Homeಅಂತರಾಷ್ಟ್ರೀಯನರೇಂದ್ರ ಮೋದಿಯವರ 'ಹೌಡಿ ಮೋದಿ' ಗೆ ರಾಹುಲ್ ಗಾಂಧಿಯ 'ಹೌಡಿ ಎಕಾನಮಿ' ತಿರುಗೇಟು..

ನರೇಂದ್ರ ಮೋದಿಯವರ ‘ಹೌಡಿ ಮೋದಿ’ ಗೆ ರಾಹುಲ್ ಗಾಂಧಿಯ ‘ಹೌಡಿ ಎಕಾನಮಿ’ ತಿರುಗೇಟು..

- Advertisement -
- Advertisement -

ನಿನ್ನೆ ಬೆಳಿಗ್ಗೆ ಟ್ವಿಟ್ಟರ್ ನಲ್ಲಿ ಹೌಡಿ ಮೋದಿ ಹ್ಯಾಷ್ ಟ್ಯಾಗ್ ಟ್ರೆಂಡ್ ಆಗಿತ್ತು. ‘ಹೌಡಿ ಮೋದಿ’ ಹೆಸರಿನಲ್ಲಿ ದೊಡ್ಡ ಕಾರ್ಯಕ್ರಮವೊಂದು ಸೆಪ್ಟಂಬರ್ 22 ರಂದು ಅಮೆರಿಕದ ಹ್ಯೂಸ್ಟನ್ ನಗರದಲ್ಲಿ ನಡೆಯಲಿದ್ದು ಅಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿಯವರು ಅನಿವಾಸಿ ಭಾರತೀಯರನ್ನುದ್ದೇಶಿಸಿ ಮಾತನಾಡಲಿದ್ದಾರೆ. ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ರವರು ಸಹ ಅತಿಥಿಗಳಾಗಿ ಭಾಗವಹಿಸಲಿದ್ದು ಸಾಕಷ್ಟು ಪ್ರಚಾರ ಪಡೆದಿತ್ತು.

ಒಂದು ಕಾಲದಲ್ಲಿ ಗುಜರಾತ್ ನರಮೇಧಕ್ಕೆ ಕಾರಣಕ್ಕೆ ನರೇಂದ್ರ ಮೋದಿಯವರಿಗೆ ಅಮೆರಿಕಾ ವೀಸಾ ನಿರಾಕರಿಸಿತ್ತು. ಅಂತಹ ಅಮೆರಿಕವೇ ಇಂದು ನರೇಂದ್ರ ಮೋದಿಯವರನ್ನು ಸ್ವಾಗತಿಸಿ ಕಾರ್ಯಕ್ರಮ ನಡೆಸುತ್ತಿದ್ದರಿಂದ ಸಹಜವಾಗಿ ಮೋದಿ ಅಭಿಮಾನಿಗಳಲ್ಲಿ ಉತ್ಸಾಹ ತಾರಕಕ್ಕೇರಿ ಟ್ವಿಟ್ಟರ್ ನಲ್ಲಿ ಹೌಡಿ ಮೋದಿ ಟ್ರೆಂಡ್ ಮಾಡಿದ್ದರು.

ಹೌಡಿ ಮೋದಿ ಎಂದರೆ, ಹೇಗಿದ್ದೀರಿ ಮೋದಿ? ಹೌದಾ ಮೋದಿ ಎಂಬರ್ಥ ಬರುತ್ತದೆ. ಆ ಹೆಸರಿನ ಕಾರ್ಯಕ್ರಮಕ್ಕೆ ರಂಗ ಸಜ್ಜಾಗಿದ್ದು ಸುಮಾರು 50 ಸಾವಿರ ಭಾರತೀಯರು ಭಾಗವಹಿಸುತ್ತಾರೆ ಎಂದು ಎಲ್ಲಾ ಮಾಧ್ಯಮಗಳು ವರದಿ ಮಾಡಿವೆ.

ಆದರೆ ಮೊನ್ನೆ ನರೇಂದ್ರಮೋದಿಯವರ ಜನ್ಮದಿನಕ್ಕೆ ಶುಭಕೋರಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಿನ್ನೆ ಮೋದಿಯವರ ಈ ಹೌಡಿ ಮೋದಿ ಕಾರ್ಯಕ್ರಮವನ್ನು ಟೀಕಿಸಿ ಹೌಡಿ ಎಕಾನಮಿ ಎಂದು ಟ್ವೀಟ್ ಮಾಡಿದ್ದರು. ಹೌಡಿ ಎಕಾನಮಿ ಡೂಯಿಂಗ್ ಮಿಸ್ಟರ್ ಮೋದಿ ಅಂದರೆ ಕುಸಿದಿರುವ ಆರ್ಥಿಕತೆ ಬಗ್ಗೆ ಏನು ಹೇಳುತ್ತೀರಿ ಮೋದಿ? ಎಂದು ಪ್ರಶ್ನಸಿದ್ದರೆ. ಅದಕ್ಕೆ ತಾವೇ ಉತ್ತರವನ್ನು ಸಹ ಕೊಟ್ಟು ‘ನೋಡಿದರೆ ಇದು ತುಂಬಾ ಒಳ್ಳೆಯದು ಅಲ್ಲ ಅನ್ನಿಸುತ್ತಿದೆ’ ಎಂದಿದ್ದರು. ಆ ಮೂಲಕ ಈ ರೀತಿಯ ದೊಡ್ಡ ಆಡಂಬರದ ಕಾರ್ಯಕ್ರಮಗಳನ್ನು ಮಾಡುವ ಮೂಲಕ ದೇಶದ ಆರ್ಥಿಕ ಬಿಕ್ಕಟ್ಟನ್ನು ಮರೆಮಾಚಲು ಸಾಧ್ಯವಿಲ್ಲ ಎಂದು ಟೀಕಿಸಿದ್ದಾರೆ.

ಮುಂದುವರಿದು ಬ್ಲೂಮ್ ಬರ್ಗ್ ನ ಆರ್ಥಿಕ ವರದಿಯೊಂದನ್ನು ಲಗತ್ತಿಸಿದ್ದಾರೆ. ಅದರಲ್ಲಿ ಕಳೆದ ಜೂನ್ ತಿಂಗಳಿನಿಂದ 4.5 ಬಿಲಿಯನ್ ಡಾಲರ್ ಭಾರತೀಯ ಷೇರುಗಳನ್ನು ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಮಾರಲಾಗಿದೆ. ಇದಕ್ಕೆ ಕುಸಿಯುತ್ತಿರುವ ಭಾರತೀಯ ಆರ್ಥಿಕತೆಯ ಭಯವೇ ಕಾರಣವಾಗಿದೆ ಎಂದು ವರದಿ ಮಾಡಿದೆ.

ರಾಹುಲ್ ಸಹೋದರಿ ಪ್ರಿಯಾಂಕಾ ಗಾಂಧಿ ಕೂಡ ಸರ್ಕಾರದ ಮೇಲೆ ವಾಗ್ದಾಳಿ ನಡೆಸಿದ್ದು, ಹೂಡಿಕೆದಾರರ ವಿಶ್ವಾಸವು ಅಲುಗಾಡಿದೆ ಆದರೆ ಮೋದಿ ಸರ್ಕಾರ ಸತ್ಯವನ್ನು ಒಪ್ಪಿಕೊಳ್ಳಲು ನಿರಾಕರಿಸುತ್ತಿದೆ ಎಂದಿದ್ದಾರೆ.

“ಭಾರತದ ಆರ್ಥಿಕತೆಯನ್ನು ‘5 ಟ್ರಿಲಿಯನ್’ ಡಾಲರ್ ಗೆ ಏರಿಸುತ್ತೇವೆ ಎಂದು ಪ್ರತಿದಿನ ಹೇಳುವ ಮೂಲಕ ಅಥವಾ ಮಾಧ್ಯಮಗಳ ಮುಖಪುಟದಲ್ಲಿ ಬರುವಂತೆ ಮಾಡುವ ಮೂಲಕ ಆರ್ಥಿಕತೆಯನ್ನು ಸರಿಪಡಿಸಲು ಬರುವುದಿಲ್ಲ. ಹಾಗೆಯೇ ವಿದೇಶದಲ್ಲಿ ದೊಡ್ಡ ಈವೆಂಟ್‌ಗಳನ್ನು ಪ್ರಾಯೋಜಿಸುವುದರಿಂದ ಭಾರತಕ್ಕೆ ಹೂಡಿಕೆದಾರರು ಬರುವುದಿಲ್ಲ” ಎಂದು ಪ್ರಿಯಾಂಕಾ ಗಾಂಧಿ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.

ಒಂದು ಕಡೆ ಮೋದಿ ಸರ್ಕಾರ ಆರ್ಥಿಕ ಸೂಚಕಗಳ ಮಧ್ಯೆ ಎಲ್ಲವೂ ಸರಿಯಿಂದೆ ಎಂದು ತೋರಿಸಲು ಪ್ರಯತ್ನಿಸಿದರೆ, ಇನ್ನೊಂದು ಕಡೆ ಆರ್ಥಿಕ ಹಿಂಜರಿತದ ಬಗ್ಗೆ ಕಾಂಗ್ರೆಸ್ ಮೋದಿ ಸರ್ಕಾರದ ವಿರುದ್ಧ ತನ್ನ ಆಕ್ರಮಣವನ್ನು ಮುಂದುವರಿಸಿದೆ.

ಕಾಂಗ್ರೆಸ್ ನಾಯಕರು ಉಲ್ಲೇಖಿಸಿರುವ ಬ್ಲೂಮ್‌ಬರ್ಗ್ ವರದಿಯಲ್ಲಿ, “ನರೇಂದ್ರ ಮೋದಿ ಪ್ರಧಾನಿಯಾಗುವ ಒಂದು ವರ್ಷದ ಮೊದಲು, 2013 ರ ಆರಂಭದಿಂದ ದೇಶದ ಆರ್ಥಿಕ ಬೆಳವಣಿಗೆಯು ಐದು ತ್ರೈಮಾಸಿಕಗಳವರೆಗೆ ದುರ್ಬಲ ಮಟ್ಟಕ್ಕೆ ಇಳಿದಿದೆ. ಮತ್ತು ಎರಡನೇ ತ್ರೈಮಾಸಿಕದಲ್ಲಿ ಶೇ5ರಷ್ಟು ನಿಧಾನಗತಿಯ ಬೆಳವಣಿಗೆಯು ಎಷ್ಟು ನೋವಿನಿಂದ ಕೂಡಿದೆ ಎಂಬುದನ್ನು ಅರ್ಥಮಾಡಿಕೊಳ್ಳಿ. ಕಾರುಗಳ ಮಾರಾಟವು ದಾಖಲೆಯ ವೇಗದಲ್ಲಿ ಮುಳುಗುತ್ತಿದೆ. ಬಂಡವಾಳ ಹೂಡಿಕೆ ಕುಸಿದಿದೆ. ನಿರುದ್ಯೋಗ ದರವು 45 ವರ್ಷಗಳಲ್ಲಿಯೇ ಗರಿಷ್ಠ ಮಟ್ಟಕ್ಕೆ ಏರಿದೆ ಮತ್ತು ರಾಷ್ಟ್ರದ ಬ್ಯಾಂಕಿಂಗ್ ವ್ಯವಸ್ಥೆಯು ಕೆಟ್ಟ ಪರಿಸ್ಥಿತಿಯಲ್ಲಿದೆ. ಸೋಮವಾರದ ತೈಲ ಬೆಲೆ ಏರಿಕೆಯು ಮತ್ತೊಂದು ಹೊಡೆತ ನೀಡಲಿದೆ ಎಂಬ ವಿವರಗಳಿವೆ.

ಹಾಗಾಗಿ ನಿನ್ನೆವರೆಗೂ ಹೌಡಿ ಮೋದಿ ಟ್ರೆಂಡ್ ಮಾಡಿದ್ದರೆ, ಅದಕ್ಕೆ ವಿರುದ್ಧವಾಗಿ ಹೌಡಿ ಎಕಾನಮಿ ಸಹ ಟ್ರೆಂಡ್ ಆಗಲಿಕ್ಕೆ ಶುರುವಾಗಿದೆ. ಈ ಟ್ವಿಟ್ಟರ್ ವಾರ್ ಸೆಪ್ಟಂಬರ್ 22ರವರೆಗೂ ಮುಂದುವರೆಯಲಿದೆ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...