Homeಮುಖಪುಟಹೃತಿಕ್, ಕತ್ರಿನಾ ಆಡ್‌ಗೆ ಹಣ ಸುರಿಯುವುದು ಬಿಟ್ಟು ಡೆಲಿವೆರಿ ಬಾಯ್‌ಗಳಿಗೆ ಸಮರ್ಪಕ ವೇತನ ನೀಡಿ: ಜೊಮ್ಯಾಟೊ...

ಹೃತಿಕ್, ಕತ್ರಿನಾ ಆಡ್‌ಗೆ ಹಣ ಸುರಿಯುವುದು ಬಿಟ್ಟು ಡೆಲಿವೆರಿ ಬಾಯ್‌ಗಳಿಗೆ ಸಮರ್ಪಕ ವೇತನ ನೀಡಿ: ಜೊಮ್ಯಾಟೊ ಪ್ರತಿಕ್ರಿಯೆ

ನಮ್ಮ ಜಾಹೀರಾತುಗಳು ಒಳ್ಳೆಯ ಉದ್ದೇಶವನ್ನು ಹೊಂದಿವೆ ಎಂದು ನಾವು ನಂಬುತ್ತೇವೆ, ಆದರೆ ದುರದೃಷ್ಟವಶಾತ್ ಕೆಲವು ಜನರು ತಪ್ಪಾಗಿ ಅರ್ಥೈಸಿಕೊಂಡಿದ್ದಾರೆ ಎಂದು ಜೊಮ್ಯಾಟೊ ಪ್ರತಿಕ್ರಿಯಿಸಿದೆ.

- Advertisement -
- Advertisement -

ಆಹಾರ ಸರಬರಾಜು ಕಂಪನಿ ಜೊಮ್ಯಾಟೊದ ಹೃತಿಕ್ ರೋಷನ್ ಮತ್ತು ಕತ್ರಿನಾ ಕೈಫ್‌ರವರಿರುವ ಹೊಸ ಜಾಹೀರಾತಿಗೆ ಸಾಮಾಜಿಕ ಜಾಲತಾಣದಲ್ಲಿ ಟೀಕೆ ವ್ಯಕ್ತವಾಗಿದೆ. ಇದಕ್ಕೆ ಜೊಮ್ಯಾಟೊ ಪ್ರತಿಕ್ರಿಯಿಸಿದ್ದು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದೆ.

ಜೊಮ್ಯಾಟೊ ಇತ್ತೀಚೆಗೆ ಎರಡು ಜಾಹೀರಾತುಗಳನ್ನು ಯುಟ್ಯೂಬ್‌ನಲ್ಲಿ ಬಿಡುಗಡೆಗೊಳಿಸಿತ್ತು. ಒಂದರಲ್ಲಿ ಜೊಮ್ಯಾಟೋ ಡೆಲಿವೆರಿ ಪಾರ್ಟ್ನರ್ ಮನೆಯೊಂದರ ಕಾಲಿಂಗ್ ಬೆಲ್ ಒತ್ತಿದಾಗ ಆಶ್ಚರ್ಯ ಕಾದಿರುತ್ತೆ. ಏಕೆಂದರೆ ಬಾಗಿಲು ತೆಗೆದವರು ಬಾಲಿವುಡ್ ಸ್ಟಾರ್ ಹೃತಿಕ್ ರೋಷನ್ ಆಗಿರುತ್ತಾರೆ. ಡೆಲಿವೆರಿ ಪಾರ್ಟ್ನರ್ ಸರ್ ನೀವು ಎಂದರೆ, ಹೃತಿಕ್ ‘ಹಾಯ್ ಜಾದೂ’ ಎಂದು ಕರೆಯುತ್ತಾರೆ. ಎಂಥದ್ದೆ ಸಂದರ್ಭದಲ್ಲಿಯೂ ಸಮಯಕ್ಕೆ ಸರಿಯಾಗಿ ಊಟ ತಲುಪಿಸುವ ನೀವು ಯಾವ ಜಾದೂಗಿಂತ ಕಡಿಮೆ ಇಲ್ಲ. ನಿಮ್ಮೊಂದಿಗೆ ಒಂದು ಸೆಲ್ಫಿ ತೆಗೆದುಕೊಳ್ಳಬೇಕು. ಒಂದು ಗಳಿಗೆ ಬಂದೆ ಇರಿ ಎಂದು ಫೋನ್ ತರಲು ಹೃತಿಕ್ ಮನೆಯೊಳಕ್ಕೆ ಹೋಗುತ್ತಾರೆ. ಇತ್ತ ಡೆಲಿವೆರಿ ಪಾರ್ಟ್ನರ್ ಬಹಳ ಖುಷಿಯಿಂದ ಹೆಲ್ಮೆಟ್ ತೆಗೆದು ತಲೆಗೂದಲೂ ಸರಿಮಾಡಿಕೊಳ್ಳುತ್ತಿರಬೇಕಾದರೆ ಮತ್ತೊಂದು ಆರ್ಡರ್‌ನ ನೋಟಿಫಿಕೇಶನ್ ಸೌಂಡ್‌ ಕೇಳಿಸುತ್ತೆ.. ಸೆಲ್ಫಿಗಿಂತ ಆರ್ಡರ್ ಅನ್ನು ಸರಿಯಾದ ಸಮಯಕ್ಕೆ ತಲುಪಿಸುವುದೇ ಮುಖ್ಯ, ಎಲ್ಲಾ ಗ್ರಾಹಕರು ಸೂಪರ್ ಸ್ಟಾರ್ ಎಂದು ಸುರಿಯುತ್ತಿರುವ ಮಳೆಯಲ್ಲಿ ಹೆಲ್ಮೆಟ್ ಹಾಕಿಕೊಂಡು ಡೆಲಿವೆರಿ ಪಾರ್ಟ್ನರ್ ಹೊರಡುತ್ತಾರೆ. ಹೃತಿಕ್ ಮನೆ ಹೊರಗೆ ಬಂದು ಹುಡುಕಿದರೆ ಯಾರೂ ಇರುವುದಿಲ್ಲ.

ಮತ್ತೊಂದು ಜಾಹೀರಾತಿನಲ್ಲಿ ಬೆಲ್ ರಿಂಗಾದಾಗ ಬಾಗಿಲು ತೆಗೆದೆವರು ಕತ್ರಿನಾ ಕೈಫ್ ಆಗಿರುತ್ತಾರೆ. ನನ್ನ ಜನ್ಮದಿನದಂದು ನೀನು ಸರಿಯಾದ ಸಮಯಕ್ಕೆ ಬಂದಿದ್ದೀಯ ಥ್ಯಾಂಕ್ಯೂ. ನಿನಗೊಂದು ಕೇಕ್ ಕೊಡುತ್ತೇನೆ, ನಿಮಿಷ ತಾಳು ಎಂದು ಕತ್ರಿನಾ ಒಳಹೋಗುತ್ತಾರೆ. ಅಷ್ಟರಲ್ಲಿ ಡೆಲಿವರ್ ಪಾರ್ಟ್ನರ್‌ನ ಮತ್ತೊಂದು ಆರ್ಡರ್‌ನ ನೋಟಿಫಿಕೇಶನ್ ಸೌಂಡ್‌ ಕೇಳಿಸುತ್ತೆ.. ಯಥಾ ಪ್ರಕಾರ ಗ್ರಾಹಕರು ಮುಖ್ಯ ಎಂದು ಕೇಕ್‌ಗೆ ಕಾಯದೆ ಆತ ಹೊರಡುತ್ತಾನೆ.

ಈ ಜಾಹೀರಾತು ಹೊರಬರುತ್ತಿದ್ದಂತೆ ಎರಡು ಆರ್ಡರ್‌ಗಳ ಮಧ್ಯೆ ಡೆಲಿವೆರಿ ಪಾರ್ಟ್ನರ್‌ಗಳಿಗೆ ಒಂದು ನಿಮಿಷದ ಬಿಡುವು ಸಹ ಇಲ್ಲವೇ? ಅಂದರೆ ಅವರನ್ನು ಕಂಪನಿ ಹೇಗೆ ನಡೆಸಿಕೊಳ್ಳುತ್ತಿದೆ? ಇಂತಹ ಜಾಹೀರಾತುಗಳಲ್ಲಿ ನಟಿಸಿರುವ ಹೃತಿಕ್, ಕತ್ರಿನಾರಂತಹ ನಟ-ನಟಿಯರಿಗೆ ಕೋಟ್ಯಾಂತರ ಸಂಭಾವನೆ ನೀಡುವುದನ್ನು ಬಿಟ್ಟು ಅದೇ ಹಣವನ್ನು ಡೆಲಿವೆರಿ ಪಾರ್ಟ್ನರ್‌ಗಳ ಕಲ್ಯಾಣಕ್ಕಾಗಿ ಬಳಸಿ ಎಂಬ ಟೀಕೆಗಳು ವ್ಯಕ್ತವಾಗಿವೆ.

ಟೀಕೆಗೆ ಪ್ರತಿಕ್ರಿಯಿಸಿದ ಜೊಮಾಟೊ, ಜಾಹೀರಾತುಗಳನ್ನು ಆರು ತಿಂಗಳ ಹಿಂದೆ ಪರಿಕಲ್ಪಿಸಲಾಗಿದೆ. ಈ ಜಾಹೀರಾತುಗಳ ಗುರಿಯು ಡೆಲಿವರಿ ಪಾರ್ಟ್ನರ್‌ಗಳನ್ನು ಜಾಹೀರಾತುಗಳ ನಾಯಕನನ್ನಾಗಿಸುವುದು, ನಾವು ಡೆಲಿವರಿ ಪಾಲುದಾರರೊಂದಿಗೆ ಗೌರವಯುತವಾಗಿ ಮಾತನಾಡಬೇಕು, ಡೆಲಿವರಿ ಪಾಲುದಾರನ ಕೆಲಸಕ್ಕೆ ಸಂಬಂಧಿಸಿದ ಘನತೆಯ ಮಟ್ಟವನ್ನು ಹೆಚ್ಚಿಸಬೇಕು ಮತ್ತು ಪ್ರತಿಯೊಬ್ಬ ಗ್ರಾಹಕರು ಸ್ಟಾರ್ ಎಂದು ಪುನರುಚ್ಚರಿಸಬೇಕು ಎಂದು ಕಂಪನಿ ಹೇಳಿದೆ.

“ನಮ್ಮ ಜಾಹೀರಾತುಗಳು ಒಳ್ಳೆಯ ಉದ್ದೇಶವನ್ನು ಹೊಂದಿವೆ ಎಂದು ನಾವು ನಂಬುತ್ತೇವೆ, ಆದರೆ ದುರದೃಷ್ಟವಶಾತ್ ಕೆಲವು ಜನರು ತಪ್ಪಾಗಿ ಅರ್ಥೈಸಿಕೊಂಡಿದ್ದಾರೆ. ವೇತನ ತಾರತಮ್ಯ, ಕೆಲಸದ ಅವಧಿ ಸೇರಿದಂತೆ ಹಲವಾರು ಬೇಡಿಕೆಗಳನ್ನು ನಾವು ಕೆಲ ತಿಂಗಳ ಹಿಂದೆಯೇ ಈಡೇರಿಸಿದ್ದೇವೆ. ಅವರ ಕಲ್ಯಾಣಕ್ಕಾಗಿ ಕ್ರಮ ತೆಗೆದುಕೊಂಡಿದ್ದೇವೆ ಎಂದು ಜೊಮ್ಯಾಟೊ ಪ್ರತಿಕ್ರಿಯಿಸಿದೆ.


ಇದನ್ನೂ ಓದಿ: ಕೊಡಗು: ಪಕ್ಕದ ಮನೆಯವರ ಕೃತ್ಯಕ್ಕೆ ಮನೆ ಕಳೆದುಕೊಂಡು ಬೀದಿಗೆ ಬಿದ್ದ ಯರವ ಸಮುದಾಯದ ಕುಟುಂಬ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...