Homeಮುಖಪುಟಕೇರಳದಲ್ಲಿ ರಾಜಕೀಯ ಹಿಂದುತ್ವದ ಬೆಳವಣಿಗೆಯನ್ನು ಅರ್ಥೈಸಿಕೊಳ್ಳುವುದು ಹೇಗೆ?

ಕೇರಳದಲ್ಲಿ ರಾಜಕೀಯ ಹಿಂದುತ್ವದ ಬೆಳವಣಿಗೆಯನ್ನು ಅರ್ಥೈಸಿಕೊಳ್ಳುವುದು ಹೇಗೆ?

2020ರ ಲೆಕ್ಕದ ಪ್ರಕಾರ ಕೇರಳದಲ್ಲಿರುವ ಆರ್‌ಎಸ್‌ಎಸ್ ಶಾಖೆಗಳು ಮಹಾರಾಷ್ಟ್ರ ಮತ್ತು ಗುಜರಾತಿನಲ್ಲಿರುವ ಒಟ್ಟು ಶಾಖೆಗಳಿಗಿಂತ ಹೆಚ್ಚು!

- Advertisement -
- Advertisement -

ಪರಿಚಯವಿಲ್ಲದವರಿಗೆ ಕೇರಳದಲ್ಲಿನ ರಾಜಕೀಯ ಹಿಂದುತ್ವದ ಬೆಳವಣಿಗೆ ಹಾಗೂ ಅದರ ಭಾಗವೇ ಆದ ಬಿಜೆಪಿಯ ಮುನ್ನಡೆ ಕಾಲದ ಪ್ರವಾಹದಲ್ಲಿ ನುಚ್ಚುನೂರಾಗುವ ಪ್ರಕ್ರಿಯೆಯಂತೆ ಕಾಣಬಹುದು. ಕೇರಳದ ಒಳಗೆ ಮತ್ತು ಹೊರಗಿರುವ ಅನೇಕ ಪ್ರಗತಿಪರರಿಗೆ ಕೇರಳ ರಾಜ್ಯದೊಳಗಿನ ಹಿಂದುತ್ವದ ಶಕ್ತಿಗಳು ದುರ್ಬಲವಾಗಿವೆ, ಕೊನೇ ಪಕ್ಷ ಚುನಾವಣಾ ರಾಜಕೀಯದಲ್ಲಿ ಅವುಗಳ ಪ್ರಭಾವ ಕಡಿಮೆ ಎನ್ನಿಸಿ, ಅಲ್ಲಿನ ಎಡಪಕ್ಷಗಳು ಅದನ್ನು ತಡೆಯುತ್ತವೆ ಎಂದೆನಿಸಬಹುದು. ಈ ಅಭಿಪ್ರಾಯಗಳಿಗೆ ವಾಸ್ತವಾಂಶಕ್ಕಿಂತ ಹೆಚ್ಚಾಗಿ ಅತಿಯಾದ ಆತ್ಮವಿಶ್ವಾಸ ಕಾರಣವಾಗಿರುತ್ತವೆ. ಬಲಪಂಥೀಯ ಹಿಂದುತ್ವ ಶಕ್ತಿಗಳ ದೀರ್ಘಕಾಲೀನ ರಾಜಕೀಯ ಯೋಜನೆಗಳನ್ನು ಅಂದಾಜು ಮಾಡುವುದಕ್ಕೆ ಎಡವುದರಿಂದ ಈ ಅಭಿಪ್ರಾಯಗಳು ಮೂಡುತ್ತವೆ.

ಸ್ಥಾಪನೆಯ ದಿನದಿಂದಲೂ ಕೇರಳದ ಸಾಮಾಜಿಕ ಸಂರಚನೆಯಲ್ಲಿ ಸಂಘ ಪರಿವಾರ ಅಸ್ತಿತ್ವದಲ್ಲಿದೆ. ಸಂಘ ಪರಿವಾರದ ರಾಜಕೀಯ ಬಣ ಬಿಜೆಪಿಯು ರಾಜ್ಯದಲ್ಲಿ ಪಡೆಯುವ ಮತಗಳ ಸಂಖ್ಯೆ ತುಂಬಾ ಕಡಿಮೆ ಇರುವುದು ಹೌದಾದರೂ 2020ರ ಲೆಕ್ಕದ ಪ್ರಕಾರ ಕೇರಳದಲ್ಲಿರುವ ಆರ್‌ಎಸ್‌ಎಸ್ ಶಾಖೆಗಳು ಮಹಾರಾಷ್ಟ್ರ ಮತ್ತು ಗುಜರಾತಿನಲ್ಲಿರುವ ಒಟ್ಟು ಶಾಖೆಗಳಿಗಿಂತ ಹೆಚ್ಚು. 1940ರ ಇಸವಿಯಲ್ಲಿಯೇ ಆರ್‌ಎಸ್‌ಎಸ್ ಕೇರಳದಲ್ಲಿ ತನ್ನ ಬೇರು ಬಿಡಲು ಪ್ರಾರಂಭಿಸಿತು ಮತ್ತು ಕೇರಳದ ಮೇಲ್ಜಾತಿಗಳ ಹಿಂದೂಗಳ ನಡುವೆ ಮುಖ್ಯವಾಹಿನಿ ಶಕ್ತಿಯಾಗಿ ರೂಪುಗೊಂಡಿತು. 1948ರಲ್ಲಿ ಗಾಂಧೀಜಿಯವರ ಹತ್ಯೆಯಾದಾಗ ಆರ್‌ಎಸ್‌ಎಸ್‌ನ ಸದಸ್ಯರು ಬಹಿರಂಗವಾಗಿಯೇ ಸಂಭ್ರಮಾಚರಣೆಯಲ್ಲಿ ತೊಡಗಿದ್ದನ್ನು ಕಂಡು ಉಂಟಾದ ಹತಾಶೆಯನ್ನು ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕವಿ ಮತ್ತು ಯುವ ಕಮ್ಯುನಿಸ್ಟ್ ಒ.ಎನ್.ವಿ ಕುರುಪ್ ತಮ್ಮ ನೆನಪಿನ ಪುಟಗಳಲ್ಲಿ ದಾಖಲಿಸಿದ್ದಾರೆ.

1970ರ ಹೊತ್ತಿಗೆ ಆರ್‌ಎಸ್‌ಎಸ್ ಸಂಘಟಿತ ಕೋಮು ಹಿಂಸಾಚಾರವನ್ನು ನಡೆಸುವಷ್ಟರ ಮಟ್ಟಿಗೆ ರಾಜ್ಯದಲ್ಲಿ ಬೇರುಬಿಟ್ಟಿತ್ತು. ಕಣ್ಣೂರಿನಲ್ಲಿ ಆರ್‌ಎಸ್‌ಎಸ್ ಪ್ರೇರಿತ ಕೋಮು ದ್ವೇಷದ ವದಂತಿಗಳು 1972ರ ತಲಚೇರಿ ಗಲಭೆಗೆ ಕಾರಣವಾಗಿತ್ತು. ಈ ಗಲಭೆಯ ಸಮಯದಲ್ಲಿ ಈಗ ಮುಖ್ಯ ಮಂತ್ರಿಯಾಗಿರುವ ಪಿಣರಾಯಿ ವಿಜಯನ್‌ರವರು ಸಿಪಿಐಎಂಅನ್ನು ಆರ್‌ಎಸ್‌ಎಸ್‌ನ ದಾಳಿಗೆದುರಾಗಿ ಮುನ್ನಡೆಸಿದರು. ಈ ಪ್ರದೇಶದಲ್ಲಿದ್ದ ಮಸೀದಿಗಳ ಮೇಲೆ ಆರ್‌ಎಸ್‌ಎಸ್ ನಡೆಸುತ್ತಿದ್ದ ದಾಳಿಗಳನ್ನು ತಡೆದರು. ಈ ಗಲಭೆಯ ಸಮಯದಲ್ಲೇ ಮೆರುವಂಬಾಯಿ ಮಸೀದಿಯನ್ನು ಕಾಯುತ್ತಿದ್ದ ಸಿಪಿಐಎಂನ ಯು.ಕೆ. ಕುಂಯಿರಾಮನ್‌ರವರನ್ನು ಆರ್‌ಎಸ್‌ಎಸ್‌ನವರು ಹತ್ಯೆ ಮಾಡಿದರು. ಆರ್‌ಎಸ್‌ಎಸ್‌ನಿಂದ ಹತ್ಯೆಗೊಳಗಾದ ಮೊದಲ ಸಿಪಿಐಎಂ ಹುತಾತ್ಮ ಯು.ಕೆ. ಕುಂಯಿರಾಮನ್. ಕೇರಳದಲ್ಲಿ ಎಡಪಕ್ಷಗಳ ಮೇಲೆ ಆರ್‌ಎಸ್‌ಎಸ್ ನಡೆಸುವ ದಾಳಿಯು ಪ್ರಾರಂಭವಾಗಿದ್ದೇ ಈ ಗಲಭೆಯಿಂದ. ಆರ್‌ಎಸ್‌ಎಸ್‌ನ ಈ ನಿರಂತರ ಸರಣಿ ದಾಳಿಗಳು ಇವತ್ತಿಗೂ ಮುಂದುವರೆದಿದೆ, ಹಲವು ಜೀವಗಳನ್ನು ಬಲಿ ಪಡೆದಿದೆ.

ಕೇರಳದಲ್ಲಿ ಈಗ ಹೆಚ್ಚುಕಡಿಮೆ ಏಳು ಸಾವಿರ ಶಾಖೆಗಳನ್ನು ಹೊಂದಿರುವ ಆರ್‌ಎಸ್‌ಎಸ್ ಅಪಾಯಕಾರಿ ರೀತಿಯಲ್ಲಿ ಬೆಳೆಯುತ್ತಿದೆ. 2014ರಿಂದ ಸಂಘ ಪರಿವಾರ ಕೇರಳದೆಡೆಗೆ ತನ್ನ ರಾಜಕೀಯ ಗುರಿಯನ್ನು ವರ್ಗಾಯಿಸಿದ್ದು, ಬಿಜೆಪಿಯ ಮತಗಳಿಕೆ ಪ್ರಮಾಣವು ಗಣನೀಯವಾಗಿ ಏರಿಕೆ ಕಂಡಿದೆ. ಈ ಮುಂಚೆ ಕಾಂಗ್ರೆಸ್ಸಿಗೆ ಮತ ಚಲಾಯಿಸುತ್ತಿದ್ದ ಆರ್‌ಎಸ್‌ಎಸ್ ಕಾರ್ಯಕರ್ತರು ಮತ್ತು ಆರ್‌ಎಸ್‌ಎಸ್ ಜೊತೆ ಸಂಬಂಧ ಹೊಂದಿದವರು ಈಗ ಬಿಜೆಪಿಗೆ ಮತ ಚಲಾಯಿಸುತ್ತಿದ್ದಾರೆ. 2016ರ ಕೇರಳ ವಿಧಾನಸಭಾ ಚುನಾವಣೆಯಲ್ಲಿ ನೆಮೋಮ್‌ನಿಂದ ಬಿಜೆಪಿಯ ಮುಖಂಡರಾದ ಓ ರಾಜಗೋಪಾಲ್ ಜಯಗಳಿಸಿದ್ದು ಬಿಜೆಪಿಯ ಮತಗಳಿಕೆಯ ಪ್ರಮಾಣದ ಹೆಚ್ಚುವಿಕೆಗೊಂದು ಉದಾಹರಣೆ. ನೆಮೋಮ್‌ನಲ್ಲಿ ನಡೆದ ಕಳೆದ ಮೂರು ಚುನಾವಣೆಗಳಲ್ಲಿ ಕಾಂಗ್ರೆಸ್, ಬಿಜೆಪಿ ಮತ್ತು ಸಿಪಿಐಎಂ ಪಡೆದ ಮತಗಳನ್ನು ಪರಿಗಣಿಸಿದಾಗ ಕಾಂಗ್ರೆಸ್ಸಿಗೆ ಬೀಳುತ್ತಿದ್ದ ಮತಗಳೆಲ್ಲ ಹೇಗೆ ಬಿಜೆಪಿಗೆ ವರ್ಗವಾಗಿವೆ ಎನ್ನುವುದನ್ನು ಗುರುತಿಸಬಹುದಾಗಿದೆ.

ಈ ಬದಲಾವಣೆಗೆ ಹಲವು ಕಾರಣಗಳಿವೆ. ಇದರಲ್ಲಿ ಪ್ರಮುಖ ಕಾರಣವೆಂದರೆ ಬಿಜೆಪಿಗೆ ತನ್ನ ನೆಲೆಗಳನ್ನು ಬಿಟ್ಟುಕೊಡಬಾರದೆಂಬ ನಿಟ್ಟಿನಲ್ಲಿ ಕಾಂಗ್ರೆಸ್ ಪಕ್ಷ ಅನುಸರಿಸುತ್ತಿರುವ ಮೃದು ಹಿಂದುತ್ವ ಧೋರಣೆ. 2018ರಲ್ಲಿ ಸುಪ್ರೀಂಕೋರ್ಟ್ ಶಬರಿಮಲೆಗೆ ಮಹಿಳೆಯರ ಪ್ರವೇಶದ ಕುರಿತು ನೀಡಿದ ಆದೇಶದ ಕುರಿತು ಕಾಂಗ್ರೆಸ್ ತೆಗೆದುಕೊಂಡ ಧೋರಣೆಗಳು ಬಿಜೆಪಿಯ ಧೋರಣೆಗಿಂತ ಯಾವ ರೀತಿಯಲ್ಲೂ ಭಿನ್ನವಾಗಿರಲಿಲ್ಲ. ಶಬರಿಮಲೆಗೆ ಮಹಿಳೆಯರ ಪ್ರವೇಶಕ್ಕಿದ್ದ ಅಡೆತಡೆಯ ಹಿಂದಿನ ಪುರುಷ ಪ್ರಧಾನ ಮನಸ್ಥಿತಿಯನ್ನು ಗಮನಕ್ಕೇ ತೆಗೆದುಕೊಳ್ಳದೇ ಕಾಂಗ್ರೆಸ್ ಮತ್ತು ಬಿಜೆಪಿಗಳೆರಡೂ ’ಸಂಪ್ರದಾಯವನ್ನು ರಕ್ಷಿಸಬೇಕು’, ’ಕಮ್ಯುನಿಸ್ಟರು ಹಿಂದೂ ಮೌಲ್ಯಗಳ ಮೇಲೆ ದಾಳಿ ನಡೆಸುತ್ತಿದ್ದಾರೆ’ ಎಂದು ಬೊಬ್ಬಿರಿದರು.

ಇವೆಲ್ಲವುಗಳ ಜೊತೆಗೆ ಕೇರಳದ ಬಹುಜನರನ್ನು ಕಳೆದ ಕೆಲವು ದಶಕಗಳಿಂದ ’ಸಂಸ್ಕೃತೀಕರಣ’ಕ್ಕೊಳಪಡಿಸಲಾಗುತ್ತಿದೆ. ಈ ಪ್ರಕ್ರಿಯೆಯನ್ನು ಮುಂದೆ ನಿಂತು ನಡೆಸುತ್ತಿರುವುದು ಸಂಘ ಪರಿವಾರ. ಪಾರಂಪರಿಕ ಪೂಜ್ಯ ಜಾಗಗಳನ್ನೆಲ್ಲ ದೇವಸ್ಥಾನಗಳನ್ನಾಗಿ ಪರಿವರ್ತಿಸಲಾಗುತ್ತಿದೆ. ಬಹುಜನರು ವೈದಿಕ ಆಚರಣೆಗಳ ಜೊತೆ ಹೆಚ್ಚೆಚ್ಚು ಗುರುತಿಸಿಕೊಳ್ಳುತ್ತಿದ್ದಾರೆ. ಬಿಜೆಪಿಯು ರಾಜಕೀಯವಾಗಿಯೂ ಗೆಲ್ಲುತ್ತಿರುವುದು, ರಾಜ್ಯದಲ್ಲಿ 1957ರಿಂದ ಕಂಡುಬರುವ ಜಾತಿ ಆಧಾರಿತ ಐತಿಹಾಸಿಕ ಮತ ಚಲಾವಣೆಯು ಮುರಿದು ಬೀಳುತ್ತಿರುವ ಸೂಚನೆ. ಅರವತ್ತು ವರುಷಗಳ ಹಿಂದೆ ಕೇರಳದಲ್ಲಿದ್ದ ಕಮ್ಯುನಿಸ್ಟರ ಸರಕಾರವನ್ನು ಸವರ್ಣ ಭೂಮಾಲೀಕರ ಮೈತ್ರಿ ಮೋಸದಿಂದ ಕೆಡವಿದ ಮೇಲೆ ಕೇರಳದಲ್ಲಿ ಮತ ಚಲಾವಣೆಯು ಜಾತಿಯಾಧಾರಿತವಾಗಿದೆ. ರಾಜ್ಯದಲ್ಲಿನ ದಲಿತರು – ಹಿಂದುಳಿದ ವರ್ಗಗಳ ಮತಗಳನ್ನು ಕಮ್ಯುನಿಸ್ಟರೇ ನಿರಂತರವಾಗಿ ಪಡೆಯುತ್ತಾ ಬಂದಿದ್ದಾರೆ.

ಈ ಎಲ್ಲಾ ಬೆಳವಣಿಗೆಗಳ ಜೊತೆಗೆ ಹಿಂದುತ್ವದ ಶಕ್ತಿಗಳು ವಾಟ್ಸ್‌ಆಪ್ ಮೆಸೇಜುಗಳ ಮೂಲಕ ಸಂಘಟಿತವಾಗಿ ಸುಳ್ಳು ಸುದ್ದಿಗಳನ್ನು ಹಂಚುತ್ತಿರುವುದು ಕೂಡ ಹಿಂದುತ್ವವು ರಾಜಕೀಯ ಶಕ್ತಿಯಾಗಿ ಬೆಳೆಯಲು ಕಾರಣವಾಗಿದೆ. ರಾಜಕಾರಣದ ಕುರಿತು ಕಾಂಗ್ರೆಸ್ಸಿನ ದೃಷ್ಟಿಕೋನ ಆಮೂಲಾಗ್ರವಾಗಿ ಬದಲಾಗದೇ ಹೋದಲ್ಲಿ ಕೇರಳ ರಾಜ್ಯದಲ್ಲಿ ಬಹುದೊಡ್ಡ ಪಕ್ಷಪಾತಿ ರಾಜಕೀಯ ಬದಲಾವಣೆ ಕಾಣಿಸಿಕೊಳ್ಳಲಿದೆ. ಕಾಂಗ್ರೆಸ್ಸಿನ ಜಾಗದಲ್ಲಿ ಬಿಜೆಪಿ ಬೆಳೆದು ಎಡ ಪಕ್ಷಗಳಿಗೆ ಪ್ರಮುಖ ವಿರೋಧ ಪಕ್ಷವಾಗಿ ಬೆಳೆಯುತ್ತದೆ. ಇದರಿಂದ ಉಂಟಾಗುವ ರಾಜಕೀಯ ಧ್ರುವೀಕರಣದ ಪ್ರಭಾವಗಳು ಸುದೀರ್ಘ ಕಾಲದವರೆಗೆ ಪರಿಣಾಮ ಬೀರುತ್ತವೆ.

  • ವಾರ್ಕಿ ಪಾರಕ್ಕಲ್

ದೆಹಲಿ ಸ್ಕೂಲ್ ಆಫ್ ಎಕನಾಮಿಕ್ಸ್‌ನಲ್ಲಿ ಸಮಾಜಶಾಸ್ತ್ರ ವಿದ್ಯಾರ್ಥಿಯಾಗಿರುವ ವಾರ್ಕಿ ಸಾಮಾಜಿಕ ಕಾರ್ಯಕರ್ತರು ಕೂಡ. ದೆಹಲಿ ಎಸ್‌ಎಫ್‌ಐ ಸಂಘಟನೆಯ ರಾಜ್ಯ ಸಮಿತಿ ಸದಸ್ಯ.

ಕನ್ನಡಕ್ಕೆ: ಡಾ. ಅಶೋಕ್. ಕೆ. ಆರ್.


ಇದನ್ನೂ ಓದಿ: ಮೋದಿಯವರ ಅಹಂ ದೊಡ್ಡದೋ, ರೈತಶಕ್ತಿ ದೊಡ್ಡದೋ ತೀರ್ಮಾನವಾಗಲಿದೆ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...