Homeಅಂತರಾಷ್ಟ್ರೀಯನರೇಂದ್ರ ಮೋದಿಯವರ 'ಹೌಡಿ ಮೋದಿ' ಗೆ ರಾಹುಲ್ ಗಾಂಧಿಯ 'ಹೌಡಿ ಎಕಾನಮಿ' ತಿರುಗೇಟು..

ನರೇಂದ್ರ ಮೋದಿಯವರ ‘ಹೌಡಿ ಮೋದಿ’ ಗೆ ರಾಹುಲ್ ಗಾಂಧಿಯ ‘ಹೌಡಿ ಎಕಾನಮಿ’ ತಿರುಗೇಟು..

- Advertisement -
- Advertisement -

ನಿನ್ನೆ ಬೆಳಿಗ್ಗೆ ಟ್ವಿಟ್ಟರ್ ನಲ್ಲಿ ಹೌಡಿ ಮೋದಿ ಹ್ಯಾಷ್ ಟ್ಯಾಗ್ ಟ್ರೆಂಡ್ ಆಗಿತ್ತು. ‘ಹೌಡಿ ಮೋದಿ’ ಹೆಸರಿನಲ್ಲಿ ದೊಡ್ಡ ಕಾರ್ಯಕ್ರಮವೊಂದು ಸೆಪ್ಟಂಬರ್ 22 ರಂದು ಅಮೆರಿಕದ ಹ್ಯೂಸ್ಟನ್ ನಗರದಲ್ಲಿ ನಡೆಯಲಿದ್ದು ಅಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿಯವರು ಅನಿವಾಸಿ ಭಾರತೀಯರನ್ನುದ್ದೇಶಿಸಿ ಮಾತನಾಡಲಿದ್ದಾರೆ. ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ರವರು ಸಹ ಅತಿಥಿಗಳಾಗಿ ಭಾಗವಹಿಸಲಿದ್ದು ಸಾಕಷ್ಟು ಪ್ರಚಾರ ಪಡೆದಿತ್ತು.

ಒಂದು ಕಾಲದಲ್ಲಿ ಗುಜರಾತ್ ನರಮೇಧಕ್ಕೆ ಕಾರಣಕ್ಕೆ ನರೇಂದ್ರ ಮೋದಿಯವರಿಗೆ ಅಮೆರಿಕಾ ವೀಸಾ ನಿರಾಕರಿಸಿತ್ತು. ಅಂತಹ ಅಮೆರಿಕವೇ ಇಂದು ನರೇಂದ್ರ ಮೋದಿಯವರನ್ನು ಸ್ವಾಗತಿಸಿ ಕಾರ್ಯಕ್ರಮ ನಡೆಸುತ್ತಿದ್ದರಿಂದ ಸಹಜವಾಗಿ ಮೋದಿ ಅಭಿಮಾನಿಗಳಲ್ಲಿ ಉತ್ಸಾಹ ತಾರಕಕ್ಕೇರಿ ಟ್ವಿಟ್ಟರ್ ನಲ್ಲಿ ಹೌಡಿ ಮೋದಿ ಟ್ರೆಂಡ್ ಮಾಡಿದ್ದರು.

ಹೌಡಿ ಮೋದಿ ಎಂದರೆ, ಹೇಗಿದ್ದೀರಿ ಮೋದಿ? ಹೌದಾ ಮೋದಿ ಎಂಬರ್ಥ ಬರುತ್ತದೆ. ಆ ಹೆಸರಿನ ಕಾರ್ಯಕ್ರಮಕ್ಕೆ ರಂಗ ಸಜ್ಜಾಗಿದ್ದು ಸುಮಾರು 50 ಸಾವಿರ ಭಾರತೀಯರು ಭಾಗವಹಿಸುತ್ತಾರೆ ಎಂದು ಎಲ್ಲಾ ಮಾಧ್ಯಮಗಳು ವರದಿ ಮಾಡಿವೆ.

ಆದರೆ ಮೊನ್ನೆ ನರೇಂದ್ರಮೋದಿಯವರ ಜನ್ಮದಿನಕ್ಕೆ ಶುಭಕೋರಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಿನ್ನೆ ಮೋದಿಯವರ ಈ ಹೌಡಿ ಮೋದಿ ಕಾರ್ಯಕ್ರಮವನ್ನು ಟೀಕಿಸಿ ಹೌಡಿ ಎಕಾನಮಿ ಎಂದು ಟ್ವೀಟ್ ಮಾಡಿದ್ದರು. ಹೌಡಿ ಎಕಾನಮಿ ಡೂಯಿಂಗ್ ಮಿಸ್ಟರ್ ಮೋದಿ ಅಂದರೆ ಕುಸಿದಿರುವ ಆರ್ಥಿಕತೆ ಬಗ್ಗೆ ಏನು ಹೇಳುತ್ತೀರಿ ಮೋದಿ? ಎಂದು ಪ್ರಶ್ನಸಿದ್ದರೆ. ಅದಕ್ಕೆ ತಾವೇ ಉತ್ತರವನ್ನು ಸಹ ಕೊಟ್ಟು ‘ನೋಡಿದರೆ ಇದು ತುಂಬಾ ಒಳ್ಳೆಯದು ಅಲ್ಲ ಅನ್ನಿಸುತ್ತಿದೆ’ ಎಂದಿದ್ದರು. ಆ ಮೂಲಕ ಈ ರೀತಿಯ ದೊಡ್ಡ ಆಡಂಬರದ ಕಾರ್ಯಕ್ರಮಗಳನ್ನು ಮಾಡುವ ಮೂಲಕ ದೇಶದ ಆರ್ಥಿಕ ಬಿಕ್ಕಟ್ಟನ್ನು ಮರೆಮಾಚಲು ಸಾಧ್ಯವಿಲ್ಲ ಎಂದು ಟೀಕಿಸಿದ್ದಾರೆ.

ಮುಂದುವರಿದು ಬ್ಲೂಮ್ ಬರ್ಗ್ ನ ಆರ್ಥಿಕ ವರದಿಯೊಂದನ್ನು ಲಗತ್ತಿಸಿದ್ದಾರೆ. ಅದರಲ್ಲಿ ಕಳೆದ ಜೂನ್ ತಿಂಗಳಿನಿಂದ 4.5 ಬಿಲಿಯನ್ ಡಾಲರ್ ಭಾರತೀಯ ಷೇರುಗಳನ್ನು ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಮಾರಲಾಗಿದೆ. ಇದಕ್ಕೆ ಕುಸಿಯುತ್ತಿರುವ ಭಾರತೀಯ ಆರ್ಥಿಕತೆಯ ಭಯವೇ ಕಾರಣವಾಗಿದೆ ಎಂದು ವರದಿ ಮಾಡಿದೆ.

ರಾಹುಲ್ ಸಹೋದರಿ ಪ್ರಿಯಾಂಕಾ ಗಾಂಧಿ ಕೂಡ ಸರ್ಕಾರದ ಮೇಲೆ ವಾಗ್ದಾಳಿ ನಡೆಸಿದ್ದು, ಹೂಡಿಕೆದಾರರ ವಿಶ್ವಾಸವು ಅಲುಗಾಡಿದೆ ಆದರೆ ಮೋದಿ ಸರ್ಕಾರ ಸತ್ಯವನ್ನು ಒಪ್ಪಿಕೊಳ್ಳಲು ನಿರಾಕರಿಸುತ್ತಿದೆ ಎಂದಿದ್ದಾರೆ.

“ಭಾರತದ ಆರ್ಥಿಕತೆಯನ್ನು ‘5 ಟ್ರಿಲಿಯನ್’ ಡಾಲರ್ ಗೆ ಏರಿಸುತ್ತೇವೆ ಎಂದು ಪ್ರತಿದಿನ ಹೇಳುವ ಮೂಲಕ ಅಥವಾ ಮಾಧ್ಯಮಗಳ ಮುಖಪುಟದಲ್ಲಿ ಬರುವಂತೆ ಮಾಡುವ ಮೂಲಕ ಆರ್ಥಿಕತೆಯನ್ನು ಸರಿಪಡಿಸಲು ಬರುವುದಿಲ್ಲ. ಹಾಗೆಯೇ ವಿದೇಶದಲ್ಲಿ ದೊಡ್ಡ ಈವೆಂಟ್‌ಗಳನ್ನು ಪ್ರಾಯೋಜಿಸುವುದರಿಂದ ಭಾರತಕ್ಕೆ ಹೂಡಿಕೆದಾರರು ಬರುವುದಿಲ್ಲ” ಎಂದು ಪ್ರಿಯಾಂಕಾ ಗಾಂಧಿ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.

ಒಂದು ಕಡೆ ಮೋದಿ ಸರ್ಕಾರ ಆರ್ಥಿಕ ಸೂಚಕಗಳ ಮಧ್ಯೆ ಎಲ್ಲವೂ ಸರಿಯಿಂದೆ ಎಂದು ತೋರಿಸಲು ಪ್ರಯತ್ನಿಸಿದರೆ, ಇನ್ನೊಂದು ಕಡೆ ಆರ್ಥಿಕ ಹಿಂಜರಿತದ ಬಗ್ಗೆ ಕಾಂಗ್ರೆಸ್ ಮೋದಿ ಸರ್ಕಾರದ ವಿರುದ್ಧ ತನ್ನ ಆಕ್ರಮಣವನ್ನು ಮುಂದುವರಿಸಿದೆ.

ಕಾಂಗ್ರೆಸ್ ನಾಯಕರು ಉಲ್ಲೇಖಿಸಿರುವ ಬ್ಲೂಮ್‌ಬರ್ಗ್ ವರದಿಯಲ್ಲಿ, “ನರೇಂದ್ರ ಮೋದಿ ಪ್ರಧಾನಿಯಾಗುವ ಒಂದು ವರ್ಷದ ಮೊದಲು, 2013 ರ ಆರಂಭದಿಂದ ದೇಶದ ಆರ್ಥಿಕ ಬೆಳವಣಿಗೆಯು ಐದು ತ್ರೈಮಾಸಿಕಗಳವರೆಗೆ ದುರ್ಬಲ ಮಟ್ಟಕ್ಕೆ ಇಳಿದಿದೆ. ಮತ್ತು ಎರಡನೇ ತ್ರೈಮಾಸಿಕದಲ್ಲಿ ಶೇ5ರಷ್ಟು ನಿಧಾನಗತಿಯ ಬೆಳವಣಿಗೆಯು ಎಷ್ಟು ನೋವಿನಿಂದ ಕೂಡಿದೆ ಎಂಬುದನ್ನು ಅರ್ಥಮಾಡಿಕೊಳ್ಳಿ. ಕಾರುಗಳ ಮಾರಾಟವು ದಾಖಲೆಯ ವೇಗದಲ್ಲಿ ಮುಳುಗುತ್ತಿದೆ. ಬಂಡವಾಳ ಹೂಡಿಕೆ ಕುಸಿದಿದೆ. ನಿರುದ್ಯೋಗ ದರವು 45 ವರ್ಷಗಳಲ್ಲಿಯೇ ಗರಿಷ್ಠ ಮಟ್ಟಕ್ಕೆ ಏರಿದೆ ಮತ್ತು ರಾಷ್ಟ್ರದ ಬ್ಯಾಂಕಿಂಗ್ ವ್ಯವಸ್ಥೆಯು ಕೆಟ್ಟ ಪರಿಸ್ಥಿತಿಯಲ್ಲಿದೆ. ಸೋಮವಾರದ ತೈಲ ಬೆಲೆ ಏರಿಕೆಯು ಮತ್ತೊಂದು ಹೊಡೆತ ನೀಡಲಿದೆ ಎಂಬ ವಿವರಗಳಿವೆ.

ಹಾಗಾಗಿ ನಿನ್ನೆವರೆಗೂ ಹೌಡಿ ಮೋದಿ ಟ್ರೆಂಡ್ ಮಾಡಿದ್ದರೆ, ಅದಕ್ಕೆ ವಿರುದ್ಧವಾಗಿ ಹೌಡಿ ಎಕಾನಮಿ ಸಹ ಟ್ರೆಂಡ್ ಆಗಲಿಕ್ಕೆ ಶುರುವಾಗಿದೆ. ಈ ಟ್ವಿಟ್ಟರ್ ವಾರ್ ಸೆಪ್ಟಂಬರ್ 22ರವರೆಗೂ ಮುಂದುವರೆಯಲಿದೆ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...