Homeಮುಖಪುಟಬೆಂಗಳೂರಿನಲ್ಲಿ ದಿಶಾ ರವಿ ಸ್ಥಾಪಿಸಿರುವ 'Fridays For Future' ಸಂಸ್ಥೆಯ ಬಗ್ಗೆ ಗೊತ್ತೆ?

ಬೆಂಗಳೂರಿನಲ್ಲಿ ದಿಶಾ ರವಿ ಸ್ಥಾಪಿಸಿರುವ ‘Fridays For Future’ ಸಂಸ್ಥೆಯ ಬಗ್ಗೆ ಗೊತ್ತೆ?

FFF ಎನ್ನುವ ಸಂಘಟನೆಯನ್ನು ಗ್ರೇಟಾ ಥನ್‌ಬರ್ಗ್ 2018 ರಲ್ಲಿ ಸ್ವೀಡನ್‌ನಲ್ಲಿ ಸ್ಥಾಪಿಸಿದ್ದರು. ಅಂದಿನಿಂದ ಇದು ಜಗತ್ತಿನಾದ್ಯಂತ ತನ್ನ ಶಾಖೆಗಳನ್ನು ಹೆಚ್ಚಿಸಿಕೊಂಡು ಬಂದಿದೆ

- Advertisement -
- Advertisement -

ರೈತರ ಹೋರಾಟಕ್ಕೆ ಸಂಬಂಧಿಸಿದಂತೆ ಜಾಗತಿಕ ಪರಿಸರ ಹೋರಾಟಗಾರ್ತಿ ಗ್ರೇಟಾ ಥನ್‌ಬರ್ಗ್ ಹಂಚಿಕೊಂಡಿರುವ ಟೂಲ್‌ಕಿಟ್‌ಗೆ ಸಂಬಂಧಿಸಿದ ಪ್ರಕರಣದಲ್ಲಿ ದೆಹಲಿ ಪೊಲೀಸರು 21 ವರ್ಷದ ದಿಶಾ ರವಿಯವರನ್ನು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ.

ದಿಶಾ ಅವರ ಹಿನ್ನೆಲೆಯ ಕುರಿತು ಈಗ ಸಾಕಷ್ಟು ಚರ್ಚೆಗಳಾಗುತ್ತಿವೆ. ದಿಶಾ ಬೆಂಗಳೂರಿನ ಮೌಂಟ್ ಕಾರ್ಮೆಲ್ ಕಾಲೇಜಿನ ವಿದ್ಯಾರ್ಥಿನಿಯಾಗಿದ್ದಾರೆ. Fridays For Future (FFF – ಭವಿಷ್ಯಕ್ಕಾಗಿ ಶಕ್ರವಾರ) ಇಂಡಿಯಾದ ಸಂಸ್ಥಾಪಕರಲ್ಲಿ ಒಬ್ಬರಾದ ದಿಶಾ ರವಿ ಅವರು ವಿವಾದಿತ ಟೂಲ್‌ಕಿಟ್ ಅನ್ನು ಸಂಪಾದಿಸಿ (ಎಡಿಟ್ ಮಾಡಿ) ಹಂಚಿಕೊಂಡಿದ್ದಾರೆ ಎಂದು ದೆಹಲಿ ಪೊಲೀಸ್ ವಕ್ತಾರರು ತಿಳಿಸಿದ್ದಾರೆ.

FFF ಎನ್ನುವ ಸಂಘಟನೆಯನ್ನು ಗ್ರೇಟಾ ಥನ್‌ಬರ್ಗ್ 2018 ರಲ್ಲಿ ಸ್ವೀಡನ್‌ನಲ್ಲಿ ಸ್ಥಾಪಿಸಿದ್ದರು. ಅಂದಿನಿಂದ ಇದು ಜಗತ್ತಿನಾದ್ಯಂತ ತನ್ನ ಶಾಖೆಗಳನ್ನು ಹೆಚ್ಚಿಸಿಕೊಂಡು ಬಂದಿದೆ. ಇದರ ಬೆಂಗಳೂರು ಶಾಖೆಯ ಸಂಸ್ಥಾಪಕರಲ್ಲಿ ದಿಶಾ ರವಿ ಕೂಡಾ ಒಬ್ಬರಾಗಿದ್ದಾರೆ.

ಪ್ರಸ್ತುತ ಜಗತ್ತಿನಲ್ಲಿ ಹವಾಮಾನ ಬದಲವಣೆಯಿಂದ ಉಂಟಾಗಬಹುದಾದ ಅನಾಹುತಗಳ ಬಗ್ಗೆ ಅರಿವು ಮೂಡಿಸುವುದು ಸೇರಿದಂತೆ ಪ್ರಕೃತಿಯ ಸಮತೋಲನವನ್ನು ಕಾಪಾಡುವ ಸಲುವಾಗಿ ಹೋರಾಟ, ಜಾಗೃತಿ ಮತ್ತು ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಸಲುವಾಗಿ ಈ ಸಂಸ್ಥೆಯು ರಚನೆಯಾಗಿದೆ.

ಇದನ್ನೂ ಓದಿ: ರೈತರ ಮೊಮ್ಮಗಳನ್ನು ಬಂಧಿಸಿದರೆ ಹೋರಾಟ ದುರ್ಬಲಗೊಳ್ಳುವುದಿಲ್ಲ: ದಿಶಾ ರವಿಗೆ ಜಾಗತಿಕ ಬೆಂಬಲ

ಜಗತ್ತಿನಾಧ್ಯಂತ ಇರುವ ಶಾಲಾ ಮಕ್ಕಳು ಪ್ರತಿ ಶುಕ್ರವಾರ ಶಾಲೆಯಿಂದ ಹೊರಗುಳಿದು ಹವಾಮಾನ ಬದಲಾವಣೆಯನ್ನು ತಡೆಗಟ್ಟಲು ಮತ್ತು ಪ್ರಕೃತಿಯಲ್ಲಿ ಸಿಗುವ ನವೀಕರಿಸಬಹುದಾದ ಇಂಧನವನ್ನು ಬಳಸಲು ಕ್ರಮ ಕೈಗೊಳ್ಳುವಂತೆ ರಾಜಕೀಯ ನಾಯಕರ ಮೇಲೆ ಒತ್ತಡ ತರುವಂತಹ ಕಾರ್ಯಕ್ರಮಗಳನ್ನು ನಡೆಸಬೇಕು ಎನ್ನುವುದು FFF ಚಳವಳಿಯ ಹಿಂದಿನ ಉದ್ದೇಶವಾಗಿದೆ.

FFF ವತಿಯಿಂದ ಇತ್ತೀಚೆಗೆ ಹಲವಾರು ಜನಜಾಗೃತಿ ಕಾರ್ಯಕ್ರಮಗಳು ಮತ್ತು ಪ್ರತಿಭಟನೆಗಳನ್ನು ಹಮ್ಮಿಕೊಳ್ಳಲಾಗಿದೆ. ಅವುಗಳಲ್ಲಿ ಪ್ರಮುಖವಾದವು, ಮಹಾರಾಷ್ಟ್ರದಲ್ಲಿನ ಆರೇ ಅರಣ್ಯ ಉಳಿಸಿ ಹೋರಾಟ, ಗೋವಾದಲ್ಲಿನ ಮೊಲೆಮ್ ಅರಣ್ಯ ಉಳಿಸಿ ಹೋರಾಟ ಮತ್ತು EIA 2020 (ಪರಿಸರ ಪರಿಣಾಮದ ಮೌಲ್ಯಮಾಪನ-2020ದ ಕುರಿತ ಹೋರಾಟಗಳು ಸೇರಿವೆ.

ಹವಾಮಾನ ಮುಷ್ಕರಕ್ಕೆ ಸಂಬಂಧಿಸಿದಂತೆ FFFನ ವೆಬ್‌ಸೈಟ್ ಪ್ರಕಾರ, “ಹವಾಮಾನ ಮುಷ್ಕರಗಳು ಅಥವಾ ಮೆರವಣಿಗೆಗಳು ಅಹಿಂಸಾತ್ಮಕ ಮತ್ತು ಶಾಂತಿಯುತವಾದುದಾಗಿದ್ದು, ಪ್ರಸ್ತುತ ಜಗತ್ತಿನ ಹವಾಮಾನ ಬಿಕ್ಕಟ್ಟು ಮತ್ತು ಪರಿಸರದ ಸಮಸ್ಯೆಗಳನ್ನು ಪರಿಹರಿಸುವ ಸಲುವಾಗಿ ನಮ್ಮ ಬೇಡಿಕೆಗಳನ್ನು ನಮ್ಮ ರಾಷ್ಟ್ರೀಯ ಮತ್ತು ರಾಜ್ಯ ಸರ್ಕಾರಗಳಿಗೆ ತಿಳಿಸಲು ನಾವು ಅಳವಡಿಸಿಕೊಂಡ ಮಾರ್ಗಗಳಾಗಿವೆ” ಎಂದು ಹೇಳುತ್ತದೆ.

ಇದನ್ನೂ ಓದಿ: ಮದುವೆಗಳಲ್ಲಿಯೂ ರೈತ ಹೋರಾಟಕ್ಕೆ ಬೆಂಬಲ!: ಹರಿಯಾಣ-ಪಂಜಾಬ್‌ನಲ್ಲಿ ವಿಭಿನ್ನ ಪ್ರತಿರೋಧ

ಜೊತೆಗೆ, “ಫ್ರೈಡೇಸ್‌ ಫಾರ್‌ ಫ್ಯೂಚರ್‌ ಎಂಬುದು ಹವಾಮಾನ ನ್ಯಾಯಕ್ಕಾಗಿ (Climate Justice) ಜಾಗತಿಕ ಜನರು ನಡೆಸುವ ಚಳುವಳಿಯಾಗಿದೆ. FFF ಅನ್ನು‌ ಭಾರತದಲ್ಲಿ ಎಲ್ಲರನ್ನೂ ಒಳಗೊಂಡಂತಹ ಸಮತಾವಾದ, ಪಕ್ಷೇತರ, ಸ್ವಾಯತ್ತ ಮತ್ತು ವಿಕೇಂದ್ರೀಕೃತ ಚಳುವಳಿಯಾಗಿಸುತ್ತೇವೆ” ಎಂದು ಈ ಸಂಸ್ಥೆಯು ಹೇಳಿಕೊಂಡಿದೆ.

FFF ಭಾರತದ ವಿರುದ್ಧ ಸರ್ಕಾರಗಳು ಸಮರ ಸಾರಿರುವುದು ಇದೇ ಮೊದಲಲ್ಲ. ಈ ವೆಬ್‌ಸೈಟ್‌ ಅನ್ನು 2020 ರ ಜುಲೈನಲ್ಲಿ ಕಾನೂನುಬಾಹಿರ ಚಟುವಟಿಕೆಗಳ ತಡೆಗಟ್ಟುವಿಕೆ ಕಾಯ್ದೆಯಡಿಯಲ್ಲಿ ಆಕ್ಷೇಪಾರ್ಹವಾದದ್ದು ಎಂದು ದೆಹಲಿ ಪೊಲೀಸರು ಆರೋಪಿಸಿದ್ದರು. ಜೊತೆಗೆ ಇದು ಕಾನೂನುಬಾಹಿರ ಮತ್ತು ಭಯೋತ್ಪಾದಕ ಕೃತ್ಯಗಳಲ್ಲಿ ಭಾಗಿಯಾಗಿದೆ ಎಂಬ ಕಾರಣಕ್ಕೆ ಈ ವೆಬ್‌ಸೈಟ್‌ ಅನ್ನು ನಿರ್ಬಂಧಿಸಲಾಗಿತ್ತು. ಆದರೆ ಕೆಲವು ದಿನಗಳ ನಂತರ ‘ತಪ್ಪಾಗಿ ನೋಟಿಸ್ ನೀಡಲಾಗಿದೆ’ ಎಂದು ನಿರ್ಬಂಧವನ್ನು ಹಿಂತೆಗೆದುಕೊಳ್ಳಲಾಗಿತ್ತು.

2019 ರಲ್ಲಿ ಯುವಜನತೆಯ ನೇತೃತ್ವದಲ್ಲಿ ನಡೆದ ಜಾಗತಿಕ ಹವಾಮಾನ ಮುಷ್ಕರದ (global climate strike) ಭಾಗವಾಗಿ ಭಾರತದಲ್ಲಿಯೂ ಸಾವಿರಾರು ಸಂಖ್ಯೆಯ ಯುವಜನತೆ ಒಟ್ಟಿಗೆ ಸೇರಿ 2019 ರ ಸೆಪ್ಟಂಬರ್ ತಿಂಗಳಿನಲ್ಲಿ ಹಲವಾರು ಹವಾಮಾನ ಮುಷ್ಕರಗಳನ್ನು ಆಯೋಜಿಸಲಾಗಿತ್ತು.

ಒಟ್ಟಾರೆಯಾಗಿ ಹೇಳುವುದಾದರೆ ಪರಿಸರ ಮತ್ತು ಹವಾಮಾನ ಬದಲಾವಣೆಗೆ ಸಂಬಂಧಿಸಿದಂತೆ ಜಾಗತಿಕ ಮಟ್ಟದಲ್ಲಿ ದನಿಯೆತ್ತಿ ಅದಕ್ಕೊಂದು ಪರಿಹಾರ ಕಂಡುಕೊಳ್ಳುವಲ್ಲಿ ಹೋರಾಡುತ್ತಿರುವ ಫ್ರೈಡೇಸ್ ಫಾರ್ ಫ್ಯೂಚರ್ ಸಂಸ್ಥೆಯು ಸಮಾಜಮುಖಿಯಾದದ್ದಾಗಿದೆ. ಹಾಗಾಗಿಯೇ ಗ್ರೇಟಾ ಥನ್‌ಬರ್ಗ್ ಅವರಿಗೆ ಜಾಗತಿಕವಾಗಿ ದೊಡ್ಡ ಮಟ್ಟದ ಮನ್ನಣೆ ಸಿಕ್ಕಿದೆ. ಈಗ ದಿಶಾ ರವಿಯವರ ಬಂಧನವನ್ನು ಖಂಡಿಸಿ ಜಾಗತಿಕವಾಗಿ ಪಕ್ಷಾತೀತ ಬೆಂಬಲ ಸಿಗುತ್ತಿರುವುದೂ ಇದೇ ಕಾರಣಕ್ಕೆ ಎಂದು ಹೇಳಬಹುದು.

ಈ ಸಂಸ್ಥೆಯ ವೆಬ್‌ಸೈಟ್‌ಗೆ ಬೇಟಿ ನೀಡಲು ಇಲ್ಲಿ ಕ್ಲಿಕ್ ಮಾಡಿ.

ಇದನ್ನೂ ಓದಿ: ಟ್ರಿಲಿಯನ್‌ಗಟ್ಟಲೆ ಮೌಲ್ಯವಿರುವ ಕಂಪನಿಗಿಂತ ಜನರ ಗೌಪ್ಯತೆ ಮುಖ್ಯ ಎಂದ ಸುಪ್ರೀಂ: ವಾಟ್ಸಾಪ್, ಕೇಂದ್ರ ಸರ್ಕಾರಕ್ಕೆ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...