Homeಕರ್ನಾಟಕಹುಬ್ಬಳ್ಳಿ ಎನ್ಕೌಂಟರ್ | ಮೃತಪಟ್ಟ ವಲಸೆ ಕಾರ್ಮಿಕನ ಮರಣೋತ್ತರ ಪರೀಕ್ಷೆಗೆ ರಾಜ್ಯ ಹೈಕೋರ್ಟ್ ಆದೇಶ

ಹುಬ್ಬಳ್ಳಿ ಎನ್ಕೌಂಟರ್ | ಮೃತಪಟ್ಟ ವಲಸೆ ಕಾರ್ಮಿಕನ ಮರಣೋತ್ತರ ಪರೀಕ್ಷೆಗೆ ರಾಜ್ಯ ಹೈಕೋರ್ಟ್ ಆದೇಶ

- Advertisement -
- Advertisement -

ಏಪ್ರಿಲ್ 13 ರಂದು ಹುಬ್ಬಳ್ಳಿಯಲ್ಲಿ ನಡೆದ ಪೊಲೀಸ್ ಎನ್‌ಕೌಂಟರ್‌ನಲ್ಲಿ ಸಾವಿಗೀಡಾದ ಬಿಹಾರದ ವಲಸೆ ಕಾರ್ಮಿಕ ರಿತೇಶ್ ಕುಮಾರ್ ಅವರ ಮರಣೋತ್ತರ ಪರೀಕ್ಷೆ ನಡೆಸುವಂತೆ ಕರ್ನಾಟಕ ಹೈಕೋರ್ಟ್ ಮಂಗಳವಾರ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಕರ್ನಾಟಕದ ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್ ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆ.ವಿ. ಅರವಿಂದ್ ಅವರನ್ನೊಳಗೊಂಡ ವಿಭಾಗೀಯ ಪೀಠವು ಈ ಆದೇಶ ನೀಡಿದೆ. ಹುಬ್ಬಳ್ಳಿ ಎನ್ಕೌಂಟರ್

ಐದು ವರ್ಷದ ಬಾಲಕಿಯನ್ನು ಅಪಹರಿಸಿ ಕೊಲೆ ಮಾಡಿದ ಆರೋಪ ರಿತೇಶ್ ಕುಮಾರ್ ಮೇಲಿದ್ದು, ಬಂಧನದಿಂದ ತಪ್ಪಿಸಿಕೊಳ್ಳಲು ಯತ್ನಿಸಿದಾಗ ಅವರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಅರ್ಜಿಗಳ ವಿಚಾರಣೆ ವೇಳೆ ಪೊಲೀಸ್ ಕ್ರಮದಿಂದ ಉಂಟಾಗುವ ಸಾವುಗಳ ಕುರಿತು ಸುಪ್ರೀಂ ಕೋರ್ಟ್‌ನ 2014 ರ ಮಾರ್ಗಸೂಚಿಗಳನ್ನು ಪಾಲಿಸುವ ಅಗತ್ಯವನ್ನು ನ್ಯಾಯಾಲಯ ಒತ್ತಿ ಹೇಳಿದೆ. ಸ್ಥಳೀಯ ಆಸ್ಪತ್ರೆಯಲ್ಲಿ ಇಬ್ಬರು ವೈದ್ಯರು ಮರಣೋತ್ತರ ಪರೀಕ್ಷೆ ನಡೆಸಬೇಕೆಂದು ಪೀಠ ಆದೇಶಿಸಿದೆ.

“ಕಾರ್ಯವಿಧಾನದ ಉದ್ದಕ್ಕೂ ವೀಡಿಯೊಗ್ರಫಿ ಮಾಡಬೇಕು ಮತ್ತು ಮುಂದಿನ ತನಿಖೆಗಳಲ್ಲಿ ಸಂಭಾವ್ಯ ಬಳಕೆಗಾಗಿ ದೇಹದ ಮಾದರಿಗಳನ್ನು ಸಂರಕ್ಷಿಸಬೇಕು” ಎಂದು ನ್ಯಾಯಾಲಯ ಹೇಳಿದೆ.

ಪಿಯುಸಿಎಲ್ ಪರ ವಾದ ಮಂಡಿಸಿದ ಹಿರಿಯ ವಕೀಲ ಆದಿತ್ಯ ಸೋಂಧಿ, ಮೃತರ ವಿರುದ್ಧದ ಆರೋಪಗಳ ಸ್ವರೂಪ ಮತ್ತು ಆಪಾದಿತ ಎನ್‌ಕೌಂಟರ್ ಸುತ್ತಲಿನ ಸಂದರ್ಭಗಳ ಬಗ್ಗೆ ನ್ಯಾಯಾಲಯಕ್ಕೆ ಮಾಹಿತಿ ನೀಡಿದ್ದಾರೆ. “ಈ ಹಂತದಲ್ಲಿ ನಾವು ಯಾವುದೇ ಪ್ರತಿಕೂಲ ಹೇಳಿಕೆಗಳನ್ನು ನೀಡುತ್ತಿಲ್ಲ. ಕಡ್ಡಾಯ ಮಾರ್ಗಸೂಚಿಗಳ ಅನುಸರಣೆಯನ್ನು ಖಚಿತಪಡಿಸಿಕೊಳ್ಳುವುದು ಮಾತ್ರ ನಮ್ಮ ವಿನಂತಿಯಾಗಿದೆ” ಎಂದು ಅವರು ಹೇಳಿದ್ದಾರೆ.

ಇದೇ ವೇಳೆ ಅವರು ಎನ್‌ಕೌಂಟರ್‌ಗೆ ಒಳಗಾಗಿ ಮೃತಪಟ್ಟ ಆರೋಪಿಯ ದೇಹವನ್ನು ದಹಿಸದೆ, ಮೃತ ದೇಹವನ್ನು ಸಂರಕ್ಷಿಸಿ ಇಡುವಂತೆ ಮಧ್ಯಂತರ ಆದೇಶ ನೀಡುವಂತೆ ವಕೀಲ ಸೋಂಧಿ ಅವರು ಕೇಳಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ರಾಜ್ಯ ಸರ್ಕಾರದ ಪರ ವಕೀಲ ಅಡ್ವೊಕೇಟ್ ಜನರಲ್ ಶಶಿ ಕಿರಣ್ ಶೆಟ್ಟಿ, ಈಗಾಗಲೇ ಎಫ್‌ಐಆರ್ ದಾಖಲಿಸಲಾಗಿದೆ ಮತ್ತು ಅಪರಾಧ ತನಿಖಾ ಇಲಾಖೆ ಪ್ರಕರಣದ ತನಿಖೆ ನಡೆಸುತ್ತಿದೆ. ಶವವನ್ನು ದಹನ ಮಾಡುವ ಯಾವುದೇ ಉದ್ದೇಶ ಇಲ್ಲ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

“ಇಂತಹ ಸಂದರ್ಭಗಳಲ್ಲಿ ಮೃತದೇಹವನ್ನು ಸಮಾಧಿ ಮಾಡಲಾಗುತ್ತದೆ – ದಹನವಲ್ಲ – ಆದ್ದರಿಂದ ಅಗತ್ಯವಿದ್ದರೆ ದೇಹವನ್ನು ನಂತರ ಹೊರತೆಗೆಯಬಹುದು. ಗುರುತಿಸುವಿಕೆಯ ನಂತರ ಮಾತ್ರ ಶವವನ್ನು ಅಂತ್ಯಕ್ರಿಯೆಗಾಗಿ ಕುಟುಂಬಕ್ಕೆ ಹಸ್ತಾಂತರಿಸಲಾಗುತ್ತದೆ” ಎಂದು ಅವರು ಹೇಳಿದ್ದಾರೆ. ಹುಬ್ಬಳ್ಳಿ ಎನ್ಕೌಂಟರ್

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಮುಡಾ ಪ್ರಕರಣ| ತನಿಖೆ ಮುಂದುವರಿಸುವಂತೆ ಲೋಕಾಯುಕ್ತ ಪೊಲೀಸರಿಗೆ ಕೋರ್ಟ್‌ ಆದೇಶ

ಮುಡಾ ಪ್ರಕರಣ| ತನಿಖೆ ಮುಂದುವರಿಸುವಂತೆ ಲೋಕಾಯುಕ್ತ ಪೊಲೀಸರಿಗೆ ಕೋರ್ಟ್‌ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋರ್ಟ್ ರಾಜಕೀಯ ಅಖಾಡ ಅಲ್ಲ: ಸಿಎಂ ವಿಜಯ್ ವಿರುದ್ಧ ಅರ್ಜಿ ಸಲ್ಲಿಸಿದ್ದ ಡಿಎಂಕೆಗೆ ಸುಪ್ರೀಂ ತರಾಟೆ

ತಮಿಳುನಾಡಿನ ಕರೂರ್ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರನ್ನು ಭೇಟಿ ಮಾಡದಂತೆ ಮುಖ್ಯಮಂತ್ರಿ ವಿಜಯ್ ಅವರಿಗೆ ನಿರ್ಬಂಧ ಹೇರಬೇಕೆಂದು ಕೋರಿ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ. ಜನರಿಂದ...

ಸುರಂಗ ರಸ್ತೆ ಕಾಮಗಾರಿ ವೇಳೆ ವಯನಾಡಿನಲ್ಲಿ ಭೂಕುಸಿತ: ಜನರು ಜೀವ ಉಳಿಸಿಕೊಳ್ಳಲು ಓಡಿದ ಭಯಾನಕ ದೃಶ್ಯ ಸೆರೆ

ಕೇರಳದ ವಯನಾಡ್ ಜಿಲ್ಲೆಯ ಮೇಪ್ಪಾಡಿಯಲ್ಲಿ ಮಂಗಳವಾರ (ಇಂದು) ಭೀಕರ ಭೂಕುಸಿತ ಸಂಭವಿಸಿದ್ದು, ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಏಳು ಜನರು ಗಾಯಗೊಂಡಿದ್ದಾರೆ. ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಜನರನ್ನು ರಕ್ಷಿಸಲು ಕಾರ್ಯಾಚರಣೆ ಮುಂದುವರಿದಿದ್ದು, ಈ...

ಒಟಿಟಿಗೆ ಬಂದ ಎರಡೇ ದಿನಕ್ಕೆ ದಿಲ್ಜಿತ್ ದೋಸಾಂಜ್ ನಟನೆಯ ‘ಸಟ್ಲಜ್’ ಸಿನಿಮಾ ಔಟ್! ಜೀ5 ವಿರುದ್ಧ ಆಕ್ರೋಶ, ಕಾನೂನು ಹೋರಾಟದ ಭರವಸೆ

ತೀವ್ರ ವಿವಾದ ಹಾಗೂ ಸೆನ್ಸಾರ್ ಮಂಡಳಿಯ ಕತ್ತರಿ ಪ್ರಯೋಗದ ನಡುವೆಯೂ ಕೊನೆಗೂ ಒಟಿಟಿ ಪರದೆಯ ಮೇಲೆ ಬಿಡುಗಡೆಯಾಗಿದ್ದ ಖ್ಯಾತ ನಟ ದಿಲ್ಜಿತ್ ದೋಸಾಂಜ್ ಅಭಿನಯದ 'ಸಟ್ಲಜ್' (ಮೂಲ ಶೀರ್ಷಿಕೆ: ಪಂಜಾಬ್ 95) ಚಿತ್ರವನ್ನು...

ಫೇಕ್ ಮದುವೆ ಜಾಲಕ್ಕೆ ಬಿದ್ದ ಫೇಮಸ್ ಗೋರಕ್ಷಕ ‘ಬಿಟ್ಟು ಬಜರಂಗಿ’

ಹರಿಯಾಣದಲ್ಲಿ "ಲವ್ ಜಿಹಾದ್" ಮತ್ತು ಅಂತರ್ಧರ್ಮೀಯ ವಿವಾಹಗಳ ವಿರುದ್ಧ ನಿರಂತರವಾಗಿ ಹೋರಾಡುತ್ತಾ, ತನ್ನದೇ ಆದ ಸಾರ್ವಜನಿಕ ಪ್ರಭಾವ ಬೆಳೆಸಿಕೊಂಡಿದ್ದ ರಾಜ್ ಕುಮಾರ್ ಅಲಿಯಾಸ್ ಬಿಟ್ಟು ಬಜರಂಗಿಗೆ ತನಗೆ ಇಂತಹದ್ದೊಂದು ಪರಿಸ್ಥಿತಿ ಎದುರಾಗಬಹುದು ಎಂಬ...

ಕರ್ನಾಟಕದ ಎಸ್‌ಐಆರ್ ಪ್ರಕ್ರಿಯೆಯಲ್ಲಿ ‘ಸಾಮೂಹಿಕ ಅಕ್ರಮ’ ಆರೋಪ: ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ ಎನ್‌ಡಿಎ ನಿಯೋಗ

ಬೆಂಗಳೂರು: ಕರ್ನಾಟಕದಲ್ಲಿ ಸದ್ಯ ಚಾಲ್ತಿಯಲ್ಲಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ಸಾಂಸ್ಥಿಕ ಅಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿ, ರಾಜ್ಯದ ಪ್ರಮುಖ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು...

SIR: ಮತದಾರರ ಹಕ್ಕು ರಕ್ಷಣೆಗೆ ಕಣಕ್ಕಿಳಿದ ‘ನಾಗರಿಕ ಮತ ಕಾವಲು ಸಮಿತಿ’

ರಾಜ್ಯದ ಶೋಷಿತ, ಹಿಂದುಳಿದ ಮತ್ತು ಅಂಚಿನಲ್ಲಿರುವ ಸಮುದಾಯಗಳ ಮತದಾನದ ಹಕ್ಕಿಗೆ ಯಾವುದೇ ಚ್ಯುತಿ ಬಾರದಂತೆ ತಡೆಯಲು ಬೂತ್ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದವರೆಗೆ ‘ನಾಗರಿಕ ಮತ ಕಾವಲು ಸಮಿತಿ’ಯನ್ನು ಅಸ್ತಿತ್ವಕ್ಕೆ ತರಲಾಗಿದೆ. ಎಸ್‌ಐಆರ್...

ಮೋಹನ್‌ಲಾಲ್ ‘ದಂತ’ ಕಥೆ: ಅರಣ್ಯ ಇಲಾಖೆ ಮುಂದೆ 10 ಆನೆ ದಂತ, 13 ಮೂರ್ತಿಗಳ ಅಚ್ಚರಿಯ ಘೋಷಣೆ!

ನಟ ಮೋಹನ್‌ಲಾಲ್ ಅವರು ತಾವೇ ಕಾನೂನುಬಾಹಿರವಾಗಿ ವನ್ಯಜೀವಿ ವಸ್ತುಗಳನ್ನು ಹೊಂದಿರುವ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿದ್ದರೂ, ತಮ್ಮ ಬಳಿ 10 ಆನೆ ದಂತಗಳು ಮತ್ತು 13 ದಂತದ ಮೂರ್ತಿಗಳು ಇರುವುದಾಗಿ ಕೇರಳ ಅರಣ್ಯ...

ಅಯೋಧ್ಯೆ ರಾಮಮಂದಿರ ಹಗರಣ: ‘ಕದ್ದ ಹಣ’ ಹಂಚಿಕೆಯ ಮೊಬೈಲ್ ಚಾಟ್‌ಗಳು ಬಹಿರಂಗ; ತೀವ್ರಗೊಂಡ ತನಿಖೆ

ಲಕ್ನೋ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ನಿಧಿ ದುರುಪಯೋಗ ಮತ್ತು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ತನಿಖೆ ತೀವ್ರಗೊಂಡಿದೆ. ಪ್ರಕರಣದ ಪ್ರಮುಖ ಆರೋಪಿಗಳ ಮೊಬೈಲ್ ಫೋನ್‌ಗಳ...

ಅಪ್ರಾಪ್ತ ಬಾಲಕಿಯ ಅತ್ಯಾಚಾರ-ಕೊಲೆ ಆರೋಪ : ಪ. ಬಂಗಾಳದ ಬಾರುಯಿಪುರದಲ್ಲಿ ಹಿಂಸಾಚಾರ ; ಶಂಕಿತ ಆರೋಪಿಯ ಗುಂಪು ಹತ್ಯೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ ಶನಿವಾರ (ಜು.4) ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಶವ ಭಾನುವಾರ (ಜು.5) ಬೆಳಿಗ್ಗೆ ಕೆರೆಯಲ್ಲಿ ಪತ್ತೆಯಾಗಿದ್ದು, ಆ ಬಳಿಕ ಅಲ್ಲಿ ತೀವ್ರ ಹಿಂಸಾತ್ಮಕ...

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...