Homeಕರ್ನಾಟಕಹುಬ್ಬಳ್ಳಿ: ಕಿಮ್ಸ್ ಆಸ್ಪತ್ರೆಯಿಂದ ನಿನ್ನೆ ಹೆಣ್ಣು ಮಗು ಅಪಹರಣ, ಇಂದು ದಿಢೀರ್‌ ಪತ್ತೆ

ಹುಬ್ಬಳ್ಳಿ: ಕಿಮ್ಸ್ ಆಸ್ಪತ್ರೆಯಿಂದ ನಿನ್ನೆ ಹೆಣ್ಣು ಮಗು ಅಪಹರಣ, ಇಂದು ದಿಢೀರ್‌ ಪತ್ತೆ

- Advertisement -
- Advertisement -

ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ 40 ದಿನದ ಹೆಣ್ಣು ಮಗುವನ್ನು ಸೋಮವಾರ (ಜೂ.13) ಮಧ್ಯಾಹ್ನ ತಾಯಿಯ ಕೈಯಿಂದ ಕಿತ್ತುಕೊಂಡು ಹೋಗಲಾಗಿದೆ ಎಂದು ಆರೋಪಿಸಲಾಗಿತ್ತು. ಆದರೆ, ಇಂದು (ಜೂ.14) ಆಸ್ಪತ್ರೆಯ ಆವರಣದಲ್ಲಿ ಮಗು ಪತ್ತೆಯಾಗಿದೆ.

ಧಾರವಾಡ ಜಿಲ್ಲೆಯ ಕುಂದಗೋಳ ಪಟ್ಟಣದ ನಿವಾಸಿಯಾಗಿರುವ ಮಗುವಿನ ತಾಯಿ ಉಮ್ಮೆ ಜೈನಾಬ್ ಹೇಳುವಂತೆ, “ಸೋಮವಾರ ಮಧ್ಯಾಹ್ನ 1 ಗಂಟೆ ಸುಮಾರಿಗೆ, ನಾನು ಅಳುತ್ತಿರುವ ಮಗುವನ್ನು ಸಮಾಧಾನ ಮಾಡಲು ಪ್ರಯತ್ನಿಸುತ್ತಿದ್ದೆ. ಮಧ್ಯವಯಸ್ಕನೊಬ್ಬ ಕಪ್ಪು ಟೀ ಶರ್ಟ್ ಧರಿಸಿ ಬಂದ ವ್ಯಕ್ತಿ ನನ್ನ ಮಗುವನ್ನು ಕಿತ್ತುಕೊಂಡಾಗ ನಾನು ಎದ್ದು ಅವನ ಹಿಂದೆ ಓಡಲು ಪ್ರಯತ್ನಿಸಿದೆ. ಆದರೆ ಆಗಲ್ಲಿಲ್ಲ. ಆತ ವೇಗವಾಗಿ ಹೋರಟುಹೋದ. ನಾನು ಸಹಾಯಕ್ಕಾಗಿ ಕೂಗಿದೆ ಆದರೆ ಯಾರೂ ಇರಲಿಲ್ಲ” ಎಂದಿದ್ದರು.

ತಾಯಿ ಮತ್ತು ಸಂಬಂಧಿಕರು ಎಚ್ಚರಿಕೆ ನೀಡಿದ ಕೂಡಲೇ ಆಸ್ಪತ್ರೆಯ ಭದ್ರತಾ ಪ್ರಭಾರಿ ಪೊಲೀಸರಿಗೆ ಮಾಹಿತಿ ನೀಡಿದ್ದರು. ಆರೋಗ್ಯ ಸಮಸ್ಯೆ ಹಿನ್ನೆಲೆಯಲ್ಲಿ ಕಿಮ್ಸ್ ಆಸ್ಪತ್ರೆಯ ಮಕ್ಕಳ ವಿಭಾಗದಲ್ಲಿ ಮಗುವಿಗೆ ಚಿಕಿತ್ಸೆ ನೀಡಲಾಗುತ್ತಿತ್ತು.

ಇದನ್ನೂ ಓದಿ: ಬೆಂಗಳೂರು: ನಿಧಾನಗತಿಯಲ್ಲಿ ಕೊರೊನಾ ಏರಿಕೆ, ಎರಡು ಶಾಲೆಗಳಲ್ಲಿ 31 ಪ್ರಕರಣಗಳು

ವಿದ್ಯಾನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಆಸ್ಪತ್ರೆಗೆ ಭೇಟಿ ನೀಡಿ ತಾಯಿ ಹೇಳಿಕೆ ಹಾಗೂ ಪ್ರತ್ಯಕ್ಷದರ್ಶಿಗಳ ವಿಚಾರಣೆ ನಡೆಸಿದ್ದರು. ಸಿಸಿಟಿವಿ ಕ್ಯಾಮೆರಾ ದೃಶ್ಯಗಳನ್ನು ಪರಿಶೀಲಿಸಿ, ಆರೋಪಿಗಳ ಹುಡುಕಾಟಕ್ಕೆ ಎರಡು ತಂಡಗಳನ್ನು ರಚಿಸಿದ್ದರು.

ಇಂದು ಕಿಮ್ಸ್ ಆಸ್ಪತ್ರೆಯ ಕಾಂಪೌಂಡ್ ಬಳಿ ಮಗುವನ್ನಿಟ್ಟು ಪರಾರಿಯಾಗಿದ್ದಾರೆ. ನಿನ್ನೆ ಕಳ್ಳತನವಾಗಿದ್ದ ಮಗುವೇ ಇದು ಅನ್ನೋದು ಖಾತ್ರಿಯಾದ ಮೇಲೆ ತೀವ್ರ ನಿಗಾ ಘಟಕದಲ್ಲಿ ಇಟ್ಟು ಚಿಕಿತ್ಸೆ ಮುಂದುವರಿಸಲಾಗಿದೆ. ಪೊಲೀಸರ ತನಿಖೆಯ ಬಳಿಕ ಅಪಹರಣ ಮಾಡಿದ ಆರೋಪಿಗಳ ಬಗ್ಗೆ ತಿಳಿಯಬೇಕಾಗಿದೆ.

ಸಿಸಿಟಿವಿ ದೃಶ್ಯಗಳಲ್ಲಿ ಎಲ್ಲಿಯೂ ಮಗುವನ್ನು ಎತ್ತಿಕೊಂಡು ಓಡುತ್ತಿರುವ ಯಾವುದೇ ಸುಳಿವು ಸಿಲುಕಿಲ್ಲ. ಆಸ್ಪತ್ರೆಯಲ್ಲಿ ಬಿಗಿ ಭದ್ರತೆಯಿದ್ದರೂ ಮಗು ಹೇಗೆ ಕಳ್ಳತನವಾಯಿತು ಎಂಬ ಹಲವು ಅನುಮಾನಗಳು ವ್ಯಕ್ತವಾಗಿವೆ.


ಇದನ್ನೂ ಓದಿ: ಶ್ರೀರಂಗಪಟ್ಟಣದ ಜಾಮಿಯಾ ಮಸೀದಿ ವಿವಾದ; ಇತಿಹಾಸ ಏನು ಹೇಳುತ್ತದೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...