Homeಮುಖಪುಟಬೆಂಗಳೂರಿನಲ್ಲಿ ದಿಶಾ ರವಿ ಸ್ಥಾಪಿಸಿರುವ 'Fridays For Future' ಸಂಸ್ಥೆಯ ಬಗ್ಗೆ ಗೊತ್ತೆ?

ಬೆಂಗಳೂರಿನಲ್ಲಿ ದಿಶಾ ರವಿ ಸ್ಥಾಪಿಸಿರುವ ‘Fridays For Future’ ಸಂಸ್ಥೆಯ ಬಗ್ಗೆ ಗೊತ್ತೆ?

FFF ಎನ್ನುವ ಸಂಘಟನೆಯನ್ನು ಗ್ರೇಟಾ ಥನ್‌ಬರ್ಗ್ 2018 ರಲ್ಲಿ ಸ್ವೀಡನ್‌ನಲ್ಲಿ ಸ್ಥಾಪಿಸಿದ್ದರು. ಅಂದಿನಿಂದ ಇದು ಜಗತ್ತಿನಾದ್ಯಂತ ತನ್ನ ಶಾಖೆಗಳನ್ನು ಹೆಚ್ಚಿಸಿಕೊಂಡು ಬಂದಿದೆ

- Advertisement -
- Advertisement -

ರೈತರ ಹೋರಾಟಕ್ಕೆ ಸಂಬಂಧಿಸಿದಂತೆ ಜಾಗತಿಕ ಪರಿಸರ ಹೋರಾಟಗಾರ್ತಿ ಗ್ರೇಟಾ ಥನ್‌ಬರ್ಗ್ ಹಂಚಿಕೊಂಡಿರುವ ಟೂಲ್‌ಕಿಟ್‌ಗೆ ಸಂಬಂಧಿಸಿದ ಪ್ರಕರಣದಲ್ಲಿ ದೆಹಲಿ ಪೊಲೀಸರು 21 ವರ್ಷದ ದಿಶಾ ರವಿಯವರನ್ನು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ.

ದಿಶಾ ಅವರ ಹಿನ್ನೆಲೆಯ ಕುರಿತು ಈಗ ಸಾಕಷ್ಟು ಚರ್ಚೆಗಳಾಗುತ್ತಿವೆ. ದಿಶಾ ಬೆಂಗಳೂರಿನ ಮೌಂಟ್ ಕಾರ್ಮೆಲ್ ಕಾಲೇಜಿನ ವಿದ್ಯಾರ್ಥಿನಿಯಾಗಿದ್ದಾರೆ. Fridays For Future (FFF – ಭವಿಷ್ಯಕ್ಕಾಗಿ ಶಕ್ರವಾರ) ಇಂಡಿಯಾದ ಸಂಸ್ಥಾಪಕರಲ್ಲಿ ಒಬ್ಬರಾದ ದಿಶಾ ರವಿ ಅವರು ವಿವಾದಿತ ಟೂಲ್‌ಕಿಟ್ ಅನ್ನು ಸಂಪಾದಿಸಿ (ಎಡಿಟ್ ಮಾಡಿ) ಹಂಚಿಕೊಂಡಿದ್ದಾರೆ ಎಂದು ದೆಹಲಿ ಪೊಲೀಸ್ ವಕ್ತಾರರು ತಿಳಿಸಿದ್ದಾರೆ.

FFF ಎನ್ನುವ ಸಂಘಟನೆಯನ್ನು ಗ್ರೇಟಾ ಥನ್‌ಬರ್ಗ್ 2018 ರಲ್ಲಿ ಸ್ವೀಡನ್‌ನಲ್ಲಿ ಸ್ಥಾಪಿಸಿದ್ದರು. ಅಂದಿನಿಂದ ಇದು ಜಗತ್ತಿನಾದ್ಯಂತ ತನ್ನ ಶಾಖೆಗಳನ್ನು ಹೆಚ್ಚಿಸಿಕೊಂಡು ಬಂದಿದೆ. ಇದರ ಬೆಂಗಳೂರು ಶಾಖೆಯ ಸಂಸ್ಥಾಪಕರಲ್ಲಿ ದಿಶಾ ರವಿ ಕೂಡಾ ಒಬ್ಬರಾಗಿದ್ದಾರೆ.

ಪ್ರಸ್ತುತ ಜಗತ್ತಿನಲ್ಲಿ ಹವಾಮಾನ ಬದಲವಣೆಯಿಂದ ಉಂಟಾಗಬಹುದಾದ ಅನಾಹುತಗಳ ಬಗ್ಗೆ ಅರಿವು ಮೂಡಿಸುವುದು ಸೇರಿದಂತೆ ಪ್ರಕೃತಿಯ ಸಮತೋಲನವನ್ನು ಕಾಪಾಡುವ ಸಲುವಾಗಿ ಹೋರಾಟ, ಜಾಗೃತಿ ಮತ್ತು ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಸಲುವಾಗಿ ಈ ಸಂಸ್ಥೆಯು ರಚನೆಯಾಗಿದೆ.

ಇದನ್ನೂ ಓದಿ: ರೈತರ ಮೊಮ್ಮಗಳನ್ನು ಬಂಧಿಸಿದರೆ ಹೋರಾಟ ದುರ್ಬಲಗೊಳ್ಳುವುದಿಲ್ಲ: ದಿಶಾ ರವಿಗೆ ಜಾಗತಿಕ ಬೆಂಬಲ

ಜಗತ್ತಿನಾಧ್ಯಂತ ಇರುವ ಶಾಲಾ ಮಕ್ಕಳು ಪ್ರತಿ ಶುಕ್ರವಾರ ಶಾಲೆಯಿಂದ ಹೊರಗುಳಿದು ಹವಾಮಾನ ಬದಲಾವಣೆಯನ್ನು ತಡೆಗಟ್ಟಲು ಮತ್ತು ಪ್ರಕೃತಿಯಲ್ಲಿ ಸಿಗುವ ನವೀಕರಿಸಬಹುದಾದ ಇಂಧನವನ್ನು ಬಳಸಲು ಕ್ರಮ ಕೈಗೊಳ್ಳುವಂತೆ ರಾಜಕೀಯ ನಾಯಕರ ಮೇಲೆ ಒತ್ತಡ ತರುವಂತಹ ಕಾರ್ಯಕ್ರಮಗಳನ್ನು ನಡೆಸಬೇಕು ಎನ್ನುವುದು FFF ಚಳವಳಿಯ ಹಿಂದಿನ ಉದ್ದೇಶವಾಗಿದೆ.

FFF ವತಿಯಿಂದ ಇತ್ತೀಚೆಗೆ ಹಲವಾರು ಜನಜಾಗೃತಿ ಕಾರ್ಯಕ್ರಮಗಳು ಮತ್ತು ಪ್ರತಿಭಟನೆಗಳನ್ನು ಹಮ್ಮಿಕೊಳ್ಳಲಾಗಿದೆ. ಅವುಗಳಲ್ಲಿ ಪ್ರಮುಖವಾದವು, ಮಹಾರಾಷ್ಟ್ರದಲ್ಲಿನ ಆರೇ ಅರಣ್ಯ ಉಳಿಸಿ ಹೋರಾಟ, ಗೋವಾದಲ್ಲಿನ ಮೊಲೆಮ್ ಅರಣ್ಯ ಉಳಿಸಿ ಹೋರಾಟ ಮತ್ತು EIA 2020 (ಪರಿಸರ ಪರಿಣಾಮದ ಮೌಲ್ಯಮಾಪನ-2020ದ ಕುರಿತ ಹೋರಾಟಗಳು ಸೇರಿವೆ.

ಹವಾಮಾನ ಮುಷ್ಕರಕ್ಕೆ ಸಂಬಂಧಿಸಿದಂತೆ FFFನ ವೆಬ್‌ಸೈಟ್ ಪ್ರಕಾರ, “ಹವಾಮಾನ ಮುಷ್ಕರಗಳು ಅಥವಾ ಮೆರವಣಿಗೆಗಳು ಅಹಿಂಸಾತ್ಮಕ ಮತ್ತು ಶಾಂತಿಯುತವಾದುದಾಗಿದ್ದು, ಪ್ರಸ್ತುತ ಜಗತ್ತಿನ ಹವಾಮಾನ ಬಿಕ್ಕಟ್ಟು ಮತ್ತು ಪರಿಸರದ ಸಮಸ್ಯೆಗಳನ್ನು ಪರಿಹರಿಸುವ ಸಲುವಾಗಿ ನಮ್ಮ ಬೇಡಿಕೆಗಳನ್ನು ನಮ್ಮ ರಾಷ್ಟ್ರೀಯ ಮತ್ತು ರಾಜ್ಯ ಸರ್ಕಾರಗಳಿಗೆ ತಿಳಿಸಲು ನಾವು ಅಳವಡಿಸಿಕೊಂಡ ಮಾರ್ಗಗಳಾಗಿವೆ” ಎಂದು ಹೇಳುತ್ತದೆ.

ಇದನ್ನೂ ಓದಿ: ಮದುವೆಗಳಲ್ಲಿಯೂ ರೈತ ಹೋರಾಟಕ್ಕೆ ಬೆಂಬಲ!: ಹರಿಯಾಣ-ಪಂಜಾಬ್‌ನಲ್ಲಿ ವಿಭಿನ್ನ ಪ್ರತಿರೋಧ

ಜೊತೆಗೆ, “ಫ್ರೈಡೇಸ್‌ ಫಾರ್‌ ಫ್ಯೂಚರ್‌ ಎಂಬುದು ಹವಾಮಾನ ನ್ಯಾಯಕ್ಕಾಗಿ (Climate Justice) ಜಾಗತಿಕ ಜನರು ನಡೆಸುವ ಚಳುವಳಿಯಾಗಿದೆ. FFF ಅನ್ನು‌ ಭಾರತದಲ್ಲಿ ಎಲ್ಲರನ್ನೂ ಒಳಗೊಂಡಂತಹ ಸಮತಾವಾದ, ಪಕ್ಷೇತರ, ಸ್ವಾಯತ್ತ ಮತ್ತು ವಿಕೇಂದ್ರೀಕೃತ ಚಳುವಳಿಯಾಗಿಸುತ್ತೇವೆ” ಎಂದು ಈ ಸಂಸ್ಥೆಯು ಹೇಳಿಕೊಂಡಿದೆ.

FFF ಭಾರತದ ವಿರುದ್ಧ ಸರ್ಕಾರಗಳು ಸಮರ ಸಾರಿರುವುದು ಇದೇ ಮೊದಲಲ್ಲ. ಈ ವೆಬ್‌ಸೈಟ್‌ ಅನ್ನು 2020 ರ ಜುಲೈನಲ್ಲಿ ಕಾನೂನುಬಾಹಿರ ಚಟುವಟಿಕೆಗಳ ತಡೆಗಟ್ಟುವಿಕೆ ಕಾಯ್ದೆಯಡಿಯಲ್ಲಿ ಆಕ್ಷೇಪಾರ್ಹವಾದದ್ದು ಎಂದು ದೆಹಲಿ ಪೊಲೀಸರು ಆರೋಪಿಸಿದ್ದರು. ಜೊತೆಗೆ ಇದು ಕಾನೂನುಬಾಹಿರ ಮತ್ತು ಭಯೋತ್ಪಾದಕ ಕೃತ್ಯಗಳಲ್ಲಿ ಭಾಗಿಯಾಗಿದೆ ಎಂಬ ಕಾರಣಕ್ಕೆ ಈ ವೆಬ್‌ಸೈಟ್‌ ಅನ್ನು ನಿರ್ಬಂಧಿಸಲಾಗಿತ್ತು. ಆದರೆ ಕೆಲವು ದಿನಗಳ ನಂತರ ‘ತಪ್ಪಾಗಿ ನೋಟಿಸ್ ನೀಡಲಾಗಿದೆ’ ಎಂದು ನಿರ್ಬಂಧವನ್ನು ಹಿಂತೆಗೆದುಕೊಳ್ಳಲಾಗಿತ್ತು.

2019 ರಲ್ಲಿ ಯುವಜನತೆಯ ನೇತೃತ್ವದಲ್ಲಿ ನಡೆದ ಜಾಗತಿಕ ಹವಾಮಾನ ಮುಷ್ಕರದ (global climate strike) ಭಾಗವಾಗಿ ಭಾರತದಲ್ಲಿಯೂ ಸಾವಿರಾರು ಸಂಖ್ಯೆಯ ಯುವಜನತೆ ಒಟ್ಟಿಗೆ ಸೇರಿ 2019 ರ ಸೆಪ್ಟಂಬರ್ ತಿಂಗಳಿನಲ್ಲಿ ಹಲವಾರು ಹವಾಮಾನ ಮುಷ್ಕರಗಳನ್ನು ಆಯೋಜಿಸಲಾಗಿತ್ತು.

ಒಟ್ಟಾರೆಯಾಗಿ ಹೇಳುವುದಾದರೆ ಪರಿಸರ ಮತ್ತು ಹವಾಮಾನ ಬದಲಾವಣೆಗೆ ಸಂಬಂಧಿಸಿದಂತೆ ಜಾಗತಿಕ ಮಟ್ಟದಲ್ಲಿ ದನಿಯೆತ್ತಿ ಅದಕ್ಕೊಂದು ಪರಿಹಾರ ಕಂಡುಕೊಳ್ಳುವಲ್ಲಿ ಹೋರಾಡುತ್ತಿರುವ ಫ್ರೈಡೇಸ್ ಫಾರ್ ಫ್ಯೂಚರ್ ಸಂಸ್ಥೆಯು ಸಮಾಜಮುಖಿಯಾದದ್ದಾಗಿದೆ. ಹಾಗಾಗಿಯೇ ಗ್ರೇಟಾ ಥನ್‌ಬರ್ಗ್ ಅವರಿಗೆ ಜಾಗತಿಕವಾಗಿ ದೊಡ್ಡ ಮಟ್ಟದ ಮನ್ನಣೆ ಸಿಕ್ಕಿದೆ. ಈಗ ದಿಶಾ ರವಿಯವರ ಬಂಧನವನ್ನು ಖಂಡಿಸಿ ಜಾಗತಿಕವಾಗಿ ಪಕ್ಷಾತೀತ ಬೆಂಬಲ ಸಿಗುತ್ತಿರುವುದೂ ಇದೇ ಕಾರಣಕ್ಕೆ ಎಂದು ಹೇಳಬಹುದು.

ಈ ಸಂಸ್ಥೆಯ ವೆಬ್‌ಸೈಟ್‌ಗೆ ಬೇಟಿ ನೀಡಲು ಇಲ್ಲಿ ಕ್ಲಿಕ್ ಮಾಡಿ.

ಇದನ್ನೂ ಓದಿ: ಟ್ರಿಲಿಯನ್‌ಗಟ್ಟಲೆ ಮೌಲ್ಯವಿರುವ ಕಂಪನಿಗಿಂತ ಜನರ ಗೌಪ್ಯತೆ ಮುಖ್ಯ ಎಂದ ಸುಪ್ರೀಂ: ವಾಟ್ಸಾಪ್, ಕೇಂದ್ರ ಸರ್ಕಾರಕ್ಕೆ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...