ ನಾಯಕನಾಗಿ ಖಮೇನಿ ಪುತ್ರ ಮೊಜ್ತಬಾ ನೇಮಕ

ಇರಾನ್‌ನ ತಜ್ಞರ ಸಭೆಯು ಮೊಜ್ತಾಬಾ ಖಮೇನಿ ಅವರನ್ನು ಅವರ ತಂದೆ ಅಯತೊಲ್ಲಾ ಅಲಿ ಖಮೇನಿ ಅವರ ಸ್ಥಾನಕ್ಕೆ ದೇಶದ ಹೊಸ ಸರ್ವೋಚ್ಚ ನಾಯಕನನ್ನಾಗಿ ಘೋಷಿಸಿದೆ ಎಂದು ರಾಜ್ಯ ಮಾಧ್ಯಮ ಭಾನುವಾರ ವರದಿ ಮಾಡಿದೆ. "ತಜ್ಞರ...