Homeಮುಖಪುಟಹೃತಿಕ್, ಕತ್ರಿನಾ ಆಡ್‌ಗೆ ಹಣ ಸುರಿಯುವುದು ಬಿಟ್ಟು ಡೆಲಿವೆರಿ ಬಾಯ್‌ಗಳಿಗೆ ಸಮರ್ಪಕ ವೇತನ ನೀಡಿ: ಜೊಮ್ಯಾಟೊ...

ಹೃತಿಕ್, ಕತ್ರಿನಾ ಆಡ್‌ಗೆ ಹಣ ಸುರಿಯುವುದು ಬಿಟ್ಟು ಡೆಲಿವೆರಿ ಬಾಯ್‌ಗಳಿಗೆ ಸಮರ್ಪಕ ವೇತನ ನೀಡಿ: ಜೊಮ್ಯಾಟೊ ಪ್ರತಿಕ್ರಿಯೆ

ನಮ್ಮ ಜಾಹೀರಾತುಗಳು ಒಳ್ಳೆಯ ಉದ್ದೇಶವನ್ನು ಹೊಂದಿವೆ ಎಂದು ನಾವು ನಂಬುತ್ತೇವೆ, ಆದರೆ ದುರದೃಷ್ಟವಶಾತ್ ಕೆಲವು ಜನರು ತಪ್ಪಾಗಿ ಅರ್ಥೈಸಿಕೊಂಡಿದ್ದಾರೆ ಎಂದು ಜೊಮ್ಯಾಟೊ ಪ್ರತಿಕ್ರಿಯಿಸಿದೆ.

- Advertisement -
- Advertisement -

ಆಹಾರ ಸರಬರಾಜು ಕಂಪನಿ ಜೊಮ್ಯಾಟೊದ ಹೃತಿಕ್ ರೋಷನ್ ಮತ್ತು ಕತ್ರಿನಾ ಕೈಫ್‌ರವರಿರುವ ಹೊಸ ಜಾಹೀರಾತಿಗೆ ಸಾಮಾಜಿಕ ಜಾಲತಾಣದಲ್ಲಿ ಟೀಕೆ ವ್ಯಕ್ತವಾಗಿದೆ. ಇದಕ್ಕೆ ಜೊಮ್ಯಾಟೊ ಪ್ರತಿಕ್ರಿಯಿಸಿದ್ದು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದೆ.

ಜೊಮ್ಯಾಟೊ ಇತ್ತೀಚೆಗೆ ಎರಡು ಜಾಹೀರಾತುಗಳನ್ನು ಯುಟ್ಯೂಬ್‌ನಲ್ಲಿ ಬಿಡುಗಡೆಗೊಳಿಸಿತ್ತು. ಒಂದರಲ್ಲಿ ಜೊಮ್ಯಾಟೋ ಡೆಲಿವೆರಿ ಪಾರ್ಟ್ನರ್ ಮನೆಯೊಂದರ ಕಾಲಿಂಗ್ ಬೆಲ್ ಒತ್ತಿದಾಗ ಆಶ್ಚರ್ಯ ಕಾದಿರುತ್ತೆ. ಏಕೆಂದರೆ ಬಾಗಿಲು ತೆಗೆದವರು ಬಾಲಿವುಡ್ ಸ್ಟಾರ್ ಹೃತಿಕ್ ರೋಷನ್ ಆಗಿರುತ್ತಾರೆ. ಡೆಲಿವೆರಿ ಪಾರ್ಟ್ನರ್ ಸರ್ ನೀವು ಎಂದರೆ, ಹೃತಿಕ್ ‘ಹಾಯ್ ಜಾದೂ’ ಎಂದು ಕರೆಯುತ್ತಾರೆ. ಎಂಥದ್ದೆ ಸಂದರ್ಭದಲ್ಲಿಯೂ ಸಮಯಕ್ಕೆ ಸರಿಯಾಗಿ ಊಟ ತಲುಪಿಸುವ ನೀವು ಯಾವ ಜಾದೂಗಿಂತ ಕಡಿಮೆ ಇಲ್ಲ. ನಿಮ್ಮೊಂದಿಗೆ ಒಂದು ಸೆಲ್ಫಿ ತೆಗೆದುಕೊಳ್ಳಬೇಕು. ಒಂದು ಗಳಿಗೆ ಬಂದೆ ಇರಿ ಎಂದು ಫೋನ್ ತರಲು ಹೃತಿಕ್ ಮನೆಯೊಳಕ್ಕೆ ಹೋಗುತ್ತಾರೆ. ಇತ್ತ ಡೆಲಿವೆರಿ ಪಾರ್ಟ್ನರ್ ಬಹಳ ಖುಷಿಯಿಂದ ಹೆಲ್ಮೆಟ್ ತೆಗೆದು ತಲೆಗೂದಲೂ ಸರಿಮಾಡಿಕೊಳ್ಳುತ್ತಿರಬೇಕಾದರೆ ಮತ್ತೊಂದು ಆರ್ಡರ್‌ನ ನೋಟಿಫಿಕೇಶನ್ ಸೌಂಡ್‌ ಕೇಳಿಸುತ್ತೆ.. ಸೆಲ್ಫಿಗಿಂತ ಆರ್ಡರ್ ಅನ್ನು ಸರಿಯಾದ ಸಮಯಕ್ಕೆ ತಲುಪಿಸುವುದೇ ಮುಖ್ಯ, ಎಲ್ಲಾ ಗ್ರಾಹಕರು ಸೂಪರ್ ಸ್ಟಾರ್ ಎಂದು ಸುರಿಯುತ್ತಿರುವ ಮಳೆಯಲ್ಲಿ ಹೆಲ್ಮೆಟ್ ಹಾಕಿಕೊಂಡು ಡೆಲಿವೆರಿ ಪಾರ್ಟ್ನರ್ ಹೊರಡುತ್ತಾರೆ. ಹೃತಿಕ್ ಮನೆ ಹೊರಗೆ ಬಂದು ಹುಡುಕಿದರೆ ಯಾರೂ ಇರುವುದಿಲ್ಲ.

ಮತ್ತೊಂದು ಜಾಹೀರಾತಿನಲ್ಲಿ ಬೆಲ್ ರಿಂಗಾದಾಗ ಬಾಗಿಲು ತೆಗೆದೆವರು ಕತ್ರಿನಾ ಕೈಫ್ ಆಗಿರುತ್ತಾರೆ. ನನ್ನ ಜನ್ಮದಿನದಂದು ನೀನು ಸರಿಯಾದ ಸಮಯಕ್ಕೆ ಬಂದಿದ್ದೀಯ ಥ್ಯಾಂಕ್ಯೂ. ನಿನಗೊಂದು ಕೇಕ್ ಕೊಡುತ್ತೇನೆ, ನಿಮಿಷ ತಾಳು ಎಂದು ಕತ್ರಿನಾ ಒಳಹೋಗುತ್ತಾರೆ. ಅಷ್ಟರಲ್ಲಿ ಡೆಲಿವರ್ ಪಾರ್ಟ್ನರ್‌ನ ಮತ್ತೊಂದು ಆರ್ಡರ್‌ನ ನೋಟಿಫಿಕೇಶನ್ ಸೌಂಡ್‌ ಕೇಳಿಸುತ್ತೆ.. ಯಥಾ ಪ್ರಕಾರ ಗ್ರಾಹಕರು ಮುಖ್ಯ ಎಂದು ಕೇಕ್‌ಗೆ ಕಾಯದೆ ಆತ ಹೊರಡುತ್ತಾನೆ.

ಈ ಜಾಹೀರಾತು ಹೊರಬರುತ್ತಿದ್ದಂತೆ ಎರಡು ಆರ್ಡರ್‌ಗಳ ಮಧ್ಯೆ ಡೆಲಿವೆರಿ ಪಾರ್ಟ್ನರ್‌ಗಳಿಗೆ ಒಂದು ನಿಮಿಷದ ಬಿಡುವು ಸಹ ಇಲ್ಲವೇ? ಅಂದರೆ ಅವರನ್ನು ಕಂಪನಿ ಹೇಗೆ ನಡೆಸಿಕೊಳ್ಳುತ್ತಿದೆ? ಇಂತಹ ಜಾಹೀರಾತುಗಳಲ್ಲಿ ನಟಿಸಿರುವ ಹೃತಿಕ್, ಕತ್ರಿನಾರಂತಹ ನಟ-ನಟಿಯರಿಗೆ ಕೋಟ್ಯಾಂತರ ಸಂಭಾವನೆ ನೀಡುವುದನ್ನು ಬಿಟ್ಟು ಅದೇ ಹಣವನ್ನು ಡೆಲಿವೆರಿ ಪಾರ್ಟ್ನರ್‌ಗಳ ಕಲ್ಯಾಣಕ್ಕಾಗಿ ಬಳಸಿ ಎಂಬ ಟೀಕೆಗಳು ವ್ಯಕ್ತವಾಗಿವೆ.

ಟೀಕೆಗೆ ಪ್ರತಿಕ್ರಿಯಿಸಿದ ಜೊಮಾಟೊ, ಜಾಹೀರಾತುಗಳನ್ನು ಆರು ತಿಂಗಳ ಹಿಂದೆ ಪರಿಕಲ್ಪಿಸಲಾಗಿದೆ. ಈ ಜಾಹೀರಾತುಗಳ ಗುರಿಯು ಡೆಲಿವರಿ ಪಾರ್ಟ್ನರ್‌ಗಳನ್ನು ಜಾಹೀರಾತುಗಳ ನಾಯಕನನ್ನಾಗಿಸುವುದು, ನಾವು ಡೆಲಿವರಿ ಪಾಲುದಾರರೊಂದಿಗೆ ಗೌರವಯುತವಾಗಿ ಮಾತನಾಡಬೇಕು, ಡೆಲಿವರಿ ಪಾಲುದಾರನ ಕೆಲಸಕ್ಕೆ ಸಂಬಂಧಿಸಿದ ಘನತೆಯ ಮಟ್ಟವನ್ನು ಹೆಚ್ಚಿಸಬೇಕು ಮತ್ತು ಪ್ರತಿಯೊಬ್ಬ ಗ್ರಾಹಕರು ಸ್ಟಾರ್ ಎಂದು ಪುನರುಚ್ಚರಿಸಬೇಕು ಎಂದು ಕಂಪನಿ ಹೇಳಿದೆ.

“ನಮ್ಮ ಜಾಹೀರಾತುಗಳು ಒಳ್ಳೆಯ ಉದ್ದೇಶವನ್ನು ಹೊಂದಿವೆ ಎಂದು ನಾವು ನಂಬುತ್ತೇವೆ, ಆದರೆ ದುರದೃಷ್ಟವಶಾತ್ ಕೆಲವು ಜನರು ತಪ್ಪಾಗಿ ಅರ್ಥೈಸಿಕೊಂಡಿದ್ದಾರೆ. ವೇತನ ತಾರತಮ್ಯ, ಕೆಲಸದ ಅವಧಿ ಸೇರಿದಂತೆ ಹಲವಾರು ಬೇಡಿಕೆಗಳನ್ನು ನಾವು ಕೆಲ ತಿಂಗಳ ಹಿಂದೆಯೇ ಈಡೇರಿಸಿದ್ದೇವೆ. ಅವರ ಕಲ್ಯಾಣಕ್ಕಾಗಿ ಕ್ರಮ ತೆಗೆದುಕೊಂಡಿದ್ದೇವೆ ಎಂದು ಜೊಮ್ಯಾಟೊ ಪ್ರತಿಕ್ರಿಯಿಸಿದೆ.


ಇದನ್ನೂ ಓದಿ: ಕೊಡಗು: ಪಕ್ಕದ ಮನೆಯವರ ಕೃತ್ಯಕ್ಕೆ ಮನೆ ಕಳೆದುಕೊಂಡು ಬೀದಿಗೆ ಬಿದ್ದ ಯರವ ಸಮುದಾಯದ ಕುಟುಂಬ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...