Homeಮುಖಪುಟಗರುಡ ಪುರಾಣವನ್ನು ಹೇಗೆ ಗ್ರಹಿಸಬೇಕು?

ಗರುಡ ಪುರಾಣವನ್ನು ಹೇಗೆ ಗ್ರಹಿಸಬೇಕು?

- Advertisement -
- Advertisement -

ಗರುಡ ಪುರಾಣವನ್ನು ಓದಿದಾಗ ಗ್ರಹಿಕೆಗೆ ಸಿಕ್ಕುವುದು ವೈರಾಗ್ಯದ ಸಾರ. ಪ್ರಾಣವಾಯುವಿನ ಸೂಕ್ಷ್ಮತೆಗಳನ್ನು ಪ್ರತಿಮಾರೂಪದಲ್ಲಿ, ಒಗಟುಗಳಲ್ಲಿ ವಿವರಿಸಿದಂತೆ ತೋರುತ್ತದೆ. ಪ್ರಸ್ತುತ ಜೀವನ ಮತ್ತು ಜೀವನದಾಚೆಯ ಮರ್ಮ – ಇವುಗಳನ್ನು ಅರಿತುಕೊಳ್ಳಲು ಸಾಧ್ಯವಾಗುವಂತಹ ಸೂಕ್ಷ್ಮ ಮಾರ್ಗಗಳನ್ನು, ಸಂವೇದನೆಗಳನ್ನು ಗ್ರಹಿಸಲು ಸಾಧ್ಯವೆಂಬಂತೆ ಭಾಸವಾಗುತ್ತದೆ. ಪ್ರಾಣವು ಚಲಿಸುವಂತದ್ದು ಮತ್ತು ಅದು ಚಲನೆಯಲ್ಲಿರುವುದು. ಹಾಗೆ ಚಲಿಸುವಾಗ ಅದನ್ನು ಮನಸ್ಸೆಂಬುದನ್ನು ಹೇಗೆ ಗ್ರಹಿಸುತ್ತದೆ? ಬುದ್ಧಿ ಹೇಗೆ ವಿಶ್ಲೇಷಿಸಬಹುದು? ಇತ್ಯಾದಿಗಳನ್ನು ಈ ಪ್ರಾಣದ ಪ್ರಯಾಣ ಸೂಚಿಸುವುದರಿಂದಲೇ ಹಾರುವ ಗರುಡನ ಪ್ರತಿಮೆ ಇಲ್ಲಿ ರೂಪಕವಾಗಿದೆ ಎಂದು ಗ್ರಹಿಸಬಹುದು. ಆದರೆ ಇದು ಬರಿಯ ಒಂದು ಮಗ್ಗುಲಿನ ಆಲೋಚನೆಯಾಗುತ್ತದೆ. ಅದರ ಆಳ ಮತ್ತು ವಿಸ್ತಾರದ ಜೊತೆಗೆ ನಂತರ ಸೇರ್ಪಡೆಯಾದ ಹುನ್ನಾರಗಳು ಕೂಡ ಅಧ್ಯಯನ ವ್ಯಾಪ್ತಿಯು ಹಿರಿದಾಗಿಸುತ್ತದೆ.

ಗರುಡ ಪುರಾಣವನ್ನು ಓದಿದರೆ ವೈರಾಗ್ಯವುಂಟಾಗಿ ಸಂಸಾರದ ಮೇಲೆ ಜಿಗುಪ್ಸೆ ಬರಬಹುದೆಂಬ ಕಾರಣದಿಂದ ನಿಷೇಧವನ್ನು ಹೇರಿರಬೇಕು. ಗರುಡ ಪುರಾಣ ಉಂಟು ಮಾಡುವ ವೈರಾಗ್ಯದ ಗಾಢ ಪ್ರಭಾವವನ್ನು ಗಮನಿಸಿರುವವರಿಗೆ ಇದು ನಿಜವೆನಿಸುತ್ತದೆ. ಸಾವು ಸಂಭವಿಸಿದಾಗ ಓದುವುದರಿಂದ ಹದಿನೈದು ದಿನಗಳ ಅಪರ ಕಾರ್ಯದ ವೇಳೆಯಲ್ಲಿ ಸಂಬಂಧಿಕರಲ್ಲಿ ವೈರಾಗ್ಯವು ನೆಲೆಸಿ, ಸಾವು ಎಂಬುದು ಅಂತಹ ಆಘಾತಕಾರಿಯಾದ ಅವಘಡ ಅಲ್ಲ, ಸಹಜವಾದದ್ದು, ನೈಸರ್ಗಿಕವಾದದ್ದು ಎಂಬ ಅರಿವು ಉಂಟಾಗಿ ಮನಸ್ಸಿಗೆ ಶಾಂತಿ ಲಭಿಸಲಿ ಎಂಬ ಉದ್ದೇಶವೇ ಹೊರತು ಬೇರೆ ಏನೂ ಇಲ್ಲ. ಕಾಲಾನಂತರದಲ್ಲಿ ಇದು ವಾಡಿಕೆಯಾಯಿತು.

ವಿಷ್ಣು ತನ್ನ ವಾಹನವಾದ ಗರುಡನಿಗೆ ನೀಡುವ ಉಪದೇಶದ ರೂಪದಲ್ಲಿರುವ ಗರುಡ ಪುರಾಣ ನಾನಾ ಕಾರಣಗಳಿಂದ ಆಕರ್ಷಕ. ಸಾಮಾನ್ಯ ಜನರಿಗೆ ತಿಳಿದಿರುವ ಹಾಗೆ ಅದು ನರಕದ ವರ್ಣನೆ, ಸಾವಿನ ಕುರಿತಾದದ್ದು ಎಂಬ ಭಾವ. ಅದು ನಿಜವಾದರೂ ಅದರ ವಿಚಾರವೇ ಇಡೀ ಗರುಡ ಪುರಾಣವೇನಲ್ಲ. ಪ್ರೇತಕಾಂಡ ಅಥವಾ ಪ್ರೇತಕಲ್ಪವು ಅದರ ಒಂದು ಭಾಗ ಅಷ್ಟೇ. ಎಲ್ಲಾ ಪುರಾಣಗಳನ್ನೂ ಅನಾದಿ, ಪುರಾತನ ಎಂದು ಹೇಗೆ ಕರೆಯಲು ಸಾಧ್ಯವಿಲ್ಲವೋ ಹಾಗೆಯೇ ಗರುಡ ಪುರಾಣವೂ ಕೂಡ ಪೂರ್ಣ ಪುರಾತನವೇನಲ್ಲ. ಕಾಲದಿಂದ ಕಾಲಕ್ಕೆ ಹಲವಾರು ಕರ್ತೃಗಳು ಇದರಲ್ಲಿ ಲೇಖನಿಗಳನ್ನಾಡಿಸುತ್ತಾ ಕೃತಿಯನ್ನು ವಿಸ್ತರಿಸಿದ್ದಾರೆ. ಹಾಗಾಗಿ ಇಡೀ ಗರುಡಪುರಾಣ ಏನನ್ನು ಧ್ವನಿಸಲು ಹೊರಟಿತ್ತು, ಈಗ ಅದರಲ್ಲಿ ಏನೇನೆಲ್ಲಾ ಇದೆ ಎಂದು ಚುಟುಕಾಗಿ ಹೇಳಲು ಕಷ್ಟವಾಗುವುದು.

ಗರುಡನೊಬ್ಬ ಅಪ್ರತಿಮ ವೀರ. ದಾಸ್ಯದ ವಿರುದ್ಧ ದನಿ ಎತ್ತಿದ ಬಂಡಾಯಗಾರ. ಹಾಗೂ ಆರ್ಯರ ಕುಟಿಲತನಕ್ಕೆ ಮೋಸ ಹೋದ ಮತ್ತು ಸೋತ ದುರಂತ ಪ್ರತಿಮೆ ಕೂಡಾ. ನಾಗ ಮತ್ತು ಗರುಡ ಈ ಎರಡೂ ಗಣಗಳು ಅಥವಾ ಕುಲಗಳೂ ಒಂದೇ ಮೂಲದಿಂದ ಬಂದಿರುವವಾದರೂ ತಮ್ಮ ಆಂತರಿಕ ಕಲಹದಿಂದ ಅಥವಾ ದಾಯಾದೀ ಜಗಳದಿಂದ ಆರ್ಯರ ರಾಜಕೀಯ ತಂತ್ರಕ್ಕೆ ಬಲಿಪಶುಗಳಾದರು. ನಾಗಕುಲವಾದರೂ ದೇವತೆಗಳ ವಿರುದ್ಧ ಸೆಣೆಸುತ್ತಲೇ ಬಂತು. ಆದರೆ ಗರುಡ, ದೇವತೆಗಳ ತಂತ್ರಕ್ಕೆ ಬಲಿಯಾಗಿ ತಮ್ಮದೇ ಮೂಲದ ಗಣದವರಿಗೆ ಶತ್ರುಗಳಾದರು. ಗರುಡ ವಿಷ್ಣುವಿನ ವಾಹನವೆಂದರೆ, ಆರ್ಯರ ರೂಪಕವಾದ ವಿಷ್ಣುವು ಬುಡಕಟ್ಟಿನ ಗರುಡನನ್ನು ತನ್ನ ಅಧೀನದಲ್ಲಿಟ್ಟುಕೊಂಡು, ನಂತರ ವಿರೋಧಿಗಳಾದ ನಾಗರ ಮೇಲೆ ತನ್ನ ವೈಷಮ್ಯವನ್ನು ಸಾಧಿಸುವುದರ ಸಂಕೇತ.
ಆರ್ಯ ರಾಜಕೀಯ ಹುಟ್ಟಿಹಾಕಿದ ಮೌಢ್ಯಕ್ಕೆ ನಮ್ಮ ಜನ ಇಂದೂ ಸಹೋದರರಾದ ನಾಗ ಮತ್ತು ಗರುಡರನ್ನು ಶತ್ರುಗಳಂತೆ ನೋಡುತ್ತಿದ್ದಾರೆ. ಜೊತೆಗೆ ಗರುಡ ಮಚ್ಚೆ ಇದ್ದರೆ ಹಾವುಗಳು ಬಾಧಿಸವು, ಸರ್ಪದೋಷ ಬಾರದು ಎಂಬ ಮೌಢ್ಯಗಳು ಬೇರೆ. ಗರುಡನಂತ ಮುಗ್ಧ ಮತ್ತು ವೀರನನ್ನು ತಮ್ಮ ಕಾವಲು ಭಟನಂತೆ ಅಥವಾ ಸಾರಥಿಯಂತೆ ವಾಹಕವನ್ನಾಗಿ ಮಾಡಿಕೊಂಡ ಕತೆಯನ್ನು ಪುರಾಣಗಳು ತಿಳಿಸುತ್ತವೆ.

ಗರುಡನ ಪುರಾಣದ ಕಥೆಯನ್ನು ಗಮನಿಸಿದರೆ ಕದ್ರು ಮತ್ತು ವಿನುತೆಯರಿಬ್ಬರೂ ತಾಯಾಳಿಕೆಯವರಾಗಿದ್ದವರೆಂದು ತೋರುತ್ತದೆ. ಜೊತೆಗೆ ಅವರಿಬ್ಬರೂ ಕೂಡ ಗಣಗಳ ಮತ್ತು ಬಣಗಳ ಒಡತಿಯರೆಂದು ಕೂಡ ಕಾಣುತ್ತದೆ. ಅವರಿಬ್ಬರಲ್ಲಿ ನಡೆಯುವ ಸಂಘರ್ಷದ ಕತೆಯು ಮಕ್ಕಳಿಗೆ ಮುಂದುವರಿದಿತ್ತು. ಪಂಥವು ಅದೇನೇ ಇರಲಿ, ನಾಗರನ್ನು ದ್ವೇಷಿಸಲು ಇಂದ್ರನು, ಆರ್ಯರ ದೇವರಾಜನು ಕುಮ್ಮಕ್ಕು ಕೊಡುತ್ತಾನೆ. ಅವರಿಬ್ಬರನ್ನೂ ಒಂದಾಗಲು ಬಿಡುವುದಿಲ್ಲ. ಒಡೆದು ಆಳುವ ನೀತಿಯನ್ನು ಆರ್ಯರಲ್ಲಿ ಕಾಣುತ್ತೇವೆ. ಆದರೆ ಅದೇ ಇಂದ್ರ ಅಮೃತವನ್ನು ಕದಿಯುತ್ತಾನೆ.

ಅದೇನೇ ಇರಲಿ, ಕರ್ನಾಟಕದಲ್ಲಿಯೂ ಸ್ವಾಮಿನಿಷ್ಠ ಸಾಹಸಿಗಳನ್ನು, ಪ್ರಾಣವನ್ನೇ ಮುಡಿಪಿಟ್ಟು ತಮ್ಮ ದಣಿಯನ್ನು ಕಾಪಾಡುತ್ತಿದ್ದ ನಿಷ್ಠರನ್ನು ಗರುಡ ಎಂದು ಕರೆಯುವುದು ಕಾಕತಾಳೀಯವೇನಲ್ಲ. ಪೌರಾಣಿಕ ಗರುಡನ ಸ್ವಾಮಿನಿಷ್ಠತೆಯು ಇಲ್ಲಿಯವರೆಗೂ ಧ್ವನಿಸಿದೆ.
ಇಂಥಾ ಗರುಡನಿಗೆ ಯಮಮಾರ್ಗದ ಬಗ್ಗೆ ವಿಷ್ಣುವು ಹೇಳುತ್ತಾನೆ.

ಇಂತೆಲ್ಲಾ ಮಾಹಿತಿಗಳಿಂದ ಗರುಡ ಪುರಾಣವು ಪರಿಷ್ಕೃತಗೊಂಡಿರುವುದು ಮಹಾಭಾರತದ ನಂತರದ ಕಾಲದಲ್ಲಿ ಎಂದು ಅವಲೋಕಿಸಬಹುದು. ಅದೂ ಚಾರ್ವಾಕರ ನಂತರ. ಚಾರ್ವಾಕರ ಪ್ರಭಾವ ದಟ್ಟವಾಗುತ್ತಿದ್ದ ಸಮಯದಲ್ಲಿ ಜನಗಳಲ್ಲಿ ತಾವು ಮಾಡುವ ಕರ್ಮಗಳ ಭಯ ಹುಟ್ಟಿಸುವ ಅಗತ್ಯ ವೈದಿಕರಿಗಿತ್ತು. ಹಾಗಾಗಿ ಗರುಡಪುರಾಣದಲ್ಲಿ ನರಕದ ಬಾಧೆ ಸೇರಿಸಲಾಯಿತು.

ಸಾವಿನ ಭಯವನ್ನು ಗೆಲ್ಲಲು ಮತ್ತು ಬದುಕಿರುವಾಗ ನೈತಿಕತೆಯನ್ನು ಮೀರದಿರುವ ಆಶಯ ಗರುಡ ಪುರಾಣ ಕೃತಿಯಲ್ಲಿ ಅಡಗಿದೆ. ವಿಪರೀತದ ಪ್ರತಿಮಾ ರೂಪಕಗಳನ್ನು ನೇರವಾಗಿ ಗ್ರಹಿಸಿದರೆ ಗರುಡ ಪುರಾಣದ ಓದು ಮೌಢ್ಯತೆಯ ಪಾಲಾಗುತ್ತದೆ.‌

  • ಯೋಗೇಶ್‌ ಮಾಸ್ಟರ್

ಇದನ್ನೂ ಓದಿ: ತಾನೊಂದು ಹೆಣ್ಣಾಗಿದ್ದು ಶಾಪ, ಕಪ್ಪು ಹೆಣ್ಣಾಗಿದ್ದು ಮಹಾಶಾಪ : ಮೇರಿ ಪ್ರಿನ್ಸ್ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...