Homeಮುಖಪುಟಬೆಂಗಳೂರಿನಲ್ಲಿ ದಿಶಾ ರವಿ ಸ್ಥಾಪಿಸಿರುವ 'Fridays For Future' ಸಂಸ್ಥೆಯ ಬಗ್ಗೆ ಗೊತ್ತೆ?

ಬೆಂಗಳೂರಿನಲ್ಲಿ ದಿಶಾ ರವಿ ಸ್ಥಾಪಿಸಿರುವ ‘Fridays For Future’ ಸಂಸ್ಥೆಯ ಬಗ್ಗೆ ಗೊತ್ತೆ?

FFF ಎನ್ನುವ ಸಂಘಟನೆಯನ್ನು ಗ್ರೇಟಾ ಥನ್‌ಬರ್ಗ್ 2018 ರಲ್ಲಿ ಸ್ವೀಡನ್‌ನಲ್ಲಿ ಸ್ಥಾಪಿಸಿದ್ದರು. ಅಂದಿನಿಂದ ಇದು ಜಗತ್ತಿನಾದ್ಯಂತ ತನ್ನ ಶಾಖೆಗಳನ್ನು ಹೆಚ್ಚಿಸಿಕೊಂಡು ಬಂದಿದೆ

- Advertisement -
- Advertisement -

ರೈತರ ಹೋರಾಟಕ್ಕೆ ಸಂಬಂಧಿಸಿದಂತೆ ಜಾಗತಿಕ ಪರಿಸರ ಹೋರಾಟಗಾರ್ತಿ ಗ್ರೇಟಾ ಥನ್‌ಬರ್ಗ್ ಹಂಚಿಕೊಂಡಿರುವ ಟೂಲ್‌ಕಿಟ್‌ಗೆ ಸಂಬಂಧಿಸಿದ ಪ್ರಕರಣದಲ್ಲಿ ದೆಹಲಿ ಪೊಲೀಸರು 21 ವರ್ಷದ ದಿಶಾ ರವಿಯವರನ್ನು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ.

ದಿಶಾ ಅವರ ಹಿನ್ನೆಲೆಯ ಕುರಿತು ಈಗ ಸಾಕಷ್ಟು ಚರ್ಚೆಗಳಾಗುತ್ತಿವೆ. ದಿಶಾ ಬೆಂಗಳೂರಿನ ಮೌಂಟ್ ಕಾರ್ಮೆಲ್ ಕಾಲೇಜಿನ ವಿದ್ಯಾರ್ಥಿನಿಯಾಗಿದ್ದಾರೆ. Fridays For Future (FFF – ಭವಿಷ್ಯಕ್ಕಾಗಿ ಶಕ್ರವಾರ) ಇಂಡಿಯಾದ ಸಂಸ್ಥಾಪಕರಲ್ಲಿ ಒಬ್ಬರಾದ ದಿಶಾ ರವಿ ಅವರು ವಿವಾದಿತ ಟೂಲ್‌ಕಿಟ್ ಅನ್ನು ಸಂಪಾದಿಸಿ (ಎಡಿಟ್ ಮಾಡಿ) ಹಂಚಿಕೊಂಡಿದ್ದಾರೆ ಎಂದು ದೆಹಲಿ ಪೊಲೀಸ್ ವಕ್ತಾರರು ತಿಳಿಸಿದ್ದಾರೆ.

FFF ಎನ್ನುವ ಸಂಘಟನೆಯನ್ನು ಗ್ರೇಟಾ ಥನ್‌ಬರ್ಗ್ 2018 ರಲ್ಲಿ ಸ್ವೀಡನ್‌ನಲ್ಲಿ ಸ್ಥಾಪಿಸಿದ್ದರು. ಅಂದಿನಿಂದ ಇದು ಜಗತ್ತಿನಾದ್ಯಂತ ತನ್ನ ಶಾಖೆಗಳನ್ನು ಹೆಚ್ಚಿಸಿಕೊಂಡು ಬಂದಿದೆ. ಇದರ ಬೆಂಗಳೂರು ಶಾಖೆಯ ಸಂಸ್ಥಾಪಕರಲ್ಲಿ ದಿಶಾ ರವಿ ಕೂಡಾ ಒಬ್ಬರಾಗಿದ್ದಾರೆ.

ಪ್ರಸ್ತುತ ಜಗತ್ತಿನಲ್ಲಿ ಹವಾಮಾನ ಬದಲವಣೆಯಿಂದ ಉಂಟಾಗಬಹುದಾದ ಅನಾಹುತಗಳ ಬಗ್ಗೆ ಅರಿವು ಮೂಡಿಸುವುದು ಸೇರಿದಂತೆ ಪ್ರಕೃತಿಯ ಸಮತೋಲನವನ್ನು ಕಾಪಾಡುವ ಸಲುವಾಗಿ ಹೋರಾಟ, ಜಾಗೃತಿ ಮತ್ತು ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಸಲುವಾಗಿ ಈ ಸಂಸ್ಥೆಯು ರಚನೆಯಾಗಿದೆ.

ಇದನ್ನೂ ಓದಿ: ರೈತರ ಮೊಮ್ಮಗಳನ್ನು ಬಂಧಿಸಿದರೆ ಹೋರಾಟ ದುರ್ಬಲಗೊಳ್ಳುವುದಿಲ್ಲ: ದಿಶಾ ರವಿಗೆ ಜಾಗತಿಕ ಬೆಂಬಲ

ಜಗತ್ತಿನಾಧ್ಯಂತ ಇರುವ ಶಾಲಾ ಮಕ್ಕಳು ಪ್ರತಿ ಶುಕ್ರವಾರ ಶಾಲೆಯಿಂದ ಹೊರಗುಳಿದು ಹವಾಮಾನ ಬದಲಾವಣೆಯನ್ನು ತಡೆಗಟ್ಟಲು ಮತ್ತು ಪ್ರಕೃತಿಯಲ್ಲಿ ಸಿಗುವ ನವೀಕರಿಸಬಹುದಾದ ಇಂಧನವನ್ನು ಬಳಸಲು ಕ್ರಮ ಕೈಗೊಳ್ಳುವಂತೆ ರಾಜಕೀಯ ನಾಯಕರ ಮೇಲೆ ಒತ್ತಡ ತರುವಂತಹ ಕಾರ್ಯಕ್ರಮಗಳನ್ನು ನಡೆಸಬೇಕು ಎನ್ನುವುದು FFF ಚಳವಳಿಯ ಹಿಂದಿನ ಉದ್ದೇಶವಾಗಿದೆ.

FFF ವತಿಯಿಂದ ಇತ್ತೀಚೆಗೆ ಹಲವಾರು ಜನಜಾಗೃತಿ ಕಾರ್ಯಕ್ರಮಗಳು ಮತ್ತು ಪ್ರತಿಭಟನೆಗಳನ್ನು ಹಮ್ಮಿಕೊಳ್ಳಲಾಗಿದೆ. ಅವುಗಳಲ್ಲಿ ಪ್ರಮುಖವಾದವು, ಮಹಾರಾಷ್ಟ್ರದಲ್ಲಿನ ಆರೇ ಅರಣ್ಯ ಉಳಿಸಿ ಹೋರಾಟ, ಗೋವಾದಲ್ಲಿನ ಮೊಲೆಮ್ ಅರಣ್ಯ ಉಳಿಸಿ ಹೋರಾಟ ಮತ್ತು EIA 2020 (ಪರಿಸರ ಪರಿಣಾಮದ ಮೌಲ್ಯಮಾಪನ-2020ದ ಕುರಿತ ಹೋರಾಟಗಳು ಸೇರಿವೆ.

ಹವಾಮಾನ ಮುಷ್ಕರಕ್ಕೆ ಸಂಬಂಧಿಸಿದಂತೆ FFFನ ವೆಬ್‌ಸೈಟ್ ಪ್ರಕಾರ, “ಹವಾಮಾನ ಮುಷ್ಕರಗಳು ಅಥವಾ ಮೆರವಣಿಗೆಗಳು ಅಹಿಂಸಾತ್ಮಕ ಮತ್ತು ಶಾಂತಿಯುತವಾದುದಾಗಿದ್ದು, ಪ್ರಸ್ತುತ ಜಗತ್ತಿನ ಹವಾಮಾನ ಬಿಕ್ಕಟ್ಟು ಮತ್ತು ಪರಿಸರದ ಸಮಸ್ಯೆಗಳನ್ನು ಪರಿಹರಿಸುವ ಸಲುವಾಗಿ ನಮ್ಮ ಬೇಡಿಕೆಗಳನ್ನು ನಮ್ಮ ರಾಷ್ಟ್ರೀಯ ಮತ್ತು ರಾಜ್ಯ ಸರ್ಕಾರಗಳಿಗೆ ತಿಳಿಸಲು ನಾವು ಅಳವಡಿಸಿಕೊಂಡ ಮಾರ್ಗಗಳಾಗಿವೆ” ಎಂದು ಹೇಳುತ್ತದೆ.

ಇದನ್ನೂ ಓದಿ: ಮದುವೆಗಳಲ್ಲಿಯೂ ರೈತ ಹೋರಾಟಕ್ಕೆ ಬೆಂಬಲ!: ಹರಿಯಾಣ-ಪಂಜಾಬ್‌ನಲ್ಲಿ ವಿಭಿನ್ನ ಪ್ರತಿರೋಧ

ಜೊತೆಗೆ, “ಫ್ರೈಡೇಸ್‌ ಫಾರ್‌ ಫ್ಯೂಚರ್‌ ಎಂಬುದು ಹವಾಮಾನ ನ್ಯಾಯಕ್ಕಾಗಿ (Climate Justice) ಜಾಗತಿಕ ಜನರು ನಡೆಸುವ ಚಳುವಳಿಯಾಗಿದೆ. FFF ಅನ್ನು‌ ಭಾರತದಲ್ಲಿ ಎಲ್ಲರನ್ನೂ ಒಳಗೊಂಡಂತಹ ಸಮತಾವಾದ, ಪಕ್ಷೇತರ, ಸ್ವಾಯತ್ತ ಮತ್ತು ವಿಕೇಂದ್ರೀಕೃತ ಚಳುವಳಿಯಾಗಿಸುತ್ತೇವೆ” ಎಂದು ಈ ಸಂಸ್ಥೆಯು ಹೇಳಿಕೊಂಡಿದೆ.

FFF ಭಾರತದ ವಿರುದ್ಧ ಸರ್ಕಾರಗಳು ಸಮರ ಸಾರಿರುವುದು ಇದೇ ಮೊದಲಲ್ಲ. ಈ ವೆಬ್‌ಸೈಟ್‌ ಅನ್ನು 2020 ರ ಜುಲೈನಲ್ಲಿ ಕಾನೂನುಬಾಹಿರ ಚಟುವಟಿಕೆಗಳ ತಡೆಗಟ್ಟುವಿಕೆ ಕಾಯ್ದೆಯಡಿಯಲ್ಲಿ ಆಕ್ಷೇಪಾರ್ಹವಾದದ್ದು ಎಂದು ದೆಹಲಿ ಪೊಲೀಸರು ಆರೋಪಿಸಿದ್ದರು. ಜೊತೆಗೆ ಇದು ಕಾನೂನುಬಾಹಿರ ಮತ್ತು ಭಯೋತ್ಪಾದಕ ಕೃತ್ಯಗಳಲ್ಲಿ ಭಾಗಿಯಾಗಿದೆ ಎಂಬ ಕಾರಣಕ್ಕೆ ಈ ವೆಬ್‌ಸೈಟ್‌ ಅನ್ನು ನಿರ್ಬಂಧಿಸಲಾಗಿತ್ತು. ಆದರೆ ಕೆಲವು ದಿನಗಳ ನಂತರ ‘ತಪ್ಪಾಗಿ ನೋಟಿಸ್ ನೀಡಲಾಗಿದೆ’ ಎಂದು ನಿರ್ಬಂಧವನ್ನು ಹಿಂತೆಗೆದುಕೊಳ್ಳಲಾಗಿತ್ತು.

2019 ರಲ್ಲಿ ಯುವಜನತೆಯ ನೇತೃತ್ವದಲ್ಲಿ ನಡೆದ ಜಾಗತಿಕ ಹವಾಮಾನ ಮುಷ್ಕರದ (global climate strike) ಭಾಗವಾಗಿ ಭಾರತದಲ್ಲಿಯೂ ಸಾವಿರಾರು ಸಂಖ್ಯೆಯ ಯುವಜನತೆ ಒಟ್ಟಿಗೆ ಸೇರಿ 2019 ರ ಸೆಪ್ಟಂಬರ್ ತಿಂಗಳಿನಲ್ಲಿ ಹಲವಾರು ಹವಾಮಾನ ಮುಷ್ಕರಗಳನ್ನು ಆಯೋಜಿಸಲಾಗಿತ್ತು.

ಒಟ್ಟಾರೆಯಾಗಿ ಹೇಳುವುದಾದರೆ ಪರಿಸರ ಮತ್ತು ಹವಾಮಾನ ಬದಲಾವಣೆಗೆ ಸಂಬಂಧಿಸಿದಂತೆ ಜಾಗತಿಕ ಮಟ್ಟದಲ್ಲಿ ದನಿಯೆತ್ತಿ ಅದಕ್ಕೊಂದು ಪರಿಹಾರ ಕಂಡುಕೊಳ್ಳುವಲ್ಲಿ ಹೋರಾಡುತ್ತಿರುವ ಫ್ರೈಡೇಸ್ ಫಾರ್ ಫ್ಯೂಚರ್ ಸಂಸ್ಥೆಯು ಸಮಾಜಮುಖಿಯಾದದ್ದಾಗಿದೆ. ಹಾಗಾಗಿಯೇ ಗ್ರೇಟಾ ಥನ್‌ಬರ್ಗ್ ಅವರಿಗೆ ಜಾಗತಿಕವಾಗಿ ದೊಡ್ಡ ಮಟ್ಟದ ಮನ್ನಣೆ ಸಿಕ್ಕಿದೆ. ಈಗ ದಿಶಾ ರವಿಯವರ ಬಂಧನವನ್ನು ಖಂಡಿಸಿ ಜಾಗತಿಕವಾಗಿ ಪಕ್ಷಾತೀತ ಬೆಂಬಲ ಸಿಗುತ್ತಿರುವುದೂ ಇದೇ ಕಾರಣಕ್ಕೆ ಎಂದು ಹೇಳಬಹುದು.

ಈ ಸಂಸ್ಥೆಯ ವೆಬ್‌ಸೈಟ್‌ಗೆ ಬೇಟಿ ನೀಡಲು ಇಲ್ಲಿ ಕ್ಲಿಕ್ ಮಾಡಿ.

ಇದನ್ನೂ ಓದಿ: ಟ್ರಿಲಿಯನ್‌ಗಟ್ಟಲೆ ಮೌಲ್ಯವಿರುವ ಕಂಪನಿಗಿಂತ ಜನರ ಗೌಪ್ಯತೆ ಮುಖ್ಯ ಎಂದ ಸುಪ್ರೀಂ: ವಾಟ್ಸಾಪ್, ಕೇಂದ್ರ ಸರ್ಕಾರಕ್ಕೆ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...