Homeಮುಖಪುಟಹೃತಿಕ್, ಕತ್ರಿನಾ ಆಡ್‌ಗೆ ಹಣ ಸುರಿಯುವುದು ಬಿಟ್ಟು ಡೆಲಿವೆರಿ ಬಾಯ್‌ಗಳಿಗೆ ಸಮರ್ಪಕ ವೇತನ ನೀಡಿ: ಜೊಮ್ಯಾಟೊ...

ಹೃತಿಕ್, ಕತ್ರಿನಾ ಆಡ್‌ಗೆ ಹಣ ಸುರಿಯುವುದು ಬಿಟ್ಟು ಡೆಲಿವೆರಿ ಬಾಯ್‌ಗಳಿಗೆ ಸಮರ್ಪಕ ವೇತನ ನೀಡಿ: ಜೊಮ್ಯಾಟೊ ಪ್ರತಿಕ್ರಿಯೆ

ನಮ್ಮ ಜಾಹೀರಾತುಗಳು ಒಳ್ಳೆಯ ಉದ್ದೇಶವನ್ನು ಹೊಂದಿವೆ ಎಂದು ನಾವು ನಂಬುತ್ತೇವೆ, ಆದರೆ ದುರದೃಷ್ಟವಶಾತ್ ಕೆಲವು ಜನರು ತಪ್ಪಾಗಿ ಅರ್ಥೈಸಿಕೊಂಡಿದ್ದಾರೆ ಎಂದು ಜೊಮ್ಯಾಟೊ ಪ್ರತಿಕ್ರಿಯಿಸಿದೆ.

- Advertisement -
- Advertisement -

ಆಹಾರ ಸರಬರಾಜು ಕಂಪನಿ ಜೊಮ್ಯಾಟೊದ ಹೃತಿಕ್ ರೋಷನ್ ಮತ್ತು ಕತ್ರಿನಾ ಕೈಫ್‌ರವರಿರುವ ಹೊಸ ಜಾಹೀರಾತಿಗೆ ಸಾಮಾಜಿಕ ಜಾಲತಾಣದಲ್ಲಿ ಟೀಕೆ ವ್ಯಕ್ತವಾಗಿದೆ. ಇದಕ್ಕೆ ಜೊಮ್ಯಾಟೊ ಪ್ರತಿಕ್ರಿಯಿಸಿದ್ದು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದೆ.

ಜೊಮ್ಯಾಟೊ ಇತ್ತೀಚೆಗೆ ಎರಡು ಜಾಹೀರಾತುಗಳನ್ನು ಯುಟ್ಯೂಬ್‌ನಲ್ಲಿ ಬಿಡುಗಡೆಗೊಳಿಸಿತ್ತು. ಒಂದರಲ್ಲಿ ಜೊಮ್ಯಾಟೋ ಡೆಲಿವೆರಿ ಪಾರ್ಟ್ನರ್ ಮನೆಯೊಂದರ ಕಾಲಿಂಗ್ ಬೆಲ್ ಒತ್ತಿದಾಗ ಆಶ್ಚರ್ಯ ಕಾದಿರುತ್ತೆ. ಏಕೆಂದರೆ ಬಾಗಿಲು ತೆಗೆದವರು ಬಾಲಿವುಡ್ ಸ್ಟಾರ್ ಹೃತಿಕ್ ರೋಷನ್ ಆಗಿರುತ್ತಾರೆ. ಡೆಲಿವೆರಿ ಪಾರ್ಟ್ನರ್ ಸರ್ ನೀವು ಎಂದರೆ, ಹೃತಿಕ್ ‘ಹಾಯ್ ಜಾದೂ’ ಎಂದು ಕರೆಯುತ್ತಾರೆ. ಎಂಥದ್ದೆ ಸಂದರ್ಭದಲ್ಲಿಯೂ ಸಮಯಕ್ಕೆ ಸರಿಯಾಗಿ ಊಟ ತಲುಪಿಸುವ ನೀವು ಯಾವ ಜಾದೂಗಿಂತ ಕಡಿಮೆ ಇಲ್ಲ. ನಿಮ್ಮೊಂದಿಗೆ ಒಂದು ಸೆಲ್ಫಿ ತೆಗೆದುಕೊಳ್ಳಬೇಕು. ಒಂದು ಗಳಿಗೆ ಬಂದೆ ಇರಿ ಎಂದು ಫೋನ್ ತರಲು ಹೃತಿಕ್ ಮನೆಯೊಳಕ್ಕೆ ಹೋಗುತ್ತಾರೆ. ಇತ್ತ ಡೆಲಿವೆರಿ ಪಾರ್ಟ್ನರ್ ಬಹಳ ಖುಷಿಯಿಂದ ಹೆಲ್ಮೆಟ್ ತೆಗೆದು ತಲೆಗೂದಲೂ ಸರಿಮಾಡಿಕೊಳ್ಳುತ್ತಿರಬೇಕಾದರೆ ಮತ್ತೊಂದು ಆರ್ಡರ್‌ನ ನೋಟಿಫಿಕೇಶನ್ ಸೌಂಡ್‌ ಕೇಳಿಸುತ್ತೆ.. ಸೆಲ್ಫಿಗಿಂತ ಆರ್ಡರ್ ಅನ್ನು ಸರಿಯಾದ ಸಮಯಕ್ಕೆ ತಲುಪಿಸುವುದೇ ಮುಖ್ಯ, ಎಲ್ಲಾ ಗ್ರಾಹಕರು ಸೂಪರ್ ಸ್ಟಾರ್ ಎಂದು ಸುರಿಯುತ್ತಿರುವ ಮಳೆಯಲ್ಲಿ ಹೆಲ್ಮೆಟ್ ಹಾಕಿಕೊಂಡು ಡೆಲಿವೆರಿ ಪಾರ್ಟ್ನರ್ ಹೊರಡುತ್ತಾರೆ. ಹೃತಿಕ್ ಮನೆ ಹೊರಗೆ ಬಂದು ಹುಡುಕಿದರೆ ಯಾರೂ ಇರುವುದಿಲ್ಲ.

ಮತ್ತೊಂದು ಜಾಹೀರಾತಿನಲ್ಲಿ ಬೆಲ್ ರಿಂಗಾದಾಗ ಬಾಗಿಲು ತೆಗೆದೆವರು ಕತ್ರಿನಾ ಕೈಫ್ ಆಗಿರುತ್ತಾರೆ. ನನ್ನ ಜನ್ಮದಿನದಂದು ನೀನು ಸರಿಯಾದ ಸಮಯಕ್ಕೆ ಬಂದಿದ್ದೀಯ ಥ್ಯಾಂಕ್ಯೂ. ನಿನಗೊಂದು ಕೇಕ್ ಕೊಡುತ್ತೇನೆ, ನಿಮಿಷ ತಾಳು ಎಂದು ಕತ್ರಿನಾ ಒಳಹೋಗುತ್ತಾರೆ. ಅಷ್ಟರಲ್ಲಿ ಡೆಲಿವರ್ ಪಾರ್ಟ್ನರ್‌ನ ಮತ್ತೊಂದು ಆರ್ಡರ್‌ನ ನೋಟಿಫಿಕೇಶನ್ ಸೌಂಡ್‌ ಕೇಳಿಸುತ್ತೆ.. ಯಥಾ ಪ್ರಕಾರ ಗ್ರಾಹಕರು ಮುಖ್ಯ ಎಂದು ಕೇಕ್‌ಗೆ ಕಾಯದೆ ಆತ ಹೊರಡುತ್ತಾನೆ.

ಈ ಜಾಹೀರಾತು ಹೊರಬರುತ್ತಿದ್ದಂತೆ ಎರಡು ಆರ್ಡರ್‌ಗಳ ಮಧ್ಯೆ ಡೆಲಿವೆರಿ ಪಾರ್ಟ್ನರ್‌ಗಳಿಗೆ ಒಂದು ನಿಮಿಷದ ಬಿಡುವು ಸಹ ಇಲ್ಲವೇ? ಅಂದರೆ ಅವರನ್ನು ಕಂಪನಿ ಹೇಗೆ ನಡೆಸಿಕೊಳ್ಳುತ್ತಿದೆ? ಇಂತಹ ಜಾಹೀರಾತುಗಳಲ್ಲಿ ನಟಿಸಿರುವ ಹೃತಿಕ್, ಕತ್ರಿನಾರಂತಹ ನಟ-ನಟಿಯರಿಗೆ ಕೋಟ್ಯಾಂತರ ಸಂಭಾವನೆ ನೀಡುವುದನ್ನು ಬಿಟ್ಟು ಅದೇ ಹಣವನ್ನು ಡೆಲಿವೆರಿ ಪಾರ್ಟ್ನರ್‌ಗಳ ಕಲ್ಯಾಣಕ್ಕಾಗಿ ಬಳಸಿ ಎಂಬ ಟೀಕೆಗಳು ವ್ಯಕ್ತವಾಗಿವೆ.

ಟೀಕೆಗೆ ಪ್ರತಿಕ್ರಿಯಿಸಿದ ಜೊಮಾಟೊ, ಜಾಹೀರಾತುಗಳನ್ನು ಆರು ತಿಂಗಳ ಹಿಂದೆ ಪರಿಕಲ್ಪಿಸಲಾಗಿದೆ. ಈ ಜಾಹೀರಾತುಗಳ ಗುರಿಯು ಡೆಲಿವರಿ ಪಾರ್ಟ್ನರ್‌ಗಳನ್ನು ಜಾಹೀರಾತುಗಳ ನಾಯಕನನ್ನಾಗಿಸುವುದು, ನಾವು ಡೆಲಿವರಿ ಪಾಲುದಾರರೊಂದಿಗೆ ಗೌರವಯುತವಾಗಿ ಮಾತನಾಡಬೇಕು, ಡೆಲಿವರಿ ಪಾಲುದಾರನ ಕೆಲಸಕ್ಕೆ ಸಂಬಂಧಿಸಿದ ಘನತೆಯ ಮಟ್ಟವನ್ನು ಹೆಚ್ಚಿಸಬೇಕು ಮತ್ತು ಪ್ರತಿಯೊಬ್ಬ ಗ್ರಾಹಕರು ಸ್ಟಾರ್ ಎಂದು ಪುನರುಚ್ಚರಿಸಬೇಕು ಎಂದು ಕಂಪನಿ ಹೇಳಿದೆ.

“ನಮ್ಮ ಜಾಹೀರಾತುಗಳು ಒಳ್ಳೆಯ ಉದ್ದೇಶವನ್ನು ಹೊಂದಿವೆ ಎಂದು ನಾವು ನಂಬುತ್ತೇವೆ, ಆದರೆ ದುರದೃಷ್ಟವಶಾತ್ ಕೆಲವು ಜನರು ತಪ್ಪಾಗಿ ಅರ್ಥೈಸಿಕೊಂಡಿದ್ದಾರೆ. ವೇತನ ತಾರತಮ್ಯ, ಕೆಲಸದ ಅವಧಿ ಸೇರಿದಂತೆ ಹಲವಾರು ಬೇಡಿಕೆಗಳನ್ನು ನಾವು ಕೆಲ ತಿಂಗಳ ಹಿಂದೆಯೇ ಈಡೇರಿಸಿದ್ದೇವೆ. ಅವರ ಕಲ್ಯಾಣಕ್ಕಾಗಿ ಕ್ರಮ ತೆಗೆದುಕೊಂಡಿದ್ದೇವೆ ಎಂದು ಜೊಮ್ಯಾಟೊ ಪ್ರತಿಕ್ರಿಯಿಸಿದೆ.


ಇದನ್ನೂ ಓದಿ: ಕೊಡಗು: ಪಕ್ಕದ ಮನೆಯವರ ಕೃತ್ಯಕ್ಕೆ ಮನೆ ಕಳೆದುಕೊಂಡು ಬೀದಿಗೆ ಬಿದ್ದ ಯರವ ಸಮುದಾಯದ ಕುಟುಂಬ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...