Homeಅಂತರಾಷ್ಟ್ರೀಯನರೇಂದ್ರ ಮೋದಿಯವರ 'ಹೌಡಿ ಮೋದಿ' ಗೆ ರಾಹುಲ್ ಗಾಂಧಿಯ 'ಹೌಡಿ ಎಕಾನಮಿ' ತಿರುಗೇಟು..

ನರೇಂದ್ರ ಮೋದಿಯವರ ‘ಹೌಡಿ ಮೋದಿ’ ಗೆ ರಾಹುಲ್ ಗಾಂಧಿಯ ‘ಹೌಡಿ ಎಕಾನಮಿ’ ತಿರುಗೇಟು..

- Advertisement -
- Advertisement -

ನಿನ್ನೆ ಬೆಳಿಗ್ಗೆ ಟ್ವಿಟ್ಟರ್ ನಲ್ಲಿ ಹೌಡಿ ಮೋದಿ ಹ್ಯಾಷ್ ಟ್ಯಾಗ್ ಟ್ರೆಂಡ್ ಆಗಿತ್ತು. ‘ಹೌಡಿ ಮೋದಿ’ ಹೆಸರಿನಲ್ಲಿ ದೊಡ್ಡ ಕಾರ್ಯಕ್ರಮವೊಂದು ಸೆಪ್ಟಂಬರ್ 22 ರಂದು ಅಮೆರಿಕದ ಹ್ಯೂಸ್ಟನ್ ನಗರದಲ್ಲಿ ನಡೆಯಲಿದ್ದು ಅಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿಯವರು ಅನಿವಾಸಿ ಭಾರತೀಯರನ್ನುದ್ದೇಶಿಸಿ ಮಾತನಾಡಲಿದ್ದಾರೆ. ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ರವರು ಸಹ ಅತಿಥಿಗಳಾಗಿ ಭಾಗವಹಿಸಲಿದ್ದು ಸಾಕಷ್ಟು ಪ್ರಚಾರ ಪಡೆದಿತ್ತು.

ಒಂದು ಕಾಲದಲ್ಲಿ ಗುಜರಾತ್ ನರಮೇಧಕ್ಕೆ ಕಾರಣಕ್ಕೆ ನರೇಂದ್ರ ಮೋದಿಯವರಿಗೆ ಅಮೆರಿಕಾ ವೀಸಾ ನಿರಾಕರಿಸಿತ್ತು. ಅಂತಹ ಅಮೆರಿಕವೇ ಇಂದು ನರೇಂದ್ರ ಮೋದಿಯವರನ್ನು ಸ್ವಾಗತಿಸಿ ಕಾರ್ಯಕ್ರಮ ನಡೆಸುತ್ತಿದ್ದರಿಂದ ಸಹಜವಾಗಿ ಮೋದಿ ಅಭಿಮಾನಿಗಳಲ್ಲಿ ಉತ್ಸಾಹ ತಾರಕಕ್ಕೇರಿ ಟ್ವಿಟ್ಟರ್ ನಲ್ಲಿ ಹೌಡಿ ಮೋದಿ ಟ್ರೆಂಡ್ ಮಾಡಿದ್ದರು.

ಹೌಡಿ ಮೋದಿ ಎಂದರೆ, ಹೇಗಿದ್ದೀರಿ ಮೋದಿ? ಹೌದಾ ಮೋದಿ ಎಂಬರ್ಥ ಬರುತ್ತದೆ. ಆ ಹೆಸರಿನ ಕಾರ್ಯಕ್ರಮಕ್ಕೆ ರಂಗ ಸಜ್ಜಾಗಿದ್ದು ಸುಮಾರು 50 ಸಾವಿರ ಭಾರತೀಯರು ಭಾಗವಹಿಸುತ್ತಾರೆ ಎಂದು ಎಲ್ಲಾ ಮಾಧ್ಯಮಗಳು ವರದಿ ಮಾಡಿವೆ.

ಆದರೆ ಮೊನ್ನೆ ನರೇಂದ್ರಮೋದಿಯವರ ಜನ್ಮದಿನಕ್ಕೆ ಶುಭಕೋರಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಿನ್ನೆ ಮೋದಿಯವರ ಈ ಹೌಡಿ ಮೋದಿ ಕಾರ್ಯಕ್ರಮವನ್ನು ಟೀಕಿಸಿ ಹೌಡಿ ಎಕಾನಮಿ ಎಂದು ಟ್ವೀಟ್ ಮಾಡಿದ್ದರು. ಹೌಡಿ ಎಕಾನಮಿ ಡೂಯಿಂಗ್ ಮಿಸ್ಟರ್ ಮೋದಿ ಅಂದರೆ ಕುಸಿದಿರುವ ಆರ್ಥಿಕತೆ ಬಗ್ಗೆ ಏನು ಹೇಳುತ್ತೀರಿ ಮೋದಿ? ಎಂದು ಪ್ರಶ್ನಸಿದ್ದರೆ. ಅದಕ್ಕೆ ತಾವೇ ಉತ್ತರವನ್ನು ಸಹ ಕೊಟ್ಟು ‘ನೋಡಿದರೆ ಇದು ತುಂಬಾ ಒಳ್ಳೆಯದು ಅಲ್ಲ ಅನ್ನಿಸುತ್ತಿದೆ’ ಎಂದಿದ್ದರು. ಆ ಮೂಲಕ ಈ ರೀತಿಯ ದೊಡ್ಡ ಆಡಂಬರದ ಕಾರ್ಯಕ್ರಮಗಳನ್ನು ಮಾಡುವ ಮೂಲಕ ದೇಶದ ಆರ್ಥಿಕ ಬಿಕ್ಕಟ್ಟನ್ನು ಮರೆಮಾಚಲು ಸಾಧ್ಯವಿಲ್ಲ ಎಂದು ಟೀಕಿಸಿದ್ದಾರೆ.

ಮುಂದುವರಿದು ಬ್ಲೂಮ್ ಬರ್ಗ್ ನ ಆರ್ಥಿಕ ವರದಿಯೊಂದನ್ನು ಲಗತ್ತಿಸಿದ್ದಾರೆ. ಅದರಲ್ಲಿ ಕಳೆದ ಜೂನ್ ತಿಂಗಳಿನಿಂದ 4.5 ಬಿಲಿಯನ್ ಡಾಲರ್ ಭಾರತೀಯ ಷೇರುಗಳನ್ನು ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಮಾರಲಾಗಿದೆ. ಇದಕ್ಕೆ ಕುಸಿಯುತ್ತಿರುವ ಭಾರತೀಯ ಆರ್ಥಿಕತೆಯ ಭಯವೇ ಕಾರಣವಾಗಿದೆ ಎಂದು ವರದಿ ಮಾಡಿದೆ.

ರಾಹುಲ್ ಸಹೋದರಿ ಪ್ರಿಯಾಂಕಾ ಗಾಂಧಿ ಕೂಡ ಸರ್ಕಾರದ ಮೇಲೆ ವಾಗ್ದಾಳಿ ನಡೆಸಿದ್ದು, ಹೂಡಿಕೆದಾರರ ವಿಶ್ವಾಸವು ಅಲುಗಾಡಿದೆ ಆದರೆ ಮೋದಿ ಸರ್ಕಾರ ಸತ್ಯವನ್ನು ಒಪ್ಪಿಕೊಳ್ಳಲು ನಿರಾಕರಿಸುತ್ತಿದೆ ಎಂದಿದ್ದಾರೆ.

“ಭಾರತದ ಆರ್ಥಿಕತೆಯನ್ನು ‘5 ಟ್ರಿಲಿಯನ್’ ಡಾಲರ್ ಗೆ ಏರಿಸುತ್ತೇವೆ ಎಂದು ಪ್ರತಿದಿನ ಹೇಳುವ ಮೂಲಕ ಅಥವಾ ಮಾಧ್ಯಮಗಳ ಮುಖಪುಟದಲ್ಲಿ ಬರುವಂತೆ ಮಾಡುವ ಮೂಲಕ ಆರ್ಥಿಕತೆಯನ್ನು ಸರಿಪಡಿಸಲು ಬರುವುದಿಲ್ಲ. ಹಾಗೆಯೇ ವಿದೇಶದಲ್ಲಿ ದೊಡ್ಡ ಈವೆಂಟ್‌ಗಳನ್ನು ಪ್ರಾಯೋಜಿಸುವುದರಿಂದ ಭಾರತಕ್ಕೆ ಹೂಡಿಕೆದಾರರು ಬರುವುದಿಲ್ಲ” ಎಂದು ಪ್ರಿಯಾಂಕಾ ಗಾಂಧಿ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.

ಒಂದು ಕಡೆ ಮೋದಿ ಸರ್ಕಾರ ಆರ್ಥಿಕ ಸೂಚಕಗಳ ಮಧ್ಯೆ ಎಲ್ಲವೂ ಸರಿಯಿಂದೆ ಎಂದು ತೋರಿಸಲು ಪ್ರಯತ್ನಿಸಿದರೆ, ಇನ್ನೊಂದು ಕಡೆ ಆರ್ಥಿಕ ಹಿಂಜರಿತದ ಬಗ್ಗೆ ಕಾಂಗ್ರೆಸ್ ಮೋದಿ ಸರ್ಕಾರದ ವಿರುದ್ಧ ತನ್ನ ಆಕ್ರಮಣವನ್ನು ಮುಂದುವರಿಸಿದೆ.

ಕಾಂಗ್ರೆಸ್ ನಾಯಕರು ಉಲ್ಲೇಖಿಸಿರುವ ಬ್ಲೂಮ್‌ಬರ್ಗ್ ವರದಿಯಲ್ಲಿ, “ನರೇಂದ್ರ ಮೋದಿ ಪ್ರಧಾನಿಯಾಗುವ ಒಂದು ವರ್ಷದ ಮೊದಲು, 2013 ರ ಆರಂಭದಿಂದ ದೇಶದ ಆರ್ಥಿಕ ಬೆಳವಣಿಗೆಯು ಐದು ತ್ರೈಮಾಸಿಕಗಳವರೆಗೆ ದುರ್ಬಲ ಮಟ್ಟಕ್ಕೆ ಇಳಿದಿದೆ. ಮತ್ತು ಎರಡನೇ ತ್ರೈಮಾಸಿಕದಲ್ಲಿ ಶೇ5ರಷ್ಟು ನಿಧಾನಗತಿಯ ಬೆಳವಣಿಗೆಯು ಎಷ್ಟು ನೋವಿನಿಂದ ಕೂಡಿದೆ ಎಂಬುದನ್ನು ಅರ್ಥಮಾಡಿಕೊಳ್ಳಿ. ಕಾರುಗಳ ಮಾರಾಟವು ದಾಖಲೆಯ ವೇಗದಲ್ಲಿ ಮುಳುಗುತ್ತಿದೆ. ಬಂಡವಾಳ ಹೂಡಿಕೆ ಕುಸಿದಿದೆ. ನಿರುದ್ಯೋಗ ದರವು 45 ವರ್ಷಗಳಲ್ಲಿಯೇ ಗರಿಷ್ಠ ಮಟ್ಟಕ್ಕೆ ಏರಿದೆ ಮತ್ತು ರಾಷ್ಟ್ರದ ಬ್ಯಾಂಕಿಂಗ್ ವ್ಯವಸ್ಥೆಯು ಕೆಟ್ಟ ಪರಿಸ್ಥಿತಿಯಲ್ಲಿದೆ. ಸೋಮವಾರದ ತೈಲ ಬೆಲೆ ಏರಿಕೆಯು ಮತ್ತೊಂದು ಹೊಡೆತ ನೀಡಲಿದೆ ಎಂಬ ವಿವರಗಳಿವೆ.

ಹಾಗಾಗಿ ನಿನ್ನೆವರೆಗೂ ಹೌಡಿ ಮೋದಿ ಟ್ರೆಂಡ್ ಮಾಡಿದ್ದರೆ, ಅದಕ್ಕೆ ವಿರುದ್ಧವಾಗಿ ಹೌಡಿ ಎಕಾನಮಿ ಸಹ ಟ್ರೆಂಡ್ ಆಗಲಿಕ್ಕೆ ಶುರುವಾಗಿದೆ. ಈ ಟ್ವಿಟ್ಟರ್ ವಾರ್ ಸೆಪ್ಟಂಬರ್ 22ರವರೆಗೂ ಮುಂದುವರೆಯಲಿದೆ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...