Homeಕರ್ನಾಟಕರಾಜಕೀಯಕ್ಕಾಗಿ ಕ್ರಿಮಿನಲ್‌ಗಳ ಪರ 'ಬಿಜೆಪಿ' ಪ್ರತಿಭಟನೆ

ರಾಜಕೀಯಕ್ಕಾಗಿ ಕ್ರಿಮಿನಲ್‌ಗಳ ಪರ ‘ಬಿಜೆಪಿ’ ಪ್ರತಿಭಟನೆ

- Advertisement -
- Advertisement -

ಹುಬ್ಬಳ್ಳಿಯಲ್ಲಿ ಮಳಿಗೆಗೆ ಬೆಂಕಿ ಹಚ್ಚಿ ಹಿಂಸಾಚಾರವನ್ನು ನಡೆಸಿದ್ದ ಆರೋಪಿ ಶ್ರೀಕಾಂತ್ ಪೂಜಾರಿಯನ್ನು ಇತ್ತೀಚೆಗೆ 31 ವರ್ಷಗಳ ಬಳಿಕ ಹುಬ್ಬಳ್ಳಿ ಪೊಲೀಸರು ಬಂಧಿಸಿದ್ದರು. ಹಳೆಯ ಕೇಸ್‌ ವಿಲೇವಾರಿ ಭಾಗವಾಗಿ  ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ್ದಾರೆ. ಇದೀಗ ಆರೋಪಿಯ ಬಂಧನ ವಿರೋಧಿಸಿ ಬಿಜೆಪಿ ಪ್ರತಿಭಟನೆಯನ್ನು ನಡೆಸುತ್ತಿದೆ. ಲೋಕಸಭೆ ಚುನಾವಣೆ ಹಿನ್ನೆಲೆ  ಹದ್ದಿನಂತೆ ಕಾಯುತ್ತಿದ್ದ ಬಿಜೆಪಿ ಇದನ್ನೇ ರಾಜಕೀಯಕ್ಕೆ ಬಳಸಿಕೊಂಡಿದ್ದು, ತಮ್ಮ ಕೀಳು ಮಟ್ಟದ ರಾಜಕೀಯಕ್ಕೆ ಕ್ರಿಮಿನಲ್‌ ಓರ್ವನ ಬಂಧನವನ್ನು ಅಸ್ತ್ರವಾಗಿ ಬಳಸಿರುವುದು ವಿಪರ್ಯಾಸವೇ ಆಗಿದೆ.

ಹುಬ್ಬಳ್ಳಿ ಶಹರ ಠಾಣೆ ಪೊಲೀಸರಿಂದ ಬಂಧಿತ ಶ್ರೀಕಾಂತ ಪೂಜಾರಿಯ ಹಿನ್ನೆಲೆ ನೋಡಿದಾಗ ಆತ ಕ್ರಿಮಿನಲ್‌ ಎನ್ನುವುದು ಬಯಲಾಗಿದೆ. ಆತನ ಮೇಲೆ ಒಟ್ಟು 15 ಪ್ರಕರಣಗಳಿರುವ ಬಗ್ಗೆ ವರದಿಯಾಗಿದೆ. ಹುಬ್ಬಳ್ಳಿಯ ಕಸಬಾಪೇಟೆ ಪೊಲೀಸ್ ಠಾಣೆ, ಹಳೇಹುಬ್ಬಳ್ಳಿ ಪೊಲೀಸ್ ಠಾಣೆ, ವಿದ್ಯಾನಗರ ಪೊಲೀಸ್ ಠಾಣೆ ಹಾಗೂ ಶಹರ ಪೊಲೀಸ್‌ ಠಾಣೆಯಲ್ಲಿ ಆತನ ವಿರುದ್ಧ ಪ್ರಕರಣಗಳಿವೆ. ಇದರಲ್ಲಿ 11 ಕೇಸ್ ಗಳು ಅಕ್ರಮ ಸರಾಯಿ ಮಾರಾಟದ ಕುರಿತು ಕೇಸ್‌ಗಳಾಗಿದೆ. ಕಸಬಾಪೇಟೆ ಪೊಲೀಸ್ ಠಾಣೆಯಲ್ಲಿ 3 ಕೇಸ್ ಹಾಗೂ ಶಹರ ಠಾಣೆಯಲ್ಲಿ ಅಂಗಡಿಗೆ ಬೆಂಕಿ ಹಚ್ಚಿದ ಕೇಸ್ ದಾಖಲಾಗಿದೆ.

ಶ್ರೀಕಾಂತ್‌ಗೆ ‘ಕರಸೇವಕನ’ ಹಣೆ ಪಟ್ಟಿ ಕಟ್ಟಿ ಬಂಧನ ಖಂಡಿಸಿ ಧಾರವಾಡದಲ್ಲಿ ಬಿಜೆಪಿ ಪ್ರತಿಭಟನೆ ನಡೆಸಿದೆ. ಈ ವೇಳೆ ಶಹರ ಪೊಲೀಸ್‌ ಠಾಣೆಗೆ ಮುತ್ತಗೆ ಹಾಕಲು ಯತ್ನಿಸಿದ ವಿರೋಧ ಪಕ್ಷದ ನಾಯಕ ಆರ್‌ ಅಶೋಕ್ ಸೇರಿದಂತೆ  ಹಲವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

1992ರ ಡಿ.5ರಂದು ಮಳಿಗೆಗಳಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿ 8 ಜನರ ವಿರುದ್ಧ ಹುಬ್ಬಳ್ಳಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದರಲ್ಲಿ ಮೂವರು ಈಗಾಗಲೇ ಮೃತಪಟ್ಟಿದ್ದು, ಇತರ ಆರೋಪಿಗಳ ಪತ್ತೆಗೆ ಇತ್ತೀಚೆಗೆ ಪೊಲೀಸರು ಬಲೆ ಬೀಸಿದ್ದರು. ಆ ಮೂಲಕ 1992ರ ಹಬ್ಬಳ್ಳಿ ಗಲಭೆ ಕೇಸ್‌ ಮರುಜೀವ ಪಡೆದುಕೊಂಡಿತ್ತು. ಇನ್ನುಳಿದ ಆರೋಪಿಗಳಾದ ರಾಜು ಧರ್ಮದಾಸ್, ಶ್ರೀಕಾಂತ್ ಪೂಜಾರಿ, ಅಶೋಕ್ ಕಲಬುರಗಿ, ಷಣ್ಮುಖ ಕಾಟಗಾರ, ಗುರುನಾಥಸಾ ಕಾಟಿಗಾರ, ರಾಮಚಂದ್ರಸಾ ಕಲಬುರಗಿ ಹಾಗೂ ಅಮೃತ ಕಲಬುರಗಿಗಾಗಿ ಪೊಲೀಸರು ಹುಡುಕಾಟ ನಡೆಸಲು ತಂಡ ರಚನೆ ಮಾಡಿದ್ದರು.

ಬಿಜೆಪಿಯ ಈ ಪ್ರತಿಭಟನೆ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ಹಿಂದುತ್ವ ಮುಂದಿಟ್ಟುಕೊಂಡು ತಪ್ಪು ಮಾಡಿದವರನ್ನು ರಕ್ಷಿಸಿ ಶಿಕ್ಷೆ ನೀಡಬಾರದೆಂದು ಬಿಜೆಪಿ ಪ್ರತಿಭಟನೆ ಮಾಡುತ್ತಿದ್ದಾರೆ. ಈ ಪ್ರಶ್ನೆಯನ್ನು ಮಾಧ್ಯಮದವರು ಬಿಜೆಪಿಯವರಿಗೆ ಕೇಳಬೇಕು. ಅಪರಾಧ ಮಾಡಿರುವವರ ವಿರುದ್ಧ ಮಾತ್ರ ಕ್ರಮ ಕೈಗೊಳ್ಳಲಾಗುತ್ತಿದೆ. ನಿರಪರಾಧಿಗಳ ವಿರುದ್ಧ ಯಾವುದೇ ಕಾನೂನು ಕ್ರಮ ಜರುಗಿಸುವುದಿಲ್ಲ ಎಂದು ಹೇಳಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಶಾಸಕ ಪ್ರಸಾದ್ ಅಬ್ಬಯ್ಯ, ಕ್ರಿಮಿನಲ್‌ಗಳ ಪರವಾಗಿ ವಿಪಕ್ಷ ನಾಯಕ ಆರ್ ಅಶೋಕ್ ಮತ್ತು ಬಿಜೆಪಿ ನಾಯಕರು ಪ್ರತಿಭಟನೆ ನಡೆಸುತ್ತಿರುವುದು ನಾಚಿಕೆಗೇಡಿನ ಸಂಗತಿ. ರಾಜಕೀಯಕ್ಕಾಗಿ ರೌಡಿಶೀಟರ್‌ಗಳ ಪರವಾಗಿ ಬಿಜೆಪಿ ಪ್ರತಿಭಟನೆ ನಡೆಸುತ್ತಿದೆ. ರಾಜ್ಯದಲ್ಲಿ ನಾನಾ ಸಮಸ್ಯೆಗಳಿವೆ. ಅವುಗಳ ಬಗ್ಗೆ ಬಿಜೆಪಿ ಗಮನ ಹರಿಸುತ್ತಿಲ್ಲ. ಬದಲಾಗಿ ರಾಜಕೀಯಕ್ಕಾಗಿ ಕ್ರಿಮಿನಲ್‌ಗಳ ಪರವಾಗಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತಿದೆ. ಇದು ಬಿಜೆಪಿಯ ಹತಾಶೆಯನ್ನು ಸೂಚಿಸುತ್ತದೆ. ಬಿಜೆಪಿಗರಿಗೆ ಕ್ರಿಮಿನಲ್​ಗಳ ಮೇಲೆ ಪ್ರೀತಿ ಇದ್ದರೆ, ತಮ್ಮದೇ ಸರ್ಕಾರ ಇದ್ದಾಗ ತಮ್ಮ ಭಕ್ತರ ಮೇಲಿನ ಪ್ರಕರಣಗಳನ್ನು ಖುಲಾಸೆ ಮಾಡಿಕೊಳ್ಳಬೇಕಿತ್ತು. ಅವರಿಗೆ ತಮ್ಮ ಕಾರ್ಯಕರ್ತರ ಮೇಲೆ ಪ್ರಕರಣಗಳು ಇರಬೇಕು. ಅವರು ಓಡಾಡಬೇಕೆಂಬ ದುರುದ್ದೇಶವಿದೆ ಎಂದು ಹೇಳಿದ್ದಾರೆ.

ಶ್ರೀಕಾಂತ್‌ ಬಂಧನದ ಕುರಿತು ಮಾತನಾಡಿದ ಬಿಕೆ ಹರಿಪ್ರಸಾದ್‌, ಹೋರಾಟಕ್ಕೂ ಅಪರಾಧಕ್ಕೂ ವ್ಯತ್ಯಾಸ ಇದೆ. ಕರಸೇವಕ ಅಂತಾ ಯಾವುದೋ ಅಪರಾಧ ಪ್ರಕರಣದಲ್ಲಿ ಇರುವವರನ್ನು ಹಾಗೆಯೇ ಬಿಡಲು ಆಗುವುದಿಲ್ಲ. ಬಂಧಿತನ ಮೇಲೆ 13 ಪ್ರಕರಣಗಳಿವೆ. ಕಾನೂನುಬಾಹಿರ ಅಪರಾಧ ಮಾಡಿದ್ದಾರೆ. ಧರ್ಮದ ಹೆಸರಲ್ಲಿ ಏನೇನು ಕೆಲಸ ಮಾಡಿದ್ದಾರೆ ಅಂತಾ ಗೊತ್ತಿದೆ ಎಂದು ತಿಳಿಸಿದ್ದಾರೆ.

ಈ ಬಗ್ಗೆ ಮಾತನಾಡಿದ ಡಿಕೆ ಶಿವಕುಮಾರ್‌, ಬಿಜೆಪಿ ಈ ವಿಚಾರದಲ್ಲಿ ರಾಜಕೀಯ ಸ್ಟಂಟ್ ಮಾಡುತ್ತಿದೆ. ಬಾಕಿ ಪ್ರಕರಣಗಳ ವಿಲೇವಾರಿಗೆ ಸರ್ಕಾರ ಮುಂದಾಗಿರುವುದಾಗಿ ಗೃಹ ಸಚಿವರು ಈಗಾಗಲೇ ಸ್ಪಷ್ಟನೆ ನೀಡಿದ್ದಾರೆ. ಯಾರು ರಾಜ್ಯಕ್ಕೆ ಅಗೌರವ ನೀಡಿದ್ದಾರೆ, ಯಾರು ಕಾನೂನು ಉಲ್ಲಂಘಿಸಿದ್ದಾರೆ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು. ಇದರಲ್ಲಿ ವಿಶೇಷ ಏನೂ ಇಲ್ಲ ಎಂದು ಹೇಳಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿದ್ದ ಗೃಹಸಚಿವ ಡಾ.ಜಿ.ಪರಮೇಶ್ವರ್‌, ದೀರ್ಘಕಾಲದಿಂದ ಬಾಕಿ ಉಳಿದಿರುವ ಹಳೆಯ ಪ್ರಕರಣ​ಗಳನ್ನು ಕ್ಲಿಯರ್ ಮಾಡುವಂತೆ ಆದೇಶ ಕೊಟ್ಟಿದ್ದೇವೆ. ಇದರ ಭಾಗವಾಗಿ ಬಾಬರಿ ಮಸೀದಿ ಧ್ವಂಸ ಸಂದರ್ಭ ಹುಬ್ಬಳ್ಳಿಯಲ್ಲಿ ಗಲಭೆ ಕೇಸ್‌ಗೆ ಸಂಬಂಧಿಸಿ ಓರ್ವನನ್ನು ಬಂಧಿಸಲಾಗಿದೆ. ಪ್ರಕರಣಕ್ಕೆ ಹಿಂದೂ ಕಾರ್ಯಕರ್ತರ ಬಣ್ಣ ಹಚ್ಚುವುದು ಸೂಕ್ತವಲ್ಲ. ಕಾನೂನಿನ ಅಡಿಯಲ್ಲಿ ಪೊಲೀಸ್ ಇಲಾಖೆ ಕ್ರಮ ಕೈಗೊಳ್ಳುತ್ತದೆ. ಉದ್ದೇಶ ಪೂರಕವಾಗಿ ಯಾವುದನ್ನು ಮಾಡುತ್ತಿಲ್ಲ ಎಂದು ಹೇಳಿದ್ದಾರೆ.

ಕೆಪಿಸಿಸಿ ವಕ್ತಾರ ರಮೇಶ್‌ ಈ ಬಗ್ಗೆ ಮಾತನಾಡಿದ್ದು, ಶ್ರೀಕಾಂತ್ ಪೂಜಾರಿ ಬಂಧನವನ್ನು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಯವರು ತಮ್ಮ ರಾಜಕೀಯ ಅಸ್ತಿತ್ವಕ್ಕಾಗಿ ಲೋಕಸಭಾ ಚುನಾವಣೆಗೆ ಬಳಸಿಕೊಳ್ಳುವ ವ್ಯವಸ್ಥಿತ ಪಿತೂರಿ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ.

ಇದನ್ನು ಓದಿ:CAA ಬಿಜೆಪಿಯ ಚುನಾವಣಾ ಅಸ್ತ್ರ: ಅಧಿಸೂಚನೆಗೆ ಪ್ರತಿಪಕ್ಷಗಳ ವಿರೋಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...

ಮಾನವೀಯತೆ ಮರೆತ ಪಂಚಾಯಿತಿ: 3 ವರ್ಷದ ಮಗುವಿನ ಮೇಲಿನ ಅತ್ಯಾಚಾರ ಪ್ರಕರಣ ಮುಚ್ಚಿಹಾಕಲು 1 ಲಕ್ಷ ರೂ.ದಂಡ, ಆ ಹಣದಲ್ಲೇ ಮದ್ಯದ ಪಾರ್ಟಿ!

ರಾಂಚಿ: ಜಾರ್ಖಂಡ್‌ನ ಗುಮ್ಲಾ ಜಿಲ್ಲೆಯ ಘಾಗ್ರಾ ಪೊಲೀಸ್ ಠಾಣಾ ವ್ಯಾಪ್ತಿಯ ಪಾಲ್ಮಾ ಗ್ರಾಮದಲ್ಲಿ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ವಿಕೃತ ಘಟನೆಯೊಂದು ಬೆಳಕಿಗೆ ಬಂದಿದೆ. ಮೂರು ವರ್ಷದ ಮಗುವಿನ ಮೇಲೆ ನಡೆದ ಭೀಕರ...

ಪೆಟ್ರೋಲ್ – ಎಥೆನಾಲ್ ಕುರಿತ ಮಾಹಿತಿ ಒದಗಿಸುವಂತೆ ತೈಲ ಸಚಿವಾಲಯಕ್ಕೆ ಕೇಂದ್ರ ಮಾಹಿತಿ ಆಯೋಗ ಆದೇಶ

ಪೆಟ್ರೋಲ್ ಉತ್ಪಾದನೆ ಮತ್ತು ಆಮದು, ಎಥೆನಾಲ್ ಸಂಗ್ರಹಣೆ, ಮಿಶ್ರಣ ಮತ್ತು ಪೆಟ್ರೋಲಿಯಂ ವಲಯದ ಲಾಭದ ಕುರಿತ ಹಿಂದಿನ ಡೇಟಾವನ್ನು ಬಹಿರಂಗಪಡಿಸುವಂತೆ ತೈಲ ಸಚಿವಾಲಯದ ಯೋಜನಾ ವಿಭಾಗವಾದ ಪೆಟ್ರೋಲಿಯಂ ಯೋಜನೆ ಮತ್ತು ವಿಶ್ಲೇಷಣಾ ಕೋಶ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣ : ಮುಸ್ಲಿಮರ ಮೇಲ್ಮನವಿ ವಿಚಾರಣೆಗೆ ಸುಪ್ರೀಂ ಸಮ್ಮತಿ; ಮಧ್ಯಂತರ ನಮಾಝ್‌ಗೆ ನಿರಾಕರಣೆ

ಮಧ್ಯಪ್ರದೇಶದ ಧಾರ್‌ನಲ್ಲಿರುವ ಐತಿಹಾಸಿಕ ಭೋಜ್‌ಶಾಲಾ-ಕಮಲ್ ಮೌಲಾ ಸಂಕೀರ್ಣವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು ಘೋಷಿಸಿ, ಅಲ್ಲಿ ನಮಾಝ್ ಮಾಡುವುದನ್ನು ನಿಷೇಧಿಸಿರುವ ಮಧ್ಯಪ್ರದೇಶ ಹೈಕೋರ್ಟ್‌ನ ತೀರ್ಪನ್ನು ಪ್ರಶ್ನಿಸಿ, ವಿವಿಧ ಮುಸ್ಲಿಂ ಸಂಘಟನೆಗಳು ಸಲ್ಲಿಸಿರುವ...

ತೀವ್ರ ಹದಗೆಟ್ಟ ಸೋನಮ್ ವಾಂಗ್ಚುಕ್ ಆರೋಗ್ಯ : ಉಪವಾಸ ಕೈ ಬಿಡುವಂತೆ ವಿಪಕ್ಷ ನಾಯಕರಿಂದ ಮನವಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಶಿಕ್ಷಣ ತಜ್ಞ ಹಾಗೂ ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರಿಗೆ ತಮ್ಮ ಪ್ರತಿಭಟನೆಯನ್ನು ಕೊನೆಗೊಳಿಸುವಂತೆ ವಿರೋಧ ಪಕ್ಷಗಳ ನಾಯಕರು ಮಂಗಳವಾರ (ಜು.14) ಮನವಿ...

ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇ ಸಮೀಪವೇ ರಸ್ತೆಯಿಲ್ಲ; ಬಟ್ಟೆ ಜೋಲಿಯಲ್ಲಿ ಗರ್ಭಿಣಿಯನ್ನು ಆಸ್ಪತ್ರೆಗೆ ಸಾಗಿಸಿದ ಉಂಬರಾನೆ ವಾಡಿಯ ಜನ

ಖಲಾಪುರ (ರಾಯಗಢ): ಗರ್ಭಿಣಿಯನ್ನು ಯೋಗ್ಯವಾದ ರಸ್ತೆ, ಆಂಬ್ಯುಲೆನ್ಸ್ ಇಲ್ಲದ ಕಾರಣ ಬಟ್ಟೆಯ ಜೋಳಿಗೆಯಲ್ಲಿ ಆಸ್ಪತ್ರೆಗೆ ಸಾಗಿಸಿದ ಹೃದಯ ವಿದ್ರಾವಕ ಘಟನೆ ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಖಲಾಪುರ ತಾಲ್ಲೂಕಿಗೆ ಸೇರಿದ ಉಂಬರಾನೆ ವಾಡಿಯಲ್ಲಿ ನಡೆದಿದೆ.  ದೇಶದಲ್ಲೇ...

ಕಾಜಿರಂಗ ಹೋಟೆಲ್ ಯೋಜನೆ ವಿರುದ್ಧ ಪ್ರತಿಭಟನೆ: ಅಸ್ಸಾಂ ಹೋರಾಟಗಾರ ಪ್ರಣಬ್ ಡೋಲೆ ಅಕ್ರಮ ಬಂಧನ: ಜಿಕೆಎಲ್‌ಎಚ್‌ಆರ್‌ಪಿಸಿ ಗಂಭೀರ ಆರೋಪ

ಗುವಾಹಟಿ: ವಿಶ್ವಪ್ರಸಿದ್ಧ ಕಾಜಿರಂಗ ರಾಷ್ಟ್ರೀಯ ಉದ್ಯಾನವನದ ಸಮೀಪ ಪ್ರಸ್ತಾವಿತ ಐಷಾರಾಮಿ ಪಂಚತಾರಾ ಹೋಟೆಲ್ ಯೋಜನೆಗಾಗಿ ಆದಿವಾಸಿಗಳ ಕೃಷಿ ಹಾಗೂ ಗೋಮಾಳ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದನ್ನು ವಿರೋಧಿಸಿ ನಡೆದ ಪ್ರತಿಭಟನೆಗಳ ಹಿನ್ನೆಲೆಯಲ್ಲಿ, ಅಸ್ಸಾಂನ ಸಾಮಾಜಿಕ ಕಾರ್ಯಕರ್ತ...

ಬಿಡದಿ ಟೌನ್‌ಶಿಪ್: ಸರ್ಕಾರದ ಸರ್ವಾಧಿಕಾರಿ ಧೋರಣೆಗೆ ‘ಸಂಯುಕ್ತ ಹೋರಾಟ ಸಮಿತಿ’ ತೀವ್ರ ಖಂಡನೆ

"ಬಿಡದಿ ಟೌನ್‌ಶಿಪ್ ಯೋಜನೆಯು ತೀವ್ರ ವಿವಾದದಲ್ಲಿರುವಾಗಲೇ ರೈತರೊಂದಿಗೆ ಯಾವುದೇ ಮಾತುಕತೆ ನಡೆಸದೆ, ಪೊಲೀಸ್ ಬಲಪ್ರಯೋಗದ ಮೂಲಕ ಸರ್ವಾಧಿಕಾರಿ ರೀತಿಯಲ್ಲಿ ಜಂಟಿ ಸರ್ವೆ (JMC) ನಡೆಸಲು ಮುಂದಾಗಿರುವ ಸರ್ಕಾರದ ಕ್ರಮ ಅತ್ಯಂತ ಖಂಡನೀಯ" ಎಂದು...

ಜ್ಞಾನವಾಪಿ, ಮಥುರಾ, ಸಂಭಾಲ್ ದೇವಾಲಯ-ಮಸೀದಿಗಳ ವಿವಾದ : ಸುಪ್ರೀಂ ಕೋರ್ಟ್‌ನ ಮಧ್ಯಸ್ಥಿಕೆ ಪ್ರಸ್ತಾಪ ತಿರಸ್ಕರಿಸಿದ ಹಿಂದೂ-ಮುಸ್ಲಿಂ ಪಕ್ಷಗಳು

ಧಾರ್ಮಿಕ ಸ್ಥಳಗಳ ವಿವಾದಗಳಿಗೆ ಸೌಹಾರ್ದಯುತ ಪರಿಹಾರವನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ಹೆಜ್ಜೆಯನ್ನಿಟ್ಟಿದೆ. ವಾರಣಾಸಿಯ ಜ್ಞಾನವಾಪಿ ಮಸೀದಿ ವಿವಾದ, ಮಥುರಾದ ಕೃಷ್ಣ ಜನ್ಮಭೂಮಿ-ಶಾಹಿ ಇದ್ಗಾ ವಿವಾದ ಮತ್ತು ಸಂಭಾಲ್ ಜಮಾ ಮಸೀದಿ...