Homeಮುಖಪುಟಅಹಮದಾಬಾದ್ ನಲ್ಲಿ ’ಹೌಡಿ ಟ್ರಂಪ್’ ಬೃಹತ್ ಸಮಾವೇಶಕ್ಕೆ ಸಜ್ಜು

ಅಹಮದಾಬಾದ್ ನಲ್ಲಿ ’ಹೌಡಿ ಟ್ರಂಪ್’ ಬೃಹತ್ ಸಮಾವೇಶಕ್ಕೆ ಸಜ್ಜು

- Advertisement -
- Advertisement -

ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತಕ್ಕೆ ಭೇಟಿ ನೀಡುತ್ತಿದ್ದು, ಪ್ರಧಾನಿ ತವರು ನೆಲ ಅಹಮದಾಬಾದ್ ನಲ್ಲಿ ಬೃಹತ್ ಸಮಾವೇಶ ನಡೆಸಿ ಟ್ರಂಪ್‌ಗೆ ಅತಿದೊಡ್ಡ ಗೌರವ ಸಲ್ಲಿಸಲು ಸಿದ್ದತೆ ನಡೆದಿದೆ. ಅಮೆರಿಕಾದಲ್ಲಿ ಹೌಡಿ ಮೋದಿ ಕಾರ್ಯಕ್ರಮದ ಮೂಲಕ ನರೇಂದ್ರ ಮೋದಿಗೆ ಗೌರವ ಸಲ್ಲಿಸಿದ್ದಕ್ಕೆ ಪ್ರತಿಯಾಗಿ ಭಾರತದ ಪ್ರಧಾನಿ ನರೇಂದ್ರ ಮೋದಿ ಕೂಡ ಡೊನಾಲ್ಡ್ ಟ್ರಂಪ್‌ಗೆ ಗೌರವ ಸಲ್ಲಿಸಲು ಮುಂದಾಗಿದ್ದಾರೆ.

ಹಿಂದೆ ಒಬಮಾ ಅವರನ್ನು ಸ್ವಾಗತಿಸಿದ್ದಕ್ಕಿಂತಲೂ ಅದ್ದೂರಿಯಾಗಿ ಗೌರವಿಸಲು ಭಾರತ ಸರ್ಕಾರ ಸಿದ್ದತೆ ನಡೆಸುತ್ತಿದೆ. ಅಂದಹಾಗೆ ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಫೆಬ್ರವರಿ 24 ಮತ್ತು 25ರಂದು ಎರಡು ದಿನ ಭಾರತ ಪ್ರವಾಸ ಕೈಗೊಂಡಿದ್ದಾರೆ ಎಂದು ಶ್ವೇತಭವನ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ. ಟ್ರಂಪ್ ಎರಡು ದಿನಗಳಲ್ಲಿ ನವದೆಹಲಿ ಮತ್ತು ಅಹಮದಾಬಾದ್ ನಗರಗಳಿಗೆ ಭೇಟಿ ನೀಡುತ್ತಿದ್ದಾರೆ.

ಡೊನಾಲ್ಡ್ ಟ್ರಂಪ್ ಜೊತೆ ಸ್ಟೀಫನಿ ಗ್ರಿಷಮ್ ಕೂಡ ಬರುತ್ತಿದ್ದಾರೆ. ಭಾರತ ಭೇಟಿಯ ಸಂದರ್ಭದಲ್ಲಿ ಹಲವು ವಿಷಯಗಳ ಕುರಿತು ಟ್ರಂಪ್ ಮತ್ತು ನರೇಂದ್ರ ಮೋದಿ ಮಾತುಕತೆ ನಡೆಸಲಿದ್ದಾರೆ ಎಂದು ಶ್ವೇತಭವನದ ಹೇಳಿಕೆ ತಿಳಿಸಿದೆ. ಇದರಿಂದ ಅಮೆರಿಕ ಮತ್ತು ಭಾರತ ನಡುವಿನ ವ್ಯೂಹಾತ್ಮಕ ಪಾಲುದಾರಿಕೆ ಬಲಗೊಳ್ಳಲಿದೆ. ಉಭಯ ದೇಶಗಳ ಜನರ ನಡುವೆ ಸಂಬಂಧಗಳು ವೃದ್ಧಿಯಾಗಲಿವೆ ಎಂದು ಅದು ಹೇಳಿದೆ.

ಪ್ರಧಾನಿ ಮೋದಿಯ ತವರು ಗುಜರಾತ್‌ನ ರಾಜಧಾನಿ ಅಹಮದಾಬಾದ್‌ಗೆ ಟ್ರಂಪ್‌ ಭೇಟಿ ನೀಡುವ ವೇಳೆ ಸ್ವಾತಂತ್ರ್ಯ ಹೋರಾಟದಲ್ಲಿ ಪ್ರಮುಖ ಪಾತ್ರ ವಹಿಸಿದ ಮಹಾತ್ಮಗಾಂಧಿ ಜೀವನ ಮತ್ತು ನಾಯಕತ್ವದ ಬಗ್ಗೆ ಹೆಚ್ಚಿನ ಮಾಹಿತಿ ಪಡೆಯಲಿದ್ದಾರೆ ಎಂದು ಹೇಳಲಾಗುತ್ತಿದೆ.

ಡೊನಾಲ್ಡ್ ಟ್ರಂಪ್ ಭಾರತಕ್ಕೆ ಭೇಟಿ ನೀಡುತ್ತಿರುವುದರ ಹಿಂದೆ ವ್ಯಾಪಾರ ಮತ್ತು ರಕ್ಷಣಾ ಒಪ್ಪಂದ ಮಾಡಿಕೊಳ್ಳುವುದು ಪ್ರವಾಸದ ಮುಖ್ಯ ಉದ್ದೇಶ ಎಂದು ಶ್ವೇತಭವನ ತಿಳಿಸಿದೆ.

ಟ್ರಂಪ್ ಭೇಟಿಯ ಸಮಯದಲ್ಲಿ ಉಕ್ಕು ಮತ್ತು ಅಲ್ಯೂಮಿನಿಯಂ ಮೇಲಿನ ಸುಂಕ ಹೇರಿಕೆ ಕಡಿಮೆ ಮಾಡುವಂತೆ ಭಾರತಕ್ಕೆ ಮನವಿ ಮಾಡಲಿದೆ ಎನ್ನಲಾಗುತ್ತಿದೆ. ಜೊತೆಗೆ ಕೃಷಿ, ತಯಾರಿಕಾ ವಸ್ತುಗಳು, ಡೈರಿ ಉತ್ಪನ್ನಗಳು, ಮೆಡಿಕಲ್ ಡಿವೈಸಿಸ್, ಐಸಿಟಿ ವಸ್ತುಗಳ, ಆಮದು ಸುಂಕ ಕಡಿಮೆ ಮಾಡುವಂತೆ ಅಮೆರಿಕ ಮನವಿ ಮಾಡಲಿದೆ ಎಂದು ಹೇಳಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...