Homeದಲಿತ್ ಫೈಲ್ಸ್ಅಯೋಧ್ಯೆ- ದಲಿತ ಜಮೀನು ಲಪಟಾಯಿಸಿದ ಪ್ರಸಂಗ

ಅಯೋಧ್ಯೆ- ದಲಿತ ಜಮೀನು ಲಪಟಾಯಿಸಿದ ಪ್ರಸಂಗ

- Advertisement -
- Advertisement -

ಅಯೋಧ್ಯೆಯ ಬಾಬರಿ ಮಸೀದಿ-ರಾಮಜನ್ಮಭೂಮಿಯ 2.77 ಎಕರೆಗಳಷ್ಟು ವಿವಾದಿತ ಜಮೀನನ್ನು ರಾಮಮಂದಿರ ಕಟ್ಟಿಕೊಳ್ಳಲು ಸುಪ್ರೀಮ್ ಕೋರ್ಟು ಹಿಂದೂಗಳಿಗೆ ಒಪ್ಪಿಸಿತ್ತು. ಸುಪ್ರೀಮ್ ತೀರ್ಪಿನ ಅನ್ವಯ ರಚಿಸಲಾದ ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ 2.77 ಎಕರೆಗಳ ಸುತ್ತಮುತ್ತ ಈವರೆಗೆ 70 ಎಕರೆ ಜಮೀನನ್ನು ಸ್ವಾಧೀನಪಡಿಸಿಕೊಂಡಿದೆ. ಈ ಎರಡು ವರ್ಷಗಳಲ್ಲಿ ಅಯೋಧ್ಯೆಯ ರಿಯಲ್ ಎಸ್ಟೇಟ್ ದಂಧೆ ಅತಿಶಯವಾಗಿ ಗರಿಗೆದರಿದೆ. ಭವ್ಯ ರಾಮಮಂದಿರದ ಸುತ್ತಮುತ್ತಲ ಜಮೀನಿನ ಖರೀದಿ ದರ ಆಕಾಶಕ್ಕೇರುವ ನಿರೀಕ್ಷೆ ಹೊಂದಿರುವ ಖಾಸಗಿ ಖರೀದಿದಾರರೂ ಈ ಜಮೀನಿಗೆ ಮುಗಿ ಬೀಳತೊಡಗಿದ್ದಾರೆ.

ಸ್ಥಳೀಯ ಶಾಸಕರು ಮತ್ತು ಅಯೋಧ್ಯೆಯ ಉನ್ನತ ಸರ್ಕಾರಿ ಅಧಿಕಾರಿಗಳ ಹತ್ತಿರದ ಸಂಬಂಧಿಕರು ಇಲ್ಲಿನ ಬಡ ದಲಿತರ ಜಮೀನು ಖರೀದಿ ಮಾಡಿರುವ ಪ್ರಕರಣಗಳು ಬೆಳಕಿಗೆ ಬಂದಿವೆ.

ರಾಮಮಂದಿರ ನಿವೇಶನದಿಂದ ಕೆಲವೇ ಕಿಲೋಮೀಟರುಗಳ ದೂರದ ಬರ್ಹಟ ಮಾಂಝಾ ಮತ್ತಿತರೆ ಗ್ರಾಮಗಳ ದಲಿತರಿಂದ 21 ಬಿಘಾಗಳಷ್ಟು (52,000 ಚದರ ಗಜಗಳು) ಜಮೀನನ್ನು 1990ರ ದಶಕಗಳಲ್ಲಿ ಮಹೇಶ್ ಯೋಗಿ ವಿದ್ಯಾಪೀಠ ಟ್ರಸ್ಟ್ ಖರೀದಿಸಿತ್ತು. 2016ರಲ್ಲಿ ಸಂಬಂಧಪಟ್ಟ ಕಾಯಿದೆ ತಿದ್ದುಪಡಿಗೆ ಮುನ್ನ ದಲಿತರು ತಮ್ಮ ಜಮೀನನ್ನು ದಲಿತೇತರರಿಗೆ ಮುಕ್ತವಾಗಿ ಪರಭಾರೆ ಮಾಡುವಂತಿರಲಿಲ್ಲ. ಆದರೆ ಮಹೇಶ್ ಯೋಗಿ ಟ್ರಸ್ಟ್ ಮೋಸ ಮರೆಯಿಂದ ಹತ್ತು ಹನ್ನೆರಡು ಮಂದಿ ದಲಿತರಿಂದ ಜಮೀನು ಖರೀದಿಸಿತ್ತು. ತನ್ನ ದಲಿತ ಉದ್ಯೋಗಿ ರೊಂಘೈ ಹೆಸರಿನಲ್ಲಿ ನೋಂದಣಿ ಮಾಡಿಕೊಂಡಿತ್ತು. ಈ ಜಮೀನನ್ನು ರೊಂಘೈನಿಂದ 1996ರಲ್ಲಿ ದಾನವಾಗಿ ಬರೆಯಿಸಿಕೊಂಡಿತ್ತು. ಕೇವಲ 6.38 ಲಕ್ಷ ರುಪಾಯಿಗೆ ದಲಿತರಿಂದ ದಕ್ಕಿಸಿಕೊಂಡಿದ್ದ ಈ ಜಮೀನಿನ ಇಂದಿನ ಮಾರುಕಟ್ಟೆ ಬೆಲೆ ಕೋಟ್ಯಂತರ ರುಪಾಯಿಗಳು. ಮಹಾದೇವನೆಂಬ ದಲಿತನಿಂದ ಬರೆಯಿಸಿಕೊಂಡಿದ್ದ ಮೂರು ಬಿಘಾಗಳಷ್ಟು ಜಮೀನಿಗೆ ಟ್ರಸ್ಟ್ ಅಂದು ನೀಡಿದ್ದ ಮೊತ್ತ 1.02 ಲಕ್ಷ ರುಪಾಯಿ. ಉತ್ತರಪ್ರದೇಶದಲ್ಲಿ ಒಂದು ಎಕರೆ ಜಮೀನು ಅಂದಾಜು ಒಂದೂವರೆ ಎಕರೆ ಬಿಘಾಕ್ಕೆ ಸಮ. ಹೀಗೆ ದಲಿತರಿಂದ ಪಡೆದ ಜಮೀನನ್ನು ಮಹೇಶ್ ಯೋಗಿ ಟ್ರಸ್ಟ್ ತನಗೆ ಬೇಕಾದವರಿಗೆ ಮಾರಾಟ ಮಾಡಲಾರಂಭಿಸಿತು. ತನ್ನ ಜಮೀನನ್ನು ಅಕ್ರಮವಾಗಿ ವರ್ಗ ಮಾಡಿಸಿಕೊಳ್ಳಲಾಗಿದೆ ಎಂದು ದಲಿತ ಮಹಾದೇವ ರೆವಿನ್ಯೂ ಮಂಡಳಿಗೆ ದೂರು ನೀಡಿದ. ಪರಿಣಾಮವಾಗಿ ಜರುಗಿದ ತನಿಖೆಯ ವರದಿಯು ಅಕ್ರಮ ವರ್ಗಾವಣೆಯ ದೂರನ್ನು ಎತ್ತಿ ಹಿಡಿದು ಸಂಬಂಧಪಟ್ಟ ಸರ್ಕಾರಿ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸುವಂತೆ ಶಿಫಾರಸು ಮಾಡಿತು. ಈ ಶಿಫಾರಸನ್ನು ಅನುಮೋದಿಸಿದ ಅಯೋಧ್ಯಾ ವಿಭಾಗಾಧಿಕಾರಿ ಎಂ.ಪಿ.ಅಗರವಾಲ್ ಸಂಬಂಧಿಕರು ಮಹೇಶ್ ಯೋಗಿ ಟ್ರಸ್ಟ್‌ನಿಂದ ನಿವೇಶನಗಳನ್ನು ಪಡೆದಿದ್ದಾರೆ. ಅಗರವಾಲ್ ಅವರ ಪತ್ನಿಯ ತಂದೆ ಮತ್ತು ಪತ್ನಿಯ ಸೋದರರಿಬ್ಬರೂ ತಲಾ ಎರಡೂವರೆ ಸಾವಿರ ಮತ್ತು 1,260 ಚದರ ಗಜಗಳ ಅಳತೆಯ ನಿವೇಶನಗಳನ್ನು 2020ರ ಡಿಸೆಂಬರ್‌ನಲ್ಲಿ ಗಿಟ್ಟಿಸಿದ್ದಾರೆ. ಇದೇ ಟ್ರಸ್ಟಿನಿಂದ ಮುಖ್ಯ ಕಂದಾಯ ಅಧಿಕಾರಿ ಪುರುಷೋತ್ತಮ ದಾಸ್ ಗುಪ್ತಾ ಮತ್ತು ಡಿ.ಐ.ಜಿ. ದೀಪಕ್ ಕುಮಾರ್ ಅವರ ಸಮೀಪದ ಸಂಬಂಧಿಕರು 1,130 ಚದರ ಗಜ ಮತ್ತು 1,020 ಚದರ ಗಜಗಳ ವಿಸ್ತೀರ್ಣದ ನಿವೇಶನಗಳನ್ನು ಬರ್ಹಾಟ ಮಾಂಝಾ ಗ್ರಾಮದಲ್ಲಿ ಖರೀದಿಸಿದ್ದಾರೆ. ಅಯೋಧ್ಯೆಯ ಜಿಲ್ಲಾಧಿಕಾರಿಯ ತಂದೆ ಕೂಡ ಭವ್ಯ ರಾಮಮಂದಿರದಿಂದ ಒಂದು ಕಿ.ಮೀ. ಫಾಸಲೆಯಲ್ಲಿ ಮಹೇಶ್ ಯೋಗಿ ಟ್ರಸ್ಟ್‌ನಿಂದ ನಿವೇಶನ ಖರೀದಿಸಿದ್ದಾರೆ.

ಉಳಿದಂತೆ ಅಯೋಧ್ಯಾ ಜಿಲ್ಲೆಯ ಗೋಸಾಯಿಗಂಜ್ ಬಿಜೆಪಿ ಶಾಸಕ ಇಂದ್ರಪ್ರತಾಪ ತಿವಾರಿ 2019ರ ನವೆಂಬರಿನಲ್ಲಿ 2,593 ಚದರ ಗಜ, ನಿವೃತ್ತ ಐ.ಎ.ಎಸ್. ಅಧಿಕಾರಿ ಉಮಾಧರ ದ್ವಿವೇದಿ ಅವರು 2021ರ ಅಕ್ಟೋಬರಿನಲ್ಲಿ 1,680 ಚದರ ಗಜಗಳ ಅಳತೆಯ ನಿವೇಶನಗಳ ಖರೀದಿಸಿದ್ದಾರೆ.

ಈ ಅಧಿಕಾರಿಗಳು ಮತ್ತು ಅವರ ಸಂಬಂಧಿಕರು ಖರೀದಿಸಿರುವ ನಿವೇಶನಗಳು ವಿವಾದಗ್ರಸ್ತ ದಲಿತ ಜಮೀನಿಗೆ ಸೇರಿಲ್ಲ. ಆದರೆ ದಲಿತರಿಂದ ಅಕ್ರಮವಾಗಿ ಜಮೀನು ಖರೀದಿಸಿದ್ದ ತಪ್ಪಿಗಾಗಿ ಮಹೇಶ್ ಯೋಗಿ ಟ್ರಸ್ಟ್ ಕಟಕಟೆಯಲ್ಲಿ ನಿಂತಿದೆ. ತನಿಖೆಗೆ ಗುರಿಯಾಗಿದೆ. ಅಂತಹ ಟ್ರಸ್ಟಿನಿಂದ ಹಾಲಿ ಅಧಿಕಾರಿಗಳು, ಅವರ ಆಪ್ತಸಂಬಂಧಿಕರು, ನಿವೃತ್ತ ಅಧಿಕಾರಿಗಳು ನಿವೇಶನ ಖರೀದಿಸಿರುವುದು ಔಚಿತ್ಯಪೂರ್ಣ ಎನಿಸಿಕೊಳ್ಳುವುದಿಲ್ಲ. ಈ ನಿವೇಶನಗಳು ತಾನು ಆಪಾದನೆಯಿಂದ ಪಾರಾಗಲೆಂದು ಟ್ರಸ್ಟ್ ನೀಡುತ್ತಿರುವ ’ಲಂಚ’ ಎನಿಸಿಕೊಳ್ಳುತ್ತವೆ. ಖರೀದಿ ಮಾಡಿರುವವರು ಟ್ರಸ್ಟ್‌ಅನ್ನು ಕಾನೂನು ಕ್ರಮದ ಕುಣಿಕೆಯಿಂದ ಬಚಾವು ಮಾಡುವುದಿಲ್ಲವೆಂಬ ಖಾತರಿಯೇನು?

ದಲಿತರ ಜಮೀನನ್ನು ಲಪಟಾಯಿಸಲು ಟ್ರಸ್ಟ್ ಗಾಳವಾಗಿ ಬಳಸಿಕೊಂಡ ದಲಿತ ರೊಂಘೈ ಮತ್ತು ಅವನ ಕುಟುಂಬ ಅಯೋಧ್ಯೆಯಿಂದ ದೂರದಲ್ಲಿ ವಾಸಿಸಿದೆ.

ಭರತ ಭೂಮಿಯ ದಲಿತರು ಸಾವಿರಾರು ವರ್ಷಗಳಿಂದ ಜಮೀನುವಂಚಿತರು. ಜಾತಿವ್ಯವಸ್ಥೆಯು ಅವರಿಗೆ ಜಮೀನಿನ ಒಡೆತನವನ್ನು ನಿರಾಕರಿಸಿತ್ತು. ಭೂಹೀನ ಸ್ಥಿತಿಯು ಬಲಿಷ್ಠ ಜಾತಿಗಳ ಗುಲಾಮಗಿರಿಗೆ
ಅವರನ್ನು ನೂಕಿದೆ.

2011ರ ಜನಗಣತಿಯ ಪ್ರಕಾರ ದೇಶದ ಶೇ.71ರಷ್ಟು ದಲಿತರು ಕೃಷಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದಾರೆ, ಬಳಿ ಸ್ವಂತ ಜಮೀನಿಲ್ಲ. ಕೆಲವು ರಾಜ್ಯಗಳಲ್ಲಿ ಈ ಪ್ರಮಾಣ ಶೇ.90ರಷ್ಟು.

ಸ್ವಾತಂತ್ರ್ಯ ಬಂದು ಏಳು ದಶಕಗಳೇ ಉರುಳಿದ್ದರೂ ಭೂಮಿಯ ಕ್ರಮಬದ್ಧ ಮರುಹಂಚಿಕೆ ನಡೆದೇ ಇಲ್ಲ. ಒಂದು ಅಧ್ಯಯನದ ಪ್ರಕಾರ ಏಳು ಹೆಕ್ಟೇರುಗಳ ಭೂಒಡೆತನ ಮಿತಿ ಹೇರಿದರೆ ಮರು ಹಂಚಿಕೆಗೆ ಲಭಿಸುವ ಹೆಚ್ಚುವರಿ ಭೂಮಿ 75 ಲಕ್ಷ ಹೆಕ್ಟೇರುಗಳು.

ಭೂಒಡೆತನವು ಆತ್ಮಗೌರವದ ಮೂಲ ಎಂಬುದು ಗ್ರಾಮೀಣ ಭಾರತದ ವಾಸ್ತವ. ಹೀಗಾಗಿ ಭೂಸುಧಾರಣೆಯು ಸಾಮಾಜಿಕ ನ್ಯಾಯದ ಬಹುಮುಖ್ಯ ಭಾಗ. ಭಾರತದ ದಮನಿತ ಸಮುದಾಯಗಳ ಘನತೆಯೊಂದಿಗೆ ಬೆಸೆದುಕೊಂಡಿರುವ ಪರಿಹಾರ.

ಹಿಂದಿಯ ಬಹುಮುಖ್ಯ ಕವಿಗಳಲ್ಲಿ ಒಬ್ಬರಾದ ಜ್ಞಾನಪೀಠ ಪ್ರಶಸ್ತಿ ವಿಜೇತ ಕುಂವರ ನಾರಾಯಣ ಅವರ ’ಅಯೋಧ್ಯೆ ಕವಿತೆ ನೆನಪಾಗುತ್ತಿದೆ-

ಹೇ ರಾಮ,
ಬದುಕು ಒಂದು ಕಟು ಯಥಾರ್ಥ
ಮತ್ತು ನೀನೊಂದು ಮಹಾಕಾವ್ಯ!

ನಿನ್ನ ಕೈಯಿಂದಾಗದು
ಆ ಅವಿವೇಕವನ್ನು ಗೆಲ್ಲುವುದು
ಹತ್ತು ಇಪ್ಪತ್ತಲ್ಲ, ಅದಕ್ಕೆ
ಈಗ ಲಕ್ಷ ತಲೆಗಳು- ಲಕ್ಷಾಂತರ ಹಸ್ತಗಳು
ಮತ್ತು ವಿಭೀಷಣ ಕೂಡ ಈಗ
ಯಾರ ಜೊತೆಗಿರುವನೋ ತಿಳಿಯದು.

ಇದಕ್ಕಿಂತ ಇನ್ನೇನಾಗಬೇಕು.
ನಮ್ಮ ದೌರ್ಭಾಗ್ಯ
ಒಂದು ವಿವಾದಿತ ಸ್ಥಳಕ್ಕೆ ಕುಗ್ಗಿ
ಕುಸಿಯಿತಲ್ಲ ನಿನ್ನ ಸಾಮ್ರಾಜ್ಯ

ಅಯೋಧ್ಯೆ ಈಗ ನಿನ್ನ ಆಯೋಧ್ಯೆ ಅಲ್ಲ
ಅದು ಯೋಧರ ಲಂಕೆ
’ಮಾನಸ’ ನಿನ್ನ ’ಚರಿತೆ’ ಅಲ್ಲ
ಅದು ಚುನಾವಣೆಯ ನಗಾರಿ!

ಹೇ ರಾಮ, ಈ ಯುಗವೆಲ್ಲಿ
ಎಲ್ಲಿ ನಿನ್ನ ತ್ರೇತಾಯುಗ,
ಎಲ್ಲಿ ನೀನು ಮರ್ಯಾದಾ ಪುರುಷೋತ್ತಮ
ಎಲ್ಲಿ ಈ ನೇತಾ ಯುಗ!

ಸವಿನಯ ನಿವೇದನೆ ಪ್ರಭೂ, ವಾಪಸು ಹೋಗಿಬಿಡು
ಯಾವುದಾದರೂ ಪುರಾಣ- ಮತ್ಯಾವುದೋ ಧರ್ಮಗ್ರಂಥದೊಳಕ್ಕೆ
ಸಕುಶಲ ಸಪತ್ನೀಕ….
ವಾಲ್ಮೀಕಿ ಅಲೆದಾಡಿದ ಆ ಅಡವಿಯಲ್ಲ!
ಈಗಿನ ಅಡವಿ


ಇದನ್ನೂ ಓದಿ: ಬಾಬರಿ ಮಸೀದಿ ಧ್ವಂಸ ದಿನ: ರಾಮ್‌ ಕೆ ನಾಮ್ | ರಾಮನ ಹೆಸರಿನಲ್ಲಿ | In the name of God | ಸಾಕ್ಷ್ಯಚಿತ್ರ ನೋಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...