Homeಅಂತರಾಷ್ಟ್ರೀಯನರೇಂದ್ರ ಮೋದಿಯವರ 'ಹೌಡಿ ಮೋದಿ' ಗೆ ರಾಹುಲ್ ಗಾಂಧಿಯ 'ಹೌಡಿ ಎಕಾನಮಿ' ತಿರುಗೇಟು..

ನರೇಂದ್ರ ಮೋದಿಯವರ ‘ಹೌಡಿ ಮೋದಿ’ ಗೆ ರಾಹುಲ್ ಗಾಂಧಿಯ ‘ಹೌಡಿ ಎಕಾನಮಿ’ ತಿರುಗೇಟು..

- Advertisement -
- Advertisement -

ನಿನ್ನೆ ಬೆಳಿಗ್ಗೆ ಟ್ವಿಟ್ಟರ್ ನಲ್ಲಿ ಹೌಡಿ ಮೋದಿ ಹ್ಯಾಷ್ ಟ್ಯಾಗ್ ಟ್ರೆಂಡ್ ಆಗಿತ್ತು. ‘ಹೌಡಿ ಮೋದಿ’ ಹೆಸರಿನಲ್ಲಿ ದೊಡ್ಡ ಕಾರ್ಯಕ್ರಮವೊಂದು ಸೆಪ್ಟಂಬರ್ 22 ರಂದು ಅಮೆರಿಕದ ಹ್ಯೂಸ್ಟನ್ ನಗರದಲ್ಲಿ ನಡೆಯಲಿದ್ದು ಅಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿಯವರು ಅನಿವಾಸಿ ಭಾರತೀಯರನ್ನುದ್ದೇಶಿಸಿ ಮಾತನಾಡಲಿದ್ದಾರೆ. ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ರವರು ಸಹ ಅತಿಥಿಗಳಾಗಿ ಭಾಗವಹಿಸಲಿದ್ದು ಸಾಕಷ್ಟು ಪ್ರಚಾರ ಪಡೆದಿತ್ತು.

ಒಂದು ಕಾಲದಲ್ಲಿ ಗುಜರಾತ್ ನರಮೇಧಕ್ಕೆ ಕಾರಣಕ್ಕೆ ನರೇಂದ್ರ ಮೋದಿಯವರಿಗೆ ಅಮೆರಿಕಾ ವೀಸಾ ನಿರಾಕರಿಸಿತ್ತು. ಅಂತಹ ಅಮೆರಿಕವೇ ಇಂದು ನರೇಂದ್ರ ಮೋದಿಯವರನ್ನು ಸ್ವಾಗತಿಸಿ ಕಾರ್ಯಕ್ರಮ ನಡೆಸುತ್ತಿದ್ದರಿಂದ ಸಹಜವಾಗಿ ಮೋದಿ ಅಭಿಮಾನಿಗಳಲ್ಲಿ ಉತ್ಸಾಹ ತಾರಕಕ್ಕೇರಿ ಟ್ವಿಟ್ಟರ್ ನಲ್ಲಿ ಹೌಡಿ ಮೋದಿ ಟ್ರೆಂಡ್ ಮಾಡಿದ್ದರು.

ಹೌಡಿ ಮೋದಿ ಎಂದರೆ, ಹೇಗಿದ್ದೀರಿ ಮೋದಿ? ಹೌದಾ ಮೋದಿ ಎಂಬರ್ಥ ಬರುತ್ತದೆ. ಆ ಹೆಸರಿನ ಕಾರ್ಯಕ್ರಮಕ್ಕೆ ರಂಗ ಸಜ್ಜಾಗಿದ್ದು ಸುಮಾರು 50 ಸಾವಿರ ಭಾರತೀಯರು ಭಾಗವಹಿಸುತ್ತಾರೆ ಎಂದು ಎಲ್ಲಾ ಮಾಧ್ಯಮಗಳು ವರದಿ ಮಾಡಿವೆ.

ಆದರೆ ಮೊನ್ನೆ ನರೇಂದ್ರಮೋದಿಯವರ ಜನ್ಮದಿನಕ್ಕೆ ಶುಭಕೋರಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಿನ್ನೆ ಮೋದಿಯವರ ಈ ಹೌಡಿ ಮೋದಿ ಕಾರ್ಯಕ್ರಮವನ್ನು ಟೀಕಿಸಿ ಹೌಡಿ ಎಕಾನಮಿ ಎಂದು ಟ್ವೀಟ್ ಮಾಡಿದ್ದರು. ಹೌಡಿ ಎಕಾನಮಿ ಡೂಯಿಂಗ್ ಮಿಸ್ಟರ್ ಮೋದಿ ಅಂದರೆ ಕುಸಿದಿರುವ ಆರ್ಥಿಕತೆ ಬಗ್ಗೆ ಏನು ಹೇಳುತ್ತೀರಿ ಮೋದಿ? ಎಂದು ಪ್ರಶ್ನಸಿದ್ದರೆ. ಅದಕ್ಕೆ ತಾವೇ ಉತ್ತರವನ್ನು ಸಹ ಕೊಟ್ಟು ‘ನೋಡಿದರೆ ಇದು ತುಂಬಾ ಒಳ್ಳೆಯದು ಅಲ್ಲ ಅನ್ನಿಸುತ್ತಿದೆ’ ಎಂದಿದ್ದರು. ಆ ಮೂಲಕ ಈ ರೀತಿಯ ದೊಡ್ಡ ಆಡಂಬರದ ಕಾರ್ಯಕ್ರಮಗಳನ್ನು ಮಾಡುವ ಮೂಲಕ ದೇಶದ ಆರ್ಥಿಕ ಬಿಕ್ಕಟ್ಟನ್ನು ಮರೆಮಾಚಲು ಸಾಧ್ಯವಿಲ್ಲ ಎಂದು ಟೀಕಿಸಿದ್ದಾರೆ.

ಮುಂದುವರಿದು ಬ್ಲೂಮ್ ಬರ್ಗ್ ನ ಆರ್ಥಿಕ ವರದಿಯೊಂದನ್ನು ಲಗತ್ತಿಸಿದ್ದಾರೆ. ಅದರಲ್ಲಿ ಕಳೆದ ಜೂನ್ ತಿಂಗಳಿನಿಂದ 4.5 ಬಿಲಿಯನ್ ಡಾಲರ್ ಭಾರತೀಯ ಷೇರುಗಳನ್ನು ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಮಾರಲಾಗಿದೆ. ಇದಕ್ಕೆ ಕುಸಿಯುತ್ತಿರುವ ಭಾರತೀಯ ಆರ್ಥಿಕತೆಯ ಭಯವೇ ಕಾರಣವಾಗಿದೆ ಎಂದು ವರದಿ ಮಾಡಿದೆ.

ರಾಹುಲ್ ಸಹೋದರಿ ಪ್ರಿಯಾಂಕಾ ಗಾಂಧಿ ಕೂಡ ಸರ್ಕಾರದ ಮೇಲೆ ವಾಗ್ದಾಳಿ ನಡೆಸಿದ್ದು, ಹೂಡಿಕೆದಾರರ ವಿಶ್ವಾಸವು ಅಲುಗಾಡಿದೆ ಆದರೆ ಮೋದಿ ಸರ್ಕಾರ ಸತ್ಯವನ್ನು ಒಪ್ಪಿಕೊಳ್ಳಲು ನಿರಾಕರಿಸುತ್ತಿದೆ ಎಂದಿದ್ದಾರೆ.

“ಭಾರತದ ಆರ್ಥಿಕತೆಯನ್ನು ‘5 ಟ್ರಿಲಿಯನ್’ ಡಾಲರ್ ಗೆ ಏರಿಸುತ್ತೇವೆ ಎಂದು ಪ್ರತಿದಿನ ಹೇಳುವ ಮೂಲಕ ಅಥವಾ ಮಾಧ್ಯಮಗಳ ಮುಖಪುಟದಲ್ಲಿ ಬರುವಂತೆ ಮಾಡುವ ಮೂಲಕ ಆರ್ಥಿಕತೆಯನ್ನು ಸರಿಪಡಿಸಲು ಬರುವುದಿಲ್ಲ. ಹಾಗೆಯೇ ವಿದೇಶದಲ್ಲಿ ದೊಡ್ಡ ಈವೆಂಟ್‌ಗಳನ್ನು ಪ್ರಾಯೋಜಿಸುವುದರಿಂದ ಭಾರತಕ್ಕೆ ಹೂಡಿಕೆದಾರರು ಬರುವುದಿಲ್ಲ” ಎಂದು ಪ್ರಿಯಾಂಕಾ ಗಾಂಧಿ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.

ಒಂದು ಕಡೆ ಮೋದಿ ಸರ್ಕಾರ ಆರ್ಥಿಕ ಸೂಚಕಗಳ ಮಧ್ಯೆ ಎಲ್ಲವೂ ಸರಿಯಿಂದೆ ಎಂದು ತೋರಿಸಲು ಪ್ರಯತ್ನಿಸಿದರೆ, ಇನ್ನೊಂದು ಕಡೆ ಆರ್ಥಿಕ ಹಿಂಜರಿತದ ಬಗ್ಗೆ ಕಾಂಗ್ರೆಸ್ ಮೋದಿ ಸರ್ಕಾರದ ವಿರುದ್ಧ ತನ್ನ ಆಕ್ರಮಣವನ್ನು ಮುಂದುವರಿಸಿದೆ.

ಕಾಂಗ್ರೆಸ್ ನಾಯಕರು ಉಲ್ಲೇಖಿಸಿರುವ ಬ್ಲೂಮ್‌ಬರ್ಗ್ ವರದಿಯಲ್ಲಿ, “ನರೇಂದ್ರ ಮೋದಿ ಪ್ರಧಾನಿಯಾಗುವ ಒಂದು ವರ್ಷದ ಮೊದಲು, 2013 ರ ಆರಂಭದಿಂದ ದೇಶದ ಆರ್ಥಿಕ ಬೆಳವಣಿಗೆಯು ಐದು ತ್ರೈಮಾಸಿಕಗಳವರೆಗೆ ದುರ್ಬಲ ಮಟ್ಟಕ್ಕೆ ಇಳಿದಿದೆ. ಮತ್ತು ಎರಡನೇ ತ್ರೈಮಾಸಿಕದಲ್ಲಿ ಶೇ5ರಷ್ಟು ನಿಧಾನಗತಿಯ ಬೆಳವಣಿಗೆಯು ಎಷ್ಟು ನೋವಿನಿಂದ ಕೂಡಿದೆ ಎಂಬುದನ್ನು ಅರ್ಥಮಾಡಿಕೊಳ್ಳಿ. ಕಾರುಗಳ ಮಾರಾಟವು ದಾಖಲೆಯ ವೇಗದಲ್ಲಿ ಮುಳುಗುತ್ತಿದೆ. ಬಂಡವಾಳ ಹೂಡಿಕೆ ಕುಸಿದಿದೆ. ನಿರುದ್ಯೋಗ ದರವು 45 ವರ್ಷಗಳಲ್ಲಿಯೇ ಗರಿಷ್ಠ ಮಟ್ಟಕ್ಕೆ ಏರಿದೆ ಮತ್ತು ರಾಷ್ಟ್ರದ ಬ್ಯಾಂಕಿಂಗ್ ವ್ಯವಸ್ಥೆಯು ಕೆಟ್ಟ ಪರಿಸ್ಥಿತಿಯಲ್ಲಿದೆ. ಸೋಮವಾರದ ತೈಲ ಬೆಲೆ ಏರಿಕೆಯು ಮತ್ತೊಂದು ಹೊಡೆತ ನೀಡಲಿದೆ ಎಂಬ ವಿವರಗಳಿವೆ.

ಹಾಗಾಗಿ ನಿನ್ನೆವರೆಗೂ ಹೌಡಿ ಮೋದಿ ಟ್ರೆಂಡ್ ಮಾಡಿದ್ದರೆ, ಅದಕ್ಕೆ ವಿರುದ್ಧವಾಗಿ ಹೌಡಿ ಎಕಾನಮಿ ಸಹ ಟ್ರೆಂಡ್ ಆಗಲಿಕ್ಕೆ ಶುರುವಾಗಿದೆ. ಈ ಟ್ವಿಟ್ಟರ್ ವಾರ್ ಸೆಪ್ಟಂಬರ್ 22ರವರೆಗೂ ಮುಂದುವರೆಯಲಿದೆ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...