Homeಅಂತರಾಷ್ಟ್ರೀಯನರೇಂದ್ರ ಮೋದಿಯವರ 'ಹೌಡಿ ಮೋದಿ' ಗೆ ರಾಹುಲ್ ಗಾಂಧಿಯ 'ಹೌಡಿ ಎಕಾನಮಿ' ತಿರುಗೇಟು..

ನರೇಂದ್ರ ಮೋದಿಯವರ ‘ಹೌಡಿ ಮೋದಿ’ ಗೆ ರಾಹುಲ್ ಗಾಂಧಿಯ ‘ಹೌಡಿ ಎಕಾನಮಿ’ ತಿರುಗೇಟು..

- Advertisement -
- Advertisement -

ನಿನ್ನೆ ಬೆಳಿಗ್ಗೆ ಟ್ವಿಟ್ಟರ್ ನಲ್ಲಿ ಹೌಡಿ ಮೋದಿ ಹ್ಯಾಷ್ ಟ್ಯಾಗ್ ಟ್ರೆಂಡ್ ಆಗಿತ್ತು. ‘ಹೌಡಿ ಮೋದಿ’ ಹೆಸರಿನಲ್ಲಿ ದೊಡ್ಡ ಕಾರ್ಯಕ್ರಮವೊಂದು ಸೆಪ್ಟಂಬರ್ 22 ರಂದು ಅಮೆರಿಕದ ಹ್ಯೂಸ್ಟನ್ ನಗರದಲ್ಲಿ ನಡೆಯಲಿದ್ದು ಅಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿಯವರು ಅನಿವಾಸಿ ಭಾರತೀಯರನ್ನುದ್ದೇಶಿಸಿ ಮಾತನಾಡಲಿದ್ದಾರೆ. ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ರವರು ಸಹ ಅತಿಥಿಗಳಾಗಿ ಭಾಗವಹಿಸಲಿದ್ದು ಸಾಕಷ್ಟು ಪ್ರಚಾರ ಪಡೆದಿತ್ತು.

ಒಂದು ಕಾಲದಲ್ಲಿ ಗುಜರಾತ್ ನರಮೇಧಕ್ಕೆ ಕಾರಣಕ್ಕೆ ನರೇಂದ್ರ ಮೋದಿಯವರಿಗೆ ಅಮೆರಿಕಾ ವೀಸಾ ನಿರಾಕರಿಸಿತ್ತು. ಅಂತಹ ಅಮೆರಿಕವೇ ಇಂದು ನರೇಂದ್ರ ಮೋದಿಯವರನ್ನು ಸ್ವಾಗತಿಸಿ ಕಾರ್ಯಕ್ರಮ ನಡೆಸುತ್ತಿದ್ದರಿಂದ ಸಹಜವಾಗಿ ಮೋದಿ ಅಭಿಮಾನಿಗಳಲ್ಲಿ ಉತ್ಸಾಹ ತಾರಕಕ್ಕೇರಿ ಟ್ವಿಟ್ಟರ್ ನಲ್ಲಿ ಹೌಡಿ ಮೋದಿ ಟ್ರೆಂಡ್ ಮಾಡಿದ್ದರು.

ಹೌಡಿ ಮೋದಿ ಎಂದರೆ, ಹೇಗಿದ್ದೀರಿ ಮೋದಿ? ಹೌದಾ ಮೋದಿ ಎಂಬರ್ಥ ಬರುತ್ತದೆ. ಆ ಹೆಸರಿನ ಕಾರ್ಯಕ್ರಮಕ್ಕೆ ರಂಗ ಸಜ್ಜಾಗಿದ್ದು ಸುಮಾರು 50 ಸಾವಿರ ಭಾರತೀಯರು ಭಾಗವಹಿಸುತ್ತಾರೆ ಎಂದು ಎಲ್ಲಾ ಮಾಧ್ಯಮಗಳು ವರದಿ ಮಾಡಿವೆ.

ಆದರೆ ಮೊನ್ನೆ ನರೇಂದ್ರಮೋದಿಯವರ ಜನ್ಮದಿನಕ್ಕೆ ಶುಭಕೋರಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಿನ್ನೆ ಮೋದಿಯವರ ಈ ಹೌಡಿ ಮೋದಿ ಕಾರ್ಯಕ್ರಮವನ್ನು ಟೀಕಿಸಿ ಹೌಡಿ ಎಕಾನಮಿ ಎಂದು ಟ್ವೀಟ್ ಮಾಡಿದ್ದರು. ಹೌಡಿ ಎಕಾನಮಿ ಡೂಯಿಂಗ್ ಮಿಸ್ಟರ್ ಮೋದಿ ಅಂದರೆ ಕುಸಿದಿರುವ ಆರ್ಥಿಕತೆ ಬಗ್ಗೆ ಏನು ಹೇಳುತ್ತೀರಿ ಮೋದಿ? ಎಂದು ಪ್ರಶ್ನಸಿದ್ದರೆ. ಅದಕ್ಕೆ ತಾವೇ ಉತ್ತರವನ್ನು ಸಹ ಕೊಟ್ಟು ‘ನೋಡಿದರೆ ಇದು ತುಂಬಾ ಒಳ್ಳೆಯದು ಅಲ್ಲ ಅನ್ನಿಸುತ್ತಿದೆ’ ಎಂದಿದ್ದರು. ಆ ಮೂಲಕ ಈ ರೀತಿಯ ದೊಡ್ಡ ಆಡಂಬರದ ಕಾರ್ಯಕ್ರಮಗಳನ್ನು ಮಾಡುವ ಮೂಲಕ ದೇಶದ ಆರ್ಥಿಕ ಬಿಕ್ಕಟ್ಟನ್ನು ಮರೆಮಾಚಲು ಸಾಧ್ಯವಿಲ್ಲ ಎಂದು ಟೀಕಿಸಿದ್ದಾರೆ.

ಮುಂದುವರಿದು ಬ್ಲೂಮ್ ಬರ್ಗ್ ನ ಆರ್ಥಿಕ ವರದಿಯೊಂದನ್ನು ಲಗತ್ತಿಸಿದ್ದಾರೆ. ಅದರಲ್ಲಿ ಕಳೆದ ಜೂನ್ ತಿಂಗಳಿನಿಂದ 4.5 ಬಿಲಿಯನ್ ಡಾಲರ್ ಭಾರತೀಯ ಷೇರುಗಳನ್ನು ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಮಾರಲಾಗಿದೆ. ಇದಕ್ಕೆ ಕುಸಿಯುತ್ತಿರುವ ಭಾರತೀಯ ಆರ್ಥಿಕತೆಯ ಭಯವೇ ಕಾರಣವಾಗಿದೆ ಎಂದು ವರದಿ ಮಾಡಿದೆ.

ರಾಹುಲ್ ಸಹೋದರಿ ಪ್ರಿಯಾಂಕಾ ಗಾಂಧಿ ಕೂಡ ಸರ್ಕಾರದ ಮೇಲೆ ವಾಗ್ದಾಳಿ ನಡೆಸಿದ್ದು, ಹೂಡಿಕೆದಾರರ ವಿಶ್ವಾಸವು ಅಲುಗಾಡಿದೆ ಆದರೆ ಮೋದಿ ಸರ್ಕಾರ ಸತ್ಯವನ್ನು ಒಪ್ಪಿಕೊಳ್ಳಲು ನಿರಾಕರಿಸುತ್ತಿದೆ ಎಂದಿದ್ದಾರೆ.

“ಭಾರತದ ಆರ್ಥಿಕತೆಯನ್ನು ‘5 ಟ್ರಿಲಿಯನ್’ ಡಾಲರ್ ಗೆ ಏರಿಸುತ್ತೇವೆ ಎಂದು ಪ್ರತಿದಿನ ಹೇಳುವ ಮೂಲಕ ಅಥವಾ ಮಾಧ್ಯಮಗಳ ಮುಖಪುಟದಲ್ಲಿ ಬರುವಂತೆ ಮಾಡುವ ಮೂಲಕ ಆರ್ಥಿಕತೆಯನ್ನು ಸರಿಪಡಿಸಲು ಬರುವುದಿಲ್ಲ. ಹಾಗೆಯೇ ವಿದೇಶದಲ್ಲಿ ದೊಡ್ಡ ಈವೆಂಟ್‌ಗಳನ್ನು ಪ್ರಾಯೋಜಿಸುವುದರಿಂದ ಭಾರತಕ್ಕೆ ಹೂಡಿಕೆದಾರರು ಬರುವುದಿಲ್ಲ” ಎಂದು ಪ್ರಿಯಾಂಕಾ ಗಾಂಧಿ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.

ಒಂದು ಕಡೆ ಮೋದಿ ಸರ್ಕಾರ ಆರ್ಥಿಕ ಸೂಚಕಗಳ ಮಧ್ಯೆ ಎಲ್ಲವೂ ಸರಿಯಿಂದೆ ಎಂದು ತೋರಿಸಲು ಪ್ರಯತ್ನಿಸಿದರೆ, ಇನ್ನೊಂದು ಕಡೆ ಆರ್ಥಿಕ ಹಿಂಜರಿತದ ಬಗ್ಗೆ ಕಾಂಗ್ರೆಸ್ ಮೋದಿ ಸರ್ಕಾರದ ವಿರುದ್ಧ ತನ್ನ ಆಕ್ರಮಣವನ್ನು ಮುಂದುವರಿಸಿದೆ.

ಕಾಂಗ್ರೆಸ್ ನಾಯಕರು ಉಲ್ಲೇಖಿಸಿರುವ ಬ್ಲೂಮ್‌ಬರ್ಗ್ ವರದಿಯಲ್ಲಿ, “ನರೇಂದ್ರ ಮೋದಿ ಪ್ರಧಾನಿಯಾಗುವ ಒಂದು ವರ್ಷದ ಮೊದಲು, 2013 ರ ಆರಂಭದಿಂದ ದೇಶದ ಆರ್ಥಿಕ ಬೆಳವಣಿಗೆಯು ಐದು ತ್ರೈಮಾಸಿಕಗಳವರೆಗೆ ದುರ್ಬಲ ಮಟ್ಟಕ್ಕೆ ಇಳಿದಿದೆ. ಮತ್ತು ಎರಡನೇ ತ್ರೈಮಾಸಿಕದಲ್ಲಿ ಶೇ5ರಷ್ಟು ನಿಧಾನಗತಿಯ ಬೆಳವಣಿಗೆಯು ಎಷ್ಟು ನೋವಿನಿಂದ ಕೂಡಿದೆ ಎಂಬುದನ್ನು ಅರ್ಥಮಾಡಿಕೊಳ್ಳಿ. ಕಾರುಗಳ ಮಾರಾಟವು ದಾಖಲೆಯ ವೇಗದಲ್ಲಿ ಮುಳುಗುತ್ತಿದೆ. ಬಂಡವಾಳ ಹೂಡಿಕೆ ಕುಸಿದಿದೆ. ನಿರುದ್ಯೋಗ ದರವು 45 ವರ್ಷಗಳಲ್ಲಿಯೇ ಗರಿಷ್ಠ ಮಟ್ಟಕ್ಕೆ ಏರಿದೆ ಮತ್ತು ರಾಷ್ಟ್ರದ ಬ್ಯಾಂಕಿಂಗ್ ವ್ಯವಸ್ಥೆಯು ಕೆಟ್ಟ ಪರಿಸ್ಥಿತಿಯಲ್ಲಿದೆ. ಸೋಮವಾರದ ತೈಲ ಬೆಲೆ ಏರಿಕೆಯು ಮತ್ತೊಂದು ಹೊಡೆತ ನೀಡಲಿದೆ ಎಂಬ ವಿವರಗಳಿವೆ.

ಹಾಗಾಗಿ ನಿನ್ನೆವರೆಗೂ ಹೌಡಿ ಮೋದಿ ಟ್ರೆಂಡ್ ಮಾಡಿದ್ದರೆ, ಅದಕ್ಕೆ ವಿರುದ್ಧವಾಗಿ ಹೌಡಿ ಎಕಾನಮಿ ಸಹ ಟ್ರೆಂಡ್ ಆಗಲಿಕ್ಕೆ ಶುರುವಾಗಿದೆ. ಈ ಟ್ವಿಟ್ಟರ್ ವಾರ್ ಸೆಪ್ಟಂಬರ್ 22ರವರೆಗೂ ಮುಂದುವರೆಯಲಿದೆ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...