Homeಮುಖಪುಟಬೆಂಗಳೂರಿನಲ್ಲಿ ದಿಶಾ ರವಿ ಸ್ಥಾಪಿಸಿರುವ 'Fridays For Future' ಸಂಸ್ಥೆಯ ಬಗ್ಗೆ ಗೊತ್ತೆ?

ಬೆಂಗಳೂರಿನಲ್ಲಿ ದಿಶಾ ರವಿ ಸ್ಥಾಪಿಸಿರುವ ‘Fridays For Future’ ಸಂಸ್ಥೆಯ ಬಗ್ಗೆ ಗೊತ್ತೆ?

FFF ಎನ್ನುವ ಸಂಘಟನೆಯನ್ನು ಗ್ರೇಟಾ ಥನ್‌ಬರ್ಗ್ 2018 ರಲ್ಲಿ ಸ್ವೀಡನ್‌ನಲ್ಲಿ ಸ್ಥಾಪಿಸಿದ್ದರು. ಅಂದಿನಿಂದ ಇದು ಜಗತ್ತಿನಾದ್ಯಂತ ತನ್ನ ಶಾಖೆಗಳನ್ನು ಹೆಚ್ಚಿಸಿಕೊಂಡು ಬಂದಿದೆ

- Advertisement -
- Advertisement -

ರೈತರ ಹೋರಾಟಕ್ಕೆ ಸಂಬಂಧಿಸಿದಂತೆ ಜಾಗತಿಕ ಪರಿಸರ ಹೋರಾಟಗಾರ್ತಿ ಗ್ರೇಟಾ ಥನ್‌ಬರ್ಗ್ ಹಂಚಿಕೊಂಡಿರುವ ಟೂಲ್‌ಕಿಟ್‌ಗೆ ಸಂಬಂಧಿಸಿದ ಪ್ರಕರಣದಲ್ಲಿ ದೆಹಲಿ ಪೊಲೀಸರು 21 ವರ್ಷದ ದಿಶಾ ರವಿಯವರನ್ನು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ.

ದಿಶಾ ಅವರ ಹಿನ್ನೆಲೆಯ ಕುರಿತು ಈಗ ಸಾಕಷ್ಟು ಚರ್ಚೆಗಳಾಗುತ್ತಿವೆ. ದಿಶಾ ಬೆಂಗಳೂರಿನ ಮೌಂಟ್ ಕಾರ್ಮೆಲ್ ಕಾಲೇಜಿನ ವಿದ್ಯಾರ್ಥಿನಿಯಾಗಿದ್ದಾರೆ. Fridays For Future (FFF – ಭವಿಷ್ಯಕ್ಕಾಗಿ ಶಕ್ರವಾರ) ಇಂಡಿಯಾದ ಸಂಸ್ಥಾಪಕರಲ್ಲಿ ಒಬ್ಬರಾದ ದಿಶಾ ರವಿ ಅವರು ವಿವಾದಿತ ಟೂಲ್‌ಕಿಟ್ ಅನ್ನು ಸಂಪಾದಿಸಿ (ಎಡಿಟ್ ಮಾಡಿ) ಹಂಚಿಕೊಂಡಿದ್ದಾರೆ ಎಂದು ದೆಹಲಿ ಪೊಲೀಸ್ ವಕ್ತಾರರು ತಿಳಿಸಿದ್ದಾರೆ.

FFF ಎನ್ನುವ ಸಂಘಟನೆಯನ್ನು ಗ್ರೇಟಾ ಥನ್‌ಬರ್ಗ್ 2018 ರಲ್ಲಿ ಸ್ವೀಡನ್‌ನಲ್ಲಿ ಸ್ಥಾಪಿಸಿದ್ದರು. ಅಂದಿನಿಂದ ಇದು ಜಗತ್ತಿನಾದ್ಯಂತ ತನ್ನ ಶಾಖೆಗಳನ್ನು ಹೆಚ್ಚಿಸಿಕೊಂಡು ಬಂದಿದೆ. ಇದರ ಬೆಂಗಳೂರು ಶಾಖೆಯ ಸಂಸ್ಥಾಪಕರಲ್ಲಿ ದಿಶಾ ರವಿ ಕೂಡಾ ಒಬ್ಬರಾಗಿದ್ದಾರೆ.

ಪ್ರಸ್ತುತ ಜಗತ್ತಿನಲ್ಲಿ ಹವಾಮಾನ ಬದಲವಣೆಯಿಂದ ಉಂಟಾಗಬಹುದಾದ ಅನಾಹುತಗಳ ಬಗ್ಗೆ ಅರಿವು ಮೂಡಿಸುವುದು ಸೇರಿದಂತೆ ಪ್ರಕೃತಿಯ ಸಮತೋಲನವನ್ನು ಕಾಪಾಡುವ ಸಲುವಾಗಿ ಹೋರಾಟ, ಜಾಗೃತಿ ಮತ್ತು ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಸಲುವಾಗಿ ಈ ಸಂಸ್ಥೆಯು ರಚನೆಯಾಗಿದೆ.

ಇದನ್ನೂ ಓದಿ: ರೈತರ ಮೊಮ್ಮಗಳನ್ನು ಬಂಧಿಸಿದರೆ ಹೋರಾಟ ದುರ್ಬಲಗೊಳ್ಳುವುದಿಲ್ಲ: ದಿಶಾ ರವಿಗೆ ಜಾಗತಿಕ ಬೆಂಬಲ

ಜಗತ್ತಿನಾಧ್ಯಂತ ಇರುವ ಶಾಲಾ ಮಕ್ಕಳು ಪ್ರತಿ ಶುಕ್ರವಾರ ಶಾಲೆಯಿಂದ ಹೊರಗುಳಿದು ಹವಾಮಾನ ಬದಲಾವಣೆಯನ್ನು ತಡೆಗಟ್ಟಲು ಮತ್ತು ಪ್ರಕೃತಿಯಲ್ಲಿ ಸಿಗುವ ನವೀಕರಿಸಬಹುದಾದ ಇಂಧನವನ್ನು ಬಳಸಲು ಕ್ರಮ ಕೈಗೊಳ್ಳುವಂತೆ ರಾಜಕೀಯ ನಾಯಕರ ಮೇಲೆ ಒತ್ತಡ ತರುವಂತಹ ಕಾರ್ಯಕ್ರಮಗಳನ್ನು ನಡೆಸಬೇಕು ಎನ್ನುವುದು FFF ಚಳವಳಿಯ ಹಿಂದಿನ ಉದ್ದೇಶವಾಗಿದೆ.

FFF ವತಿಯಿಂದ ಇತ್ತೀಚೆಗೆ ಹಲವಾರು ಜನಜಾಗೃತಿ ಕಾರ್ಯಕ್ರಮಗಳು ಮತ್ತು ಪ್ರತಿಭಟನೆಗಳನ್ನು ಹಮ್ಮಿಕೊಳ್ಳಲಾಗಿದೆ. ಅವುಗಳಲ್ಲಿ ಪ್ರಮುಖವಾದವು, ಮಹಾರಾಷ್ಟ್ರದಲ್ಲಿನ ಆರೇ ಅರಣ್ಯ ಉಳಿಸಿ ಹೋರಾಟ, ಗೋವಾದಲ್ಲಿನ ಮೊಲೆಮ್ ಅರಣ್ಯ ಉಳಿಸಿ ಹೋರಾಟ ಮತ್ತು EIA 2020 (ಪರಿಸರ ಪರಿಣಾಮದ ಮೌಲ್ಯಮಾಪನ-2020ದ ಕುರಿತ ಹೋರಾಟಗಳು ಸೇರಿವೆ.

ಹವಾಮಾನ ಮುಷ್ಕರಕ್ಕೆ ಸಂಬಂಧಿಸಿದಂತೆ FFFನ ವೆಬ್‌ಸೈಟ್ ಪ್ರಕಾರ, “ಹವಾಮಾನ ಮುಷ್ಕರಗಳು ಅಥವಾ ಮೆರವಣಿಗೆಗಳು ಅಹಿಂಸಾತ್ಮಕ ಮತ್ತು ಶಾಂತಿಯುತವಾದುದಾಗಿದ್ದು, ಪ್ರಸ್ತುತ ಜಗತ್ತಿನ ಹವಾಮಾನ ಬಿಕ್ಕಟ್ಟು ಮತ್ತು ಪರಿಸರದ ಸಮಸ್ಯೆಗಳನ್ನು ಪರಿಹರಿಸುವ ಸಲುವಾಗಿ ನಮ್ಮ ಬೇಡಿಕೆಗಳನ್ನು ನಮ್ಮ ರಾಷ್ಟ್ರೀಯ ಮತ್ತು ರಾಜ್ಯ ಸರ್ಕಾರಗಳಿಗೆ ತಿಳಿಸಲು ನಾವು ಅಳವಡಿಸಿಕೊಂಡ ಮಾರ್ಗಗಳಾಗಿವೆ” ಎಂದು ಹೇಳುತ್ತದೆ.

ಇದನ್ನೂ ಓದಿ: ಮದುವೆಗಳಲ್ಲಿಯೂ ರೈತ ಹೋರಾಟಕ್ಕೆ ಬೆಂಬಲ!: ಹರಿಯಾಣ-ಪಂಜಾಬ್‌ನಲ್ಲಿ ವಿಭಿನ್ನ ಪ್ರತಿರೋಧ

ಜೊತೆಗೆ, “ಫ್ರೈಡೇಸ್‌ ಫಾರ್‌ ಫ್ಯೂಚರ್‌ ಎಂಬುದು ಹವಾಮಾನ ನ್ಯಾಯಕ್ಕಾಗಿ (Climate Justice) ಜಾಗತಿಕ ಜನರು ನಡೆಸುವ ಚಳುವಳಿಯಾಗಿದೆ. FFF ಅನ್ನು‌ ಭಾರತದಲ್ಲಿ ಎಲ್ಲರನ್ನೂ ಒಳಗೊಂಡಂತಹ ಸಮತಾವಾದ, ಪಕ್ಷೇತರ, ಸ್ವಾಯತ್ತ ಮತ್ತು ವಿಕೇಂದ್ರೀಕೃತ ಚಳುವಳಿಯಾಗಿಸುತ್ತೇವೆ” ಎಂದು ಈ ಸಂಸ್ಥೆಯು ಹೇಳಿಕೊಂಡಿದೆ.

FFF ಭಾರತದ ವಿರುದ್ಧ ಸರ್ಕಾರಗಳು ಸಮರ ಸಾರಿರುವುದು ಇದೇ ಮೊದಲಲ್ಲ. ಈ ವೆಬ್‌ಸೈಟ್‌ ಅನ್ನು 2020 ರ ಜುಲೈನಲ್ಲಿ ಕಾನೂನುಬಾಹಿರ ಚಟುವಟಿಕೆಗಳ ತಡೆಗಟ್ಟುವಿಕೆ ಕಾಯ್ದೆಯಡಿಯಲ್ಲಿ ಆಕ್ಷೇಪಾರ್ಹವಾದದ್ದು ಎಂದು ದೆಹಲಿ ಪೊಲೀಸರು ಆರೋಪಿಸಿದ್ದರು. ಜೊತೆಗೆ ಇದು ಕಾನೂನುಬಾಹಿರ ಮತ್ತು ಭಯೋತ್ಪಾದಕ ಕೃತ್ಯಗಳಲ್ಲಿ ಭಾಗಿಯಾಗಿದೆ ಎಂಬ ಕಾರಣಕ್ಕೆ ಈ ವೆಬ್‌ಸೈಟ್‌ ಅನ್ನು ನಿರ್ಬಂಧಿಸಲಾಗಿತ್ತು. ಆದರೆ ಕೆಲವು ದಿನಗಳ ನಂತರ ‘ತಪ್ಪಾಗಿ ನೋಟಿಸ್ ನೀಡಲಾಗಿದೆ’ ಎಂದು ನಿರ್ಬಂಧವನ್ನು ಹಿಂತೆಗೆದುಕೊಳ್ಳಲಾಗಿತ್ತು.

2019 ರಲ್ಲಿ ಯುವಜನತೆಯ ನೇತೃತ್ವದಲ್ಲಿ ನಡೆದ ಜಾಗತಿಕ ಹವಾಮಾನ ಮುಷ್ಕರದ (global climate strike) ಭಾಗವಾಗಿ ಭಾರತದಲ್ಲಿಯೂ ಸಾವಿರಾರು ಸಂಖ್ಯೆಯ ಯುವಜನತೆ ಒಟ್ಟಿಗೆ ಸೇರಿ 2019 ರ ಸೆಪ್ಟಂಬರ್ ತಿಂಗಳಿನಲ್ಲಿ ಹಲವಾರು ಹವಾಮಾನ ಮುಷ್ಕರಗಳನ್ನು ಆಯೋಜಿಸಲಾಗಿತ್ತು.

ಒಟ್ಟಾರೆಯಾಗಿ ಹೇಳುವುದಾದರೆ ಪರಿಸರ ಮತ್ತು ಹವಾಮಾನ ಬದಲಾವಣೆಗೆ ಸಂಬಂಧಿಸಿದಂತೆ ಜಾಗತಿಕ ಮಟ್ಟದಲ್ಲಿ ದನಿಯೆತ್ತಿ ಅದಕ್ಕೊಂದು ಪರಿಹಾರ ಕಂಡುಕೊಳ್ಳುವಲ್ಲಿ ಹೋರಾಡುತ್ತಿರುವ ಫ್ರೈಡೇಸ್ ಫಾರ್ ಫ್ಯೂಚರ್ ಸಂಸ್ಥೆಯು ಸಮಾಜಮುಖಿಯಾದದ್ದಾಗಿದೆ. ಹಾಗಾಗಿಯೇ ಗ್ರೇಟಾ ಥನ್‌ಬರ್ಗ್ ಅವರಿಗೆ ಜಾಗತಿಕವಾಗಿ ದೊಡ್ಡ ಮಟ್ಟದ ಮನ್ನಣೆ ಸಿಕ್ಕಿದೆ. ಈಗ ದಿಶಾ ರವಿಯವರ ಬಂಧನವನ್ನು ಖಂಡಿಸಿ ಜಾಗತಿಕವಾಗಿ ಪಕ್ಷಾತೀತ ಬೆಂಬಲ ಸಿಗುತ್ತಿರುವುದೂ ಇದೇ ಕಾರಣಕ್ಕೆ ಎಂದು ಹೇಳಬಹುದು.

ಈ ಸಂಸ್ಥೆಯ ವೆಬ್‌ಸೈಟ್‌ಗೆ ಬೇಟಿ ನೀಡಲು ಇಲ್ಲಿ ಕ್ಲಿಕ್ ಮಾಡಿ.

ಇದನ್ನೂ ಓದಿ: ಟ್ರಿಲಿಯನ್‌ಗಟ್ಟಲೆ ಮೌಲ್ಯವಿರುವ ಕಂಪನಿಗಿಂತ ಜನರ ಗೌಪ್ಯತೆ ಮುಖ್ಯ ಎಂದ ಸುಪ್ರೀಂ: ವಾಟ್ಸಾಪ್, ಕೇಂದ್ರ ಸರ್ಕಾರಕ್ಕೆ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...