Homeಮುಖಪುಟಹೃತಿಕ್, ಕತ್ರಿನಾ ಆಡ್‌ಗೆ ಹಣ ಸುರಿಯುವುದು ಬಿಟ್ಟು ಡೆಲಿವೆರಿ ಬಾಯ್‌ಗಳಿಗೆ ಸಮರ್ಪಕ ವೇತನ ನೀಡಿ: ಜೊಮ್ಯಾಟೊ...

ಹೃತಿಕ್, ಕತ್ರಿನಾ ಆಡ್‌ಗೆ ಹಣ ಸುರಿಯುವುದು ಬಿಟ್ಟು ಡೆಲಿವೆರಿ ಬಾಯ್‌ಗಳಿಗೆ ಸಮರ್ಪಕ ವೇತನ ನೀಡಿ: ಜೊಮ್ಯಾಟೊ ಪ್ರತಿಕ್ರಿಯೆ

ನಮ್ಮ ಜಾಹೀರಾತುಗಳು ಒಳ್ಳೆಯ ಉದ್ದೇಶವನ್ನು ಹೊಂದಿವೆ ಎಂದು ನಾವು ನಂಬುತ್ತೇವೆ, ಆದರೆ ದುರದೃಷ್ಟವಶಾತ್ ಕೆಲವು ಜನರು ತಪ್ಪಾಗಿ ಅರ್ಥೈಸಿಕೊಂಡಿದ್ದಾರೆ ಎಂದು ಜೊಮ್ಯಾಟೊ ಪ್ರತಿಕ್ರಿಯಿಸಿದೆ.

- Advertisement -
- Advertisement -

ಆಹಾರ ಸರಬರಾಜು ಕಂಪನಿ ಜೊಮ್ಯಾಟೊದ ಹೃತಿಕ್ ರೋಷನ್ ಮತ್ತು ಕತ್ರಿನಾ ಕೈಫ್‌ರವರಿರುವ ಹೊಸ ಜಾಹೀರಾತಿಗೆ ಸಾಮಾಜಿಕ ಜಾಲತಾಣದಲ್ಲಿ ಟೀಕೆ ವ್ಯಕ್ತವಾಗಿದೆ. ಇದಕ್ಕೆ ಜೊಮ್ಯಾಟೊ ಪ್ರತಿಕ್ರಿಯಿಸಿದ್ದು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದೆ.

ಜೊಮ್ಯಾಟೊ ಇತ್ತೀಚೆಗೆ ಎರಡು ಜಾಹೀರಾತುಗಳನ್ನು ಯುಟ್ಯೂಬ್‌ನಲ್ಲಿ ಬಿಡುಗಡೆಗೊಳಿಸಿತ್ತು. ಒಂದರಲ್ಲಿ ಜೊಮ್ಯಾಟೋ ಡೆಲಿವೆರಿ ಪಾರ್ಟ್ನರ್ ಮನೆಯೊಂದರ ಕಾಲಿಂಗ್ ಬೆಲ್ ಒತ್ತಿದಾಗ ಆಶ್ಚರ್ಯ ಕಾದಿರುತ್ತೆ. ಏಕೆಂದರೆ ಬಾಗಿಲು ತೆಗೆದವರು ಬಾಲಿವುಡ್ ಸ್ಟಾರ್ ಹೃತಿಕ್ ರೋಷನ್ ಆಗಿರುತ್ತಾರೆ. ಡೆಲಿವೆರಿ ಪಾರ್ಟ್ನರ್ ಸರ್ ನೀವು ಎಂದರೆ, ಹೃತಿಕ್ ‘ಹಾಯ್ ಜಾದೂ’ ಎಂದು ಕರೆಯುತ್ತಾರೆ. ಎಂಥದ್ದೆ ಸಂದರ್ಭದಲ್ಲಿಯೂ ಸಮಯಕ್ಕೆ ಸರಿಯಾಗಿ ಊಟ ತಲುಪಿಸುವ ನೀವು ಯಾವ ಜಾದೂಗಿಂತ ಕಡಿಮೆ ಇಲ್ಲ. ನಿಮ್ಮೊಂದಿಗೆ ಒಂದು ಸೆಲ್ಫಿ ತೆಗೆದುಕೊಳ್ಳಬೇಕು. ಒಂದು ಗಳಿಗೆ ಬಂದೆ ಇರಿ ಎಂದು ಫೋನ್ ತರಲು ಹೃತಿಕ್ ಮನೆಯೊಳಕ್ಕೆ ಹೋಗುತ್ತಾರೆ. ಇತ್ತ ಡೆಲಿವೆರಿ ಪಾರ್ಟ್ನರ್ ಬಹಳ ಖುಷಿಯಿಂದ ಹೆಲ್ಮೆಟ್ ತೆಗೆದು ತಲೆಗೂದಲೂ ಸರಿಮಾಡಿಕೊಳ್ಳುತ್ತಿರಬೇಕಾದರೆ ಮತ್ತೊಂದು ಆರ್ಡರ್‌ನ ನೋಟಿಫಿಕೇಶನ್ ಸೌಂಡ್‌ ಕೇಳಿಸುತ್ತೆ.. ಸೆಲ್ಫಿಗಿಂತ ಆರ್ಡರ್ ಅನ್ನು ಸರಿಯಾದ ಸಮಯಕ್ಕೆ ತಲುಪಿಸುವುದೇ ಮುಖ್ಯ, ಎಲ್ಲಾ ಗ್ರಾಹಕರು ಸೂಪರ್ ಸ್ಟಾರ್ ಎಂದು ಸುರಿಯುತ್ತಿರುವ ಮಳೆಯಲ್ಲಿ ಹೆಲ್ಮೆಟ್ ಹಾಕಿಕೊಂಡು ಡೆಲಿವೆರಿ ಪಾರ್ಟ್ನರ್ ಹೊರಡುತ್ತಾರೆ. ಹೃತಿಕ್ ಮನೆ ಹೊರಗೆ ಬಂದು ಹುಡುಕಿದರೆ ಯಾರೂ ಇರುವುದಿಲ್ಲ.

ಮತ್ತೊಂದು ಜಾಹೀರಾತಿನಲ್ಲಿ ಬೆಲ್ ರಿಂಗಾದಾಗ ಬಾಗಿಲು ತೆಗೆದೆವರು ಕತ್ರಿನಾ ಕೈಫ್ ಆಗಿರುತ್ತಾರೆ. ನನ್ನ ಜನ್ಮದಿನದಂದು ನೀನು ಸರಿಯಾದ ಸಮಯಕ್ಕೆ ಬಂದಿದ್ದೀಯ ಥ್ಯಾಂಕ್ಯೂ. ನಿನಗೊಂದು ಕೇಕ್ ಕೊಡುತ್ತೇನೆ, ನಿಮಿಷ ತಾಳು ಎಂದು ಕತ್ರಿನಾ ಒಳಹೋಗುತ್ತಾರೆ. ಅಷ್ಟರಲ್ಲಿ ಡೆಲಿವರ್ ಪಾರ್ಟ್ನರ್‌ನ ಮತ್ತೊಂದು ಆರ್ಡರ್‌ನ ನೋಟಿಫಿಕೇಶನ್ ಸೌಂಡ್‌ ಕೇಳಿಸುತ್ತೆ.. ಯಥಾ ಪ್ರಕಾರ ಗ್ರಾಹಕರು ಮುಖ್ಯ ಎಂದು ಕೇಕ್‌ಗೆ ಕಾಯದೆ ಆತ ಹೊರಡುತ್ತಾನೆ.

ಈ ಜಾಹೀರಾತು ಹೊರಬರುತ್ತಿದ್ದಂತೆ ಎರಡು ಆರ್ಡರ್‌ಗಳ ಮಧ್ಯೆ ಡೆಲಿವೆರಿ ಪಾರ್ಟ್ನರ್‌ಗಳಿಗೆ ಒಂದು ನಿಮಿಷದ ಬಿಡುವು ಸಹ ಇಲ್ಲವೇ? ಅಂದರೆ ಅವರನ್ನು ಕಂಪನಿ ಹೇಗೆ ನಡೆಸಿಕೊಳ್ಳುತ್ತಿದೆ? ಇಂತಹ ಜಾಹೀರಾತುಗಳಲ್ಲಿ ನಟಿಸಿರುವ ಹೃತಿಕ್, ಕತ್ರಿನಾರಂತಹ ನಟ-ನಟಿಯರಿಗೆ ಕೋಟ್ಯಾಂತರ ಸಂಭಾವನೆ ನೀಡುವುದನ್ನು ಬಿಟ್ಟು ಅದೇ ಹಣವನ್ನು ಡೆಲಿವೆರಿ ಪಾರ್ಟ್ನರ್‌ಗಳ ಕಲ್ಯಾಣಕ್ಕಾಗಿ ಬಳಸಿ ಎಂಬ ಟೀಕೆಗಳು ವ್ಯಕ್ತವಾಗಿವೆ.

ಟೀಕೆಗೆ ಪ್ರತಿಕ್ರಿಯಿಸಿದ ಜೊಮಾಟೊ, ಜಾಹೀರಾತುಗಳನ್ನು ಆರು ತಿಂಗಳ ಹಿಂದೆ ಪರಿಕಲ್ಪಿಸಲಾಗಿದೆ. ಈ ಜಾಹೀರಾತುಗಳ ಗುರಿಯು ಡೆಲಿವರಿ ಪಾರ್ಟ್ನರ್‌ಗಳನ್ನು ಜಾಹೀರಾತುಗಳ ನಾಯಕನನ್ನಾಗಿಸುವುದು, ನಾವು ಡೆಲಿವರಿ ಪಾಲುದಾರರೊಂದಿಗೆ ಗೌರವಯುತವಾಗಿ ಮಾತನಾಡಬೇಕು, ಡೆಲಿವರಿ ಪಾಲುದಾರನ ಕೆಲಸಕ್ಕೆ ಸಂಬಂಧಿಸಿದ ಘನತೆಯ ಮಟ್ಟವನ್ನು ಹೆಚ್ಚಿಸಬೇಕು ಮತ್ತು ಪ್ರತಿಯೊಬ್ಬ ಗ್ರಾಹಕರು ಸ್ಟಾರ್ ಎಂದು ಪುನರುಚ್ಚರಿಸಬೇಕು ಎಂದು ಕಂಪನಿ ಹೇಳಿದೆ.

“ನಮ್ಮ ಜಾಹೀರಾತುಗಳು ಒಳ್ಳೆಯ ಉದ್ದೇಶವನ್ನು ಹೊಂದಿವೆ ಎಂದು ನಾವು ನಂಬುತ್ತೇವೆ, ಆದರೆ ದುರದೃಷ್ಟವಶಾತ್ ಕೆಲವು ಜನರು ತಪ್ಪಾಗಿ ಅರ್ಥೈಸಿಕೊಂಡಿದ್ದಾರೆ. ವೇತನ ತಾರತಮ್ಯ, ಕೆಲಸದ ಅವಧಿ ಸೇರಿದಂತೆ ಹಲವಾರು ಬೇಡಿಕೆಗಳನ್ನು ನಾವು ಕೆಲ ತಿಂಗಳ ಹಿಂದೆಯೇ ಈಡೇರಿಸಿದ್ದೇವೆ. ಅವರ ಕಲ್ಯಾಣಕ್ಕಾಗಿ ಕ್ರಮ ತೆಗೆದುಕೊಂಡಿದ್ದೇವೆ ಎಂದು ಜೊಮ್ಯಾಟೊ ಪ್ರತಿಕ್ರಿಯಿಸಿದೆ.


ಇದನ್ನೂ ಓದಿ: ಕೊಡಗು: ಪಕ್ಕದ ಮನೆಯವರ ಕೃತ್ಯಕ್ಕೆ ಮನೆ ಕಳೆದುಕೊಂಡು ಬೀದಿಗೆ ಬಿದ್ದ ಯರವ ಸಮುದಾಯದ ಕುಟುಂಬ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...