Homeಕರ್ನಾಟಕರಾಜಕೀಯಕ್ಕಾಗಿ ಕ್ರಿಮಿನಲ್‌ಗಳ ಪರ 'ಬಿಜೆಪಿ' ಪ್ರತಿಭಟನೆ

ರಾಜಕೀಯಕ್ಕಾಗಿ ಕ್ರಿಮಿನಲ್‌ಗಳ ಪರ ‘ಬಿಜೆಪಿ’ ಪ್ರತಿಭಟನೆ

- Advertisement -
- Advertisement -

ಹುಬ್ಬಳ್ಳಿಯಲ್ಲಿ ಮಳಿಗೆಗೆ ಬೆಂಕಿ ಹಚ್ಚಿ ಹಿಂಸಾಚಾರವನ್ನು ನಡೆಸಿದ್ದ ಆರೋಪಿ ಶ್ರೀಕಾಂತ್ ಪೂಜಾರಿಯನ್ನು ಇತ್ತೀಚೆಗೆ 31 ವರ್ಷಗಳ ಬಳಿಕ ಹುಬ್ಬಳ್ಳಿ ಪೊಲೀಸರು ಬಂಧಿಸಿದ್ದರು. ಹಳೆಯ ಕೇಸ್‌ ವಿಲೇವಾರಿ ಭಾಗವಾಗಿ  ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ್ದಾರೆ. ಇದೀಗ ಆರೋಪಿಯ ಬಂಧನ ವಿರೋಧಿಸಿ ಬಿಜೆಪಿ ಪ್ರತಿಭಟನೆಯನ್ನು ನಡೆಸುತ್ತಿದೆ. ಲೋಕಸಭೆ ಚುನಾವಣೆ ಹಿನ್ನೆಲೆ  ಹದ್ದಿನಂತೆ ಕಾಯುತ್ತಿದ್ದ ಬಿಜೆಪಿ ಇದನ್ನೇ ರಾಜಕೀಯಕ್ಕೆ ಬಳಸಿಕೊಂಡಿದ್ದು, ತಮ್ಮ ಕೀಳು ಮಟ್ಟದ ರಾಜಕೀಯಕ್ಕೆ ಕ್ರಿಮಿನಲ್‌ ಓರ್ವನ ಬಂಧನವನ್ನು ಅಸ್ತ್ರವಾಗಿ ಬಳಸಿರುವುದು ವಿಪರ್ಯಾಸವೇ ಆಗಿದೆ.

ಹುಬ್ಬಳ್ಳಿ ಶಹರ ಠಾಣೆ ಪೊಲೀಸರಿಂದ ಬಂಧಿತ ಶ್ರೀಕಾಂತ ಪೂಜಾರಿಯ ಹಿನ್ನೆಲೆ ನೋಡಿದಾಗ ಆತ ಕ್ರಿಮಿನಲ್‌ ಎನ್ನುವುದು ಬಯಲಾಗಿದೆ. ಆತನ ಮೇಲೆ ಒಟ್ಟು 15 ಪ್ರಕರಣಗಳಿರುವ ಬಗ್ಗೆ ವರದಿಯಾಗಿದೆ. ಹುಬ್ಬಳ್ಳಿಯ ಕಸಬಾಪೇಟೆ ಪೊಲೀಸ್ ಠಾಣೆ, ಹಳೇಹುಬ್ಬಳ್ಳಿ ಪೊಲೀಸ್ ಠಾಣೆ, ವಿದ್ಯಾನಗರ ಪೊಲೀಸ್ ಠಾಣೆ ಹಾಗೂ ಶಹರ ಪೊಲೀಸ್‌ ಠಾಣೆಯಲ್ಲಿ ಆತನ ವಿರುದ್ಧ ಪ್ರಕರಣಗಳಿವೆ. ಇದರಲ್ಲಿ 11 ಕೇಸ್ ಗಳು ಅಕ್ರಮ ಸರಾಯಿ ಮಾರಾಟದ ಕುರಿತು ಕೇಸ್‌ಗಳಾಗಿದೆ. ಕಸಬಾಪೇಟೆ ಪೊಲೀಸ್ ಠಾಣೆಯಲ್ಲಿ 3 ಕೇಸ್ ಹಾಗೂ ಶಹರ ಠಾಣೆಯಲ್ಲಿ ಅಂಗಡಿಗೆ ಬೆಂಕಿ ಹಚ್ಚಿದ ಕೇಸ್ ದಾಖಲಾಗಿದೆ.

ಶ್ರೀಕಾಂತ್‌ಗೆ ‘ಕರಸೇವಕನ’ ಹಣೆ ಪಟ್ಟಿ ಕಟ್ಟಿ ಬಂಧನ ಖಂಡಿಸಿ ಧಾರವಾಡದಲ್ಲಿ ಬಿಜೆಪಿ ಪ್ರತಿಭಟನೆ ನಡೆಸಿದೆ. ಈ ವೇಳೆ ಶಹರ ಪೊಲೀಸ್‌ ಠಾಣೆಗೆ ಮುತ್ತಗೆ ಹಾಕಲು ಯತ್ನಿಸಿದ ವಿರೋಧ ಪಕ್ಷದ ನಾಯಕ ಆರ್‌ ಅಶೋಕ್ ಸೇರಿದಂತೆ  ಹಲವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

1992ರ ಡಿ.5ರಂದು ಮಳಿಗೆಗಳಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿ 8 ಜನರ ವಿರುದ್ಧ ಹುಬ್ಬಳ್ಳಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದರಲ್ಲಿ ಮೂವರು ಈಗಾಗಲೇ ಮೃತಪಟ್ಟಿದ್ದು, ಇತರ ಆರೋಪಿಗಳ ಪತ್ತೆಗೆ ಇತ್ತೀಚೆಗೆ ಪೊಲೀಸರು ಬಲೆ ಬೀಸಿದ್ದರು. ಆ ಮೂಲಕ 1992ರ ಹಬ್ಬಳ್ಳಿ ಗಲಭೆ ಕೇಸ್‌ ಮರುಜೀವ ಪಡೆದುಕೊಂಡಿತ್ತು. ಇನ್ನುಳಿದ ಆರೋಪಿಗಳಾದ ರಾಜು ಧರ್ಮದಾಸ್, ಶ್ರೀಕಾಂತ್ ಪೂಜಾರಿ, ಅಶೋಕ್ ಕಲಬುರಗಿ, ಷಣ್ಮುಖ ಕಾಟಗಾರ, ಗುರುನಾಥಸಾ ಕಾಟಿಗಾರ, ರಾಮಚಂದ್ರಸಾ ಕಲಬುರಗಿ ಹಾಗೂ ಅಮೃತ ಕಲಬುರಗಿಗಾಗಿ ಪೊಲೀಸರು ಹುಡುಕಾಟ ನಡೆಸಲು ತಂಡ ರಚನೆ ಮಾಡಿದ್ದರು.

ಬಿಜೆಪಿಯ ಈ ಪ್ರತಿಭಟನೆ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ಹಿಂದುತ್ವ ಮುಂದಿಟ್ಟುಕೊಂಡು ತಪ್ಪು ಮಾಡಿದವರನ್ನು ರಕ್ಷಿಸಿ ಶಿಕ್ಷೆ ನೀಡಬಾರದೆಂದು ಬಿಜೆಪಿ ಪ್ರತಿಭಟನೆ ಮಾಡುತ್ತಿದ್ದಾರೆ. ಈ ಪ್ರಶ್ನೆಯನ್ನು ಮಾಧ್ಯಮದವರು ಬಿಜೆಪಿಯವರಿಗೆ ಕೇಳಬೇಕು. ಅಪರಾಧ ಮಾಡಿರುವವರ ವಿರುದ್ಧ ಮಾತ್ರ ಕ್ರಮ ಕೈಗೊಳ್ಳಲಾಗುತ್ತಿದೆ. ನಿರಪರಾಧಿಗಳ ವಿರುದ್ಧ ಯಾವುದೇ ಕಾನೂನು ಕ್ರಮ ಜರುಗಿಸುವುದಿಲ್ಲ ಎಂದು ಹೇಳಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಶಾಸಕ ಪ್ರಸಾದ್ ಅಬ್ಬಯ್ಯ, ಕ್ರಿಮಿನಲ್‌ಗಳ ಪರವಾಗಿ ವಿಪಕ್ಷ ನಾಯಕ ಆರ್ ಅಶೋಕ್ ಮತ್ತು ಬಿಜೆಪಿ ನಾಯಕರು ಪ್ರತಿಭಟನೆ ನಡೆಸುತ್ತಿರುವುದು ನಾಚಿಕೆಗೇಡಿನ ಸಂಗತಿ. ರಾಜಕೀಯಕ್ಕಾಗಿ ರೌಡಿಶೀಟರ್‌ಗಳ ಪರವಾಗಿ ಬಿಜೆಪಿ ಪ್ರತಿಭಟನೆ ನಡೆಸುತ್ತಿದೆ. ರಾಜ್ಯದಲ್ಲಿ ನಾನಾ ಸಮಸ್ಯೆಗಳಿವೆ. ಅವುಗಳ ಬಗ್ಗೆ ಬಿಜೆಪಿ ಗಮನ ಹರಿಸುತ್ತಿಲ್ಲ. ಬದಲಾಗಿ ರಾಜಕೀಯಕ್ಕಾಗಿ ಕ್ರಿಮಿನಲ್‌ಗಳ ಪರವಾಗಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತಿದೆ. ಇದು ಬಿಜೆಪಿಯ ಹತಾಶೆಯನ್ನು ಸೂಚಿಸುತ್ತದೆ. ಬಿಜೆಪಿಗರಿಗೆ ಕ್ರಿಮಿನಲ್​ಗಳ ಮೇಲೆ ಪ್ರೀತಿ ಇದ್ದರೆ, ತಮ್ಮದೇ ಸರ್ಕಾರ ಇದ್ದಾಗ ತಮ್ಮ ಭಕ್ತರ ಮೇಲಿನ ಪ್ರಕರಣಗಳನ್ನು ಖುಲಾಸೆ ಮಾಡಿಕೊಳ್ಳಬೇಕಿತ್ತು. ಅವರಿಗೆ ತಮ್ಮ ಕಾರ್ಯಕರ್ತರ ಮೇಲೆ ಪ್ರಕರಣಗಳು ಇರಬೇಕು. ಅವರು ಓಡಾಡಬೇಕೆಂಬ ದುರುದ್ದೇಶವಿದೆ ಎಂದು ಹೇಳಿದ್ದಾರೆ.

ಶ್ರೀಕಾಂತ್‌ ಬಂಧನದ ಕುರಿತು ಮಾತನಾಡಿದ ಬಿಕೆ ಹರಿಪ್ರಸಾದ್‌, ಹೋರಾಟಕ್ಕೂ ಅಪರಾಧಕ್ಕೂ ವ್ಯತ್ಯಾಸ ಇದೆ. ಕರಸೇವಕ ಅಂತಾ ಯಾವುದೋ ಅಪರಾಧ ಪ್ರಕರಣದಲ್ಲಿ ಇರುವವರನ್ನು ಹಾಗೆಯೇ ಬಿಡಲು ಆಗುವುದಿಲ್ಲ. ಬಂಧಿತನ ಮೇಲೆ 13 ಪ್ರಕರಣಗಳಿವೆ. ಕಾನೂನುಬಾಹಿರ ಅಪರಾಧ ಮಾಡಿದ್ದಾರೆ. ಧರ್ಮದ ಹೆಸರಲ್ಲಿ ಏನೇನು ಕೆಲಸ ಮಾಡಿದ್ದಾರೆ ಅಂತಾ ಗೊತ್ತಿದೆ ಎಂದು ತಿಳಿಸಿದ್ದಾರೆ.

ಈ ಬಗ್ಗೆ ಮಾತನಾಡಿದ ಡಿಕೆ ಶಿವಕುಮಾರ್‌, ಬಿಜೆಪಿ ಈ ವಿಚಾರದಲ್ಲಿ ರಾಜಕೀಯ ಸ್ಟಂಟ್ ಮಾಡುತ್ತಿದೆ. ಬಾಕಿ ಪ್ರಕರಣಗಳ ವಿಲೇವಾರಿಗೆ ಸರ್ಕಾರ ಮುಂದಾಗಿರುವುದಾಗಿ ಗೃಹ ಸಚಿವರು ಈಗಾಗಲೇ ಸ್ಪಷ್ಟನೆ ನೀಡಿದ್ದಾರೆ. ಯಾರು ರಾಜ್ಯಕ್ಕೆ ಅಗೌರವ ನೀಡಿದ್ದಾರೆ, ಯಾರು ಕಾನೂನು ಉಲ್ಲಂಘಿಸಿದ್ದಾರೆ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು. ಇದರಲ್ಲಿ ವಿಶೇಷ ಏನೂ ಇಲ್ಲ ಎಂದು ಹೇಳಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿದ್ದ ಗೃಹಸಚಿವ ಡಾ.ಜಿ.ಪರಮೇಶ್ವರ್‌, ದೀರ್ಘಕಾಲದಿಂದ ಬಾಕಿ ಉಳಿದಿರುವ ಹಳೆಯ ಪ್ರಕರಣ​ಗಳನ್ನು ಕ್ಲಿಯರ್ ಮಾಡುವಂತೆ ಆದೇಶ ಕೊಟ್ಟಿದ್ದೇವೆ. ಇದರ ಭಾಗವಾಗಿ ಬಾಬರಿ ಮಸೀದಿ ಧ್ವಂಸ ಸಂದರ್ಭ ಹುಬ್ಬಳ್ಳಿಯಲ್ಲಿ ಗಲಭೆ ಕೇಸ್‌ಗೆ ಸಂಬಂಧಿಸಿ ಓರ್ವನನ್ನು ಬಂಧಿಸಲಾಗಿದೆ. ಪ್ರಕರಣಕ್ಕೆ ಹಿಂದೂ ಕಾರ್ಯಕರ್ತರ ಬಣ್ಣ ಹಚ್ಚುವುದು ಸೂಕ್ತವಲ್ಲ. ಕಾನೂನಿನ ಅಡಿಯಲ್ಲಿ ಪೊಲೀಸ್ ಇಲಾಖೆ ಕ್ರಮ ಕೈಗೊಳ್ಳುತ್ತದೆ. ಉದ್ದೇಶ ಪೂರಕವಾಗಿ ಯಾವುದನ್ನು ಮಾಡುತ್ತಿಲ್ಲ ಎಂದು ಹೇಳಿದ್ದಾರೆ.

ಕೆಪಿಸಿಸಿ ವಕ್ತಾರ ರಮೇಶ್‌ ಈ ಬಗ್ಗೆ ಮಾತನಾಡಿದ್ದು, ಶ್ರೀಕಾಂತ್ ಪೂಜಾರಿ ಬಂಧನವನ್ನು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಯವರು ತಮ್ಮ ರಾಜಕೀಯ ಅಸ್ತಿತ್ವಕ್ಕಾಗಿ ಲೋಕಸಭಾ ಚುನಾವಣೆಗೆ ಬಳಸಿಕೊಳ್ಳುವ ವ್ಯವಸ್ಥಿತ ಪಿತೂರಿ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ.

ಇದನ್ನು ಓದಿ:CAA ಬಿಜೆಪಿಯ ಚುನಾವಣಾ ಅಸ್ತ್ರ: ಅಧಿಸೂಚನೆಗೆ ಪ್ರತಿಪಕ್ಷಗಳ ವಿರೋಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...