Homeಪಶ್ಚಿಮ ಬಂಗಾಳದ ಬಿಜೆಪಿ ಗೆಲುವು ಎಸ್‌ಐಆರ್‌ ಕುತಂತ್ರದ ಫಲ?

ಪಶ್ಚಿಮ ಬಂಗಾಳದ ಬಿಜೆಪಿ ಗೆಲುವು ಎಸ್‌ಐಆರ್‌ ಕುತಂತ್ರದ ಫಲ?

- Advertisement -
- Advertisement -

ಕಳೆದ 15 ವರ್ಷದಿಂದ ಪಶ್ಚಿಮ ಬಂಗಾಳದ ಅಧಿಕಾರದ ಚುಕ್ಕಾಣಿ ಹಿಡಿದಿದ್ದ ಮಮತಾ ಬ್ಯಾನರ್ಜಿ ಆಡಳಿತಕ್ಕೆ 2026ರ ಚುನಾವಣಾ ಫಲಿತಾಂಶ ಬ್ರೇಕ್ ನೀಡಿದೆ.  ಪಶ್ಚಿಮ ಬಂಗಾಳದ ಒಟ್ಟು 294 ಕ್ಷೇತ್ರಗಳ ಪೈಕಿ 200ರಲ್ಲಿ ಬಿಜಿಪಿ ಪಕ್ಷವು ಗೆಲುವಿಗೆ ದಾಪುಗಾಲಿಡುತ್ತಿದೆ.

ಬಿಜೆಪಿಯ ರಾಜಕೀಯ ಕುತಂತ್ರದ ಬಗ್ಗೆ ಮಮತಾ ಬ್ಯಾನರ್ಜಿ ಎಷ್ಟೆಲ್ಲಾ ಎಚ್ಚರಿಕೆಯನ್ನು ವಹಿಸಿದ್ದರು, ಅದನ್ನು ಭೇದಿಸುವಲ್ಲಿ ವಿಫಲವಾಗಿದ್ದಾರೆ. ಅದರ ಪರಿಣಾಮ ಬಂಗಾಳದಲ್ಲಿ ಕಮಲ ಅರಳಿದೆ. ಕಮಲ ಅರಳಲು ಮತ್ತೊಂದು ಮುಖ್ಯ ಕಾರಣ ಭಾರತೀಯ ಚುನಾವನಾ ಆಯೋಗ ಜಾರಿ ಮಾಡಿದ ವಿಶೇಷ ತೀವ್ರ ಪರಿಷ್ಕರಣೆ (SIR) ಎಂಬ ಮಾತುಗಳು ಕೇಳಿಬರುತ್ತಿವೆ.

ಹೌದು ಪಶ್ಚಿಮ ಬಂಗಾಳದ ಈ ಚುನಾವಣಾ ಫಲಿತಾಂಶ ಮತ್ತು ಮತದಾರರ ಪಟ್ಟಿಯ ಪರಿಷ್ಕರಣೆಯ (SIR) ಕುರಿತಾದ ದತ್ತಾಂಶಗಳು ಪ್ರಜಾಪ್ರಭುತ್ವದ ವ್ಯವಸ್ಥೆಯ ಬಗ್ಗೆ ಗಂಭೀರವಾಗಿ ಯೋಚಿಸುವಂತೆ ಮಾಡುತ್ತವೆ. ವಿಶೇಷವಾಗಿ 90 ಲಕ್ಷ ಮತದಾರರ ಹೆಸರುಗಳನ್ನು ಅಳಿಸಿಹಾಕಿರುವುದು ಮತ್ತು ಆ ಮೂಲಕ ಚುನಾವಣಾ ಅಖಾಡವನ್ನೇ ಬದಲಿಸಿರುವುದು ಅತ್ಯಂತ ಕಳವಳಕಾರಿ ವಿಷಯ.

ಚುನಾವಣಾ ಆಯೋಗವು ನಡೆಸಿದ SIR ಪ್ರಕ್ರಿಯೆಯು ಬಂಗಾಳದ ಮತದಾರರ ಪಟ್ಟಿಯಲ್ಲಿ ಭಾರಿ ಬದಲಾವಣೆಗಳನ್ನು ತಂದಿತು. ಇದು ಚುನಾವಣಾ ಫಲಿತಾಂಶದ ಮೇಲೆ ಬೀರಿದ ಪ್ರಭಾವವನ್ನು ಈ ಕೆಳಗಿನ ಅಂಶಗಳ ಮೂಲಕ ವಿಶ್ಲೇಷಿಸಬಹುದು.

ಮತದಾನದಿಂದ ವಂಚಿತರಾದ ಶೇ.12 ಮತದಾರರು 

ಎಸ್‌ಐಆರ್ ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದ ಮತದಾರರ ಪಟ್ಟಿಯಿಂದ ಸುಮಾರು 90 ಲಕ್ಷ ಹೆಸರುಗಳನ್ನು ಅಳಿಸಿಹಾಕಲಾಯಿತು. ಇದು ಒಟ್ಟು ಮತದಾರರ ಸಂಖ್ಯೆಯಲ್ಲಿ ಶೇ. 12ರಷ್ಟು ದೊಡ್ಡ ಕುಸಿತವಾಗಿದೆ. ಈ ಹೆಸರುಗಳ ಅಳಿಸುವಿಕೆಯು ಅನೇಕ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಗೆಲುವಿನ ಅಂತರದ ಮೇಲೆ ನೇರ ಪರಿಣಾಮ ಬೀರಿದೆ.

ಪಶ್ಚಿಮ ಬಂಗಾಳದ ಮತದಾರರ ಸಂಖ್ಯೆಯು ಎಸ್‌ಐಆರ್ ಪ್ರಕ್ರಿಯೆಯ ಮೊದಲು 7.66 ಕೋಟಿ ಇತ್ತು. ಅಂತಿಮ ಪಟ್ಟಿ ಮತ್ತು ನ್ಯಾಯಾಂಗ ಪರಿಶೀಲನೆಯ (Under adjudication) ನಂತರ ಈ ಸಂಖ್ಯೆಯು 6.75 ಕೋಟಿಗೆ ಕುಸಿದಿತ್ತು. ಒಟ್ಟಾರೆಯಾಗಿ ಮತದಾರರ ಪಟ್ಟಿಯಲ್ಲಿ ಶೇ. 12 ರಷ್ಟು ಇಳಿಕೆಯಾಗಿತ್ತು.ಇದುವರೆಗೆ ಒಟ್ಟು 90,62,188 (ಸುಮಾರು 90 ಲಕ್ಷ) ಮತದಾರರ ಹೆಸರುಗಳನ್ನು ತೆಗೆದುಹಾಕಲಾಗಿದೆ. ಅಳಿಸಿಹಾಕಲಾದವರಲ್ಲಿ ಶೇ. 63.42 ರಷ್ಟು ಜನರು ಹಿಂದೂ ಸಮುದಾಯಕ್ಕೆ ಸೇರಿದವರಾಗಿದ್ದರೆ, ಶೇ. 34.32 ರಷ್ಟು ಜನರು ಮುಸ್ಲಿಂ ಸಮುದಾಯದವರಾಗಿದ್ದಾರೆ.

ಬಾಂಗ್ಲಾದೇಶದಿಂದ ಬಂದಿರುವ ಹಿಂದೂ ಮತುವಾ ಪ್ರಾಬಲ್ಯದ ಜಿಲ್ಲೆಗಳಿಂದ (ಉತ್ತರ 24 ಪರಗಣ ಮತ್ತು ನಾದಿಯಾ) ಒಟ್ಟು 2,42,721 ಹೆಸರುಗಳನ್ನು ಅಳಿಸಲಾಗಿದೆ. ಸುಮಾರು 58 ಲಕ್ಷ ಹೆಸರುಗಳು ಈ ವರ್ಗದಲ್ಲಿ ಅಳಿಸಲ್ಪಟ್ಟಿವೆ. ಸುಮಾರು 27 ಲಕ್ಷ ಹೆಸರುಗಳನ್ನು ಈ ಹಂತದಲ್ಲಿ ತೆಗೆಯಲಾಗಿದ್ದು, ಇದರಲ್ಲಿ ಮುಸ್ಲಿಂ ಮತದಾರರ ಸಂಖ್ಯೆ (ಸುಮಾರು 17 ಲಕ್ಷ) ಅತಿ ಹೆಚ್ಚಾಗಿದೆ.

ಕ್ಷೇತ್ರವಾರು ಸಂಶೋಧನಾ ಮಾಹಿತಿ (ಸಬರ್ ಇನ್‌ಸ್ಟಿಟ್ಯೂಟ್):

  • ನಂದಿಗ್ರಾಮ: ಇಲ್ಲಿ ಅಳಿಸಲಾದ ಒಟ್ಟು 3,461 ಮತದಾರರಲ್ಲಿ ಶೇ. 94.5 ರಷ್ಟು (3,270) ಜನರು ಮುಸ್ಲಿಂ ಸಮುದಾಯದವರಾಗಿದ್ದಾರೆ.
  • ಭವಾನಿಪುರ: ಇಲ್ಲಿ ಅಳಿಸಲಾದ 3,875 ಮತದಾರರಲ್ಲಿ ಶೇ. 40.1 ರಷ್ಟು ಜನರು ಮುಸ್ಲಿಮರಾಗಿದ್ದು, ಶೇ. 59.9 ರಷ್ಟು ಜನರು ಮುಸ್ಲಿಮೇತರರಾಗಿದ್ದಾರೆ.

ಮುಸ್ಲಿಂ ಸಮುದಾಯದವರ ಬಳಿ ಸರಿಯಾದ ದಾಖಲೆಗಳಿದ್ದರೂ ಸಹ, ‘ಲಾಜಿಕಲ್ ಡಿಸ್ಕ್ರಿಪನ್ಸಿ’ (LD) ಹೆಸರಿನಲ್ಲಿ ಅವರ ಹೆಸರುಗಳನ್ನು ಅಸಮರ್ಪಕವಾಗಿ ಗುರಿಯಾಗಿಸಿ ಅಳಿಸಲಾಗಿದೆ ಎಂಬ ಆರೋಪವು ಇದೆ. ಚುನಾವಣಾ ಆಯೋಗವು ಮುಸ್ಲಿಂ ಹೆಸರುಗಳನ್ನು ಗುರುತಿಸಲು ಕೃತಕ ಬುದ್ಧಿಮತ್ತೆಯನ್ನು (AI) ಬಳಸಿರುವ ಬಗ್ಗೆಯು ಕಳವಳ ವ್ಯಕ್ತವಾಗಿದೆ.

ಹೆಸರು ಅಳಿಸಲ್ಪಟ್ಟ ಮತದಾರರು ಮುಂದಿನ ದಿನಗಳಲ್ಲಿ ಪಟ್ಟಿಗೆ ಸೇರ್ಪಡೆಗೊಳ್ಳಲು ನ್ಯಾಯಮಂಡಳಿಯನ್ನು (Tribunal) ಸಂಪರ್ಕಿಸುತ್ತಿದ್ದಾರೆ. ಆದಾಗ್ಯೂ, ಏಪ್ರಿಲ್ 23 ಮತ್ತು 29 ರಂದು ನಡೆದ ವಿಧಾನಸಭಾ ಚುನಾವಣೆಯಲ್ಲಿ ಅವರಿಗೆ ಮತ ಚಲಾಯಿಸಲು ಅವಕಾಶ ನೀಡಲಾಗಿಲ್ಲ.

ಬಂಗಾಳದ ಫಲಿತಾಂಶದ ಮೇಲೆ ಎಸ್‌ಐಆರ್ ಪ್ರಭಾವ

‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪಶ್ಚಿಮ ಬಂಗಾಳದ 2026ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಮುನ್ನಡೆಗೆ ದಾರಿ ತೋರಿದೆ ಫಲಿತಾಂಶದ ಮೇಲೆ ಹೇಗೆ ನೇರ ಪ್ರಭಾವ ಬೀರಿದೆ ಎಂಬುದನ್ನು ಲಭ್ಯವಿರುವ ಅಂಕಿಅಂಶಗಳು ಸಾಬೀತುಪಡಿಸುತ್ತಿವೆ.

5000 ಕ್ಕಿಂತ ಕಡಿಮೆ ಮತದಾರರನ್ನು ಅಳಿಸಿಹಾಕಿದ ಕ್ಷೇತ್ರಗಳು (<5K):

ಯಾವ ಕ್ಷೇತ್ರಗಳಲ್ಲಿ 5000ಕ್ಕಿಂತ ಕಡಿಮೆ ಹೆಸರುಗಳನ್ನು ಅಳಿಸಲಾಗಿದೆಯೋ ಅಂತಹ 13 ಕ್ಷೇತ್ರಗಳ ಪೈಕಿ ಬಿಜೆಪಿ 12 ಸ್ಥಾನಗಳನ್ನು ಗೆದ್ದುಕೊಂಡಿದ್ದರೆ, ಟಿಎಂಸಿ ಕೇವಲ 1 ಸ್ಥಾನದಲ್ಲಿ ಗೆದ್ದಿದೆ.

5,000 ದಿಂದ 15,000 ಮತದಾರರನ್ನು ಅಳಿಸಿಹಾಕಿದ ಕ್ಷೇತ್ರಗಳು (5K-15K):

ಸರಾಸರಿ 5 ರಿಂದ 15 ಸಾವಿರ ಮತದಾರರ ಹೆಸರನ್ನು ಅಳಿಸಿಹಾಕಲಾದ 64 ಕ್ಷೇತ್ರಗಳಲ್ಲಿ ಬಿಜೆಪಿ 46 ಸ್ಥಾನಗಳನ್ನು ಗೆದ್ದರೆ, ಟಿಎಂಸಿ 17 ಸ್ಥಾನಗಳನ್ನು ಗೆದ್ದಿದೆ.

15,000 ದಿಂದ 25,000 ಮತದಾರರನ್ನು ಅಳಿಸಿಹಾಕಿದ ಕ್ಷೇತ್ರಗಳು (15K-25K):

ಭಾರಿ ಪ್ರಮಾಣದಲ್ಲಿ ಅಂದರೆ 15 ರಿಂದ 25 ಸಾವಿರದಷ್ಟು ಹೆಸರುಗಳನ್ನು ಅಳಿಸಿಹಾಕಲಾದ 69 ಕ್ಷೇತ್ರಗಳ ಪೈಕಿ ಬಿಜೆಪಿ 44 ಸ್ಥಾನಗಳಲ್ಲಿ ಜಯಗಳಿಸಿದೆ ಮತ್ತು ಟಿಎಂಸಿ 23 ಸ್ಥಾನಗಳನ್ನು ಪಡೆದಿದೆ.

25,000 ಕ್ಕಿಂತ ಹೆಚ್ಚು ಮತದಾರರನ್ನು ಅಳಿಸಿಹಾಕಿದ ಕ್ಷೇತ್ರಗಳು (>25K):

ಅತಿ ಹೆಚ್ಚು ಅಂದರೆ 25 ಸಾವಿರಕ್ಕೂ ಅಧಿಕ ಹೆಸರುಗಳನ್ನು ಪಟ್ಟಿಯಿಂದ ಕೈಬಿಟ್ಟಿರುವ 147 ಕ್ಷೇತ್ರಗಳ ಪೈಕಿ ಬಿಜೆಪಿ 87 ಸ್ಥಾನಗಳನ್ನು ಗೆದ್ದು  ಮುನ್ನಡೆ ಸಾಧಿಸಿದೆ, ಇಲ್ಲಿ ಟಿಎಂಸಿ 60 ಸ್ಥಾನಗಳನ್ನು ಗೆದ್ದಿದೆ.

ಹೆಚ್ಚಿನ ಅಳಿಸುವಿಕೆ = ಬಿಜೆಪಿಗೆ ದೊಡ್ಡ ಲಾಭ:

ಅತಿ ಹೆಚ್ಚು ಅಂದರೆ 25,000ಕ್ಕೂ ಅಧಿಕ ಮತದಾರರನ್ನು ಅಳಿಸಿಹಾಕಲಾದ 147 ಕ್ಷೇತ್ರಗಳ ಪೈಕಿ ಬಿಜೆಪಿ 87 ಸ್ಥಾನಗಳನ್ನು ಗೆದ್ದುಕೊಂಡಿದೆ. ಇದು ಆಯಕಟ್ಟಿನ ಜಾಗಗಳಲ್ಲಿ ದೊಡ್ಡ ಮಟ್ಟದ ಮತದಾರರನ್ನು ಗುರಿಯಾಗಿಸಿ ಪಟ್ಟಿಯಿಂದ ಹೊರಹಾಕಿರುವುದನ್ನು ತೋರಿಸುತ್ತದೆ.

ಮಧ್ಯಮ ಮಟ್ಟದ ಅಳಿಸುವಿಕೆಯಲ್ಲೂ ಕುತಂತ್ರ: 5,000 ದಿಂದ 25,000ದವರೆಗೆ ಮತದಾರರನ್ನು ಅಳಿಸಿದ ಒಟ್ಟು 133 ಕ್ಷೇತ್ರಗಳಲ್ಲಿ , ಬಿಜೆಪಿ 90 ಸ್ಥಾನಗಳನ್ನು ಕಿತ್ತುಕೊಂಡಿದೆ. ಅಂದರೆ, ಡಿಲೀಶನ್ ಪ್ರಮಾಣ ಹೆಚ್ಚಾದಷ್ಟೂ ಬಿಜೆಪಿಯ ಗೆಲುವಿನ ಸಾಧ್ಯತೆಯೂ ಹೆಚ್ಚಾಗಿರುವುದು ಇಲ್ಲಿ ಸ್ಪಷ್ಟ.

ಅಲ್ಪ ಅಳಿಸುವಿಕೆ ನಡೆದ ಕಡೆಯೂ ಬಿಡದ ಹಿಡಿತ: ಕೇವಲ 5,000ಕ್ಕಿಂತ ಕಡಿಮೆ ಅಳಿಸುವಿಕೆ ನಡೆದ 13 ಕ್ಷೇತ್ರಗಳ ಪೈಕಿ 12ರಲ್ಲಿ ಬಿಜೆಪಿ ಜಯ ಸಾಧಿಸಿದೆ. ಇದು ಕಡಿಮೆ ಅಳಿಸುವಿಕೆ ನಡೆದ ಕಡೆಯೂ ಸಹ ಬಿಜೆಪಿ ತನ್ನ ಕುತಂತ್ರದ ಮೂಲಕ ಸಮೀಕರಣಗಳನ್ನು ತನಗೆ ಪೂರಕವಾಗಿ ಬದಲಿಸಿಕೊಂಡಿರುವುದನ್ನು ಎತ್ತಿ ತೋರಿಸುತ್ತದೆ.

ಬಿಜೆಪಿಯ ಗೆಲುವು ಕೇವಲ ರಾಜಕೀಯ ಪ್ರಚಾರದಿಂದ ಬಂದಿದ್ದಲ್ಲ. ಇದು 90 ಲಕ್ಷ ಮತದಾರರನ್ನು (ಶೇ. 12) ವ್ಯವಸ್ಥಿತವಾಗಿ ಪಟ್ಟಿಯಿಂದ ಹೊರಹಾಕಿದ ‘SIR’ ಎಂಬ ಕುತಂತ್ರದ ಫಲ. ವಿಶೇಷವಾಗಿ ಅಲ್ಪಸಂಖ್ಯಾತ ಮತ್ತು ಟಿಎಂಸಿ ಪರ ಒಲವಿರುವ ಮತದಾರರನ್ನು ಗುರಿಯಾಗಿಸಿಕೊಂಡು ಈ ಡಿಲೀಶನ್ ಮಾಡಲಾಗಿದೆ ಎಂಬ ಸಂಶೋಧನಾ ವರದಿಗಳು ಈ ಗೆಲುವಿನ ಹಿಂದಿನ ಕರಾಳ ಮುಖವನ್ನು ಬಯಲು ಮಾಡುತ್ತವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...

ನಾವು ದಾಖಲೆಗಳನ್ನು ಕೊಟ್ಟರೂ ನಮ್ಮನ್ನು ಹಕ್ಕುಗಳಿಂದ ವಂಚಿಸಲಾಗುತ್ತದೆ ಎಚ್ಚರ- ಡಿ.ಹೆಚ್.ಕಂಬಳಿ

ಸಿಂಧನೂರು: SIR ವಿರೋಧಿಸಿ ನಡೆಸಲಾಗುತ್ತಿರುವ ಜಾಗೃತಿ ಜಾಥ ರಾಯಚೂರು ಜಿಲ್ಲೆಯ ಸಿಂಧನೂರು ಪ್ರವೇಶಿಸಿತ್ತು. ನಗರದ ಜಮಾತ್ ಎ ಇಸ್ಲಾಂ ಹಿಂದ್ ಕಚೇರಿಯಲ್ಲಿ ಹಲವು ಸಮುದಾಯದ ಮುಖಂಡರು ಹಾಗೂ ಹೋರಾಟಗಾರರು ಹಾಜರಿದ್ದರು. ಜಾಥಾದ ಭಾಗವಾಗಿ...

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...

ಮತದಾನದ ಹಕ್ಕು ಪ್ರಜಾಪ್ರಭುತ್ವದ ಜೀವಾಳ: ತರೀಕೆರೆಯಲ್ಲಿ ಶಾಸಕ G.H ಶ್ರೀನಿವಾಸ್ ಅಭಿಮತ

ರಾಜ್ಯಾದ್ಯಂತ ನಡೆಯುತ್ತಿರುವ ಎಸ್‌ಐಆರ್ (SIR) ವಿರೋಧಿ ಜನಜಾಗೃತಿ ಜಾಥಾದ ನಾಲ್ಕನೇ ದಿನದ ಪಯಣ ಇಂದು ತರೀಕೆರೆಗೆ ತಲುಪಿತು. ಪ್ರಜಾಪ್ರಭುತ್ವದ ಅಡಿಪಾಯವಾಗಿರುವ ಮತದಾನದ ಹಕ್ಕನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ಈ ಜಾಥಾವನ್ನು, ತರೀಕೆರೆಯ ಜಾಗೃತ...