Homeಮುಖಪುಟಹೃತಿಕ್, ಕತ್ರಿನಾ ಆಡ್‌ಗೆ ಹಣ ಸುರಿಯುವುದು ಬಿಟ್ಟು ಡೆಲಿವೆರಿ ಬಾಯ್‌ಗಳಿಗೆ ಸಮರ್ಪಕ ವೇತನ ನೀಡಿ: ಜೊಮ್ಯಾಟೊ...

ಹೃತಿಕ್, ಕತ್ರಿನಾ ಆಡ್‌ಗೆ ಹಣ ಸುರಿಯುವುದು ಬಿಟ್ಟು ಡೆಲಿವೆರಿ ಬಾಯ್‌ಗಳಿಗೆ ಸಮರ್ಪಕ ವೇತನ ನೀಡಿ: ಜೊಮ್ಯಾಟೊ ಪ್ರತಿಕ್ರಿಯೆ

ನಮ್ಮ ಜಾಹೀರಾತುಗಳು ಒಳ್ಳೆಯ ಉದ್ದೇಶವನ್ನು ಹೊಂದಿವೆ ಎಂದು ನಾವು ನಂಬುತ್ತೇವೆ, ಆದರೆ ದುರದೃಷ್ಟವಶಾತ್ ಕೆಲವು ಜನರು ತಪ್ಪಾಗಿ ಅರ್ಥೈಸಿಕೊಂಡಿದ್ದಾರೆ ಎಂದು ಜೊಮ್ಯಾಟೊ ಪ್ರತಿಕ್ರಿಯಿಸಿದೆ.

- Advertisement -
- Advertisement -

ಆಹಾರ ಸರಬರಾಜು ಕಂಪನಿ ಜೊಮ್ಯಾಟೊದ ಹೃತಿಕ್ ರೋಷನ್ ಮತ್ತು ಕತ್ರಿನಾ ಕೈಫ್‌ರವರಿರುವ ಹೊಸ ಜಾಹೀರಾತಿಗೆ ಸಾಮಾಜಿಕ ಜಾಲತಾಣದಲ್ಲಿ ಟೀಕೆ ವ್ಯಕ್ತವಾಗಿದೆ. ಇದಕ್ಕೆ ಜೊಮ್ಯಾಟೊ ಪ್ರತಿಕ್ರಿಯಿಸಿದ್ದು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದೆ.

ಜೊಮ್ಯಾಟೊ ಇತ್ತೀಚೆಗೆ ಎರಡು ಜಾಹೀರಾತುಗಳನ್ನು ಯುಟ್ಯೂಬ್‌ನಲ್ಲಿ ಬಿಡುಗಡೆಗೊಳಿಸಿತ್ತು. ಒಂದರಲ್ಲಿ ಜೊಮ್ಯಾಟೋ ಡೆಲಿವೆರಿ ಪಾರ್ಟ್ನರ್ ಮನೆಯೊಂದರ ಕಾಲಿಂಗ್ ಬೆಲ್ ಒತ್ತಿದಾಗ ಆಶ್ಚರ್ಯ ಕಾದಿರುತ್ತೆ. ಏಕೆಂದರೆ ಬಾಗಿಲು ತೆಗೆದವರು ಬಾಲಿವುಡ್ ಸ್ಟಾರ್ ಹೃತಿಕ್ ರೋಷನ್ ಆಗಿರುತ್ತಾರೆ. ಡೆಲಿವೆರಿ ಪಾರ್ಟ್ನರ್ ಸರ್ ನೀವು ಎಂದರೆ, ಹೃತಿಕ್ ‘ಹಾಯ್ ಜಾದೂ’ ಎಂದು ಕರೆಯುತ್ತಾರೆ. ಎಂಥದ್ದೆ ಸಂದರ್ಭದಲ್ಲಿಯೂ ಸಮಯಕ್ಕೆ ಸರಿಯಾಗಿ ಊಟ ತಲುಪಿಸುವ ನೀವು ಯಾವ ಜಾದೂಗಿಂತ ಕಡಿಮೆ ಇಲ್ಲ. ನಿಮ್ಮೊಂದಿಗೆ ಒಂದು ಸೆಲ್ಫಿ ತೆಗೆದುಕೊಳ್ಳಬೇಕು. ಒಂದು ಗಳಿಗೆ ಬಂದೆ ಇರಿ ಎಂದು ಫೋನ್ ತರಲು ಹೃತಿಕ್ ಮನೆಯೊಳಕ್ಕೆ ಹೋಗುತ್ತಾರೆ. ಇತ್ತ ಡೆಲಿವೆರಿ ಪಾರ್ಟ್ನರ್ ಬಹಳ ಖುಷಿಯಿಂದ ಹೆಲ್ಮೆಟ್ ತೆಗೆದು ತಲೆಗೂದಲೂ ಸರಿಮಾಡಿಕೊಳ್ಳುತ್ತಿರಬೇಕಾದರೆ ಮತ್ತೊಂದು ಆರ್ಡರ್‌ನ ನೋಟಿಫಿಕೇಶನ್ ಸೌಂಡ್‌ ಕೇಳಿಸುತ್ತೆ.. ಸೆಲ್ಫಿಗಿಂತ ಆರ್ಡರ್ ಅನ್ನು ಸರಿಯಾದ ಸಮಯಕ್ಕೆ ತಲುಪಿಸುವುದೇ ಮುಖ್ಯ, ಎಲ್ಲಾ ಗ್ರಾಹಕರು ಸೂಪರ್ ಸ್ಟಾರ್ ಎಂದು ಸುರಿಯುತ್ತಿರುವ ಮಳೆಯಲ್ಲಿ ಹೆಲ್ಮೆಟ್ ಹಾಕಿಕೊಂಡು ಡೆಲಿವೆರಿ ಪಾರ್ಟ್ನರ್ ಹೊರಡುತ್ತಾರೆ. ಹೃತಿಕ್ ಮನೆ ಹೊರಗೆ ಬಂದು ಹುಡುಕಿದರೆ ಯಾರೂ ಇರುವುದಿಲ್ಲ.

ಮತ್ತೊಂದು ಜಾಹೀರಾತಿನಲ್ಲಿ ಬೆಲ್ ರಿಂಗಾದಾಗ ಬಾಗಿಲು ತೆಗೆದೆವರು ಕತ್ರಿನಾ ಕೈಫ್ ಆಗಿರುತ್ತಾರೆ. ನನ್ನ ಜನ್ಮದಿನದಂದು ನೀನು ಸರಿಯಾದ ಸಮಯಕ್ಕೆ ಬಂದಿದ್ದೀಯ ಥ್ಯಾಂಕ್ಯೂ. ನಿನಗೊಂದು ಕೇಕ್ ಕೊಡುತ್ತೇನೆ, ನಿಮಿಷ ತಾಳು ಎಂದು ಕತ್ರಿನಾ ಒಳಹೋಗುತ್ತಾರೆ. ಅಷ್ಟರಲ್ಲಿ ಡೆಲಿವರ್ ಪಾರ್ಟ್ನರ್‌ನ ಮತ್ತೊಂದು ಆರ್ಡರ್‌ನ ನೋಟಿಫಿಕೇಶನ್ ಸೌಂಡ್‌ ಕೇಳಿಸುತ್ತೆ.. ಯಥಾ ಪ್ರಕಾರ ಗ್ರಾಹಕರು ಮುಖ್ಯ ಎಂದು ಕೇಕ್‌ಗೆ ಕಾಯದೆ ಆತ ಹೊರಡುತ್ತಾನೆ.

ಈ ಜಾಹೀರಾತು ಹೊರಬರುತ್ತಿದ್ದಂತೆ ಎರಡು ಆರ್ಡರ್‌ಗಳ ಮಧ್ಯೆ ಡೆಲಿವೆರಿ ಪಾರ್ಟ್ನರ್‌ಗಳಿಗೆ ಒಂದು ನಿಮಿಷದ ಬಿಡುವು ಸಹ ಇಲ್ಲವೇ? ಅಂದರೆ ಅವರನ್ನು ಕಂಪನಿ ಹೇಗೆ ನಡೆಸಿಕೊಳ್ಳುತ್ತಿದೆ? ಇಂತಹ ಜಾಹೀರಾತುಗಳಲ್ಲಿ ನಟಿಸಿರುವ ಹೃತಿಕ್, ಕತ್ರಿನಾರಂತಹ ನಟ-ನಟಿಯರಿಗೆ ಕೋಟ್ಯಾಂತರ ಸಂಭಾವನೆ ನೀಡುವುದನ್ನು ಬಿಟ್ಟು ಅದೇ ಹಣವನ್ನು ಡೆಲಿವೆರಿ ಪಾರ್ಟ್ನರ್‌ಗಳ ಕಲ್ಯಾಣಕ್ಕಾಗಿ ಬಳಸಿ ಎಂಬ ಟೀಕೆಗಳು ವ್ಯಕ್ತವಾಗಿವೆ.

ಟೀಕೆಗೆ ಪ್ರತಿಕ್ರಿಯಿಸಿದ ಜೊಮಾಟೊ, ಜಾಹೀರಾತುಗಳನ್ನು ಆರು ತಿಂಗಳ ಹಿಂದೆ ಪರಿಕಲ್ಪಿಸಲಾಗಿದೆ. ಈ ಜಾಹೀರಾತುಗಳ ಗುರಿಯು ಡೆಲಿವರಿ ಪಾರ್ಟ್ನರ್‌ಗಳನ್ನು ಜಾಹೀರಾತುಗಳ ನಾಯಕನನ್ನಾಗಿಸುವುದು, ನಾವು ಡೆಲಿವರಿ ಪಾಲುದಾರರೊಂದಿಗೆ ಗೌರವಯುತವಾಗಿ ಮಾತನಾಡಬೇಕು, ಡೆಲಿವರಿ ಪಾಲುದಾರನ ಕೆಲಸಕ್ಕೆ ಸಂಬಂಧಿಸಿದ ಘನತೆಯ ಮಟ್ಟವನ್ನು ಹೆಚ್ಚಿಸಬೇಕು ಮತ್ತು ಪ್ರತಿಯೊಬ್ಬ ಗ್ರಾಹಕರು ಸ್ಟಾರ್ ಎಂದು ಪುನರುಚ್ಚರಿಸಬೇಕು ಎಂದು ಕಂಪನಿ ಹೇಳಿದೆ.

“ನಮ್ಮ ಜಾಹೀರಾತುಗಳು ಒಳ್ಳೆಯ ಉದ್ದೇಶವನ್ನು ಹೊಂದಿವೆ ಎಂದು ನಾವು ನಂಬುತ್ತೇವೆ, ಆದರೆ ದುರದೃಷ್ಟವಶಾತ್ ಕೆಲವು ಜನರು ತಪ್ಪಾಗಿ ಅರ್ಥೈಸಿಕೊಂಡಿದ್ದಾರೆ. ವೇತನ ತಾರತಮ್ಯ, ಕೆಲಸದ ಅವಧಿ ಸೇರಿದಂತೆ ಹಲವಾರು ಬೇಡಿಕೆಗಳನ್ನು ನಾವು ಕೆಲ ತಿಂಗಳ ಹಿಂದೆಯೇ ಈಡೇರಿಸಿದ್ದೇವೆ. ಅವರ ಕಲ್ಯಾಣಕ್ಕಾಗಿ ಕ್ರಮ ತೆಗೆದುಕೊಂಡಿದ್ದೇವೆ ಎಂದು ಜೊಮ್ಯಾಟೊ ಪ್ರತಿಕ್ರಿಯಿಸಿದೆ.


ಇದನ್ನೂ ಓದಿ: ಕೊಡಗು: ಪಕ್ಕದ ಮನೆಯವರ ಕೃತ್ಯಕ್ಕೆ ಮನೆ ಕಳೆದುಕೊಂಡು ಬೀದಿಗೆ ಬಿದ್ದ ಯರವ ಸಮುದಾಯದ ಕುಟುಂಬ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...