Homeಮುಖಪುಟಬೆಂಗಳೂರಿನಲ್ಲಿ ದಿಶಾ ರವಿ ಸ್ಥಾಪಿಸಿರುವ 'Fridays For Future' ಸಂಸ್ಥೆಯ ಬಗ್ಗೆ ಗೊತ್ತೆ?

ಬೆಂಗಳೂರಿನಲ್ಲಿ ದಿಶಾ ರವಿ ಸ್ಥಾಪಿಸಿರುವ ‘Fridays For Future’ ಸಂಸ್ಥೆಯ ಬಗ್ಗೆ ಗೊತ್ತೆ?

FFF ಎನ್ನುವ ಸಂಘಟನೆಯನ್ನು ಗ್ರೇಟಾ ಥನ್‌ಬರ್ಗ್ 2018 ರಲ್ಲಿ ಸ್ವೀಡನ್‌ನಲ್ಲಿ ಸ್ಥಾಪಿಸಿದ್ದರು. ಅಂದಿನಿಂದ ಇದು ಜಗತ್ತಿನಾದ್ಯಂತ ತನ್ನ ಶಾಖೆಗಳನ್ನು ಹೆಚ್ಚಿಸಿಕೊಂಡು ಬಂದಿದೆ

- Advertisement -
- Advertisement -

ರೈತರ ಹೋರಾಟಕ್ಕೆ ಸಂಬಂಧಿಸಿದಂತೆ ಜಾಗತಿಕ ಪರಿಸರ ಹೋರಾಟಗಾರ್ತಿ ಗ್ರೇಟಾ ಥನ್‌ಬರ್ಗ್ ಹಂಚಿಕೊಂಡಿರುವ ಟೂಲ್‌ಕಿಟ್‌ಗೆ ಸಂಬಂಧಿಸಿದ ಪ್ರಕರಣದಲ್ಲಿ ದೆಹಲಿ ಪೊಲೀಸರು 21 ವರ್ಷದ ದಿಶಾ ರವಿಯವರನ್ನು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ.

ದಿಶಾ ಅವರ ಹಿನ್ನೆಲೆಯ ಕುರಿತು ಈಗ ಸಾಕಷ್ಟು ಚರ್ಚೆಗಳಾಗುತ್ತಿವೆ. ದಿಶಾ ಬೆಂಗಳೂರಿನ ಮೌಂಟ್ ಕಾರ್ಮೆಲ್ ಕಾಲೇಜಿನ ವಿದ್ಯಾರ್ಥಿನಿಯಾಗಿದ್ದಾರೆ. Fridays For Future (FFF – ಭವಿಷ್ಯಕ್ಕಾಗಿ ಶಕ್ರವಾರ) ಇಂಡಿಯಾದ ಸಂಸ್ಥಾಪಕರಲ್ಲಿ ಒಬ್ಬರಾದ ದಿಶಾ ರವಿ ಅವರು ವಿವಾದಿತ ಟೂಲ್‌ಕಿಟ್ ಅನ್ನು ಸಂಪಾದಿಸಿ (ಎಡಿಟ್ ಮಾಡಿ) ಹಂಚಿಕೊಂಡಿದ್ದಾರೆ ಎಂದು ದೆಹಲಿ ಪೊಲೀಸ್ ವಕ್ತಾರರು ತಿಳಿಸಿದ್ದಾರೆ.

FFF ಎನ್ನುವ ಸಂಘಟನೆಯನ್ನು ಗ್ರೇಟಾ ಥನ್‌ಬರ್ಗ್ 2018 ರಲ್ಲಿ ಸ್ವೀಡನ್‌ನಲ್ಲಿ ಸ್ಥಾಪಿಸಿದ್ದರು. ಅಂದಿನಿಂದ ಇದು ಜಗತ್ತಿನಾದ್ಯಂತ ತನ್ನ ಶಾಖೆಗಳನ್ನು ಹೆಚ್ಚಿಸಿಕೊಂಡು ಬಂದಿದೆ. ಇದರ ಬೆಂಗಳೂರು ಶಾಖೆಯ ಸಂಸ್ಥಾಪಕರಲ್ಲಿ ದಿಶಾ ರವಿ ಕೂಡಾ ಒಬ್ಬರಾಗಿದ್ದಾರೆ.

ಪ್ರಸ್ತುತ ಜಗತ್ತಿನಲ್ಲಿ ಹವಾಮಾನ ಬದಲವಣೆಯಿಂದ ಉಂಟಾಗಬಹುದಾದ ಅನಾಹುತಗಳ ಬಗ್ಗೆ ಅರಿವು ಮೂಡಿಸುವುದು ಸೇರಿದಂತೆ ಪ್ರಕೃತಿಯ ಸಮತೋಲನವನ್ನು ಕಾಪಾಡುವ ಸಲುವಾಗಿ ಹೋರಾಟ, ಜಾಗೃತಿ ಮತ್ತು ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಸಲುವಾಗಿ ಈ ಸಂಸ್ಥೆಯು ರಚನೆಯಾಗಿದೆ.

ಇದನ್ನೂ ಓದಿ: ರೈತರ ಮೊಮ್ಮಗಳನ್ನು ಬಂಧಿಸಿದರೆ ಹೋರಾಟ ದುರ್ಬಲಗೊಳ್ಳುವುದಿಲ್ಲ: ದಿಶಾ ರವಿಗೆ ಜಾಗತಿಕ ಬೆಂಬಲ

ಜಗತ್ತಿನಾಧ್ಯಂತ ಇರುವ ಶಾಲಾ ಮಕ್ಕಳು ಪ್ರತಿ ಶುಕ್ರವಾರ ಶಾಲೆಯಿಂದ ಹೊರಗುಳಿದು ಹವಾಮಾನ ಬದಲಾವಣೆಯನ್ನು ತಡೆಗಟ್ಟಲು ಮತ್ತು ಪ್ರಕೃತಿಯಲ್ಲಿ ಸಿಗುವ ನವೀಕರಿಸಬಹುದಾದ ಇಂಧನವನ್ನು ಬಳಸಲು ಕ್ರಮ ಕೈಗೊಳ್ಳುವಂತೆ ರಾಜಕೀಯ ನಾಯಕರ ಮೇಲೆ ಒತ್ತಡ ತರುವಂತಹ ಕಾರ್ಯಕ್ರಮಗಳನ್ನು ನಡೆಸಬೇಕು ಎನ್ನುವುದು FFF ಚಳವಳಿಯ ಹಿಂದಿನ ಉದ್ದೇಶವಾಗಿದೆ.

FFF ವತಿಯಿಂದ ಇತ್ತೀಚೆಗೆ ಹಲವಾರು ಜನಜಾಗೃತಿ ಕಾರ್ಯಕ್ರಮಗಳು ಮತ್ತು ಪ್ರತಿಭಟನೆಗಳನ್ನು ಹಮ್ಮಿಕೊಳ್ಳಲಾಗಿದೆ. ಅವುಗಳಲ್ಲಿ ಪ್ರಮುಖವಾದವು, ಮಹಾರಾಷ್ಟ್ರದಲ್ಲಿನ ಆರೇ ಅರಣ್ಯ ಉಳಿಸಿ ಹೋರಾಟ, ಗೋವಾದಲ್ಲಿನ ಮೊಲೆಮ್ ಅರಣ್ಯ ಉಳಿಸಿ ಹೋರಾಟ ಮತ್ತು EIA 2020 (ಪರಿಸರ ಪರಿಣಾಮದ ಮೌಲ್ಯಮಾಪನ-2020ದ ಕುರಿತ ಹೋರಾಟಗಳು ಸೇರಿವೆ.

ಹವಾಮಾನ ಮುಷ್ಕರಕ್ಕೆ ಸಂಬಂಧಿಸಿದಂತೆ FFFನ ವೆಬ್‌ಸೈಟ್ ಪ್ರಕಾರ, “ಹವಾಮಾನ ಮುಷ್ಕರಗಳು ಅಥವಾ ಮೆರವಣಿಗೆಗಳು ಅಹಿಂಸಾತ್ಮಕ ಮತ್ತು ಶಾಂತಿಯುತವಾದುದಾಗಿದ್ದು, ಪ್ರಸ್ತುತ ಜಗತ್ತಿನ ಹವಾಮಾನ ಬಿಕ್ಕಟ್ಟು ಮತ್ತು ಪರಿಸರದ ಸಮಸ್ಯೆಗಳನ್ನು ಪರಿಹರಿಸುವ ಸಲುವಾಗಿ ನಮ್ಮ ಬೇಡಿಕೆಗಳನ್ನು ನಮ್ಮ ರಾಷ್ಟ್ರೀಯ ಮತ್ತು ರಾಜ್ಯ ಸರ್ಕಾರಗಳಿಗೆ ತಿಳಿಸಲು ನಾವು ಅಳವಡಿಸಿಕೊಂಡ ಮಾರ್ಗಗಳಾಗಿವೆ” ಎಂದು ಹೇಳುತ್ತದೆ.

ಇದನ್ನೂ ಓದಿ: ಮದುವೆಗಳಲ್ಲಿಯೂ ರೈತ ಹೋರಾಟಕ್ಕೆ ಬೆಂಬಲ!: ಹರಿಯಾಣ-ಪಂಜಾಬ್‌ನಲ್ಲಿ ವಿಭಿನ್ನ ಪ್ರತಿರೋಧ

ಜೊತೆಗೆ, “ಫ್ರೈಡೇಸ್‌ ಫಾರ್‌ ಫ್ಯೂಚರ್‌ ಎಂಬುದು ಹವಾಮಾನ ನ್ಯಾಯಕ್ಕಾಗಿ (Climate Justice) ಜಾಗತಿಕ ಜನರು ನಡೆಸುವ ಚಳುವಳಿಯಾಗಿದೆ. FFF ಅನ್ನು‌ ಭಾರತದಲ್ಲಿ ಎಲ್ಲರನ್ನೂ ಒಳಗೊಂಡಂತಹ ಸಮತಾವಾದ, ಪಕ್ಷೇತರ, ಸ್ವಾಯತ್ತ ಮತ್ತು ವಿಕೇಂದ್ರೀಕೃತ ಚಳುವಳಿಯಾಗಿಸುತ್ತೇವೆ” ಎಂದು ಈ ಸಂಸ್ಥೆಯು ಹೇಳಿಕೊಂಡಿದೆ.

FFF ಭಾರತದ ವಿರುದ್ಧ ಸರ್ಕಾರಗಳು ಸಮರ ಸಾರಿರುವುದು ಇದೇ ಮೊದಲಲ್ಲ. ಈ ವೆಬ್‌ಸೈಟ್‌ ಅನ್ನು 2020 ರ ಜುಲೈನಲ್ಲಿ ಕಾನೂನುಬಾಹಿರ ಚಟುವಟಿಕೆಗಳ ತಡೆಗಟ್ಟುವಿಕೆ ಕಾಯ್ದೆಯಡಿಯಲ್ಲಿ ಆಕ್ಷೇಪಾರ್ಹವಾದದ್ದು ಎಂದು ದೆಹಲಿ ಪೊಲೀಸರು ಆರೋಪಿಸಿದ್ದರು. ಜೊತೆಗೆ ಇದು ಕಾನೂನುಬಾಹಿರ ಮತ್ತು ಭಯೋತ್ಪಾದಕ ಕೃತ್ಯಗಳಲ್ಲಿ ಭಾಗಿಯಾಗಿದೆ ಎಂಬ ಕಾರಣಕ್ಕೆ ಈ ವೆಬ್‌ಸೈಟ್‌ ಅನ್ನು ನಿರ್ಬಂಧಿಸಲಾಗಿತ್ತು. ಆದರೆ ಕೆಲವು ದಿನಗಳ ನಂತರ ‘ತಪ್ಪಾಗಿ ನೋಟಿಸ್ ನೀಡಲಾಗಿದೆ’ ಎಂದು ನಿರ್ಬಂಧವನ್ನು ಹಿಂತೆಗೆದುಕೊಳ್ಳಲಾಗಿತ್ತು.

2019 ರಲ್ಲಿ ಯುವಜನತೆಯ ನೇತೃತ್ವದಲ್ಲಿ ನಡೆದ ಜಾಗತಿಕ ಹವಾಮಾನ ಮುಷ್ಕರದ (global climate strike) ಭಾಗವಾಗಿ ಭಾರತದಲ್ಲಿಯೂ ಸಾವಿರಾರು ಸಂಖ್ಯೆಯ ಯುವಜನತೆ ಒಟ್ಟಿಗೆ ಸೇರಿ 2019 ರ ಸೆಪ್ಟಂಬರ್ ತಿಂಗಳಿನಲ್ಲಿ ಹಲವಾರು ಹವಾಮಾನ ಮುಷ್ಕರಗಳನ್ನು ಆಯೋಜಿಸಲಾಗಿತ್ತು.

ಒಟ್ಟಾರೆಯಾಗಿ ಹೇಳುವುದಾದರೆ ಪರಿಸರ ಮತ್ತು ಹವಾಮಾನ ಬದಲಾವಣೆಗೆ ಸಂಬಂಧಿಸಿದಂತೆ ಜಾಗತಿಕ ಮಟ್ಟದಲ್ಲಿ ದನಿಯೆತ್ತಿ ಅದಕ್ಕೊಂದು ಪರಿಹಾರ ಕಂಡುಕೊಳ್ಳುವಲ್ಲಿ ಹೋರಾಡುತ್ತಿರುವ ಫ್ರೈಡೇಸ್ ಫಾರ್ ಫ್ಯೂಚರ್ ಸಂಸ್ಥೆಯು ಸಮಾಜಮುಖಿಯಾದದ್ದಾಗಿದೆ. ಹಾಗಾಗಿಯೇ ಗ್ರೇಟಾ ಥನ್‌ಬರ್ಗ್ ಅವರಿಗೆ ಜಾಗತಿಕವಾಗಿ ದೊಡ್ಡ ಮಟ್ಟದ ಮನ್ನಣೆ ಸಿಕ್ಕಿದೆ. ಈಗ ದಿಶಾ ರವಿಯವರ ಬಂಧನವನ್ನು ಖಂಡಿಸಿ ಜಾಗತಿಕವಾಗಿ ಪಕ್ಷಾತೀತ ಬೆಂಬಲ ಸಿಗುತ್ತಿರುವುದೂ ಇದೇ ಕಾರಣಕ್ಕೆ ಎಂದು ಹೇಳಬಹುದು.

ಈ ಸಂಸ್ಥೆಯ ವೆಬ್‌ಸೈಟ್‌ಗೆ ಬೇಟಿ ನೀಡಲು ಇಲ್ಲಿ ಕ್ಲಿಕ್ ಮಾಡಿ.

ಇದನ್ನೂ ಓದಿ: ಟ್ರಿಲಿಯನ್‌ಗಟ್ಟಲೆ ಮೌಲ್ಯವಿರುವ ಕಂಪನಿಗಿಂತ ಜನರ ಗೌಪ್ಯತೆ ಮುಖ್ಯ ಎಂದ ಸುಪ್ರೀಂ: ವಾಟ್ಸಾಪ್, ಕೇಂದ್ರ ಸರ್ಕಾರಕ್ಕೆ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....