Homeಮುಖಪುಟಕೇರಳದಲ್ಲಿ ರಾಜಕೀಯ ಹಿಂದುತ್ವದ ಬೆಳವಣಿಗೆಯನ್ನು ಅರ್ಥೈಸಿಕೊಳ್ಳುವುದು ಹೇಗೆ?

ಕೇರಳದಲ್ಲಿ ರಾಜಕೀಯ ಹಿಂದುತ್ವದ ಬೆಳವಣಿಗೆಯನ್ನು ಅರ್ಥೈಸಿಕೊಳ್ಳುವುದು ಹೇಗೆ?

2020ರ ಲೆಕ್ಕದ ಪ್ರಕಾರ ಕೇರಳದಲ್ಲಿರುವ ಆರ್‌ಎಸ್‌ಎಸ್ ಶಾಖೆಗಳು ಮಹಾರಾಷ್ಟ್ರ ಮತ್ತು ಗುಜರಾತಿನಲ್ಲಿರುವ ಒಟ್ಟು ಶಾಖೆಗಳಿಗಿಂತ ಹೆಚ್ಚು!

- Advertisement -
- Advertisement -

ಪರಿಚಯವಿಲ್ಲದವರಿಗೆ ಕೇರಳದಲ್ಲಿನ ರಾಜಕೀಯ ಹಿಂದುತ್ವದ ಬೆಳವಣಿಗೆ ಹಾಗೂ ಅದರ ಭಾಗವೇ ಆದ ಬಿಜೆಪಿಯ ಮುನ್ನಡೆ ಕಾಲದ ಪ್ರವಾಹದಲ್ಲಿ ನುಚ್ಚುನೂರಾಗುವ ಪ್ರಕ್ರಿಯೆಯಂತೆ ಕಾಣಬಹುದು. ಕೇರಳದ ಒಳಗೆ ಮತ್ತು ಹೊರಗಿರುವ ಅನೇಕ ಪ್ರಗತಿಪರರಿಗೆ ಕೇರಳ ರಾಜ್ಯದೊಳಗಿನ ಹಿಂದುತ್ವದ ಶಕ್ತಿಗಳು ದುರ್ಬಲವಾಗಿವೆ, ಕೊನೇ ಪಕ್ಷ ಚುನಾವಣಾ ರಾಜಕೀಯದಲ್ಲಿ ಅವುಗಳ ಪ್ರಭಾವ ಕಡಿಮೆ ಎನ್ನಿಸಿ, ಅಲ್ಲಿನ ಎಡಪಕ್ಷಗಳು ಅದನ್ನು ತಡೆಯುತ್ತವೆ ಎಂದೆನಿಸಬಹುದು. ಈ ಅಭಿಪ್ರಾಯಗಳಿಗೆ ವಾಸ್ತವಾಂಶಕ್ಕಿಂತ ಹೆಚ್ಚಾಗಿ ಅತಿಯಾದ ಆತ್ಮವಿಶ್ವಾಸ ಕಾರಣವಾಗಿರುತ್ತವೆ. ಬಲಪಂಥೀಯ ಹಿಂದುತ್ವ ಶಕ್ತಿಗಳ ದೀರ್ಘಕಾಲೀನ ರಾಜಕೀಯ ಯೋಜನೆಗಳನ್ನು ಅಂದಾಜು ಮಾಡುವುದಕ್ಕೆ ಎಡವುದರಿಂದ ಈ ಅಭಿಪ್ರಾಯಗಳು ಮೂಡುತ್ತವೆ.

ಸ್ಥಾಪನೆಯ ದಿನದಿಂದಲೂ ಕೇರಳದ ಸಾಮಾಜಿಕ ಸಂರಚನೆಯಲ್ಲಿ ಸಂಘ ಪರಿವಾರ ಅಸ್ತಿತ್ವದಲ್ಲಿದೆ. ಸಂಘ ಪರಿವಾರದ ರಾಜಕೀಯ ಬಣ ಬಿಜೆಪಿಯು ರಾಜ್ಯದಲ್ಲಿ ಪಡೆಯುವ ಮತಗಳ ಸಂಖ್ಯೆ ತುಂಬಾ ಕಡಿಮೆ ಇರುವುದು ಹೌದಾದರೂ 2020ರ ಲೆಕ್ಕದ ಪ್ರಕಾರ ಕೇರಳದಲ್ಲಿರುವ ಆರ್‌ಎಸ್‌ಎಸ್ ಶಾಖೆಗಳು ಮಹಾರಾಷ್ಟ್ರ ಮತ್ತು ಗುಜರಾತಿನಲ್ಲಿರುವ ಒಟ್ಟು ಶಾಖೆಗಳಿಗಿಂತ ಹೆಚ್ಚು. 1940ರ ಇಸವಿಯಲ್ಲಿಯೇ ಆರ್‌ಎಸ್‌ಎಸ್ ಕೇರಳದಲ್ಲಿ ತನ್ನ ಬೇರು ಬಿಡಲು ಪ್ರಾರಂಭಿಸಿತು ಮತ್ತು ಕೇರಳದ ಮೇಲ್ಜಾತಿಗಳ ಹಿಂದೂಗಳ ನಡುವೆ ಮುಖ್ಯವಾಹಿನಿ ಶಕ್ತಿಯಾಗಿ ರೂಪುಗೊಂಡಿತು. 1948ರಲ್ಲಿ ಗಾಂಧೀಜಿಯವರ ಹತ್ಯೆಯಾದಾಗ ಆರ್‌ಎಸ್‌ಎಸ್‌ನ ಸದಸ್ಯರು ಬಹಿರಂಗವಾಗಿಯೇ ಸಂಭ್ರಮಾಚರಣೆಯಲ್ಲಿ ತೊಡಗಿದ್ದನ್ನು ಕಂಡು ಉಂಟಾದ ಹತಾಶೆಯನ್ನು ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕವಿ ಮತ್ತು ಯುವ ಕಮ್ಯುನಿಸ್ಟ್ ಒ.ಎನ್.ವಿ ಕುರುಪ್ ತಮ್ಮ ನೆನಪಿನ ಪುಟಗಳಲ್ಲಿ ದಾಖಲಿಸಿದ್ದಾರೆ.

1970ರ ಹೊತ್ತಿಗೆ ಆರ್‌ಎಸ್‌ಎಸ್ ಸಂಘಟಿತ ಕೋಮು ಹಿಂಸಾಚಾರವನ್ನು ನಡೆಸುವಷ್ಟರ ಮಟ್ಟಿಗೆ ರಾಜ್ಯದಲ್ಲಿ ಬೇರುಬಿಟ್ಟಿತ್ತು. ಕಣ್ಣೂರಿನಲ್ಲಿ ಆರ್‌ಎಸ್‌ಎಸ್ ಪ್ರೇರಿತ ಕೋಮು ದ್ವೇಷದ ವದಂತಿಗಳು 1972ರ ತಲಚೇರಿ ಗಲಭೆಗೆ ಕಾರಣವಾಗಿತ್ತು. ಈ ಗಲಭೆಯ ಸಮಯದಲ್ಲಿ ಈಗ ಮುಖ್ಯ ಮಂತ್ರಿಯಾಗಿರುವ ಪಿಣರಾಯಿ ವಿಜಯನ್‌ರವರು ಸಿಪಿಐಎಂಅನ್ನು ಆರ್‌ಎಸ್‌ಎಸ್‌ನ ದಾಳಿಗೆದುರಾಗಿ ಮುನ್ನಡೆಸಿದರು. ಈ ಪ್ರದೇಶದಲ್ಲಿದ್ದ ಮಸೀದಿಗಳ ಮೇಲೆ ಆರ್‌ಎಸ್‌ಎಸ್ ನಡೆಸುತ್ತಿದ್ದ ದಾಳಿಗಳನ್ನು ತಡೆದರು. ಈ ಗಲಭೆಯ ಸಮಯದಲ್ಲೇ ಮೆರುವಂಬಾಯಿ ಮಸೀದಿಯನ್ನು ಕಾಯುತ್ತಿದ್ದ ಸಿಪಿಐಎಂನ ಯು.ಕೆ. ಕುಂಯಿರಾಮನ್‌ರವರನ್ನು ಆರ್‌ಎಸ್‌ಎಸ್‌ನವರು ಹತ್ಯೆ ಮಾಡಿದರು. ಆರ್‌ಎಸ್‌ಎಸ್‌ನಿಂದ ಹತ್ಯೆಗೊಳಗಾದ ಮೊದಲ ಸಿಪಿಐಎಂ ಹುತಾತ್ಮ ಯು.ಕೆ. ಕುಂಯಿರಾಮನ್. ಕೇರಳದಲ್ಲಿ ಎಡಪಕ್ಷಗಳ ಮೇಲೆ ಆರ್‌ಎಸ್‌ಎಸ್ ನಡೆಸುವ ದಾಳಿಯು ಪ್ರಾರಂಭವಾಗಿದ್ದೇ ಈ ಗಲಭೆಯಿಂದ. ಆರ್‌ಎಸ್‌ಎಸ್‌ನ ಈ ನಿರಂತರ ಸರಣಿ ದಾಳಿಗಳು ಇವತ್ತಿಗೂ ಮುಂದುವರೆದಿದೆ, ಹಲವು ಜೀವಗಳನ್ನು ಬಲಿ ಪಡೆದಿದೆ.

ಕೇರಳದಲ್ಲಿ ಈಗ ಹೆಚ್ಚುಕಡಿಮೆ ಏಳು ಸಾವಿರ ಶಾಖೆಗಳನ್ನು ಹೊಂದಿರುವ ಆರ್‌ಎಸ್‌ಎಸ್ ಅಪಾಯಕಾರಿ ರೀತಿಯಲ್ಲಿ ಬೆಳೆಯುತ್ತಿದೆ. 2014ರಿಂದ ಸಂಘ ಪರಿವಾರ ಕೇರಳದೆಡೆಗೆ ತನ್ನ ರಾಜಕೀಯ ಗುರಿಯನ್ನು ವರ್ಗಾಯಿಸಿದ್ದು, ಬಿಜೆಪಿಯ ಮತಗಳಿಕೆ ಪ್ರಮಾಣವು ಗಣನೀಯವಾಗಿ ಏರಿಕೆ ಕಂಡಿದೆ. ಈ ಮುಂಚೆ ಕಾಂಗ್ರೆಸ್ಸಿಗೆ ಮತ ಚಲಾಯಿಸುತ್ತಿದ್ದ ಆರ್‌ಎಸ್‌ಎಸ್ ಕಾರ್ಯಕರ್ತರು ಮತ್ತು ಆರ್‌ಎಸ್‌ಎಸ್ ಜೊತೆ ಸಂಬಂಧ ಹೊಂದಿದವರು ಈಗ ಬಿಜೆಪಿಗೆ ಮತ ಚಲಾಯಿಸುತ್ತಿದ್ದಾರೆ. 2016ರ ಕೇರಳ ವಿಧಾನಸಭಾ ಚುನಾವಣೆಯಲ್ಲಿ ನೆಮೋಮ್‌ನಿಂದ ಬಿಜೆಪಿಯ ಮುಖಂಡರಾದ ಓ ರಾಜಗೋಪಾಲ್ ಜಯಗಳಿಸಿದ್ದು ಬಿಜೆಪಿಯ ಮತಗಳಿಕೆಯ ಪ್ರಮಾಣದ ಹೆಚ್ಚುವಿಕೆಗೊಂದು ಉದಾಹರಣೆ. ನೆಮೋಮ್‌ನಲ್ಲಿ ನಡೆದ ಕಳೆದ ಮೂರು ಚುನಾವಣೆಗಳಲ್ಲಿ ಕಾಂಗ್ರೆಸ್, ಬಿಜೆಪಿ ಮತ್ತು ಸಿಪಿಐಎಂ ಪಡೆದ ಮತಗಳನ್ನು ಪರಿಗಣಿಸಿದಾಗ ಕಾಂಗ್ರೆಸ್ಸಿಗೆ ಬೀಳುತ್ತಿದ್ದ ಮತಗಳೆಲ್ಲ ಹೇಗೆ ಬಿಜೆಪಿಗೆ ವರ್ಗವಾಗಿವೆ ಎನ್ನುವುದನ್ನು ಗುರುತಿಸಬಹುದಾಗಿದೆ.

ಈ ಬದಲಾವಣೆಗೆ ಹಲವು ಕಾರಣಗಳಿವೆ. ಇದರಲ್ಲಿ ಪ್ರಮುಖ ಕಾರಣವೆಂದರೆ ಬಿಜೆಪಿಗೆ ತನ್ನ ನೆಲೆಗಳನ್ನು ಬಿಟ್ಟುಕೊಡಬಾರದೆಂಬ ನಿಟ್ಟಿನಲ್ಲಿ ಕಾಂಗ್ರೆಸ್ ಪಕ್ಷ ಅನುಸರಿಸುತ್ತಿರುವ ಮೃದು ಹಿಂದುತ್ವ ಧೋರಣೆ. 2018ರಲ್ಲಿ ಸುಪ್ರೀಂಕೋರ್ಟ್ ಶಬರಿಮಲೆಗೆ ಮಹಿಳೆಯರ ಪ್ರವೇಶದ ಕುರಿತು ನೀಡಿದ ಆದೇಶದ ಕುರಿತು ಕಾಂಗ್ರೆಸ್ ತೆಗೆದುಕೊಂಡ ಧೋರಣೆಗಳು ಬಿಜೆಪಿಯ ಧೋರಣೆಗಿಂತ ಯಾವ ರೀತಿಯಲ್ಲೂ ಭಿನ್ನವಾಗಿರಲಿಲ್ಲ. ಶಬರಿಮಲೆಗೆ ಮಹಿಳೆಯರ ಪ್ರವೇಶಕ್ಕಿದ್ದ ಅಡೆತಡೆಯ ಹಿಂದಿನ ಪುರುಷ ಪ್ರಧಾನ ಮನಸ್ಥಿತಿಯನ್ನು ಗಮನಕ್ಕೇ ತೆಗೆದುಕೊಳ್ಳದೇ ಕಾಂಗ್ರೆಸ್ ಮತ್ತು ಬಿಜೆಪಿಗಳೆರಡೂ ’ಸಂಪ್ರದಾಯವನ್ನು ರಕ್ಷಿಸಬೇಕು’, ’ಕಮ್ಯುನಿಸ್ಟರು ಹಿಂದೂ ಮೌಲ್ಯಗಳ ಮೇಲೆ ದಾಳಿ ನಡೆಸುತ್ತಿದ್ದಾರೆ’ ಎಂದು ಬೊಬ್ಬಿರಿದರು.

ಇವೆಲ್ಲವುಗಳ ಜೊತೆಗೆ ಕೇರಳದ ಬಹುಜನರನ್ನು ಕಳೆದ ಕೆಲವು ದಶಕಗಳಿಂದ ’ಸಂಸ್ಕೃತೀಕರಣ’ಕ್ಕೊಳಪಡಿಸಲಾಗುತ್ತಿದೆ. ಈ ಪ್ರಕ್ರಿಯೆಯನ್ನು ಮುಂದೆ ನಿಂತು ನಡೆಸುತ್ತಿರುವುದು ಸಂಘ ಪರಿವಾರ. ಪಾರಂಪರಿಕ ಪೂಜ್ಯ ಜಾಗಗಳನ್ನೆಲ್ಲ ದೇವಸ್ಥಾನಗಳನ್ನಾಗಿ ಪರಿವರ್ತಿಸಲಾಗುತ್ತಿದೆ. ಬಹುಜನರು ವೈದಿಕ ಆಚರಣೆಗಳ ಜೊತೆ ಹೆಚ್ಚೆಚ್ಚು ಗುರುತಿಸಿಕೊಳ್ಳುತ್ತಿದ್ದಾರೆ. ಬಿಜೆಪಿಯು ರಾಜಕೀಯವಾಗಿಯೂ ಗೆಲ್ಲುತ್ತಿರುವುದು, ರಾಜ್ಯದಲ್ಲಿ 1957ರಿಂದ ಕಂಡುಬರುವ ಜಾತಿ ಆಧಾರಿತ ಐತಿಹಾಸಿಕ ಮತ ಚಲಾವಣೆಯು ಮುರಿದು ಬೀಳುತ್ತಿರುವ ಸೂಚನೆ. ಅರವತ್ತು ವರುಷಗಳ ಹಿಂದೆ ಕೇರಳದಲ್ಲಿದ್ದ ಕಮ್ಯುನಿಸ್ಟರ ಸರಕಾರವನ್ನು ಸವರ್ಣ ಭೂಮಾಲೀಕರ ಮೈತ್ರಿ ಮೋಸದಿಂದ ಕೆಡವಿದ ಮೇಲೆ ಕೇರಳದಲ್ಲಿ ಮತ ಚಲಾವಣೆಯು ಜಾತಿಯಾಧಾರಿತವಾಗಿದೆ. ರಾಜ್ಯದಲ್ಲಿನ ದಲಿತರು – ಹಿಂದುಳಿದ ವರ್ಗಗಳ ಮತಗಳನ್ನು ಕಮ್ಯುನಿಸ್ಟರೇ ನಿರಂತರವಾಗಿ ಪಡೆಯುತ್ತಾ ಬಂದಿದ್ದಾರೆ.

ಈ ಎಲ್ಲಾ ಬೆಳವಣಿಗೆಗಳ ಜೊತೆಗೆ ಹಿಂದುತ್ವದ ಶಕ್ತಿಗಳು ವಾಟ್ಸ್‌ಆಪ್ ಮೆಸೇಜುಗಳ ಮೂಲಕ ಸಂಘಟಿತವಾಗಿ ಸುಳ್ಳು ಸುದ್ದಿಗಳನ್ನು ಹಂಚುತ್ತಿರುವುದು ಕೂಡ ಹಿಂದುತ್ವವು ರಾಜಕೀಯ ಶಕ್ತಿಯಾಗಿ ಬೆಳೆಯಲು ಕಾರಣವಾಗಿದೆ. ರಾಜಕಾರಣದ ಕುರಿತು ಕಾಂಗ್ರೆಸ್ಸಿನ ದೃಷ್ಟಿಕೋನ ಆಮೂಲಾಗ್ರವಾಗಿ ಬದಲಾಗದೇ ಹೋದಲ್ಲಿ ಕೇರಳ ರಾಜ್ಯದಲ್ಲಿ ಬಹುದೊಡ್ಡ ಪಕ್ಷಪಾತಿ ರಾಜಕೀಯ ಬದಲಾವಣೆ ಕಾಣಿಸಿಕೊಳ್ಳಲಿದೆ. ಕಾಂಗ್ರೆಸ್ಸಿನ ಜಾಗದಲ್ಲಿ ಬಿಜೆಪಿ ಬೆಳೆದು ಎಡ ಪಕ್ಷಗಳಿಗೆ ಪ್ರಮುಖ ವಿರೋಧ ಪಕ್ಷವಾಗಿ ಬೆಳೆಯುತ್ತದೆ. ಇದರಿಂದ ಉಂಟಾಗುವ ರಾಜಕೀಯ ಧ್ರುವೀಕರಣದ ಪ್ರಭಾವಗಳು ಸುದೀರ್ಘ ಕಾಲದವರೆಗೆ ಪರಿಣಾಮ ಬೀರುತ್ತವೆ.

  • ವಾರ್ಕಿ ಪಾರಕ್ಕಲ್

ದೆಹಲಿ ಸ್ಕೂಲ್ ಆಫ್ ಎಕನಾಮಿಕ್ಸ್‌ನಲ್ಲಿ ಸಮಾಜಶಾಸ್ತ್ರ ವಿದ್ಯಾರ್ಥಿಯಾಗಿರುವ ವಾರ್ಕಿ ಸಾಮಾಜಿಕ ಕಾರ್ಯಕರ್ತರು ಕೂಡ. ದೆಹಲಿ ಎಸ್‌ಎಫ್‌ಐ ಸಂಘಟನೆಯ ರಾಜ್ಯ ಸಮಿತಿ ಸದಸ್ಯ.

ಕನ್ನಡಕ್ಕೆ: ಡಾ. ಅಶೋಕ್. ಕೆ. ಆರ್.


ಇದನ್ನೂ ಓದಿ: ಮೋದಿಯವರ ಅಹಂ ದೊಡ್ಡದೋ, ರೈತಶಕ್ತಿ ದೊಡ್ಡದೋ ತೀರ್ಮಾನವಾಗಲಿದೆ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...