Homeಮುಖಪುಟಬೆಂಗಳೂರಿನಲ್ಲಿ ದಿಶಾ ರವಿ ಸ್ಥಾಪಿಸಿರುವ 'Fridays For Future' ಸಂಸ್ಥೆಯ ಬಗ್ಗೆ ಗೊತ್ತೆ?

ಬೆಂಗಳೂರಿನಲ್ಲಿ ದಿಶಾ ರವಿ ಸ್ಥಾಪಿಸಿರುವ ‘Fridays For Future’ ಸಂಸ್ಥೆಯ ಬಗ್ಗೆ ಗೊತ್ತೆ?

FFF ಎನ್ನುವ ಸಂಘಟನೆಯನ್ನು ಗ್ರೇಟಾ ಥನ್‌ಬರ್ಗ್ 2018 ರಲ್ಲಿ ಸ್ವೀಡನ್‌ನಲ್ಲಿ ಸ್ಥಾಪಿಸಿದ್ದರು. ಅಂದಿನಿಂದ ಇದು ಜಗತ್ತಿನಾದ್ಯಂತ ತನ್ನ ಶಾಖೆಗಳನ್ನು ಹೆಚ್ಚಿಸಿಕೊಂಡು ಬಂದಿದೆ

- Advertisement -
- Advertisement -

ರೈತರ ಹೋರಾಟಕ್ಕೆ ಸಂಬಂಧಿಸಿದಂತೆ ಜಾಗತಿಕ ಪರಿಸರ ಹೋರಾಟಗಾರ್ತಿ ಗ್ರೇಟಾ ಥನ್‌ಬರ್ಗ್ ಹಂಚಿಕೊಂಡಿರುವ ಟೂಲ್‌ಕಿಟ್‌ಗೆ ಸಂಬಂಧಿಸಿದ ಪ್ರಕರಣದಲ್ಲಿ ದೆಹಲಿ ಪೊಲೀಸರು 21 ವರ್ಷದ ದಿಶಾ ರವಿಯವರನ್ನು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ.

ದಿಶಾ ಅವರ ಹಿನ್ನೆಲೆಯ ಕುರಿತು ಈಗ ಸಾಕಷ್ಟು ಚರ್ಚೆಗಳಾಗುತ್ತಿವೆ. ದಿಶಾ ಬೆಂಗಳೂರಿನ ಮೌಂಟ್ ಕಾರ್ಮೆಲ್ ಕಾಲೇಜಿನ ವಿದ್ಯಾರ್ಥಿನಿಯಾಗಿದ್ದಾರೆ. Fridays For Future (FFF – ಭವಿಷ್ಯಕ್ಕಾಗಿ ಶಕ್ರವಾರ) ಇಂಡಿಯಾದ ಸಂಸ್ಥಾಪಕರಲ್ಲಿ ಒಬ್ಬರಾದ ದಿಶಾ ರವಿ ಅವರು ವಿವಾದಿತ ಟೂಲ್‌ಕಿಟ್ ಅನ್ನು ಸಂಪಾದಿಸಿ (ಎಡಿಟ್ ಮಾಡಿ) ಹಂಚಿಕೊಂಡಿದ್ದಾರೆ ಎಂದು ದೆಹಲಿ ಪೊಲೀಸ್ ವಕ್ತಾರರು ತಿಳಿಸಿದ್ದಾರೆ.

FFF ಎನ್ನುವ ಸಂಘಟನೆಯನ್ನು ಗ್ರೇಟಾ ಥನ್‌ಬರ್ಗ್ 2018 ರಲ್ಲಿ ಸ್ವೀಡನ್‌ನಲ್ಲಿ ಸ್ಥಾಪಿಸಿದ್ದರು. ಅಂದಿನಿಂದ ಇದು ಜಗತ್ತಿನಾದ್ಯಂತ ತನ್ನ ಶಾಖೆಗಳನ್ನು ಹೆಚ್ಚಿಸಿಕೊಂಡು ಬಂದಿದೆ. ಇದರ ಬೆಂಗಳೂರು ಶಾಖೆಯ ಸಂಸ್ಥಾಪಕರಲ್ಲಿ ದಿಶಾ ರವಿ ಕೂಡಾ ಒಬ್ಬರಾಗಿದ್ದಾರೆ.

ಪ್ರಸ್ತುತ ಜಗತ್ತಿನಲ್ಲಿ ಹವಾಮಾನ ಬದಲವಣೆಯಿಂದ ಉಂಟಾಗಬಹುದಾದ ಅನಾಹುತಗಳ ಬಗ್ಗೆ ಅರಿವು ಮೂಡಿಸುವುದು ಸೇರಿದಂತೆ ಪ್ರಕೃತಿಯ ಸಮತೋಲನವನ್ನು ಕಾಪಾಡುವ ಸಲುವಾಗಿ ಹೋರಾಟ, ಜಾಗೃತಿ ಮತ್ತು ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಸಲುವಾಗಿ ಈ ಸಂಸ್ಥೆಯು ರಚನೆಯಾಗಿದೆ.

ಇದನ್ನೂ ಓದಿ: ರೈತರ ಮೊಮ್ಮಗಳನ್ನು ಬಂಧಿಸಿದರೆ ಹೋರಾಟ ದುರ್ಬಲಗೊಳ್ಳುವುದಿಲ್ಲ: ದಿಶಾ ರವಿಗೆ ಜಾಗತಿಕ ಬೆಂಬಲ

ಜಗತ್ತಿನಾಧ್ಯಂತ ಇರುವ ಶಾಲಾ ಮಕ್ಕಳು ಪ್ರತಿ ಶುಕ್ರವಾರ ಶಾಲೆಯಿಂದ ಹೊರಗುಳಿದು ಹವಾಮಾನ ಬದಲಾವಣೆಯನ್ನು ತಡೆಗಟ್ಟಲು ಮತ್ತು ಪ್ರಕೃತಿಯಲ್ಲಿ ಸಿಗುವ ನವೀಕರಿಸಬಹುದಾದ ಇಂಧನವನ್ನು ಬಳಸಲು ಕ್ರಮ ಕೈಗೊಳ್ಳುವಂತೆ ರಾಜಕೀಯ ನಾಯಕರ ಮೇಲೆ ಒತ್ತಡ ತರುವಂತಹ ಕಾರ್ಯಕ್ರಮಗಳನ್ನು ನಡೆಸಬೇಕು ಎನ್ನುವುದು FFF ಚಳವಳಿಯ ಹಿಂದಿನ ಉದ್ದೇಶವಾಗಿದೆ.

FFF ವತಿಯಿಂದ ಇತ್ತೀಚೆಗೆ ಹಲವಾರು ಜನಜಾಗೃತಿ ಕಾರ್ಯಕ್ರಮಗಳು ಮತ್ತು ಪ್ರತಿಭಟನೆಗಳನ್ನು ಹಮ್ಮಿಕೊಳ್ಳಲಾಗಿದೆ. ಅವುಗಳಲ್ಲಿ ಪ್ರಮುಖವಾದವು, ಮಹಾರಾಷ್ಟ್ರದಲ್ಲಿನ ಆರೇ ಅರಣ್ಯ ಉಳಿಸಿ ಹೋರಾಟ, ಗೋವಾದಲ್ಲಿನ ಮೊಲೆಮ್ ಅರಣ್ಯ ಉಳಿಸಿ ಹೋರಾಟ ಮತ್ತು EIA 2020 (ಪರಿಸರ ಪರಿಣಾಮದ ಮೌಲ್ಯಮಾಪನ-2020ದ ಕುರಿತ ಹೋರಾಟಗಳು ಸೇರಿವೆ.

ಹವಾಮಾನ ಮುಷ್ಕರಕ್ಕೆ ಸಂಬಂಧಿಸಿದಂತೆ FFFನ ವೆಬ್‌ಸೈಟ್ ಪ್ರಕಾರ, “ಹವಾಮಾನ ಮುಷ್ಕರಗಳು ಅಥವಾ ಮೆರವಣಿಗೆಗಳು ಅಹಿಂಸಾತ್ಮಕ ಮತ್ತು ಶಾಂತಿಯುತವಾದುದಾಗಿದ್ದು, ಪ್ರಸ್ತುತ ಜಗತ್ತಿನ ಹವಾಮಾನ ಬಿಕ್ಕಟ್ಟು ಮತ್ತು ಪರಿಸರದ ಸಮಸ್ಯೆಗಳನ್ನು ಪರಿಹರಿಸುವ ಸಲುವಾಗಿ ನಮ್ಮ ಬೇಡಿಕೆಗಳನ್ನು ನಮ್ಮ ರಾಷ್ಟ್ರೀಯ ಮತ್ತು ರಾಜ್ಯ ಸರ್ಕಾರಗಳಿಗೆ ತಿಳಿಸಲು ನಾವು ಅಳವಡಿಸಿಕೊಂಡ ಮಾರ್ಗಗಳಾಗಿವೆ” ಎಂದು ಹೇಳುತ್ತದೆ.

ಇದನ್ನೂ ಓದಿ: ಮದುವೆಗಳಲ್ಲಿಯೂ ರೈತ ಹೋರಾಟಕ್ಕೆ ಬೆಂಬಲ!: ಹರಿಯಾಣ-ಪಂಜಾಬ್‌ನಲ್ಲಿ ವಿಭಿನ್ನ ಪ್ರತಿರೋಧ

ಜೊತೆಗೆ, “ಫ್ರೈಡೇಸ್‌ ಫಾರ್‌ ಫ್ಯೂಚರ್‌ ಎಂಬುದು ಹವಾಮಾನ ನ್ಯಾಯಕ್ಕಾಗಿ (Climate Justice) ಜಾಗತಿಕ ಜನರು ನಡೆಸುವ ಚಳುವಳಿಯಾಗಿದೆ. FFF ಅನ್ನು‌ ಭಾರತದಲ್ಲಿ ಎಲ್ಲರನ್ನೂ ಒಳಗೊಂಡಂತಹ ಸಮತಾವಾದ, ಪಕ್ಷೇತರ, ಸ್ವಾಯತ್ತ ಮತ್ತು ವಿಕೇಂದ್ರೀಕೃತ ಚಳುವಳಿಯಾಗಿಸುತ್ತೇವೆ” ಎಂದು ಈ ಸಂಸ್ಥೆಯು ಹೇಳಿಕೊಂಡಿದೆ.

FFF ಭಾರತದ ವಿರುದ್ಧ ಸರ್ಕಾರಗಳು ಸಮರ ಸಾರಿರುವುದು ಇದೇ ಮೊದಲಲ್ಲ. ಈ ವೆಬ್‌ಸೈಟ್‌ ಅನ್ನು 2020 ರ ಜುಲೈನಲ್ಲಿ ಕಾನೂನುಬಾಹಿರ ಚಟುವಟಿಕೆಗಳ ತಡೆಗಟ್ಟುವಿಕೆ ಕಾಯ್ದೆಯಡಿಯಲ್ಲಿ ಆಕ್ಷೇಪಾರ್ಹವಾದದ್ದು ಎಂದು ದೆಹಲಿ ಪೊಲೀಸರು ಆರೋಪಿಸಿದ್ದರು. ಜೊತೆಗೆ ಇದು ಕಾನೂನುಬಾಹಿರ ಮತ್ತು ಭಯೋತ್ಪಾದಕ ಕೃತ್ಯಗಳಲ್ಲಿ ಭಾಗಿಯಾಗಿದೆ ಎಂಬ ಕಾರಣಕ್ಕೆ ಈ ವೆಬ್‌ಸೈಟ್‌ ಅನ್ನು ನಿರ್ಬಂಧಿಸಲಾಗಿತ್ತು. ಆದರೆ ಕೆಲವು ದಿನಗಳ ನಂತರ ‘ತಪ್ಪಾಗಿ ನೋಟಿಸ್ ನೀಡಲಾಗಿದೆ’ ಎಂದು ನಿರ್ಬಂಧವನ್ನು ಹಿಂತೆಗೆದುಕೊಳ್ಳಲಾಗಿತ್ತು.

2019 ರಲ್ಲಿ ಯುವಜನತೆಯ ನೇತೃತ್ವದಲ್ಲಿ ನಡೆದ ಜಾಗತಿಕ ಹವಾಮಾನ ಮುಷ್ಕರದ (global climate strike) ಭಾಗವಾಗಿ ಭಾರತದಲ್ಲಿಯೂ ಸಾವಿರಾರು ಸಂಖ್ಯೆಯ ಯುವಜನತೆ ಒಟ್ಟಿಗೆ ಸೇರಿ 2019 ರ ಸೆಪ್ಟಂಬರ್ ತಿಂಗಳಿನಲ್ಲಿ ಹಲವಾರು ಹವಾಮಾನ ಮುಷ್ಕರಗಳನ್ನು ಆಯೋಜಿಸಲಾಗಿತ್ತು.

ಒಟ್ಟಾರೆಯಾಗಿ ಹೇಳುವುದಾದರೆ ಪರಿಸರ ಮತ್ತು ಹವಾಮಾನ ಬದಲಾವಣೆಗೆ ಸಂಬಂಧಿಸಿದಂತೆ ಜಾಗತಿಕ ಮಟ್ಟದಲ್ಲಿ ದನಿಯೆತ್ತಿ ಅದಕ್ಕೊಂದು ಪರಿಹಾರ ಕಂಡುಕೊಳ್ಳುವಲ್ಲಿ ಹೋರಾಡುತ್ತಿರುವ ಫ್ರೈಡೇಸ್ ಫಾರ್ ಫ್ಯೂಚರ್ ಸಂಸ್ಥೆಯು ಸಮಾಜಮುಖಿಯಾದದ್ದಾಗಿದೆ. ಹಾಗಾಗಿಯೇ ಗ್ರೇಟಾ ಥನ್‌ಬರ್ಗ್ ಅವರಿಗೆ ಜಾಗತಿಕವಾಗಿ ದೊಡ್ಡ ಮಟ್ಟದ ಮನ್ನಣೆ ಸಿಕ್ಕಿದೆ. ಈಗ ದಿಶಾ ರವಿಯವರ ಬಂಧನವನ್ನು ಖಂಡಿಸಿ ಜಾಗತಿಕವಾಗಿ ಪಕ್ಷಾತೀತ ಬೆಂಬಲ ಸಿಗುತ್ತಿರುವುದೂ ಇದೇ ಕಾರಣಕ್ಕೆ ಎಂದು ಹೇಳಬಹುದು.

ಈ ಸಂಸ್ಥೆಯ ವೆಬ್‌ಸೈಟ್‌ಗೆ ಬೇಟಿ ನೀಡಲು ಇಲ್ಲಿ ಕ್ಲಿಕ್ ಮಾಡಿ.

ಇದನ್ನೂ ಓದಿ: ಟ್ರಿಲಿಯನ್‌ಗಟ್ಟಲೆ ಮೌಲ್ಯವಿರುವ ಕಂಪನಿಗಿಂತ ಜನರ ಗೌಪ್ಯತೆ ಮುಖ್ಯ ಎಂದ ಸುಪ್ರೀಂ: ವಾಟ್ಸಾಪ್, ಕೇಂದ್ರ ಸರ್ಕಾರಕ್ಕೆ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...