Homeಮುಖಪುಟಗರುಡ ಪುರಾಣವನ್ನು ಹೇಗೆ ಗ್ರಹಿಸಬೇಕು?

ಗರುಡ ಪುರಾಣವನ್ನು ಹೇಗೆ ಗ್ರಹಿಸಬೇಕು?

- Advertisement -
- Advertisement -

ಗರುಡ ಪುರಾಣವನ್ನು ಓದಿದಾಗ ಗ್ರಹಿಕೆಗೆ ಸಿಕ್ಕುವುದು ವೈರಾಗ್ಯದ ಸಾರ. ಪ್ರಾಣವಾಯುವಿನ ಸೂಕ್ಷ್ಮತೆಗಳನ್ನು ಪ್ರತಿಮಾರೂಪದಲ್ಲಿ, ಒಗಟುಗಳಲ್ಲಿ ವಿವರಿಸಿದಂತೆ ತೋರುತ್ತದೆ. ಪ್ರಸ್ತುತ ಜೀವನ ಮತ್ತು ಜೀವನದಾಚೆಯ ಮರ್ಮ – ಇವುಗಳನ್ನು ಅರಿತುಕೊಳ್ಳಲು ಸಾಧ್ಯವಾಗುವಂತಹ ಸೂಕ್ಷ್ಮ ಮಾರ್ಗಗಳನ್ನು, ಸಂವೇದನೆಗಳನ್ನು ಗ್ರಹಿಸಲು ಸಾಧ್ಯವೆಂಬಂತೆ ಭಾಸವಾಗುತ್ತದೆ. ಪ್ರಾಣವು ಚಲಿಸುವಂತದ್ದು ಮತ್ತು ಅದು ಚಲನೆಯಲ್ಲಿರುವುದು. ಹಾಗೆ ಚಲಿಸುವಾಗ ಅದನ್ನು ಮನಸ್ಸೆಂಬುದನ್ನು ಹೇಗೆ ಗ್ರಹಿಸುತ್ತದೆ? ಬುದ್ಧಿ ಹೇಗೆ ವಿಶ್ಲೇಷಿಸಬಹುದು? ಇತ್ಯಾದಿಗಳನ್ನು ಈ ಪ್ರಾಣದ ಪ್ರಯಾಣ ಸೂಚಿಸುವುದರಿಂದಲೇ ಹಾರುವ ಗರುಡನ ಪ್ರತಿಮೆ ಇಲ್ಲಿ ರೂಪಕವಾಗಿದೆ ಎಂದು ಗ್ರಹಿಸಬಹುದು. ಆದರೆ ಇದು ಬರಿಯ ಒಂದು ಮಗ್ಗುಲಿನ ಆಲೋಚನೆಯಾಗುತ್ತದೆ. ಅದರ ಆಳ ಮತ್ತು ವಿಸ್ತಾರದ ಜೊತೆಗೆ ನಂತರ ಸೇರ್ಪಡೆಯಾದ ಹುನ್ನಾರಗಳು ಕೂಡ ಅಧ್ಯಯನ ವ್ಯಾಪ್ತಿಯು ಹಿರಿದಾಗಿಸುತ್ತದೆ.

ಗರುಡ ಪುರಾಣವನ್ನು ಓದಿದರೆ ವೈರಾಗ್ಯವುಂಟಾಗಿ ಸಂಸಾರದ ಮೇಲೆ ಜಿಗುಪ್ಸೆ ಬರಬಹುದೆಂಬ ಕಾರಣದಿಂದ ನಿಷೇಧವನ್ನು ಹೇರಿರಬೇಕು. ಗರುಡ ಪುರಾಣ ಉಂಟು ಮಾಡುವ ವೈರಾಗ್ಯದ ಗಾಢ ಪ್ರಭಾವವನ್ನು ಗಮನಿಸಿರುವವರಿಗೆ ಇದು ನಿಜವೆನಿಸುತ್ತದೆ. ಸಾವು ಸಂಭವಿಸಿದಾಗ ಓದುವುದರಿಂದ ಹದಿನೈದು ದಿನಗಳ ಅಪರ ಕಾರ್ಯದ ವೇಳೆಯಲ್ಲಿ ಸಂಬಂಧಿಕರಲ್ಲಿ ವೈರಾಗ್ಯವು ನೆಲೆಸಿ, ಸಾವು ಎಂಬುದು ಅಂತಹ ಆಘಾತಕಾರಿಯಾದ ಅವಘಡ ಅಲ್ಲ, ಸಹಜವಾದದ್ದು, ನೈಸರ್ಗಿಕವಾದದ್ದು ಎಂಬ ಅರಿವು ಉಂಟಾಗಿ ಮನಸ್ಸಿಗೆ ಶಾಂತಿ ಲಭಿಸಲಿ ಎಂಬ ಉದ್ದೇಶವೇ ಹೊರತು ಬೇರೆ ಏನೂ ಇಲ್ಲ. ಕಾಲಾನಂತರದಲ್ಲಿ ಇದು ವಾಡಿಕೆಯಾಯಿತು.

ವಿಷ್ಣು ತನ್ನ ವಾಹನವಾದ ಗರುಡನಿಗೆ ನೀಡುವ ಉಪದೇಶದ ರೂಪದಲ್ಲಿರುವ ಗರುಡ ಪುರಾಣ ನಾನಾ ಕಾರಣಗಳಿಂದ ಆಕರ್ಷಕ. ಸಾಮಾನ್ಯ ಜನರಿಗೆ ತಿಳಿದಿರುವ ಹಾಗೆ ಅದು ನರಕದ ವರ್ಣನೆ, ಸಾವಿನ ಕುರಿತಾದದ್ದು ಎಂಬ ಭಾವ. ಅದು ನಿಜವಾದರೂ ಅದರ ವಿಚಾರವೇ ಇಡೀ ಗರುಡ ಪುರಾಣವೇನಲ್ಲ. ಪ್ರೇತಕಾಂಡ ಅಥವಾ ಪ್ರೇತಕಲ್ಪವು ಅದರ ಒಂದು ಭಾಗ ಅಷ್ಟೇ. ಎಲ್ಲಾ ಪುರಾಣಗಳನ್ನೂ ಅನಾದಿ, ಪುರಾತನ ಎಂದು ಹೇಗೆ ಕರೆಯಲು ಸಾಧ್ಯವಿಲ್ಲವೋ ಹಾಗೆಯೇ ಗರುಡ ಪುರಾಣವೂ ಕೂಡ ಪೂರ್ಣ ಪುರಾತನವೇನಲ್ಲ. ಕಾಲದಿಂದ ಕಾಲಕ್ಕೆ ಹಲವಾರು ಕರ್ತೃಗಳು ಇದರಲ್ಲಿ ಲೇಖನಿಗಳನ್ನಾಡಿಸುತ್ತಾ ಕೃತಿಯನ್ನು ವಿಸ್ತರಿಸಿದ್ದಾರೆ. ಹಾಗಾಗಿ ಇಡೀ ಗರುಡಪುರಾಣ ಏನನ್ನು ಧ್ವನಿಸಲು ಹೊರಟಿತ್ತು, ಈಗ ಅದರಲ್ಲಿ ಏನೇನೆಲ್ಲಾ ಇದೆ ಎಂದು ಚುಟುಕಾಗಿ ಹೇಳಲು ಕಷ್ಟವಾಗುವುದು.

ಗರುಡನೊಬ್ಬ ಅಪ್ರತಿಮ ವೀರ. ದಾಸ್ಯದ ವಿರುದ್ಧ ದನಿ ಎತ್ತಿದ ಬಂಡಾಯಗಾರ. ಹಾಗೂ ಆರ್ಯರ ಕುಟಿಲತನಕ್ಕೆ ಮೋಸ ಹೋದ ಮತ್ತು ಸೋತ ದುರಂತ ಪ್ರತಿಮೆ ಕೂಡಾ. ನಾಗ ಮತ್ತು ಗರುಡ ಈ ಎರಡೂ ಗಣಗಳು ಅಥವಾ ಕುಲಗಳೂ ಒಂದೇ ಮೂಲದಿಂದ ಬಂದಿರುವವಾದರೂ ತಮ್ಮ ಆಂತರಿಕ ಕಲಹದಿಂದ ಅಥವಾ ದಾಯಾದೀ ಜಗಳದಿಂದ ಆರ್ಯರ ರಾಜಕೀಯ ತಂತ್ರಕ್ಕೆ ಬಲಿಪಶುಗಳಾದರು. ನಾಗಕುಲವಾದರೂ ದೇವತೆಗಳ ವಿರುದ್ಧ ಸೆಣೆಸುತ್ತಲೇ ಬಂತು. ಆದರೆ ಗರುಡ, ದೇವತೆಗಳ ತಂತ್ರಕ್ಕೆ ಬಲಿಯಾಗಿ ತಮ್ಮದೇ ಮೂಲದ ಗಣದವರಿಗೆ ಶತ್ರುಗಳಾದರು. ಗರುಡ ವಿಷ್ಣುವಿನ ವಾಹನವೆಂದರೆ, ಆರ್ಯರ ರೂಪಕವಾದ ವಿಷ್ಣುವು ಬುಡಕಟ್ಟಿನ ಗರುಡನನ್ನು ತನ್ನ ಅಧೀನದಲ್ಲಿಟ್ಟುಕೊಂಡು, ನಂತರ ವಿರೋಧಿಗಳಾದ ನಾಗರ ಮೇಲೆ ತನ್ನ ವೈಷಮ್ಯವನ್ನು ಸಾಧಿಸುವುದರ ಸಂಕೇತ.
ಆರ್ಯ ರಾಜಕೀಯ ಹುಟ್ಟಿಹಾಕಿದ ಮೌಢ್ಯಕ್ಕೆ ನಮ್ಮ ಜನ ಇಂದೂ ಸಹೋದರರಾದ ನಾಗ ಮತ್ತು ಗರುಡರನ್ನು ಶತ್ರುಗಳಂತೆ ನೋಡುತ್ತಿದ್ದಾರೆ. ಜೊತೆಗೆ ಗರುಡ ಮಚ್ಚೆ ಇದ್ದರೆ ಹಾವುಗಳು ಬಾಧಿಸವು, ಸರ್ಪದೋಷ ಬಾರದು ಎಂಬ ಮೌಢ್ಯಗಳು ಬೇರೆ. ಗರುಡನಂತ ಮುಗ್ಧ ಮತ್ತು ವೀರನನ್ನು ತಮ್ಮ ಕಾವಲು ಭಟನಂತೆ ಅಥವಾ ಸಾರಥಿಯಂತೆ ವಾಹಕವನ್ನಾಗಿ ಮಾಡಿಕೊಂಡ ಕತೆಯನ್ನು ಪುರಾಣಗಳು ತಿಳಿಸುತ್ತವೆ.

ಗರುಡನ ಪುರಾಣದ ಕಥೆಯನ್ನು ಗಮನಿಸಿದರೆ ಕದ್ರು ಮತ್ತು ವಿನುತೆಯರಿಬ್ಬರೂ ತಾಯಾಳಿಕೆಯವರಾಗಿದ್ದವರೆಂದು ತೋರುತ್ತದೆ. ಜೊತೆಗೆ ಅವರಿಬ್ಬರೂ ಕೂಡ ಗಣಗಳ ಮತ್ತು ಬಣಗಳ ಒಡತಿಯರೆಂದು ಕೂಡ ಕಾಣುತ್ತದೆ. ಅವರಿಬ್ಬರಲ್ಲಿ ನಡೆಯುವ ಸಂಘರ್ಷದ ಕತೆಯು ಮಕ್ಕಳಿಗೆ ಮುಂದುವರಿದಿತ್ತು. ಪಂಥವು ಅದೇನೇ ಇರಲಿ, ನಾಗರನ್ನು ದ್ವೇಷಿಸಲು ಇಂದ್ರನು, ಆರ್ಯರ ದೇವರಾಜನು ಕುಮ್ಮಕ್ಕು ಕೊಡುತ್ತಾನೆ. ಅವರಿಬ್ಬರನ್ನೂ ಒಂದಾಗಲು ಬಿಡುವುದಿಲ್ಲ. ಒಡೆದು ಆಳುವ ನೀತಿಯನ್ನು ಆರ್ಯರಲ್ಲಿ ಕಾಣುತ್ತೇವೆ. ಆದರೆ ಅದೇ ಇಂದ್ರ ಅಮೃತವನ್ನು ಕದಿಯುತ್ತಾನೆ.

ಅದೇನೇ ಇರಲಿ, ಕರ್ನಾಟಕದಲ್ಲಿಯೂ ಸ್ವಾಮಿನಿಷ್ಠ ಸಾಹಸಿಗಳನ್ನು, ಪ್ರಾಣವನ್ನೇ ಮುಡಿಪಿಟ್ಟು ತಮ್ಮ ದಣಿಯನ್ನು ಕಾಪಾಡುತ್ತಿದ್ದ ನಿಷ್ಠರನ್ನು ಗರುಡ ಎಂದು ಕರೆಯುವುದು ಕಾಕತಾಳೀಯವೇನಲ್ಲ. ಪೌರಾಣಿಕ ಗರುಡನ ಸ್ವಾಮಿನಿಷ್ಠತೆಯು ಇಲ್ಲಿಯವರೆಗೂ ಧ್ವನಿಸಿದೆ.
ಇಂಥಾ ಗರುಡನಿಗೆ ಯಮಮಾರ್ಗದ ಬಗ್ಗೆ ವಿಷ್ಣುವು ಹೇಳುತ್ತಾನೆ.

ಇಂತೆಲ್ಲಾ ಮಾಹಿತಿಗಳಿಂದ ಗರುಡ ಪುರಾಣವು ಪರಿಷ್ಕೃತಗೊಂಡಿರುವುದು ಮಹಾಭಾರತದ ನಂತರದ ಕಾಲದಲ್ಲಿ ಎಂದು ಅವಲೋಕಿಸಬಹುದು. ಅದೂ ಚಾರ್ವಾಕರ ನಂತರ. ಚಾರ್ವಾಕರ ಪ್ರಭಾವ ದಟ್ಟವಾಗುತ್ತಿದ್ದ ಸಮಯದಲ್ಲಿ ಜನಗಳಲ್ಲಿ ತಾವು ಮಾಡುವ ಕರ್ಮಗಳ ಭಯ ಹುಟ್ಟಿಸುವ ಅಗತ್ಯ ವೈದಿಕರಿಗಿತ್ತು. ಹಾಗಾಗಿ ಗರುಡಪುರಾಣದಲ್ಲಿ ನರಕದ ಬಾಧೆ ಸೇರಿಸಲಾಯಿತು.

ಸಾವಿನ ಭಯವನ್ನು ಗೆಲ್ಲಲು ಮತ್ತು ಬದುಕಿರುವಾಗ ನೈತಿಕತೆಯನ್ನು ಮೀರದಿರುವ ಆಶಯ ಗರುಡ ಪುರಾಣ ಕೃತಿಯಲ್ಲಿ ಅಡಗಿದೆ. ವಿಪರೀತದ ಪ್ರತಿಮಾ ರೂಪಕಗಳನ್ನು ನೇರವಾಗಿ ಗ್ರಹಿಸಿದರೆ ಗರುಡ ಪುರಾಣದ ಓದು ಮೌಢ್ಯತೆಯ ಪಾಲಾಗುತ್ತದೆ.‌

  • ಯೋಗೇಶ್‌ ಮಾಸ್ಟರ್

ಇದನ್ನೂ ಓದಿ: ತಾನೊಂದು ಹೆಣ್ಣಾಗಿದ್ದು ಶಾಪ, ಕಪ್ಪು ಹೆಣ್ಣಾಗಿದ್ದು ಮಹಾಶಾಪ : ಮೇರಿ ಪ್ರಿನ್ಸ್ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...