Homeಮುಖಪುಟಗರುಡ ಪುರಾಣವನ್ನು ಹೇಗೆ ಗ್ರಹಿಸಬೇಕು?

ಗರುಡ ಪುರಾಣವನ್ನು ಹೇಗೆ ಗ್ರಹಿಸಬೇಕು?

- Advertisement -
- Advertisement -

ಗರುಡ ಪುರಾಣವನ್ನು ಓದಿದಾಗ ಗ್ರಹಿಕೆಗೆ ಸಿಕ್ಕುವುದು ವೈರಾಗ್ಯದ ಸಾರ. ಪ್ರಾಣವಾಯುವಿನ ಸೂಕ್ಷ್ಮತೆಗಳನ್ನು ಪ್ರತಿಮಾರೂಪದಲ್ಲಿ, ಒಗಟುಗಳಲ್ಲಿ ವಿವರಿಸಿದಂತೆ ತೋರುತ್ತದೆ. ಪ್ರಸ್ತುತ ಜೀವನ ಮತ್ತು ಜೀವನದಾಚೆಯ ಮರ್ಮ – ಇವುಗಳನ್ನು ಅರಿತುಕೊಳ್ಳಲು ಸಾಧ್ಯವಾಗುವಂತಹ ಸೂಕ್ಷ್ಮ ಮಾರ್ಗಗಳನ್ನು, ಸಂವೇದನೆಗಳನ್ನು ಗ್ರಹಿಸಲು ಸಾಧ್ಯವೆಂಬಂತೆ ಭಾಸವಾಗುತ್ತದೆ. ಪ್ರಾಣವು ಚಲಿಸುವಂತದ್ದು ಮತ್ತು ಅದು ಚಲನೆಯಲ್ಲಿರುವುದು. ಹಾಗೆ ಚಲಿಸುವಾಗ ಅದನ್ನು ಮನಸ್ಸೆಂಬುದನ್ನು ಹೇಗೆ ಗ್ರಹಿಸುತ್ತದೆ? ಬುದ್ಧಿ ಹೇಗೆ ವಿಶ್ಲೇಷಿಸಬಹುದು? ಇತ್ಯಾದಿಗಳನ್ನು ಈ ಪ್ರಾಣದ ಪ್ರಯಾಣ ಸೂಚಿಸುವುದರಿಂದಲೇ ಹಾರುವ ಗರುಡನ ಪ್ರತಿಮೆ ಇಲ್ಲಿ ರೂಪಕವಾಗಿದೆ ಎಂದು ಗ್ರಹಿಸಬಹುದು. ಆದರೆ ಇದು ಬರಿಯ ಒಂದು ಮಗ್ಗುಲಿನ ಆಲೋಚನೆಯಾಗುತ್ತದೆ. ಅದರ ಆಳ ಮತ್ತು ವಿಸ್ತಾರದ ಜೊತೆಗೆ ನಂತರ ಸೇರ್ಪಡೆಯಾದ ಹುನ್ನಾರಗಳು ಕೂಡ ಅಧ್ಯಯನ ವ್ಯಾಪ್ತಿಯು ಹಿರಿದಾಗಿಸುತ್ತದೆ.

ಗರುಡ ಪುರಾಣವನ್ನು ಓದಿದರೆ ವೈರಾಗ್ಯವುಂಟಾಗಿ ಸಂಸಾರದ ಮೇಲೆ ಜಿಗುಪ್ಸೆ ಬರಬಹುದೆಂಬ ಕಾರಣದಿಂದ ನಿಷೇಧವನ್ನು ಹೇರಿರಬೇಕು. ಗರುಡ ಪುರಾಣ ಉಂಟು ಮಾಡುವ ವೈರಾಗ್ಯದ ಗಾಢ ಪ್ರಭಾವವನ್ನು ಗಮನಿಸಿರುವವರಿಗೆ ಇದು ನಿಜವೆನಿಸುತ್ತದೆ. ಸಾವು ಸಂಭವಿಸಿದಾಗ ಓದುವುದರಿಂದ ಹದಿನೈದು ದಿನಗಳ ಅಪರ ಕಾರ್ಯದ ವೇಳೆಯಲ್ಲಿ ಸಂಬಂಧಿಕರಲ್ಲಿ ವೈರಾಗ್ಯವು ನೆಲೆಸಿ, ಸಾವು ಎಂಬುದು ಅಂತಹ ಆಘಾತಕಾರಿಯಾದ ಅವಘಡ ಅಲ್ಲ, ಸಹಜವಾದದ್ದು, ನೈಸರ್ಗಿಕವಾದದ್ದು ಎಂಬ ಅರಿವು ಉಂಟಾಗಿ ಮನಸ್ಸಿಗೆ ಶಾಂತಿ ಲಭಿಸಲಿ ಎಂಬ ಉದ್ದೇಶವೇ ಹೊರತು ಬೇರೆ ಏನೂ ಇಲ್ಲ. ಕಾಲಾನಂತರದಲ್ಲಿ ಇದು ವಾಡಿಕೆಯಾಯಿತು.

ವಿಷ್ಣು ತನ್ನ ವಾಹನವಾದ ಗರುಡನಿಗೆ ನೀಡುವ ಉಪದೇಶದ ರೂಪದಲ್ಲಿರುವ ಗರುಡ ಪುರಾಣ ನಾನಾ ಕಾರಣಗಳಿಂದ ಆಕರ್ಷಕ. ಸಾಮಾನ್ಯ ಜನರಿಗೆ ತಿಳಿದಿರುವ ಹಾಗೆ ಅದು ನರಕದ ವರ್ಣನೆ, ಸಾವಿನ ಕುರಿತಾದದ್ದು ಎಂಬ ಭಾವ. ಅದು ನಿಜವಾದರೂ ಅದರ ವಿಚಾರವೇ ಇಡೀ ಗರುಡ ಪುರಾಣವೇನಲ್ಲ. ಪ್ರೇತಕಾಂಡ ಅಥವಾ ಪ್ರೇತಕಲ್ಪವು ಅದರ ಒಂದು ಭಾಗ ಅಷ್ಟೇ. ಎಲ್ಲಾ ಪುರಾಣಗಳನ್ನೂ ಅನಾದಿ, ಪುರಾತನ ಎಂದು ಹೇಗೆ ಕರೆಯಲು ಸಾಧ್ಯವಿಲ್ಲವೋ ಹಾಗೆಯೇ ಗರುಡ ಪುರಾಣವೂ ಕೂಡ ಪೂರ್ಣ ಪುರಾತನವೇನಲ್ಲ. ಕಾಲದಿಂದ ಕಾಲಕ್ಕೆ ಹಲವಾರು ಕರ್ತೃಗಳು ಇದರಲ್ಲಿ ಲೇಖನಿಗಳನ್ನಾಡಿಸುತ್ತಾ ಕೃತಿಯನ್ನು ವಿಸ್ತರಿಸಿದ್ದಾರೆ. ಹಾಗಾಗಿ ಇಡೀ ಗರುಡಪುರಾಣ ಏನನ್ನು ಧ್ವನಿಸಲು ಹೊರಟಿತ್ತು, ಈಗ ಅದರಲ್ಲಿ ಏನೇನೆಲ್ಲಾ ಇದೆ ಎಂದು ಚುಟುಕಾಗಿ ಹೇಳಲು ಕಷ್ಟವಾಗುವುದು.

ಗರುಡನೊಬ್ಬ ಅಪ್ರತಿಮ ವೀರ. ದಾಸ್ಯದ ವಿರುದ್ಧ ದನಿ ಎತ್ತಿದ ಬಂಡಾಯಗಾರ. ಹಾಗೂ ಆರ್ಯರ ಕುಟಿಲತನಕ್ಕೆ ಮೋಸ ಹೋದ ಮತ್ತು ಸೋತ ದುರಂತ ಪ್ರತಿಮೆ ಕೂಡಾ. ನಾಗ ಮತ್ತು ಗರುಡ ಈ ಎರಡೂ ಗಣಗಳು ಅಥವಾ ಕುಲಗಳೂ ಒಂದೇ ಮೂಲದಿಂದ ಬಂದಿರುವವಾದರೂ ತಮ್ಮ ಆಂತರಿಕ ಕಲಹದಿಂದ ಅಥವಾ ದಾಯಾದೀ ಜಗಳದಿಂದ ಆರ್ಯರ ರಾಜಕೀಯ ತಂತ್ರಕ್ಕೆ ಬಲಿಪಶುಗಳಾದರು. ನಾಗಕುಲವಾದರೂ ದೇವತೆಗಳ ವಿರುದ್ಧ ಸೆಣೆಸುತ್ತಲೇ ಬಂತು. ಆದರೆ ಗರುಡ, ದೇವತೆಗಳ ತಂತ್ರಕ್ಕೆ ಬಲಿಯಾಗಿ ತಮ್ಮದೇ ಮೂಲದ ಗಣದವರಿಗೆ ಶತ್ರುಗಳಾದರು. ಗರುಡ ವಿಷ್ಣುವಿನ ವಾಹನವೆಂದರೆ, ಆರ್ಯರ ರೂಪಕವಾದ ವಿಷ್ಣುವು ಬುಡಕಟ್ಟಿನ ಗರುಡನನ್ನು ತನ್ನ ಅಧೀನದಲ್ಲಿಟ್ಟುಕೊಂಡು, ನಂತರ ವಿರೋಧಿಗಳಾದ ನಾಗರ ಮೇಲೆ ತನ್ನ ವೈಷಮ್ಯವನ್ನು ಸಾಧಿಸುವುದರ ಸಂಕೇತ.
ಆರ್ಯ ರಾಜಕೀಯ ಹುಟ್ಟಿಹಾಕಿದ ಮೌಢ್ಯಕ್ಕೆ ನಮ್ಮ ಜನ ಇಂದೂ ಸಹೋದರರಾದ ನಾಗ ಮತ್ತು ಗರುಡರನ್ನು ಶತ್ರುಗಳಂತೆ ನೋಡುತ್ತಿದ್ದಾರೆ. ಜೊತೆಗೆ ಗರುಡ ಮಚ್ಚೆ ಇದ್ದರೆ ಹಾವುಗಳು ಬಾಧಿಸವು, ಸರ್ಪದೋಷ ಬಾರದು ಎಂಬ ಮೌಢ್ಯಗಳು ಬೇರೆ. ಗರುಡನಂತ ಮುಗ್ಧ ಮತ್ತು ವೀರನನ್ನು ತಮ್ಮ ಕಾವಲು ಭಟನಂತೆ ಅಥವಾ ಸಾರಥಿಯಂತೆ ವಾಹಕವನ್ನಾಗಿ ಮಾಡಿಕೊಂಡ ಕತೆಯನ್ನು ಪುರಾಣಗಳು ತಿಳಿಸುತ್ತವೆ.

ಗರುಡನ ಪುರಾಣದ ಕಥೆಯನ್ನು ಗಮನಿಸಿದರೆ ಕದ್ರು ಮತ್ತು ವಿನುತೆಯರಿಬ್ಬರೂ ತಾಯಾಳಿಕೆಯವರಾಗಿದ್ದವರೆಂದು ತೋರುತ್ತದೆ. ಜೊತೆಗೆ ಅವರಿಬ್ಬರೂ ಕೂಡ ಗಣಗಳ ಮತ್ತು ಬಣಗಳ ಒಡತಿಯರೆಂದು ಕೂಡ ಕಾಣುತ್ತದೆ. ಅವರಿಬ್ಬರಲ್ಲಿ ನಡೆಯುವ ಸಂಘರ್ಷದ ಕತೆಯು ಮಕ್ಕಳಿಗೆ ಮುಂದುವರಿದಿತ್ತು. ಪಂಥವು ಅದೇನೇ ಇರಲಿ, ನಾಗರನ್ನು ದ್ವೇಷಿಸಲು ಇಂದ್ರನು, ಆರ್ಯರ ದೇವರಾಜನು ಕುಮ್ಮಕ್ಕು ಕೊಡುತ್ತಾನೆ. ಅವರಿಬ್ಬರನ್ನೂ ಒಂದಾಗಲು ಬಿಡುವುದಿಲ್ಲ. ಒಡೆದು ಆಳುವ ನೀತಿಯನ್ನು ಆರ್ಯರಲ್ಲಿ ಕಾಣುತ್ತೇವೆ. ಆದರೆ ಅದೇ ಇಂದ್ರ ಅಮೃತವನ್ನು ಕದಿಯುತ್ತಾನೆ.

ಅದೇನೇ ಇರಲಿ, ಕರ್ನಾಟಕದಲ್ಲಿಯೂ ಸ್ವಾಮಿನಿಷ್ಠ ಸಾಹಸಿಗಳನ್ನು, ಪ್ರಾಣವನ್ನೇ ಮುಡಿಪಿಟ್ಟು ತಮ್ಮ ದಣಿಯನ್ನು ಕಾಪಾಡುತ್ತಿದ್ದ ನಿಷ್ಠರನ್ನು ಗರುಡ ಎಂದು ಕರೆಯುವುದು ಕಾಕತಾಳೀಯವೇನಲ್ಲ. ಪೌರಾಣಿಕ ಗರುಡನ ಸ್ವಾಮಿನಿಷ್ಠತೆಯು ಇಲ್ಲಿಯವರೆಗೂ ಧ್ವನಿಸಿದೆ.
ಇಂಥಾ ಗರುಡನಿಗೆ ಯಮಮಾರ್ಗದ ಬಗ್ಗೆ ವಿಷ್ಣುವು ಹೇಳುತ್ತಾನೆ.

ಇಂತೆಲ್ಲಾ ಮಾಹಿತಿಗಳಿಂದ ಗರುಡ ಪುರಾಣವು ಪರಿಷ್ಕೃತಗೊಂಡಿರುವುದು ಮಹಾಭಾರತದ ನಂತರದ ಕಾಲದಲ್ಲಿ ಎಂದು ಅವಲೋಕಿಸಬಹುದು. ಅದೂ ಚಾರ್ವಾಕರ ನಂತರ. ಚಾರ್ವಾಕರ ಪ್ರಭಾವ ದಟ್ಟವಾಗುತ್ತಿದ್ದ ಸಮಯದಲ್ಲಿ ಜನಗಳಲ್ಲಿ ತಾವು ಮಾಡುವ ಕರ್ಮಗಳ ಭಯ ಹುಟ್ಟಿಸುವ ಅಗತ್ಯ ವೈದಿಕರಿಗಿತ್ತು. ಹಾಗಾಗಿ ಗರುಡಪುರಾಣದಲ್ಲಿ ನರಕದ ಬಾಧೆ ಸೇರಿಸಲಾಯಿತು.

ಸಾವಿನ ಭಯವನ್ನು ಗೆಲ್ಲಲು ಮತ್ತು ಬದುಕಿರುವಾಗ ನೈತಿಕತೆಯನ್ನು ಮೀರದಿರುವ ಆಶಯ ಗರುಡ ಪುರಾಣ ಕೃತಿಯಲ್ಲಿ ಅಡಗಿದೆ. ವಿಪರೀತದ ಪ್ರತಿಮಾ ರೂಪಕಗಳನ್ನು ನೇರವಾಗಿ ಗ್ರಹಿಸಿದರೆ ಗರುಡ ಪುರಾಣದ ಓದು ಮೌಢ್ಯತೆಯ ಪಾಲಾಗುತ್ತದೆ.‌

  • ಯೋಗೇಶ್‌ ಮಾಸ್ಟರ್

ಇದನ್ನೂ ಓದಿ: ತಾನೊಂದು ಹೆಣ್ಣಾಗಿದ್ದು ಶಾಪ, ಕಪ್ಪು ಹೆಣ್ಣಾಗಿದ್ದು ಮಹಾಶಾಪ : ಮೇರಿ ಪ್ರಿನ್ಸ್ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....