Homeಮುಖಪುಟಕೇರಳದಲ್ಲಿ ರಾಜಕೀಯ ಹಿಂದುತ್ವದ ಬೆಳವಣಿಗೆಯನ್ನು ಅರ್ಥೈಸಿಕೊಳ್ಳುವುದು ಹೇಗೆ?

ಕೇರಳದಲ್ಲಿ ರಾಜಕೀಯ ಹಿಂದುತ್ವದ ಬೆಳವಣಿಗೆಯನ್ನು ಅರ್ಥೈಸಿಕೊಳ್ಳುವುದು ಹೇಗೆ?

2020ರ ಲೆಕ್ಕದ ಪ್ರಕಾರ ಕೇರಳದಲ್ಲಿರುವ ಆರ್‌ಎಸ್‌ಎಸ್ ಶಾಖೆಗಳು ಮಹಾರಾಷ್ಟ್ರ ಮತ್ತು ಗುಜರಾತಿನಲ್ಲಿರುವ ಒಟ್ಟು ಶಾಖೆಗಳಿಗಿಂತ ಹೆಚ್ಚು!

- Advertisement -
- Advertisement -

ಪರಿಚಯವಿಲ್ಲದವರಿಗೆ ಕೇರಳದಲ್ಲಿನ ರಾಜಕೀಯ ಹಿಂದುತ್ವದ ಬೆಳವಣಿಗೆ ಹಾಗೂ ಅದರ ಭಾಗವೇ ಆದ ಬಿಜೆಪಿಯ ಮುನ್ನಡೆ ಕಾಲದ ಪ್ರವಾಹದಲ್ಲಿ ನುಚ್ಚುನೂರಾಗುವ ಪ್ರಕ್ರಿಯೆಯಂತೆ ಕಾಣಬಹುದು. ಕೇರಳದ ಒಳಗೆ ಮತ್ತು ಹೊರಗಿರುವ ಅನೇಕ ಪ್ರಗತಿಪರರಿಗೆ ಕೇರಳ ರಾಜ್ಯದೊಳಗಿನ ಹಿಂದುತ್ವದ ಶಕ್ತಿಗಳು ದುರ್ಬಲವಾಗಿವೆ, ಕೊನೇ ಪಕ್ಷ ಚುನಾವಣಾ ರಾಜಕೀಯದಲ್ಲಿ ಅವುಗಳ ಪ್ರಭಾವ ಕಡಿಮೆ ಎನ್ನಿಸಿ, ಅಲ್ಲಿನ ಎಡಪಕ್ಷಗಳು ಅದನ್ನು ತಡೆಯುತ್ತವೆ ಎಂದೆನಿಸಬಹುದು. ಈ ಅಭಿಪ್ರಾಯಗಳಿಗೆ ವಾಸ್ತವಾಂಶಕ್ಕಿಂತ ಹೆಚ್ಚಾಗಿ ಅತಿಯಾದ ಆತ್ಮವಿಶ್ವಾಸ ಕಾರಣವಾಗಿರುತ್ತವೆ. ಬಲಪಂಥೀಯ ಹಿಂದುತ್ವ ಶಕ್ತಿಗಳ ದೀರ್ಘಕಾಲೀನ ರಾಜಕೀಯ ಯೋಜನೆಗಳನ್ನು ಅಂದಾಜು ಮಾಡುವುದಕ್ಕೆ ಎಡವುದರಿಂದ ಈ ಅಭಿಪ್ರಾಯಗಳು ಮೂಡುತ್ತವೆ.

ಸ್ಥಾಪನೆಯ ದಿನದಿಂದಲೂ ಕೇರಳದ ಸಾಮಾಜಿಕ ಸಂರಚನೆಯಲ್ಲಿ ಸಂಘ ಪರಿವಾರ ಅಸ್ತಿತ್ವದಲ್ಲಿದೆ. ಸಂಘ ಪರಿವಾರದ ರಾಜಕೀಯ ಬಣ ಬಿಜೆಪಿಯು ರಾಜ್ಯದಲ್ಲಿ ಪಡೆಯುವ ಮತಗಳ ಸಂಖ್ಯೆ ತುಂಬಾ ಕಡಿಮೆ ಇರುವುದು ಹೌದಾದರೂ 2020ರ ಲೆಕ್ಕದ ಪ್ರಕಾರ ಕೇರಳದಲ್ಲಿರುವ ಆರ್‌ಎಸ್‌ಎಸ್ ಶಾಖೆಗಳು ಮಹಾರಾಷ್ಟ್ರ ಮತ್ತು ಗುಜರಾತಿನಲ್ಲಿರುವ ಒಟ್ಟು ಶಾಖೆಗಳಿಗಿಂತ ಹೆಚ್ಚು. 1940ರ ಇಸವಿಯಲ್ಲಿಯೇ ಆರ್‌ಎಸ್‌ಎಸ್ ಕೇರಳದಲ್ಲಿ ತನ್ನ ಬೇರು ಬಿಡಲು ಪ್ರಾರಂಭಿಸಿತು ಮತ್ತು ಕೇರಳದ ಮೇಲ್ಜಾತಿಗಳ ಹಿಂದೂಗಳ ನಡುವೆ ಮುಖ್ಯವಾಹಿನಿ ಶಕ್ತಿಯಾಗಿ ರೂಪುಗೊಂಡಿತು. 1948ರಲ್ಲಿ ಗಾಂಧೀಜಿಯವರ ಹತ್ಯೆಯಾದಾಗ ಆರ್‌ಎಸ್‌ಎಸ್‌ನ ಸದಸ್ಯರು ಬಹಿರಂಗವಾಗಿಯೇ ಸಂಭ್ರಮಾಚರಣೆಯಲ್ಲಿ ತೊಡಗಿದ್ದನ್ನು ಕಂಡು ಉಂಟಾದ ಹತಾಶೆಯನ್ನು ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕವಿ ಮತ್ತು ಯುವ ಕಮ್ಯುನಿಸ್ಟ್ ಒ.ಎನ್.ವಿ ಕುರುಪ್ ತಮ್ಮ ನೆನಪಿನ ಪುಟಗಳಲ್ಲಿ ದಾಖಲಿಸಿದ್ದಾರೆ.

1970ರ ಹೊತ್ತಿಗೆ ಆರ್‌ಎಸ್‌ಎಸ್ ಸಂಘಟಿತ ಕೋಮು ಹಿಂಸಾಚಾರವನ್ನು ನಡೆಸುವಷ್ಟರ ಮಟ್ಟಿಗೆ ರಾಜ್ಯದಲ್ಲಿ ಬೇರುಬಿಟ್ಟಿತ್ತು. ಕಣ್ಣೂರಿನಲ್ಲಿ ಆರ್‌ಎಸ್‌ಎಸ್ ಪ್ರೇರಿತ ಕೋಮು ದ್ವೇಷದ ವದಂತಿಗಳು 1972ರ ತಲಚೇರಿ ಗಲಭೆಗೆ ಕಾರಣವಾಗಿತ್ತು. ಈ ಗಲಭೆಯ ಸಮಯದಲ್ಲಿ ಈಗ ಮುಖ್ಯ ಮಂತ್ರಿಯಾಗಿರುವ ಪಿಣರಾಯಿ ವಿಜಯನ್‌ರವರು ಸಿಪಿಐಎಂಅನ್ನು ಆರ್‌ಎಸ್‌ಎಸ್‌ನ ದಾಳಿಗೆದುರಾಗಿ ಮುನ್ನಡೆಸಿದರು. ಈ ಪ್ರದೇಶದಲ್ಲಿದ್ದ ಮಸೀದಿಗಳ ಮೇಲೆ ಆರ್‌ಎಸ್‌ಎಸ್ ನಡೆಸುತ್ತಿದ್ದ ದಾಳಿಗಳನ್ನು ತಡೆದರು. ಈ ಗಲಭೆಯ ಸಮಯದಲ್ಲೇ ಮೆರುವಂಬಾಯಿ ಮಸೀದಿಯನ್ನು ಕಾಯುತ್ತಿದ್ದ ಸಿಪಿಐಎಂನ ಯು.ಕೆ. ಕುಂಯಿರಾಮನ್‌ರವರನ್ನು ಆರ್‌ಎಸ್‌ಎಸ್‌ನವರು ಹತ್ಯೆ ಮಾಡಿದರು. ಆರ್‌ಎಸ್‌ಎಸ್‌ನಿಂದ ಹತ್ಯೆಗೊಳಗಾದ ಮೊದಲ ಸಿಪಿಐಎಂ ಹುತಾತ್ಮ ಯು.ಕೆ. ಕುಂಯಿರಾಮನ್. ಕೇರಳದಲ್ಲಿ ಎಡಪಕ್ಷಗಳ ಮೇಲೆ ಆರ್‌ಎಸ್‌ಎಸ್ ನಡೆಸುವ ದಾಳಿಯು ಪ್ರಾರಂಭವಾಗಿದ್ದೇ ಈ ಗಲಭೆಯಿಂದ. ಆರ್‌ಎಸ್‌ಎಸ್‌ನ ಈ ನಿರಂತರ ಸರಣಿ ದಾಳಿಗಳು ಇವತ್ತಿಗೂ ಮುಂದುವರೆದಿದೆ, ಹಲವು ಜೀವಗಳನ್ನು ಬಲಿ ಪಡೆದಿದೆ.

ಕೇರಳದಲ್ಲಿ ಈಗ ಹೆಚ್ಚುಕಡಿಮೆ ಏಳು ಸಾವಿರ ಶಾಖೆಗಳನ್ನು ಹೊಂದಿರುವ ಆರ್‌ಎಸ್‌ಎಸ್ ಅಪಾಯಕಾರಿ ರೀತಿಯಲ್ಲಿ ಬೆಳೆಯುತ್ತಿದೆ. 2014ರಿಂದ ಸಂಘ ಪರಿವಾರ ಕೇರಳದೆಡೆಗೆ ತನ್ನ ರಾಜಕೀಯ ಗುರಿಯನ್ನು ವರ್ಗಾಯಿಸಿದ್ದು, ಬಿಜೆಪಿಯ ಮತಗಳಿಕೆ ಪ್ರಮಾಣವು ಗಣನೀಯವಾಗಿ ಏರಿಕೆ ಕಂಡಿದೆ. ಈ ಮುಂಚೆ ಕಾಂಗ್ರೆಸ್ಸಿಗೆ ಮತ ಚಲಾಯಿಸುತ್ತಿದ್ದ ಆರ್‌ಎಸ್‌ಎಸ್ ಕಾರ್ಯಕರ್ತರು ಮತ್ತು ಆರ್‌ಎಸ್‌ಎಸ್ ಜೊತೆ ಸಂಬಂಧ ಹೊಂದಿದವರು ಈಗ ಬಿಜೆಪಿಗೆ ಮತ ಚಲಾಯಿಸುತ್ತಿದ್ದಾರೆ. 2016ರ ಕೇರಳ ವಿಧಾನಸಭಾ ಚುನಾವಣೆಯಲ್ಲಿ ನೆಮೋಮ್‌ನಿಂದ ಬಿಜೆಪಿಯ ಮುಖಂಡರಾದ ಓ ರಾಜಗೋಪಾಲ್ ಜಯಗಳಿಸಿದ್ದು ಬಿಜೆಪಿಯ ಮತಗಳಿಕೆಯ ಪ್ರಮಾಣದ ಹೆಚ್ಚುವಿಕೆಗೊಂದು ಉದಾಹರಣೆ. ನೆಮೋಮ್‌ನಲ್ಲಿ ನಡೆದ ಕಳೆದ ಮೂರು ಚುನಾವಣೆಗಳಲ್ಲಿ ಕಾಂಗ್ರೆಸ್, ಬಿಜೆಪಿ ಮತ್ತು ಸಿಪಿಐಎಂ ಪಡೆದ ಮತಗಳನ್ನು ಪರಿಗಣಿಸಿದಾಗ ಕಾಂಗ್ರೆಸ್ಸಿಗೆ ಬೀಳುತ್ತಿದ್ದ ಮತಗಳೆಲ್ಲ ಹೇಗೆ ಬಿಜೆಪಿಗೆ ವರ್ಗವಾಗಿವೆ ಎನ್ನುವುದನ್ನು ಗುರುತಿಸಬಹುದಾಗಿದೆ.

ಈ ಬದಲಾವಣೆಗೆ ಹಲವು ಕಾರಣಗಳಿವೆ. ಇದರಲ್ಲಿ ಪ್ರಮುಖ ಕಾರಣವೆಂದರೆ ಬಿಜೆಪಿಗೆ ತನ್ನ ನೆಲೆಗಳನ್ನು ಬಿಟ್ಟುಕೊಡಬಾರದೆಂಬ ನಿಟ್ಟಿನಲ್ಲಿ ಕಾಂಗ್ರೆಸ್ ಪಕ್ಷ ಅನುಸರಿಸುತ್ತಿರುವ ಮೃದು ಹಿಂದುತ್ವ ಧೋರಣೆ. 2018ರಲ್ಲಿ ಸುಪ್ರೀಂಕೋರ್ಟ್ ಶಬರಿಮಲೆಗೆ ಮಹಿಳೆಯರ ಪ್ರವೇಶದ ಕುರಿತು ನೀಡಿದ ಆದೇಶದ ಕುರಿತು ಕಾಂಗ್ರೆಸ್ ತೆಗೆದುಕೊಂಡ ಧೋರಣೆಗಳು ಬಿಜೆಪಿಯ ಧೋರಣೆಗಿಂತ ಯಾವ ರೀತಿಯಲ್ಲೂ ಭಿನ್ನವಾಗಿರಲಿಲ್ಲ. ಶಬರಿಮಲೆಗೆ ಮಹಿಳೆಯರ ಪ್ರವೇಶಕ್ಕಿದ್ದ ಅಡೆತಡೆಯ ಹಿಂದಿನ ಪುರುಷ ಪ್ರಧಾನ ಮನಸ್ಥಿತಿಯನ್ನು ಗಮನಕ್ಕೇ ತೆಗೆದುಕೊಳ್ಳದೇ ಕಾಂಗ್ರೆಸ್ ಮತ್ತು ಬಿಜೆಪಿಗಳೆರಡೂ ’ಸಂಪ್ರದಾಯವನ್ನು ರಕ್ಷಿಸಬೇಕು’, ’ಕಮ್ಯುನಿಸ್ಟರು ಹಿಂದೂ ಮೌಲ್ಯಗಳ ಮೇಲೆ ದಾಳಿ ನಡೆಸುತ್ತಿದ್ದಾರೆ’ ಎಂದು ಬೊಬ್ಬಿರಿದರು.

ಇವೆಲ್ಲವುಗಳ ಜೊತೆಗೆ ಕೇರಳದ ಬಹುಜನರನ್ನು ಕಳೆದ ಕೆಲವು ದಶಕಗಳಿಂದ ’ಸಂಸ್ಕೃತೀಕರಣ’ಕ್ಕೊಳಪಡಿಸಲಾಗುತ್ತಿದೆ. ಈ ಪ್ರಕ್ರಿಯೆಯನ್ನು ಮುಂದೆ ನಿಂತು ನಡೆಸುತ್ತಿರುವುದು ಸಂಘ ಪರಿವಾರ. ಪಾರಂಪರಿಕ ಪೂಜ್ಯ ಜಾಗಗಳನ್ನೆಲ್ಲ ದೇವಸ್ಥಾನಗಳನ್ನಾಗಿ ಪರಿವರ್ತಿಸಲಾಗುತ್ತಿದೆ. ಬಹುಜನರು ವೈದಿಕ ಆಚರಣೆಗಳ ಜೊತೆ ಹೆಚ್ಚೆಚ್ಚು ಗುರುತಿಸಿಕೊಳ್ಳುತ್ತಿದ್ದಾರೆ. ಬಿಜೆಪಿಯು ರಾಜಕೀಯವಾಗಿಯೂ ಗೆಲ್ಲುತ್ತಿರುವುದು, ರಾಜ್ಯದಲ್ಲಿ 1957ರಿಂದ ಕಂಡುಬರುವ ಜಾತಿ ಆಧಾರಿತ ಐತಿಹಾಸಿಕ ಮತ ಚಲಾವಣೆಯು ಮುರಿದು ಬೀಳುತ್ತಿರುವ ಸೂಚನೆ. ಅರವತ್ತು ವರುಷಗಳ ಹಿಂದೆ ಕೇರಳದಲ್ಲಿದ್ದ ಕಮ್ಯುನಿಸ್ಟರ ಸರಕಾರವನ್ನು ಸವರ್ಣ ಭೂಮಾಲೀಕರ ಮೈತ್ರಿ ಮೋಸದಿಂದ ಕೆಡವಿದ ಮೇಲೆ ಕೇರಳದಲ್ಲಿ ಮತ ಚಲಾವಣೆಯು ಜಾತಿಯಾಧಾರಿತವಾಗಿದೆ. ರಾಜ್ಯದಲ್ಲಿನ ದಲಿತರು – ಹಿಂದುಳಿದ ವರ್ಗಗಳ ಮತಗಳನ್ನು ಕಮ್ಯುನಿಸ್ಟರೇ ನಿರಂತರವಾಗಿ ಪಡೆಯುತ್ತಾ ಬಂದಿದ್ದಾರೆ.

ಈ ಎಲ್ಲಾ ಬೆಳವಣಿಗೆಗಳ ಜೊತೆಗೆ ಹಿಂದುತ್ವದ ಶಕ್ತಿಗಳು ವಾಟ್ಸ್‌ಆಪ್ ಮೆಸೇಜುಗಳ ಮೂಲಕ ಸಂಘಟಿತವಾಗಿ ಸುಳ್ಳು ಸುದ್ದಿಗಳನ್ನು ಹಂಚುತ್ತಿರುವುದು ಕೂಡ ಹಿಂದುತ್ವವು ರಾಜಕೀಯ ಶಕ್ತಿಯಾಗಿ ಬೆಳೆಯಲು ಕಾರಣವಾಗಿದೆ. ರಾಜಕಾರಣದ ಕುರಿತು ಕಾಂಗ್ರೆಸ್ಸಿನ ದೃಷ್ಟಿಕೋನ ಆಮೂಲಾಗ್ರವಾಗಿ ಬದಲಾಗದೇ ಹೋದಲ್ಲಿ ಕೇರಳ ರಾಜ್ಯದಲ್ಲಿ ಬಹುದೊಡ್ಡ ಪಕ್ಷಪಾತಿ ರಾಜಕೀಯ ಬದಲಾವಣೆ ಕಾಣಿಸಿಕೊಳ್ಳಲಿದೆ. ಕಾಂಗ್ರೆಸ್ಸಿನ ಜಾಗದಲ್ಲಿ ಬಿಜೆಪಿ ಬೆಳೆದು ಎಡ ಪಕ್ಷಗಳಿಗೆ ಪ್ರಮುಖ ವಿರೋಧ ಪಕ್ಷವಾಗಿ ಬೆಳೆಯುತ್ತದೆ. ಇದರಿಂದ ಉಂಟಾಗುವ ರಾಜಕೀಯ ಧ್ರುವೀಕರಣದ ಪ್ರಭಾವಗಳು ಸುದೀರ್ಘ ಕಾಲದವರೆಗೆ ಪರಿಣಾಮ ಬೀರುತ್ತವೆ.

  • ವಾರ್ಕಿ ಪಾರಕ್ಕಲ್

ದೆಹಲಿ ಸ್ಕೂಲ್ ಆಫ್ ಎಕನಾಮಿಕ್ಸ್‌ನಲ್ಲಿ ಸಮಾಜಶಾಸ್ತ್ರ ವಿದ್ಯಾರ್ಥಿಯಾಗಿರುವ ವಾರ್ಕಿ ಸಾಮಾಜಿಕ ಕಾರ್ಯಕರ್ತರು ಕೂಡ. ದೆಹಲಿ ಎಸ್‌ಎಫ್‌ಐ ಸಂಘಟನೆಯ ರಾಜ್ಯ ಸಮಿತಿ ಸದಸ್ಯ.

ಕನ್ನಡಕ್ಕೆ: ಡಾ. ಅಶೋಕ್. ಕೆ. ಆರ್.


ಇದನ್ನೂ ಓದಿ: ಮೋದಿಯವರ ಅಹಂ ದೊಡ್ಡದೋ, ರೈತಶಕ್ತಿ ದೊಡ್ಡದೋ ತೀರ್ಮಾನವಾಗಲಿದೆ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...