Homeಅಂತರಾಷ್ಟ್ರೀಯನರೇಂದ್ರ ಮೋದಿಯವರ 'ಹೌಡಿ ಮೋದಿ' ಗೆ ರಾಹುಲ್ ಗಾಂಧಿಯ 'ಹೌಡಿ ಎಕಾನಮಿ' ತಿರುಗೇಟು..

ನರೇಂದ್ರ ಮೋದಿಯವರ ‘ಹೌಡಿ ಮೋದಿ’ ಗೆ ರಾಹುಲ್ ಗಾಂಧಿಯ ‘ಹೌಡಿ ಎಕಾನಮಿ’ ತಿರುಗೇಟು..

- Advertisement -
- Advertisement -

ನಿನ್ನೆ ಬೆಳಿಗ್ಗೆ ಟ್ವಿಟ್ಟರ್ ನಲ್ಲಿ ಹೌಡಿ ಮೋದಿ ಹ್ಯಾಷ್ ಟ್ಯಾಗ್ ಟ್ರೆಂಡ್ ಆಗಿತ್ತು. ‘ಹೌಡಿ ಮೋದಿ’ ಹೆಸರಿನಲ್ಲಿ ದೊಡ್ಡ ಕಾರ್ಯಕ್ರಮವೊಂದು ಸೆಪ್ಟಂಬರ್ 22 ರಂದು ಅಮೆರಿಕದ ಹ್ಯೂಸ್ಟನ್ ನಗರದಲ್ಲಿ ನಡೆಯಲಿದ್ದು ಅಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿಯವರು ಅನಿವಾಸಿ ಭಾರತೀಯರನ್ನುದ್ದೇಶಿಸಿ ಮಾತನಾಡಲಿದ್ದಾರೆ. ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ರವರು ಸಹ ಅತಿಥಿಗಳಾಗಿ ಭಾಗವಹಿಸಲಿದ್ದು ಸಾಕಷ್ಟು ಪ್ರಚಾರ ಪಡೆದಿತ್ತು.

ಒಂದು ಕಾಲದಲ್ಲಿ ಗುಜರಾತ್ ನರಮೇಧಕ್ಕೆ ಕಾರಣಕ್ಕೆ ನರೇಂದ್ರ ಮೋದಿಯವರಿಗೆ ಅಮೆರಿಕಾ ವೀಸಾ ನಿರಾಕರಿಸಿತ್ತು. ಅಂತಹ ಅಮೆರಿಕವೇ ಇಂದು ನರೇಂದ್ರ ಮೋದಿಯವರನ್ನು ಸ್ವಾಗತಿಸಿ ಕಾರ್ಯಕ್ರಮ ನಡೆಸುತ್ತಿದ್ದರಿಂದ ಸಹಜವಾಗಿ ಮೋದಿ ಅಭಿಮಾನಿಗಳಲ್ಲಿ ಉತ್ಸಾಹ ತಾರಕಕ್ಕೇರಿ ಟ್ವಿಟ್ಟರ್ ನಲ್ಲಿ ಹೌಡಿ ಮೋದಿ ಟ್ರೆಂಡ್ ಮಾಡಿದ್ದರು.

ಹೌಡಿ ಮೋದಿ ಎಂದರೆ, ಹೇಗಿದ್ದೀರಿ ಮೋದಿ? ಹೌದಾ ಮೋದಿ ಎಂಬರ್ಥ ಬರುತ್ತದೆ. ಆ ಹೆಸರಿನ ಕಾರ್ಯಕ್ರಮಕ್ಕೆ ರಂಗ ಸಜ್ಜಾಗಿದ್ದು ಸುಮಾರು 50 ಸಾವಿರ ಭಾರತೀಯರು ಭಾಗವಹಿಸುತ್ತಾರೆ ಎಂದು ಎಲ್ಲಾ ಮಾಧ್ಯಮಗಳು ವರದಿ ಮಾಡಿವೆ.

ಆದರೆ ಮೊನ್ನೆ ನರೇಂದ್ರಮೋದಿಯವರ ಜನ್ಮದಿನಕ್ಕೆ ಶುಭಕೋರಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಿನ್ನೆ ಮೋದಿಯವರ ಈ ಹೌಡಿ ಮೋದಿ ಕಾರ್ಯಕ್ರಮವನ್ನು ಟೀಕಿಸಿ ಹೌಡಿ ಎಕಾನಮಿ ಎಂದು ಟ್ವೀಟ್ ಮಾಡಿದ್ದರು. ಹೌಡಿ ಎಕಾನಮಿ ಡೂಯಿಂಗ್ ಮಿಸ್ಟರ್ ಮೋದಿ ಅಂದರೆ ಕುಸಿದಿರುವ ಆರ್ಥಿಕತೆ ಬಗ್ಗೆ ಏನು ಹೇಳುತ್ತೀರಿ ಮೋದಿ? ಎಂದು ಪ್ರಶ್ನಸಿದ್ದರೆ. ಅದಕ್ಕೆ ತಾವೇ ಉತ್ತರವನ್ನು ಸಹ ಕೊಟ್ಟು ‘ನೋಡಿದರೆ ಇದು ತುಂಬಾ ಒಳ್ಳೆಯದು ಅಲ್ಲ ಅನ್ನಿಸುತ್ತಿದೆ’ ಎಂದಿದ್ದರು. ಆ ಮೂಲಕ ಈ ರೀತಿಯ ದೊಡ್ಡ ಆಡಂಬರದ ಕಾರ್ಯಕ್ರಮಗಳನ್ನು ಮಾಡುವ ಮೂಲಕ ದೇಶದ ಆರ್ಥಿಕ ಬಿಕ್ಕಟ್ಟನ್ನು ಮರೆಮಾಚಲು ಸಾಧ್ಯವಿಲ್ಲ ಎಂದು ಟೀಕಿಸಿದ್ದಾರೆ.

ಮುಂದುವರಿದು ಬ್ಲೂಮ್ ಬರ್ಗ್ ನ ಆರ್ಥಿಕ ವರದಿಯೊಂದನ್ನು ಲಗತ್ತಿಸಿದ್ದಾರೆ. ಅದರಲ್ಲಿ ಕಳೆದ ಜೂನ್ ತಿಂಗಳಿನಿಂದ 4.5 ಬಿಲಿಯನ್ ಡಾಲರ್ ಭಾರತೀಯ ಷೇರುಗಳನ್ನು ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಮಾರಲಾಗಿದೆ. ಇದಕ್ಕೆ ಕುಸಿಯುತ್ತಿರುವ ಭಾರತೀಯ ಆರ್ಥಿಕತೆಯ ಭಯವೇ ಕಾರಣವಾಗಿದೆ ಎಂದು ವರದಿ ಮಾಡಿದೆ.

ರಾಹುಲ್ ಸಹೋದರಿ ಪ್ರಿಯಾಂಕಾ ಗಾಂಧಿ ಕೂಡ ಸರ್ಕಾರದ ಮೇಲೆ ವಾಗ್ದಾಳಿ ನಡೆಸಿದ್ದು, ಹೂಡಿಕೆದಾರರ ವಿಶ್ವಾಸವು ಅಲುಗಾಡಿದೆ ಆದರೆ ಮೋದಿ ಸರ್ಕಾರ ಸತ್ಯವನ್ನು ಒಪ್ಪಿಕೊಳ್ಳಲು ನಿರಾಕರಿಸುತ್ತಿದೆ ಎಂದಿದ್ದಾರೆ.

“ಭಾರತದ ಆರ್ಥಿಕತೆಯನ್ನು ‘5 ಟ್ರಿಲಿಯನ್’ ಡಾಲರ್ ಗೆ ಏರಿಸುತ್ತೇವೆ ಎಂದು ಪ್ರತಿದಿನ ಹೇಳುವ ಮೂಲಕ ಅಥವಾ ಮಾಧ್ಯಮಗಳ ಮುಖಪುಟದಲ್ಲಿ ಬರುವಂತೆ ಮಾಡುವ ಮೂಲಕ ಆರ್ಥಿಕತೆಯನ್ನು ಸರಿಪಡಿಸಲು ಬರುವುದಿಲ್ಲ. ಹಾಗೆಯೇ ವಿದೇಶದಲ್ಲಿ ದೊಡ್ಡ ಈವೆಂಟ್‌ಗಳನ್ನು ಪ್ರಾಯೋಜಿಸುವುದರಿಂದ ಭಾರತಕ್ಕೆ ಹೂಡಿಕೆದಾರರು ಬರುವುದಿಲ್ಲ” ಎಂದು ಪ್ರಿಯಾಂಕಾ ಗಾಂಧಿ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.

ಒಂದು ಕಡೆ ಮೋದಿ ಸರ್ಕಾರ ಆರ್ಥಿಕ ಸೂಚಕಗಳ ಮಧ್ಯೆ ಎಲ್ಲವೂ ಸರಿಯಿಂದೆ ಎಂದು ತೋರಿಸಲು ಪ್ರಯತ್ನಿಸಿದರೆ, ಇನ್ನೊಂದು ಕಡೆ ಆರ್ಥಿಕ ಹಿಂಜರಿತದ ಬಗ್ಗೆ ಕಾಂಗ್ರೆಸ್ ಮೋದಿ ಸರ್ಕಾರದ ವಿರುದ್ಧ ತನ್ನ ಆಕ್ರಮಣವನ್ನು ಮುಂದುವರಿಸಿದೆ.

ಕಾಂಗ್ರೆಸ್ ನಾಯಕರು ಉಲ್ಲೇಖಿಸಿರುವ ಬ್ಲೂಮ್‌ಬರ್ಗ್ ವರದಿಯಲ್ಲಿ, “ನರೇಂದ್ರ ಮೋದಿ ಪ್ರಧಾನಿಯಾಗುವ ಒಂದು ವರ್ಷದ ಮೊದಲು, 2013 ರ ಆರಂಭದಿಂದ ದೇಶದ ಆರ್ಥಿಕ ಬೆಳವಣಿಗೆಯು ಐದು ತ್ರೈಮಾಸಿಕಗಳವರೆಗೆ ದುರ್ಬಲ ಮಟ್ಟಕ್ಕೆ ಇಳಿದಿದೆ. ಮತ್ತು ಎರಡನೇ ತ್ರೈಮಾಸಿಕದಲ್ಲಿ ಶೇ5ರಷ್ಟು ನಿಧಾನಗತಿಯ ಬೆಳವಣಿಗೆಯು ಎಷ್ಟು ನೋವಿನಿಂದ ಕೂಡಿದೆ ಎಂಬುದನ್ನು ಅರ್ಥಮಾಡಿಕೊಳ್ಳಿ. ಕಾರುಗಳ ಮಾರಾಟವು ದಾಖಲೆಯ ವೇಗದಲ್ಲಿ ಮುಳುಗುತ್ತಿದೆ. ಬಂಡವಾಳ ಹೂಡಿಕೆ ಕುಸಿದಿದೆ. ನಿರುದ್ಯೋಗ ದರವು 45 ವರ್ಷಗಳಲ್ಲಿಯೇ ಗರಿಷ್ಠ ಮಟ್ಟಕ್ಕೆ ಏರಿದೆ ಮತ್ತು ರಾಷ್ಟ್ರದ ಬ್ಯಾಂಕಿಂಗ್ ವ್ಯವಸ್ಥೆಯು ಕೆಟ್ಟ ಪರಿಸ್ಥಿತಿಯಲ್ಲಿದೆ. ಸೋಮವಾರದ ತೈಲ ಬೆಲೆ ಏರಿಕೆಯು ಮತ್ತೊಂದು ಹೊಡೆತ ನೀಡಲಿದೆ ಎಂಬ ವಿವರಗಳಿವೆ.

ಹಾಗಾಗಿ ನಿನ್ನೆವರೆಗೂ ಹೌಡಿ ಮೋದಿ ಟ್ರೆಂಡ್ ಮಾಡಿದ್ದರೆ, ಅದಕ್ಕೆ ವಿರುದ್ಧವಾಗಿ ಹೌಡಿ ಎಕಾನಮಿ ಸಹ ಟ್ರೆಂಡ್ ಆಗಲಿಕ್ಕೆ ಶುರುವಾಗಿದೆ. ಈ ಟ್ವಿಟ್ಟರ್ ವಾರ್ ಸೆಪ್ಟಂಬರ್ 22ರವರೆಗೂ ಮುಂದುವರೆಯಲಿದೆ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...