Homeಅಂತರಾಷ್ಟ್ರೀಯನರೇಂದ್ರ ಮೋದಿಯವರ 'ಹೌಡಿ ಮೋದಿ' ಗೆ ರಾಹುಲ್ ಗಾಂಧಿಯ 'ಹೌಡಿ ಎಕಾನಮಿ' ತಿರುಗೇಟು..

ನರೇಂದ್ರ ಮೋದಿಯವರ ‘ಹೌಡಿ ಮೋದಿ’ ಗೆ ರಾಹುಲ್ ಗಾಂಧಿಯ ‘ಹೌಡಿ ಎಕಾನಮಿ’ ತಿರುಗೇಟು..

- Advertisement -
- Advertisement -

ನಿನ್ನೆ ಬೆಳಿಗ್ಗೆ ಟ್ವಿಟ್ಟರ್ ನಲ್ಲಿ ಹೌಡಿ ಮೋದಿ ಹ್ಯಾಷ್ ಟ್ಯಾಗ್ ಟ್ರೆಂಡ್ ಆಗಿತ್ತು. ‘ಹೌಡಿ ಮೋದಿ’ ಹೆಸರಿನಲ್ಲಿ ದೊಡ್ಡ ಕಾರ್ಯಕ್ರಮವೊಂದು ಸೆಪ್ಟಂಬರ್ 22 ರಂದು ಅಮೆರಿಕದ ಹ್ಯೂಸ್ಟನ್ ನಗರದಲ್ಲಿ ನಡೆಯಲಿದ್ದು ಅಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿಯವರು ಅನಿವಾಸಿ ಭಾರತೀಯರನ್ನುದ್ದೇಶಿಸಿ ಮಾತನಾಡಲಿದ್ದಾರೆ. ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ರವರು ಸಹ ಅತಿಥಿಗಳಾಗಿ ಭಾಗವಹಿಸಲಿದ್ದು ಸಾಕಷ್ಟು ಪ್ರಚಾರ ಪಡೆದಿತ್ತು.

ಒಂದು ಕಾಲದಲ್ಲಿ ಗುಜರಾತ್ ನರಮೇಧಕ್ಕೆ ಕಾರಣಕ್ಕೆ ನರೇಂದ್ರ ಮೋದಿಯವರಿಗೆ ಅಮೆರಿಕಾ ವೀಸಾ ನಿರಾಕರಿಸಿತ್ತು. ಅಂತಹ ಅಮೆರಿಕವೇ ಇಂದು ನರೇಂದ್ರ ಮೋದಿಯವರನ್ನು ಸ್ವಾಗತಿಸಿ ಕಾರ್ಯಕ್ರಮ ನಡೆಸುತ್ತಿದ್ದರಿಂದ ಸಹಜವಾಗಿ ಮೋದಿ ಅಭಿಮಾನಿಗಳಲ್ಲಿ ಉತ್ಸಾಹ ತಾರಕಕ್ಕೇರಿ ಟ್ವಿಟ್ಟರ್ ನಲ್ಲಿ ಹೌಡಿ ಮೋದಿ ಟ್ರೆಂಡ್ ಮಾಡಿದ್ದರು.

ಹೌಡಿ ಮೋದಿ ಎಂದರೆ, ಹೇಗಿದ್ದೀರಿ ಮೋದಿ? ಹೌದಾ ಮೋದಿ ಎಂಬರ್ಥ ಬರುತ್ತದೆ. ಆ ಹೆಸರಿನ ಕಾರ್ಯಕ್ರಮಕ್ಕೆ ರಂಗ ಸಜ್ಜಾಗಿದ್ದು ಸುಮಾರು 50 ಸಾವಿರ ಭಾರತೀಯರು ಭಾಗವಹಿಸುತ್ತಾರೆ ಎಂದು ಎಲ್ಲಾ ಮಾಧ್ಯಮಗಳು ವರದಿ ಮಾಡಿವೆ.

ಆದರೆ ಮೊನ್ನೆ ನರೇಂದ್ರಮೋದಿಯವರ ಜನ್ಮದಿನಕ್ಕೆ ಶುಭಕೋರಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಿನ್ನೆ ಮೋದಿಯವರ ಈ ಹೌಡಿ ಮೋದಿ ಕಾರ್ಯಕ್ರಮವನ್ನು ಟೀಕಿಸಿ ಹೌಡಿ ಎಕಾನಮಿ ಎಂದು ಟ್ವೀಟ್ ಮಾಡಿದ್ದರು. ಹೌಡಿ ಎಕಾನಮಿ ಡೂಯಿಂಗ್ ಮಿಸ್ಟರ್ ಮೋದಿ ಅಂದರೆ ಕುಸಿದಿರುವ ಆರ್ಥಿಕತೆ ಬಗ್ಗೆ ಏನು ಹೇಳುತ್ತೀರಿ ಮೋದಿ? ಎಂದು ಪ್ರಶ್ನಸಿದ್ದರೆ. ಅದಕ್ಕೆ ತಾವೇ ಉತ್ತರವನ್ನು ಸಹ ಕೊಟ್ಟು ‘ನೋಡಿದರೆ ಇದು ತುಂಬಾ ಒಳ್ಳೆಯದು ಅಲ್ಲ ಅನ್ನಿಸುತ್ತಿದೆ’ ಎಂದಿದ್ದರು. ಆ ಮೂಲಕ ಈ ರೀತಿಯ ದೊಡ್ಡ ಆಡಂಬರದ ಕಾರ್ಯಕ್ರಮಗಳನ್ನು ಮಾಡುವ ಮೂಲಕ ದೇಶದ ಆರ್ಥಿಕ ಬಿಕ್ಕಟ್ಟನ್ನು ಮರೆಮಾಚಲು ಸಾಧ್ಯವಿಲ್ಲ ಎಂದು ಟೀಕಿಸಿದ್ದಾರೆ.

ಮುಂದುವರಿದು ಬ್ಲೂಮ್ ಬರ್ಗ್ ನ ಆರ್ಥಿಕ ವರದಿಯೊಂದನ್ನು ಲಗತ್ತಿಸಿದ್ದಾರೆ. ಅದರಲ್ಲಿ ಕಳೆದ ಜೂನ್ ತಿಂಗಳಿನಿಂದ 4.5 ಬಿಲಿಯನ್ ಡಾಲರ್ ಭಾರತೀಯ ಷೇರುಗಳನ್ನು ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಮಾರಲಾಗಿದೆ. ಇದಕ್ಕೆ ಕುಸಿಯುತ್ತಿರುವ ಭಾರತೀಯ ಆರ್ಥಿಕತೆಯ ಭಯವೇ ಕಾರಣವಾಗಿದೆ ಎಂದು ವರದಿ ಮಾಡಿದೆ.

ರಾಹುಲ್ ಸಹೋದರಿ ಪ್ರಿಯಾಂಕಾ ಗಾಂಧಿ ಕೂಡ ಸರ್ಕಾರದ ಮೇಲೆ ವಾಗ್ದಾಳಿ ನಡೆಸಿದ್ದು, ಹೂಡಿಕೆದಾರರ ವಿಶ್ವಾಸವು ಅಲುಗಾಡಿದೆ ಆದರೆ ಮೋದಿ ಸರ್ಕಾರ ಸತ್ಯವನ್ನು ಒಪ್ಪಿಕೊಳ್ಳಲು ನಿರಾಕರಿಸುತ್ತಿದೆ ಎಂದಿದ್ದಾರೆ.

“ಭಾರತದ ಆರ್ಥಿಕತೆಯನ್ನು ‘5 ಟ್ರಿಲಿಯನ್’ ಡಾಲರ್ ಗೆ ಏರಿಸುತ್ತೇವೆ ಎಂದು ಪ್ರತಿದಿನ ಹೇಳುವ ಮೂಲಕ ಅಥವಾ ಮಾಧ್ಯಮಗಳ ಮುಖಪುಟದಲ್ಲಿ ಬರುವಂತೆ ಮಾಡುವ ಮೂಲಕ ಆರ್ಥಿಕತೆಯನ್ನು ಸರಿಪಡಿಸಲು ಬರುವುದಿಲ್ಲ. ಹಾಗೆಯೇ ವಿದೇಶದಲ್ಲಿ ದೊಡ್ಡ ಈವೆಂಟ್‌ಗಳನ್ನು ಪ್ರಾಯೋಜಿಸುವುದರಿಂದ ಭಾರತಕ್ಕೆ ಹೂಡಿಕೆದಾರರು ಬರುವುದಿಲ್ಲ” ಎಂದು ಪ್ರಿಯಾಂಕಾ ಗಾಂಧಿ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.

ಒಂದು ಕಡೆ ಮೋದಿ ಸರ್ಕಾರ ಆರ್ಥಿಕ ಸೂಚಕಗಳ ಮಧ್ಯೆ ಎಲ್ಲವೂ ಸರಿಯಿಂದೆ ಎಂದು ತೋರಿಸಲು ಪ್ರಯತ್ನಿಸಿದರೆ, ಇನ್ನೊಂದು ಕಡೆ ಆರ್ಥಿಕ ಹಿಂಜರಿತದ ಬಗ್ಗೆ ಕಾಂಗ್ರೆಸ್ ಮೋದಿ ಸರ್ಕಾರದ ವಿರುದ್ಧ ತನ್ನ ಆಕ್ರಮಣವನ್ನು ಮುಂದುವರಿಸಿದೆ.

ಕಾಂಗ್ರೆಸ್ ನಾಯಕರು ಉಲ್ಲೇಖಿಸಿರುವ ಬ್ಲೂಮ್‌ಬರ್ಗ್ ವರದಿಯಲ್ಲಿ, “ನರೇಂದ್ರ ಮೋದಿ ಪ್ರಧಾನಿಯಾಗುವ ಒಂದು ವರ್ಷದ ಮೊದಲು, 2013 ರ ಆರಂಭದಿಂದ ದೇಶದ ಆರ್ಥಿಕ ಬೆಳವಣಿಗೆಯು ಐದು ತ್ರೈಮಾಸಿಕಗಳವರೆಗೆ ದುರ್ಬಲ ಮಟ್ಟಕ್ಕೆ ಇಳಿದಿದೆ. ಮತ್ತು ಎರಡನೇ ತ್ರೈಮಾಸಿಕದಲ್ಲಿ ಶೇ5ರಷ್ಟು ನಿಧಾನಗತಿಯ ಬೆಳವಣಿಗೆಯು ಎಷ್ಟು ನೋವಿನಿಂದ ಕೂಡಿದೆ ಎಂಬುದನ್ನು ಅರ್ಥಮಾಡಿಕೊಳ್ಳಿ. ಕಾರುಗಳ ಮಾರಾಟವು ದಾಖಲೆಯ ವೇಗದಲ್ಲಿ ಮುಳುಗುತ್ತಿದೆ. ಬಂಡವಾಳ ಹೂಡಿಕೆ ಕುಸಿದಿದೆ. ನಿರುದ್ಯೋಗ ದರವು 45 ವರ್ಷಗಳಲ್ಲಿಯೇ ಗರಿಷ್ಠ ಮಟ್ಟಕ್ಕೆ ಏರಿದೆ ಮತ್ತು ರಾಷ್ಟ್ರದ ಬ್ಯಾಂಕಿಂಗ್ ವ್ಯವಸ್ಥೆಯು ಕೆಟ್ಟ ಪರಿಸ್ಥಿತಿಯಲ್ಲಿದೆ. ಸೋಮವಾರದ ತೈಲ ಬೆಲೆ ಏರಿಕೆಯು ಮತ್ತೊಂದು ಹೊಡೆತ ನೀಡಲಿದೆ ಎಂಬ ವಿವರಗಳಿವೆ.

ಹಾಗಾಗಿ ನಿನ್ನೆವರೆಗೂ ಹೌಡಿ ಮೋದಿ ಟ್ರೆಂಡ್ ಮಾಡಿದ್ದರೆ, ಅದಕ್ಕೆ ವಿರುದ್ಧವಾಗಿ ಹೌಡಿ ಎಕಾನಮಿ ಸಹ ಟ್ರೆಂಡ್ ಆಗಲಿಕ್ಕೆ ಶುರುವಾಗಿದೆ. ಈ ಟ್ವಿಟ್ಟರ್ ವಾರ್ ಸೆಪ್ಟಂಬರ್ 22ರವರೆಗೂ ಮುಂದುವರೆಯಲಿದೆ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...