Homeಕರ್ನಾಟಕರಾಜಕೀಯಕ್ಕಾಗಿ ಕ್ರಿಮಿನಲ್‌ಗಳ ಪರ 'ಬಿಜೆಪಿ' ಪ್ರತಿಭಟನೆ

ರಾಜಕೀಯಕ್ಕಾಗಿ ಕ್ರಿಮಿನಲ್‌ಗಳ ಪರ ‘ಬಿಜೆಪಿ’ ಪ್ರತಿಭಟನೆ

- Advertisement -
- Advertisement -

ಹುಬ್ಬಳ್ಳಿಯಲ್ಲಿ ಮಳಿಗೆಗೆ ಬೆಂಕಿ ಹಚ್ಚಿ ಹಿಂಸಾಚಾರವನ್ನು ನಡೆಸಿದ್ದ ಆರೋಪಿ ಶ್ರೀಕಾಂತ್ ಪೂಜಾರಿಯನ್ನು ಇತ್ತೀಚೆಗೆ 31 ವರ್ಷಗಳ ಬಳಿಕ ಹುಬ್ಬಳ್ಳಿ ಪೊಲೀಸರು ಬಂಧಿಸಿದ್ದರು. ಹಳೆಯ ಕೇಸ್‌ ವಿಲೇವಾರಿ ಭಾಗವಾಗಿ  ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ್ದಾರೆ. ಇದೀಗ ಆರೋಪಿಯ ಬಂಧನ ವಿರೋಧಿಸಿ ಬಿಜೆಪಿ ಪ್ರತಿಭಟನೆಯನ್ನು ನಡೆಸುತ್ತಿದೆ. ಲೋಕಸಭೆ ಚುನಾವಣೆ ಹಿನ್ನೆಲೆ  ಹದ್ದಿನಂತೆ ಕಾಯುತ್ತಿದ್ದ ಬಿಜೆಪಿ ಇದನ್ನೇ ರಾಜಕೀಯಕ್ಕೆ ಬಳಸಿಕೊಂಡಿದ್ದು, ತಮ್ಮ ಕೀಳು ಮಟ್ಟದ ರಾಜಕೀಯಕ್ಕೆ ಕ್ರಿಮಿನಲ್‌ ಓರ್ವನ ಬಂಧನವನ್ನು ಅಸ್ತ್ರವಾಗಿ ಬಳಸಿರುವುದು ವಿಪರ್ಯಾಸವೇ ಆಗಿದೆ.

ಹುಬ್ಬಳ್ಳಿ ಶಹರ ಠಾಣೆ ಪೊಲೀಸರಿಂದ ಬಂಧಿತ ಶ್ರೀಕಾಂತ ಪೂಜಾರಿಯ ಹಿನ್ನೆಲೆ ನೋಡಿದಾಗ ಆತ ಕ್ರಿಮಿನಲ್‌ ಎನ್ನುವುದು ಬಯಲಾಗಿದೆ. ಆತನ ಮೇಲೆ ಒಟ್ಟು 15 ಪ್ರಕರಣಗಳಿರುವ ಬಗ್ಗೆ ವರದಿಯಾಗಿದೆ. ಹುಬ್ಬಳ್ಳಿಯ ಕಸಬಾಪೇಟೆ ಪೊಲೀಸ್ ಠಾಣೆ, ಹಳೇಹುಬ್ಬಳ್ಳಿ ಪೊಲೀಸ್ ಠಾಣೆ, ವಿದ್ಯಾನಗರ ಪೊಲೀಸ್ ಠಾಣೆ ಹಾಗೂ ಶಹರ ಪೊಲೀಸ್‌ ಠಾಣೆಯಲ್ಲಿ ಆತನ ವಿರುದ್ಧ ಪ್ರಕರಣಗಳಿವೆ. ಇದರಲ್ಲಿ 11 ಕೇಸ್ ಗಳು ಅಕ್ರಮ ಸರಾಯಿ ಮಾರಾಟದ ಕುರಿತು ಕೇಸ್‌ಗಳಾಗಿದೆ. ಕಸಬಾಪೇಟೆ ಪೊಲೀಸ್ ಠಾಣೆಯಲ್ಲಿ 3 ಕೇಸ್ ಹಾಗೂ ಶಹರ ಠಾಣೆಯಲ್ಲಿ ಅಂಗಡಿಗೆ ಬೆಂಕಿ ಹಚ್ಚಿದ ಕೇಸ್ ದಾಖಲಾಗಿದೆ.

ಶ್ರೀಕಾಂತ್‌ಗೆ ‘ಕರಸೇವಕನ’ ಹಣೆ ಪಟ್ಟಿ ಕಟ್ಟಿ ಬಂಧನ ಖಂಡಿಸಿ ಧಾರವಾಡದಲ್ಲಿ ಬಿಜೆಪಿ ಪ್ರತಿಭಟನೆ ನಡೆಸಿದೆ. ಈ ವೇಳೆ ಶಹರ ಪೊಲೀಸ್‌ ಠಾಣೆಗೆ ಮುತ್ತಗೆ ಹಾಕಲು ಯತ್ನಿಸಿದ ವಿರೋಧ ಪಕ್ಷದ ನಾಯಕ ಆರ್‌ ಅಶೋಕ್ ಸೇರಿದಂತೆ  ಹಲವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

1992ರ ಡಿ.5ರಂದು ಮಳಿಗೆಗಳಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿ 8 ಜನರ ವಿರುದ್ಧ ಹುಬ್ಬಳ್ಳಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದರಲ್ಲಿ ಮೂವರು ಈಗಾಗಲೇ ಮೃತಪಟ್ಟಿದ್ದು, ಇತರ ಆರೋಪಿಗಳ ಪತ್ತೆಗೆ ಇತ್ತೀಚೆಗೆ ಪೊಲೀಸರು ಬಲೆ ಬೀಸಿದ್ದರು. ಆ ಮೂಲಕ 1992ರ ಹಬ್ಬಳ್ಳಿ ಗಲಭೆ ಕೇಸ್‌ ಮರುಜೀವ ಪಡೆದುಕೊಂಡಿತ್ತು. ಇನ್ನುಳಿದ ಆರೋಪಿಗಳಾದ ರಾಜು ಧರ್ಮದಾಸ್, ಶ್ರೀಕಾಂತ್ ಪೂಜಾರಿ, ಅಶೋಕ್ ಕಲಬುರಗಿ, ಷಣ್ಮುಖ ಕಾಟಗಾರ, ಗುರುನಾಥಸಾ ಕಾಟಿಗಾರ, ರಾಮಚಂದ್ರಸಾ ಕಲಬುರಗಿ ಹಾಗೂ ಅಮೃತ ಕಲಬುರಗಿಗಾಗಿ ಪೊಲೀಸರು ಹುಡುಕಾಟ ನಡೆಸಲು ತಂಡ ರಚನೆ ಮಾಡಿದ್ದರು.

ಬಿಜೆಪಿಯ ಈ ಪ್ರತಿಭಟನೆ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ಹಿಂದುತ್ವ ಮುಂದಿಟ್ಟುಕೊಂಡು ತಪ್ಪು ಮಾಡಿದವರನ್ನು ರಕ್ಷಿಸಿ ಶಿಕ್ಷೆ ನೀಡಬಾರದೆಂದು ಬಿಜೆಪಿ ಪ್ರತಿಭಟನೆ ಮಾಡುತ್ತಿದ್ದಾರೆ. ಈ ಪ್ರಶ್ನೆಯನ್ನು ಮಾಧ್ಯಮದವರು ಬಿಜೆಪಿಯವರಿಗೆ ಕೇಳಬೇಕು. ಅಪರಾಧ ಮಾಡಿರುವವರ ವಿರುದ್ಧ ಮಾತ್ರ ಕ್ರಮ ಕೈಗೊಳ್ಳಲಾಗುತ್ತಿದೆ. ನಿರಪರಾಧಿಗಳ ವಿರುದ್ಧ ಯಾವುದೇ ಕಾನೂನು ಕ್ರಮ ಜರುಗಿಸುವುದಿಲ್ಲ ಎಂದು ಹೇಳಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಶಾಸಕ ಪ್ರಸಾದ್ ಅಬ್ಬಯ್ಯ, ಕ್ರಿಮಿನಲ್‌ಗಳ ಪರವಾಗಿ ವಿಪಕ್ಷ ನಾಯಕ ಆರ್ ಅಶೋಕ್ ಮತ್ತು ಬಿಜೆಪಿ ನಾಯಕರು ಪ್ರತಿಭಟನೆ ನಡೆಸುತ್ತಿರುವುದು ನಾಚಿಕೆಗೇಡಿನ ಸಂಗತಿ. ರಾಜಕೀಯಕ್ಕಾಗಿ ರೌಡಿಶೀಟರ್‌ಗಳ ಪರವಾಗಿ ಬಿಜೆಪಿ ಪ್ರತಿಭಟನೆ ನಡೆಸುತ್ತಿದೆ. ರಾಜ್ಯದಲ್ಲಿ ನಾನಾ ಸಮಸ್ಯೆಗಳಿವೆ. ಅವುಗಳ ಬಗ್ಗೆ ಬಿಜೆಪಿ ಗಮನ ಹರಿಸುತ್ತಿಲ್ಲ. ಬದಲಾಗಿ ರಾಜಕೀಯಕ್ಕಾಗಿ ಕ್ರಿಮಿನಲ್‌ಗಳ ಪರವಾಗಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತಿದೆ. ಇದು ಬಿಜೆಪಿಯ ಹತಾಶೆಯನ್ನು ಸೂಚಿಸುತ್ತದೆ. ಬಿಜೆಪಿಗರಿಗೆ ಕ್ರಿಮಿನಲ್​ಗಳ ಮೇಲೆ ಪ್ರೀತಿ ಇದ್ದರೆ, ತಮ್ಮದೇ ಸರ್ಕಾರ ಇದ್ದಾಗ ತಮ್ಮ ಭಕ್ತರ ಮೇಲಿನ ಪ್ರಕರಣಗಳನ್ನು ಖುಲಾಸೆ ಮಾಡಿಕೊಳ್ಳಬೇಕಿತ್ತು. ಅವರಿಗೆ ತಮ್ಮ ಕಾರ್ಯಕರ್ತರ ಮೇಲೆ ಪ್ರಕರಣಗಳು ಇರಬೇಕು. ಅವರು ಓಡಾಡಬೇಕೆಂಬ ದುರುದ್ದೇಶವಿದೆ ಎಂದು ಹೇಳಿದ್ದಾರೆ.

ಶ್ರೀಕಾಂತ್‌ ಬಂಧನದ ಕುರಿತು ಮಾತನಾಡಿದ ಬಿಕೆ ಹರಿಪ್ರಸಾದ್‌, ಹೋರಾಟಕ್ಕೂ ಅಪರಾಧಕ್ಕೂ ವ್ಯತ್ಯಾಸ ಇದೆ. ಕರಸೇವಕ ಅಂತಾ ಯಾವುದೋ ಅಪರಾಧ ಪ್ರಕರಣದಲ್ಲಿ ಇರುವವರನ್ನು ಹಾಗೆಯೇ ಬಿಡಲು ಆಗುವುದಿಲ್ಲ. ಬಂಧಿತನ ಮೇಲೆ 13 ಪ್ರಕರಣಗಳಿವೆ. ಕಾನೂನುಬಾಹಿರ ಅಪರಾಧ ಮಾಡಿದ್ದಾರೆ. ಧರ್ಮದ ಹೆಸರಲ್ಲಿ ಏನೇನು ಕೆಲಸ ಮಾಡಿದ್ದಾರೆ ಅಂತಾ ಗೊತ್ತಿದೆ ಎಂದು ತಿಳಿಸಿದ್ದಾರೆ.

ಈ ಬಗ್ಗೆ ಮಾತನಾಡಿದ ಡಿಕೆ ಶಿವಕುಮಾರ್‌, ಬಿಜೆಪಿ ಈ ವಿಚಾರದಲ್ಲಿ ರಾಜಕೀಯ ಸ್ಟಂಟ್ ಮಾಡುತ್ತಿದೆ. ಬಾಕಿ ಪ್ರಕರಣಗಳ ವಿಲೇವಾರಿಗೆ ಸರ್ಕಾರ ಮುಂದಾಗಿರುವುದಾಗಿ ಗೃಹ ಸಚಿವರು ಈಗಾಗಲೇ ಸ್ಪಷ್ಟನೆ ನೀಡಿದ್ದಾರೆ. ಯಾರು ರಾಜ್ಯಕ್ಕೆ ಅಗೌರವ ನೀಡಿದ್ದಾರೆ, ಯಾರು ಕಾನೂನು ಉಲ್ಲಂಘಿಸಿದ್ದಾರೆ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು. ಇದರಲ್ಲಿ ವಿಶೇಷ ಏನೂ ಇಲ್ಲ ಎಂದು ಹೇಳಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿದ್ದ ಗೃಹಸಚಿವ ಡಾ.ಜಿ.ಪರಮೇಶ್ವರ್‌, ದೀರ್ಘಕಾಲದಿಂದ ಬಾಕಿ ಉಳಿದಿರುವ ಹಳೆಯ ಪ್ರಕರಣ​ಗಳನ್ನು ಕ್ಲಿಯರ್ ಮಾಡುವಂತೆ ಆದೇಶ ಕೊಟ್ಟಿದ್ದೇವೆ. ಇದರ ಭಾಗವಾಗಿ ಬಾಬರಿ ಮಸೀದಿ ಧ್ವಂಸ ಸಂದರ್ಭ ಹುಬ್ಬಳ್ಳಿಯಲ್ಲಿ ಗಲಭೆ ಕೇಸ್‌ಗೆ ಸಂಬಂಧಿಸಿ ಓರ್ವನನ್ನು ಬಂಧಿಸಲಾಗಿದೆ. ಪ್ರಕರಣಕ್ಕೆ ಹಿಂದೂ ಕಾರ್ಯಕರ್ತರ ಬಣ್ಣ ಹಚ್ಚುವುದು ಸೂಕ್ತವಲ್ಲ. ಕಾನೂನಿನ ಅಡಿಯಲ್ಲಿ ಪೊಲೀಸ್ ಇಲಾಖೆ ಕ್ರಮ ಕೈಗೊಳ್ಳುತ್ತದೆ. ಉದ್ದೇಶ ಪೂರಕವಾಗಿ ಯಾವುದನ್ನು ಮಾಡುತ್ತಿಲ್ಲ ಎಂದು ಹೇಳಿದ್ದಾರೆ.

ಕೆಪಿಸಿಸಿ ವಕ್ತಾರ ರಮೇಶ್‌ ಈ ಬಗ್ಗೆ ಮಾತನಾಡಿದ್ದು, ಶ್ರೀಕಾಂತ್ ಪೂಜಾರಿ ಬಂಧನವನ್ನು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಯವರು ತಮ್ಮ ರಾಜಕೀಯ ಅಸ್ತಿತ್ವಕ್ಕಾಗಿ ಲೋಕಸಭಾ ಚುನಾವಣೆಗೆ ಬಳಸಿಕೊಳ್ಳುವ ವ್ಯವಸ್ಥಿತ ಪಿತೂರಿ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ.

ಇದನ್ನು ಓದಿ:CAA ಬಿಜೆಪಿಯ ಚುನಾವಣಾ ಅಸ್ತ್ರ: ಅಧಿಸೂಚನೆಗೆ ಪ್ರತಿಪಕ್ಷಗಳ ವಿರೋಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...