Homeಅಂತರಾಷ್ಟ್ರೀಯನರೇಂದ್ರ ಮೋದಿಯವರ 'ಹೌಡಿ ಮೋದಿ' ಗೆ ರಾಹುಲ್ ಗಾಂಧಿಯ 'ಹೌಡಿ ಎಕಾನಮಿ' ತಿರುಗೇಟು..

ನರೇಂದ್ರ ಮೋದಿಯವರ ‘ಹೌಡಿ ಮೋದಿ’ ಗೆ ರಾಹುಲ್ ಗಾಂಧಿಯ ‘ಹೌಡಿ ಎಕಾನಮಿ’ ತಿರುಗೇಟು..

- Advertisement -
- Advertisement -

ನಿನ್ನೆ ಬೆಳಿಗ್ಗೆ ಟ್ವಿಟ್ಟರ್ ನಲ್ಲಿ ಹೌಡಿ ಮೋದಿ ಹ್ಯಾಷ್ ಟ್ಯಾಗ್ ಟ್ರೆಂಡ್ ಆಗಿತ್ತು. ‘ಹೌಡಿ ಮೋದಿ’ ಹೆಸರಿನಲ್ಲಿ ದೊಡ್ಡ ಕಾರ್ಯಕ್ರಮವೊಂದು ಸೆಪ್ಟಂಬರ್ 22 ರಂದು ಅಮೆರಿಕದ ಹ್ಯೂಸ್ಟನ್ ನಗರದಲ್ಲಿ ನಡೆಯಲಿದ್ದು ಅಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿಯವರು ಅನಿವಾಸಿ ಭಾರತೀಯರನ್ನುದ್ದೇಶಿಸಿ ಮಾತನಾಡಲಿದ್ದಾರೆ. ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ರವರು ಸಹ ಅತಿಥಿಗಳಾಗಿ ಭಾಗವಹಿಸಲಿದ್ದು ಸಾಕಷ್ಟು ಪ್ರಚಾರ ಪಡೆದಿತ್ತು.

ಒಂದು ಕಾಲದಲ್ಲಿ ಗುಜರಾತ್ ನರಮೇಧಕ್ಕೆ ಕಾರಣಕ್ಕೆ ನರೇಂದ್ರ ಮೋದಿಯವರಿಗೆ ಅಮೆರಿಕಾ ವೀಸಾ ನಿರಾಕರಿಸಿತ್ತು. ಅಂತಹ ಅಮೆರಿಕವೇ ಇಂದು ನರೇಂದ್ರ ಮೋದಿಯವರನ್ನು ಸ್ವಾಗತಿಸಿ ಕಾರ್ಯಕ್ರಮ ನಡೆಸುತ್ತಿದ್ದರಿಂದ ಸಹಜವಾಗಿ ಮೋದಿ ಅಭಿಮಾನಿಗಳಲ್ಲಿ ಉತ್ಸಾಹ ತಾರಕಕ್ಕೇರಿ ಟ್ವಿಟ್ಟರ್ ನಲ್ಲಿ ಹೌಡಿ ಮೋದಿ ಟ್ರೆಂಡ್ ಮಾಡಿದ್ದರು.

ಹೌಡಿ ಮೋದಿ ಎಂದರೆ, ಹೇಗಿದ್ದೀರಿ ಮೋದಿ? ಹೌದಾ ಮೋದಿ ಎಂಬರ್ಥ ಬರುತ್ತದೆ. ಆ ಹೆಸರಿನ ಕಾರ್ಯಕ್ರಮಕ್ಕೆ ರಂಗ ಸಜ್ಜಾಗಿದ್ದು ಸುಮಾರು 50 ಸಾವಿರ ಭಾರತೀಯರು ಭಾಗವಹಿಸುತ್ತಾರೆ ಎಂದು ಎಲ್ಲಾ ಮಾಧ್ಯಮಗಳು ವರದಿ ಮಾಡಿವೆ.

ಆದರೆ ಮೊನ್ನೆ ನರೇಂದ್ರಮೋದಿಯವರ ಜನ್ಮದಿನಕ್ಕೆ ಶುಭಕೋರಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಿನ್ನೆ ಮೋದಿಯವರ ಈ ಹೌಡಿ ಮೋದಿ ಕಾರ್ಯಕ್ರಮವನ್ನು ಟೀಕಿಸಿ ಹೌಡಿ ಎಕಾನಮಿ ಎಂದು ಟ್ವೀಟ್ ಮಾಡಿದ್ದರು. ಹೌಡಿ ಎಕಾನಮಿ ಡೂಯಿಂಗ್ ಮಿಸ್ಟರ್ ಮೋದಿ ಅಂದರೆ ಕುಸಿದಿರುವ ಆರ್ಥಿಕತೆ ಬಗ್ಗೆ ಏನು ಹೇಳುತ್ತೀರಿ ಮೋದಿ? ಎಂದು ಪ್ರಶ್ನಸಿದ್ದರೆ. ಅದಕ್ಕೆ ತಾವೇ ಉತ್ತರವನ್ನು ಸಹ ಕೊಟ್ಟು ‘ನೋಡಿದರೆ ಇದು ತುಂಬಾ ಒಳ್ಳೆಯದು ಅಲ್ಲ ಅನ್ನಿಸುತ್ತಿದೆ’ ಎಂದಿದ್ದರು. ಆ ಮೂಲಕ ಈ ರೀತಿಯ ದೊಡ್ಡ ಆಡಂಬರದ ಕಾರ್ಯಕ್ರಮಗಳನ್ನು ಮಾಡುವ ಮೂಲಕ ದೇಶದ ಆರ್ಥಿಕ ಬಿಕ್ಕಟ್ಟನ್ನು ಮರೆಮಾಚಲು ಸಾಧ್ಯವಿಲ್ಲ ಎಂದು ಟೀಕಿಸಿದ್ದಾರೆ.

ಮುಂದುವರಿದು ಬ್ಲೂಮ್ ಬರ್ಗ್ ನ ಆರ್ಥಿಕ ವರದಿಯೊಂದನ್ನು ಲಗತ್ತಿಸಿದ್ದಾರೆ. ಅದರಲ್ಲಿ ಕಳೆದ ಜೂನ್ ತಿಂಗಳಿನಿಂದ 4.5 ಬಿಲಿಯನ್ ಡಾಲರ್ ಭಾರತೀಯ ಷೇರುಗಳನ್ನು ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಮಾರಲಾಗಿದೆ. ಇದಕ್ಕೆ ಕುಸಿಯುತ್ತಿರುವ ಭಾರತೀಯ ಆರ್ಥಿಕತೆಯ ಭಯವೇ ಕಾರಣವಾಗಿದೆ ಎಂದು ವರದಿ ಮಾಡಿದೆ.

ರಾಹುಲ್ ಸಹೋದರಿ ಪ್ರಿಯಾಂಕಾ ಗಾಂಧಿ ಕೂಡ ಸರ್ಕಾರದ ಮೇಲೆ ವಾಗ್ದಾಳಿ ನಡೆಸಿದ್ದು, ಹೂಡಿಕೆದಾರರ ವಿಶ್ವಾಸವು ಅಲುಗಾಡಿದೆ ಆದರೆ ಮೋದಿ ಸರ್ಕಾರ ಸತ್ಯವನ್ನು ಒಪ್ಪಿಕೊಳ್ಳಲು ನಿರಾಕರಿಸುತ್ತಿದೆ ಎಂದಿದ್ದಾರೆ.

“ಭಾರತದ ಆರ್ಥಿಕತೆಯನ್ನು ‘5 ಟ್ರಿಲಿಯನ್’ ಡಾಲರ್ ಗೆ ಏರಿಸುತ್ತೇವೆ ಎಂದು ಪ್ರತಿದಿನ ಹೇಳುವ ಮೂಲಕ ಅಥವಾ ಮಾಧ್ಯಮಗಳ ಮುಖಪುಟದಲ್ಲಿ ಬರುವಂತೆ ಮಾಡುವ ಮೂಲಕ ಆರ್ಥಿಕತೆಯನ್ನು ಸರಿಪಡಿಸಲು ಬರುವುದಿಲ್ಲ. ಹಾಗೆಯೇ ವಿದೇಶದಲ್ಲಿ ದೊಡ್ಡ ಈವೆಂಟ್‌ಗಳನ್ನು ಪ್ರಾಯೋಜಿಸುವುದರಿಂದ ಭಾರತಕ್ಕೆ ಹೂಡಿಕೆದಾರರು ಬರುವುದಿಲ್ಲ” ಎಂದು ಪ್ರಿಯಾಂಕಾ ಗಾಂಧಿ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.

ಒಂದು ಕಡೆ ಮೋದಿ ಸರ್ಕಾರ ಆರ್ಥಿಕ ಸೂಚಕಗಳ ಮಧ್ಯೆ ಎಲ್ಲವೂ ಸರಿಯಿಂದೆ ಎಂದು ತೋರಿಸಲು ಪ್ರಯತ್ನಿಸಿದರೆ, ಇನ್ನೊಂದು ಕಡೆ ಆರ್ಥಿಕ ಹಿಂಜರಿತದ ಬಗ್ಗೆ ಕಾಂಗ್ರೆಸ್ ಮೋದಿ ಸರ್ಕಾರದ ವಿರುದ್ಧ ತನ್ನ ಆಕ್ರಮಣವನ್ನು ಮುಂದುವರಿಸಿದೆ.

ಕಾಂಗ್ರೆಸ್ ನಾಯಕರು ಉಲ್ಲೇಖಿಸಿರುವ ಬ್ಲೂಮ್‌ಬರ್ಗ್ ವರದಿಯಲ್ಲಿ, “ನರೇಂದ್ರ ಮೋದಿ ಪ್ರಧಾನಿಯಾಗುವ ಒಂದು ವರ್ಷದ ಮೊದಲು, 2013 ರ ಆರಂಭದಿಂದ ದೇಶದ ಆರ್ಥಿಕ ಬೆಳವಣಿಗೆಯು ಐದು ತ್ರೈಮಾಸಿಕಗಳವರೆಗೆ ದುರ್ಬಲ ಮಟ್ಟಕ್ಕೆ ಇಳಿದಿದೆ. ಮತ್ತು ಎರಡನೇ ತ್ರೈಮಾಸಿಕದಲ್ಲಿ ಶೇ5ರಷ್ಟು ನಿಧಾನಗತಿಯ ಬೆಳವಣಿಗೆಯು ಎಷ್ಟು ನೋವಿನಿಂದ ಕೂಡಿದೆ ಎಂಬುದನ್ನು ಅರ್ಥಮಾಡಿಕೊಳ್ಳಿ. ಕಾರುಗಳ ಮಾರಾಟವು ದಾಖಲೆಯ ವೇಗದಲ್ಲಿ ಮುಳುಗುತ್ತಿದೆ. ಬಂಡವಾಳ ಹೂಡಿಕೆ ಕುಸಿದಿದೆ. ನಿರುದ್ಯೋಗ ದರವು 45 ವರ್ಷಗಳಲ್ಲಿಯೇ ಗರಿಷ್ಠ ಮಟ್ಟಕ್ಕೆ ಏರಿದೆ ಮತ್ತು ರಾಷ್ಟ್ರದ ಬ್ಯಾಂಕಿಂಗ್ ವ್ಯವಸ್ಥೆಯು ಕೆಟ್ಟ ಪರಿಸ್ಥಿತಿಯಲ್ಲಿದೆ. ಸೋಮವಾರದ ತೈಲ ಬೆಲೆ ಏರಿಕೆಯು ಮತ್ತೊಂದು ಹೊಡೆತ ನೀಡಲಿದೆ ಎಂಬ ವಿವರಗಳಿವೆ.

ಹಾಗಾಗಿ ನಿನ್ನೆವರೆಗೂ ಹೌಡಿ ಮೋದಿ ಟ್ರೆಂಡ್ ಮಾಡಿದ್ದರೆ, ಅದಕ್ಕೆ ವಿರುದ್ಧವಾಗಿ ಹೌಡಿ ಎಕಾನಮಿ ಸಹ ಟ್ರೆಂಡ್ ಆಗಲಿಕ್ಕೆ ಶುರುವಾಗಿದೆ. ಈ ಟ್ವಿಟ್ಟರ್ ವಾರ್ ಸೆಪ್ಟಂಬರ್ 22ರವರೆಗೂ ಮುಂದುವರೆಯಲಿದೆ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...