Homeಕರ್ನಾಟಕಹುಬ್ಬಳ್ಳಿ: ಕಿಮ್ಸ್ ಆಸ್ಪತ್ರೆಯಿಂದ ನಿನ್ನೆ ಹೆಣ್ಣು ಮಗು ಅಪಹರಣ, ಇಂದು ದಿಢೀರ್‌ ಪತ್ತೆ

ಹುಬ್ಬಳ್ಳಿ: ಕಿಮ್ಸ್ ಆಸ್ಪತ್ರೆಯಿಂದ ನಿನ್ನೆ ಹೆಣ್ಣು ಮಗು ಅಪಹರಣ, ಇಂದು ದಿಢೀರ್‌ ಪತ್ತೆ

- Advertisement -
- Advertisement -

ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ 40 ದಿನದ ಹೆಣ್ಣು ಮಗುವನ್ನು ಸೋಮವಾರ (ಜೂ.13) ಮಧ್ಯಾಹ್ನ ತಾಯಿಯ ಕೈಯಿಂದ ಕಿತ್ತುಕೊಂಡು ಹೋಗಲಾಗಿದೆ ಎಂದು ಆರೋಪಿಸಲಾಗಿತ್ತು. ಆದರೆ, ಇಂದು (ಜೂ.14) ಆಸ್ಪತ್ರೆಯ ಆವರಣದಲ್ಲಿ ಮಗು ಪತ್ತೆಯಾಗಿದೆ.

ಧಾರವಾಡ ಜಿಲ್ಲೆಯ ಕುಂದಗೋಳ ಪಟ್ಟಣದ ನಿವಾಸಿಯಾಗಿರುವ ಮಗುವಿನ ತಾಯಿ ಉಮ್ಮೆ ಜೈನಾಬ್ ಹೇಳುವಂತೆ, “ಸೋಮವಾರ ಮಧ್ಯಾಹ್ನ 1 ಗಂಟೆ ಸುಮಾರಿಗೆ, ನಾನು ಅಳುತ್ತಿರುವ ಮಗುವನ್ನು ಸಮಾಧಾನ ಮಾಡಲು ಪ್ರಯತ್ನಿಸುತ್ತಿದ್ದೆ. ಮಧ್ಯವಯಸ್ಕನೊಬ್ಬ ಕಪ್ಪು ಟೀ ಶರ್ಟ್ ಧರಿಸಿ ಬಂದ ವ್ಯಕ್ತಿ ನನ್ನ ಮಗುವನ್ನು ಕಿತ್ತುಕೊಂಡಾಗ ನಾನು ಎದ್ದು ಅವನ ಹಿಂದೆ ಓಡಲು ಪ್ರಯತ್ನಿಸಿದೆ. ಆದರೆ ಆಗಲ್ಲಿಲ್ಲ. ಆತ ವೇಗವಾಗಿ ಹೋರಟುಹೋದ. ನಾನು ಸಹಾಯಕ್ಕಾಗಿ ಕೂಗಿದೆ ಆದರೆ ಯಾರೂ ಇರಲಿಲ್ಲ” ಎಂದಿದ್ದರು.

ತಾಯಿ ಮತ್ತು ಸಂಬಂಧಿಕರು ಎಚ್ಚರಿಕೆ ನೀಡಿದ ಕೂಡಲೇ ಆಸ್ಪತ್ರೆಯ ಭದ್ರತಾ ಪ್ರಭಾರಿ ಪೊಲೀಸರಿಗೆ ಮಾಹಿತಿ ನೀಡಿದ್ದರು. ಆರೋಗ್ಯ ಸಮಸ್ಯೆ ಹಿನ್ನೆಲೆಯಲ್ಲಿ ಕಿಮ್ಸ್ ಆಸ್ಪತ್ರೆಯ ಮಕ್ಕಳ ವಿಭಾಗದಲ್ಲಿ ಮಗುವಿಗೆ ಚಿಕಿತ್ಸೆ ನೀಡಲಾಗುತ್ತಿತ್ತು.

ಇದನ್ನೂ ಓದಿ: ಬೆಂಗಳೂರು: ನಿಧಾನಗತಿಯಲ್ಲಿ ಕೊರೊನಾ ಏರಿಕೆ, ಎರಡು ಶಾಲೆಗಳಲ್ಲಿ 31 ಪ್ರಕರಣಗಳು

ವಿದ್ಯಾನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಆಸ್ಪತ್ರೆಗೆ ಭೇಟಿ ನೀಡಿ ತಾಯಿ ಹೇಳಿಕೆ ಹಾಗೂ ಪ್ರತ್ಯಕ್ಷದರ್ಶಿಗಳ ವಿಚಾರಣೆ ನಡೆಸಿದ್ದರು. ಸಿಸಿಟಿವಿ ಕ್ಯಾಮೆರಾ ದೃಶ್ಯಗಳನ್ನು ಪರಿಶೀಲಿಸಿ, ಆರೋಪಿಗಳ ಹುಡುಕಾಟಕ್ಕೆ ಎರಡು ತಂಡಗಳನ್ನು ರಚಿಸಿದ್ದರು.

ಇಂದು ಕಿಮ್ಸ್ ಆಸ್ಪತ್ರೆಯ ಕಾಂಪೌಂಡ್ ಬಳಿ ಮಗುವನ್ನಿಟ್ಟು ಪರಾರಿಯಾಗಿದ್ದಾರೆ. ನಿನ್ನೆ ಕಳ್ಳತನವಾಗಿದ್ದ ಮಗುವೇ ಇದು ಅನ್ನೋದು ಖಾತ್ರಿಯಾದ ಮೇಲೆ ತೀವ್ರ ನಿಗಾ ಘಟಕದಲ್ಲಿ ಇಟ್ಟು ಚಿಕಿತ್ಸೆ ಮುಂದುವರಿಸಲಾಗಿದೆ. ಪೊಲೀಸರ ತನಿಖೆಯ ಬಳಿಕ ಅಪಹರಣ ಮಾಡಿದ ಆರೋಪಿಗಳ ಬಗ್ಗೆ ತಿಳಿಯಬೇಕಾಗಿದೆ.

ಸಿಸಿಟಿವಿ ದೃಶ್ಯಗಳಲ್ಲಿ ಎಲ್ಲಿಯೂ ಮಗುವನ್ನು ಎತ್ತಿಕೊಂಡು ಓಡುತ್ತಿರುವ ಯಾವುದೇ ಸುಳಿವು ಸಿಲುಕಿಲ್ಲ. ಆಸ್ಪತ್ರೆಯಲ್ಲಿ ಬಿಗಿ ಭದ್ರತೆಯಿದ್ದರೂ ಮಗು ಹೇಗೆ ಕಳ್ಳತನವಾಯಿತು ಎಂಬ ಹಲವು ಅನುಮಾನಗಳು ವ್ಯಕ್ತವಾಗಿವೆ.


ಇದನ್ನೂ ಓದಿ: ಶ್ರೀರಂಗಪಟ್ಟಣದ ಜಾಮಿಯಾ ಮಸೀದಿ ವಿವಾದ; ಇತಿಹಾಸ ಏನು ಹೇಳುತ್ತದೆ?

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...