Homeಕರ್ನಾಟಕವೈರಲ್ ಆದ 'ಹೌಡಿ' ಉತ್ತರ ಕರ್ನಾಟಕ..? ಕವನ ಓದಿ

ವೈರಲ್ ಆದ ‘ಹೌಡಿ’ ಉತ್ತರ ಕರ್ನಾಟಕ..? ಕವನ ಓದಿ

- Advertisement -
- Advertisement -

ನರೇಂದ್ರ ಮೋದಿಯವರು ನಿನ್ನೆ ಅಮೆರಿಕದ ಹ್ಯೂಸ್ಟನ್ ನಗರದಲ್ಲಿ ‘ಹೌಡಿ ಮೋದಿ’ ಕಾರ್ಯಕ್ರಮದಲ್ಲಿ ಭಾಗವಹಿಸಿ ಗಮನ ಸೆಳೆದರು. ಭಾರತದ ಕುರಿತು  ಬಹುದೊಡ್ಡ ಮಾತುಗಳನ್ನು ಆಡಿದರು. ಅದಕ್ಕೆ ಸಾಕಷ್ಟು ಸಕರಾತ್ಮಕ ಪ್ರತಿಕ್ರಿಯೆಗಳು ಬಂದಂತೆಯೇ ಕೆಲವೊಂದು ಟೀಕೆಗಳು ಬಂದಿವೆ. ಅದರಲ್ಲಿ ಉತ್ತರ ಕರ್ನಾಟಕ ನೆರೆಯಿಂದ ತತ್ತಿರಿಸಿದರೂ ಪರಿಹಾರ ಹಣ ನೀಡದ ಮೋದಿ ಅಮೆರಿಕಾದಲ್ಲಿ ಹೋಗಿ ನಮ್ಮ ಬಗ್ಗೆ ಹೇಳುವುದೇನು ಎಂದು ಪ್ರಶ್ನಿಸಿದ್ದಾರೆ. ಅದರಲ್ಲಿ ಶಿವು ನೊಣ್ಣುರು ಎಂಬುವವರು ಬರೆದ ಹೌಡಿ ಉತ್ತರ ಕರ್ನಾಟಕ ಪದ್ಯ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಹಾಗಾಗಿ ಅದನ್ನು ಇಲ್ಲಿ ಯಥಾವತ್ತಾಗಿ ಪ್ರಕಟಿಸುತ್ತಿದ್ದೇವೆ.

‘ಹೌಡಿ’ ಉತ್ತರ ಕರ್ನಾಟಕ..?
———-
Everything is (not fine) pain…!

ನಮ್ಮ ದೊರೆ
ದೂರದ ಅಮೆರಿಕದಲ್ಲಿ ಬಿದ್ದ
‘ಹೂವಿನ ಕಡ್ಡಿ’ ಎತ್ತಿಡುತ್ತಾರೆ..
ಆದರೆ,
25 ‘ಕಮಲ’ದ ಹೂಗಳನ್ನು
ಕೂಟ್ಟ ಕರ್ನಾಟಕದಲ್ಲಿ,
ನೆರೆಯಿಂದ ಬಿದ್ದ
ಸಂತ್ರಸ್ತರ ಮನೆಯ ‘ಗಳ’
ಎತ್ತಿಡಲು ಬರಲಿಲ್ಲ…
ಹಾಗಾಗಿ,
ಇಲ್ಲಿಯಾವುದೂಚೆನ್ನಾಗಿಲ್ಲ….

ಪರಿಹಾರ ‌ಕೊಡಿ ಅಂತಾ
ಅಂಗಲಾಚಿದರೂ
ಸಮೀಕ್ಷೆ ‌ನಡೆಸಿ ಸುಮ್ಮನಾದರೇ
ಹೊರತು ಶಾ”ಸಕರು ಬಿಡಿಗಾಸು ತರಲಿಲ್ಲ
ಹಾಗಾಗಿ,
ಇಲ್ಲಿಯಾವುದೂಚೆನ್ನಾಗಿಲ್ಲ….

‘ಬಂಡೆ’ಗೆ ಕಷ್ಟ ‘ಬಂಧಿ’ತೆಂದು
ಬೀದಿಗಿಳಿದವರು, ಊರು-ಸೂರು
ಕಳೆದುಕೊಂಡು ಬೀದಿಗೆ ಬಂದ
ನಮ್ಮವರ‌ ರಕ್ಷಿಸಲು ‘ಕೈ’
ಜೋಡಿಸಲಿಲ್ಲ..
ಹಾಗಾಗಿ,
ಇಲ್ಲಿ ಯಾವುದೂ ಚೆನ್ನಾಗಿಲ್ಲ….

ಅಧಿಕಾರ ಹೋಯಿತೆಂದು
ಕಣ್ಣೀರಿಡುತ್ತಿದ್ದಾರೆಯೇ
ಹೊರತು, ನೆರೆ ಸಂತ್ರಸ್ತರ
ದಳ”ಮಳ‌ ಅರ್ಥ ವಾಗುತ್ತಿಲ್ಲ…
ಹಾಗಾಗಿ,
ಇಲ್ಲಿ ಯಾವುದೂ ಚೆನ್ನಾಗಿಲ್ಲ….

“ಹೌಡಿ” ಎನ್ನಬೇಡಿ
ಉತ್ತರ ಕರ್ನಾಟಕದ ಸ್ಥಿತಿ
“ರಾಡಿ”ಯಾಗಿದೆ…
– ಶಿವು ನುಣ್ಣೂರು
(No politics plz…)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಚೆನ್ನಾಗಿದೆ ಕವನ, ಇದು ತಲುಪಬೇಕಾದ ಜನರಿಗೆ ತಲುಪಿದರೂ ತಲುಪಿಲ್ಲವೆಂದು ನಟಿಸುತ್ತಾರೆ, ಏನು ಮಾಡೋದು.

  2. ” ಮನೆಗೆ ಮಾರಿ ಪರರಿಗೆ ಉಪಕಾರಿ” ಎಂಬ ನಾಣ್ಣುಡಿಯಂತೆ ಮೋದಿಯವರು.ಕಾರ್ಪೊರೇಟ್ ಖದೀಮರಿಗೆ ತೆರಿಗೆ ವಿನಾಯಿತಿ ಕೊಡುವವರಿಗೆ ನಿಮ್ಮ ಸಂಕಟ ಎಲ್ಲಿ ಅರ್ಥವಾಗುತ್ತದೆ?

LEAVE A REPLY

Please enter your comment!
Please enter your name here

- Advertisment -

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....