Homeಮುಖಪುಟಹೃತಿಕ್, ಕತ್ರಿನಾ ಆಡ್‌ಗೆ ಹಣ ಸುರಿಯುವುದು ಬಿಟ್ಟು ಡೆಲಿವೆರಿ ಬಾಯ್‌ಗಳಿಗೆ ಸಮರ್ಪಕ ವೇತನ ನೀಡಿ: ಜೊಮ್ಯಾಟೊ...

ಹೃತಿಕ್, ಕತ್ರಿನಾ ಆಡ್‌ಗೆ ಹಣ ಸುರಿಯುವುದು ಬಿಟ್ಟು ಡೆಲಿವೆರಿ ಬಾಯ್‌ಗಳಿಗೆ ಸಮರ್ಪಕ ವೇತನ ನೀಡಿ: ಜೊಮ್ಯಾಟೊ ಪ್ರತಿಕ್ರಿಯೆ

ನಮ್ಮ ಜಾಹೀರಾತುಗಳು ಒಳ್ಳೆಯ ಉದ್ದೇಶವನ್ನು ಹೊಂದಿವೆ ಎಂದು ನಾವು ನಂಬುತ್ತೇವೆ, ಆದರೆ ದುರದೃಷ್ಟವಶಾತ್ ಕೆಲವು ಜನರು ತಪ್ಪಾಗಿ ಅರ್ಥೈಸಿಕೊಂಡಿದ್ದಾರೆ ಎಂದು ಜೊಮ್ಯಾಟೊ ಪ್ರತಿಕ್ರಿಯಿಸಿದೆ.

- Advertisement -
- Advertisement -

ಆಹಾರ ಸರಬರಾಜು ಕಂಪನಿ ಜೊಮ್ಯಾಟೊದ ಹೃತಿಕ್ ರೋಷನ್ ಮತ್ತು ಕತ್ರಿನಾ ಕೈಫ್‌ರವರಿರುವ ಹೊಸ ಜಾಹೀರಾತಿಗೆ ಸಾಮಾಜಿಕ ಜಾಲತಾಣದಲ್ಲಿ ಟೀಕೆ ವ್ಯಕ್ತವಾಗಿದೆ. ಇದಕ್ಕೆ ಜೊಮ್ಯಾಟೊ ಪ್ರತಿಕ್ರಿಯಿಸಿದ್ದು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದೆ.

ಜೊಮ್ಯಾಟೊ ಇತ್ತೀಚೆಗೆ ಎರಡು ಜಾಹೀರಾತುಗಳನ್ನು ಯುಟ್ಯೂಬ್‌ನಲ್ಲಿ ಬಿಡುಗಡೆಗೊಳಿಸಿತ್ತು. ಒಂದರಲ್ಲಿ ಜೊಮ್ಯಾಟೋ ಡೆಲಿವೆರಿ ಪಾರ್ಟ್ನರ್ ಮನೆಯೊಂದರ ಕಾಲಿಂಗ್ ಬೆಲ್ ಒತ್ತಿದಾಗ ಆಶ್ಚರ್ಯ ಕಾದಿರುತ್ತೆ. ಏಕೆಂದರೆ ಬಾಗಿಲು ತೆಗೆದವರು ಬಾಲಿವುಡ್ ಸ್ಟಾರ್ ಹೃತಿಕ್ ರೋಷನ್ ಆಗಿರುತ್ತಾರೆ. ಡೆಲಿವೆರಿ ಪಾರ್ಟ್ನರ್ ಸರ್ ನೀವು ಎಂದರೆ, ಹೃತಿಕ್ ‘ಹಾಯ್ ಜಾದೂ’ ಎಂದು ಕರೆಯುತ್ತಾರೆ. ಎಂಥದ್ದೆ ಸಂದರ್ಭದಲ್ಲಿಯೂ ಸಮಯಕ್ಕೆ ಸರಿಯಾಗಿ ಊಟ ತಲುಪಿಸುವ ನೀವು ಯಾವ ಜಾದೂಗಿಂತ ಕಡಿಮೆ ಇಲ್ಲ. ನಿಮ್ಮೊಂದಿಗೆ ಒಂದು ಸೆಲ್ಫಿ ತೆಗೆದುಕೊಳ್ಳಬೇಕು. ಒಂದು ಗಳಿಗೆ ಬಂದೆ ಇರಿ ಎಂದು ಫೋನ್ ತರಲು ಹೃತಿಕ್ ಮನೆಯೊಳಕ್ಕೆ ಹೋಗುತ್ತಾರೆ. ಇತ್ತ ಡೆಲಿವೆರಿ ಪಾರ್ಟ್ನರ್ ಬಹಳ ಖುಷಿಯಿಂದ ಹೆಲ್ಮೆಟ್ ತೆಗೆದು ತಲೆಗೂದಲೂ ಸರಿಮಾಡಿಕೊಳ್ಳುತ್ತಿರಬೇಕಾದರೆ ಮತ್ತೊಂದು ಆರ್ಡರ್‌ನ ನೋಟಿಫಿಕೇಶನ್ ಸೌಂಡ್‌ ಕೇಳಿಸುತ್ತೆ.. ಸೆಲ್ಫಿಗಿಂತ ಆರ್ಡರ್ ಅನ್ನು ಸರಿಯಾದ ಸಮಯಕ್ಕೆ ತಲುಪಿಸುವುದೇ ಮುಖ್ಯ, ಎಲ್ಲಾ ಗ್ರಾಹಕರು ಸೂಪರ್ ಸ್ಟಾರ್ ಎಂದು ಸುರಿಯುತ್ತಿರುವ ಮಳೆಯಲ್ಲಿ ಹೆಲ್ಮೆಟ್ ಹಾಕಿಕೊಂಡು ಡೆಲಿವೆರಿ ಪಾರ್ಟ್ನರ್ ಹೊರಡುತ್ತಾರೆ. ಹೃತಿಕ್ ಮನೆ ಹೊರಗೆ ಬಂದು ಹುಡುಕಿದರೆ ಯಾರೂ ಇರುವುದಿಲ್ಲ.

ಮತ್ತೊಂದು ಜಾಹೀರಾತಿನಲ್ಲಿ ಬೆಲ್ ರಿಂಗಾದಾಗ ಬಾಗಿಲು ತೆಗೆದೆವರು ಕತ್ರಿನಾ ಕೈಫ್ ಆಗಿರುತ್ತಾರೆ. ನನ್ನ ಜನ್ಮದಿನದಂದು ನೀನು ಸರಿಯಾದ ಸಮಯಕ್ಕೆ ಬಂದಿದ್ದೀಯ ಥ್ಯಾಂಕ್ಯೂ. ನಿನಗೊಂದು ಕೇಕ್ ಕೊಡುತ್ತೇನೆ, ನಿಮಿಷ ತಾಳು ಎಂದು ಕತ್ರಿನಾ ಒಳಹೋಗುತ್ತಾರೆ. ಅಷ್ಟರಲ್ಲಿ ಡೆಲಿವರ್ ಪಾರ್ಟ್ನರ್‌ನ ಮತ್ತೊಂದು ಆರ್ಡರ್‌ನ ನೋಟಿಫಿಕೇಶನ್ ಸೌಂಡ್‌ ಕೇಳಿಸುತ್ತೆ.. ಯಥಾ ಪ್ರಕಾರ ಗ್ರಾಹಕರು ಮುಖ್ಯ ಎಂದು ಕೇಕ್‌ಗೆ ಕಾಯದೆ ಆತ ಹೊರಡುತ್ತಾನೆ.

ಈ ಜಾಹೀರಾತು ಹೊರಬರುತ್ತಿದ್ದಂತೆ ಎರಡು ಆರ್ಡರ್‌ಗಳ ಮಧ್ಯೆ ಡೆಲಿವೆರಿ ಪಾರ್ಟ್ನರ್‌ಗಳಿಗೆ ಒಂದು ನಿಮಿಷದ ಬಿಡುವು ಸಹ ಇಲ್ಲವೇ? ಅಂದರೆ ಅವರನ್ನು ಕಂಪನಿ ಹೇಗೆ ನಡೆಸಿಕೊಳ್ಳುತ್ತಿದೆ? ಇಂತಹ ಜಾಹೀರಾತುಗಳಲ್ಲಿ ನಟಿಸಿರುವ ಹೃತಿಕ್, ಕತ್ರಿನಾರಂತಹ ನಟ-ನಟಿಯರಿಗೆ ಕೋಟ್ಯಾಂತರ ಸಂಭಾವನೆ ನೀಡುವುದನ್ನು ಬಿಟ್ಟು ಅದೇ ಹಣವನ್ನು ಡೆಲಿವೆರಿ ಪಾರ್ಟ್ನರ್‌ಗಳ ಕಲ್ಯಾಣಕ್ಕಾಗಿ ಬಳಸಿ ಎಂಬ ಟೀಕೆಗಳು ವ್ಯಕ್ತವಾಗಿವೆ.

ಟೀಕೆಗೆ ಪ್ರತಿಕ್ರಿಯಿಸಿದ ಜೊಮಾಟೊ, ಜಾಹೀರಾತುಗಳನ್ನು ಆರು ತಿಂಗಳ ಹಿಂದೆ ಪರಿಕಲ್ಪಿಸಲಾಗಿದೆ. ಈ ಜಾಹೀರಾತುಗಳ ಗುರಿಯು ಡೆಲಿವರಿ ಪಾರ್ಟ್ನರ್‌ಗಳನ್ನು ಜಾಹೀರಾತುಗಳ ನಾಯಕನನ್ನಾಗಿಸುವುದು, ನಾವು ಡೆಲಿವರಿ ಪಾಲುದಾರರೊಂದಿಗೆ ಗೌರವಯುತವಾಗಿ ಮಾತನಾಡಬೇಕು, ಡೆಲಿವರಿ ಪಾಲುದಾರನ ಕೆಲಸಕ್ಕೆ ಸಂಬಂಧಿಸಿದ ಘನತೆಯ ಮಟ್ಟವನ್ನು ಹೆಚ್ಚಿಸಬೇಕು ಮತ್ತು ಪ್ರತಿಯೊಬ್ಬ ಗ್ರಾಹಕರು ಸ್ಟಾರ್ ಎಂದು ಪುನರುಚ್ಚರಿಸಬೇಕು ಎಂದು ಕಂಪನಿ ಹೇಳಿದೆ.

“ನಮ್ಮ ಜಾಹೀರಾತುಗಳು ಒಳ್ಳೆಯ ಉದ್ದೇಶವನ್ನು ಹೊಂದಿವೆ ಎಂದು ನಾವು ನಂಬುತ್ತೇವೆ, ಆದರೆ ದುರದೃಷ್ಟವಶಾತ್ ಕೆಲವು ಜನರು ತಪ್ಪಾಗಿ ಅರ್ಥೈಸಿಕೊಂಡಿದ್ದಾರೆ. ವೇತನ ತಾರತಮ್ಯ, ಕೆಲಸದ ಅವಧಿ ಸೇರಿದಂತೆ ಹಲವಾರು ಬೇಡಿಕೆಗಳನ್ನು ನಾವು ಕೆಲ ತಿಂಗಳ ಹಿಂದೆಯೇ ಈಡೇರಿಸಿದ್ದೇವೆ. ಅವರ ಕಲ್ಯಾಣಕ್ಕಾಗಿ ಕ್ರಮ ತೆಗೆದುಕೊಂಡಿದ್ದೇವೆ ಎಂದು ಜೊಮ್ಯಾಟೊ ಪ್ರತಿಕ್ರಿಯಿಸಿದೆ.


ಇದನ್ನೂ ಓದಿ: ಕೊಡಗು: ಪಕ್ಕದ ಮನೆಯವರ ಕೃತ್ಯಕ್ಕೆ ಮನೆ ಕಳೆದುಕೊಂಡು ಬೀದಿಗೆ ಬಿದ್ದ ಯರವ ಸಮುದಾಯದ ಕುಟುಂಬ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...