Homeಕರ್ನಾಟಕಹುಬ್ಬಳ್ಳಿ ಬಾಲಕಿ ಅಪಹರಣ, ಕೊಲೆ ಪ್ರಕರಣ | ಆರೋಪಿ ಬಿಹಾರದ ವಲಸೆ ಕಾರ್ಮಿಕ 'ಎನ್‌ಕೌಂಟರ್'ನಲ್ಲಿ ಹತ

ಹುಬ್ಬಳ್ಳಿ ಬಾಲಕಿ ಅಪಹರಣ, ಕೊಲೆ ಪ್ರಕರಣ | ಆರೋಪಿ ಬಿಹಾರದ ವಲಸೆ ಕಾರ್ಮಿಕ ‘ಎನ್‌ಕೌಂಟರ್’ನಲ್ಲಿ ಹತ

- Advertisement -
- Advertisement -

ಐದು ವರ್ಷದ ಬಾಲಕಿಯನ್ನು ಕೊಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದ್ದ ವ್ಯಕ್ತಿಯನ್ನು ಪೊಲೀಸ್‌ ‘ಎನ್‌ಕೌಂಟರ್‌’ನಲ್ಲಿ ಹುಬ್ಬಳ್ಳಿಯಲ್ಲಿ ಭಾನುವಾರ ಮೃತರಾಗಿದ್ದಾರೆ. ಪೊಲೀಸರ ಮೇಲೆ ದಾಳಿ ಮಾಡಿ ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದಾಗ ಪೊಲೀಸರು ‘ಎನ್‌ಕೌಂಟರ್’ ಮಾಡಿದ್ದಾಗಿ ಹೇಳಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ. ಹುಬ್ಬಳ್ಳಿ ಬಾಲಕಿ ಅಪಹರಣ

ಕೊಲೆ ಆರೋಪಿಯನ್ನು ಬಿಹಾರದ ಪಾಟ್ನಾ ಮೂಲದ ವಲಸೆ ಕಾರ್ಮಿಕ ರಿತೇಶ್ ಕುಮಾರ್ ಎಂದು ಗುರುತಿಸಲಾಗಿದೆ. ವಿಚಾರಣೆಯ ಸಮಯದಲ್ಲಿ ಪೊಲೀಸರ ಮೇಲೆ ಕಲ್ಲು ತೂರಿ ತಪ್ಪಿಸಿಕೊಳ್ಳಲು ಯತ್ನಿಸಿದಾಗ ಪೊಲೀಸರು ಕೊಲೆ ಆರೋಪಿಯ ಮೇಲೆ ಗುಂಡು ಹಾರಿಸಬೇಕಾಯಿತು ಎಂದು ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಎನ್. ಶಶಿ ಕುಮಾರ್ ಹೇಳಿದ್ದಾರೆ.

ಆರೋಪಿಯನ್ನು ಬಂಧಿಸಲು ಪ್ರಯತ್ನ ನಡೆಸಲು ಪೊಲೀಸರು ಆತನ ಕಾಲಿಗೆ ಮತ್ತು ನಂತರ ಬೆನ್ನಿಗೆ ಗುಂಡು ಹಾರಿಸಿದ್ದಾಗಿ ಪೊಲೀಸರು ಹೇಳಿದ್ದು, ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಆರೋಪಿಯನ್ನು ಕೆಎಂಸಿ-ಆರ್‌ಐಗೆ ಕರೆತರಲಾಯಿತು ಎಂದು ತಿಳಿಸಿದ್ದಾರೆ.

ಅದಾಗ್ಯೂ, ತೀವ್ರ ರಕ್ತಸ್ರಾವದಿಂದ ಆರೋಪಿ ಸಾವನ್ನಪ್ಪಿದ್ದಾಗಿ ವೈದ್ಯರು ತಿಳಿಸಿದ್ದಾರೆ. ಘಟನೆಯಲ್ಲಿ ಮಹಿಳಾ ಪಿಎಸ್‌ಐ ಸೇರಿದಂತೆ ಮೂವರು ಪೊಲೀಸರಿಗೆ ಗಾಯಗಳಾಗಿದ್ದು, ಅವರಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಐದು ವರ್ಷದ ಬಾಲಕಿಯೊಬ್ಬರು ತನ್ನ ತಾಯಿ ಮನೆ ಮುಂದೆ ಆಟವಾಡುತ್ತಿದ್ದಾಗ ಆರೋಪಿ ಅವರನ್ನು ಅಪಹರಿಸಿದ್ದರು ಎಂದು ಪೊಲೀಸ್ ಇಲಾಖೆಯ ಮೂಲಗಳು ತಿಳಿಸಿವೆ. ಬಾಲಕಿಯನ್ನು ನಂತರ ಹತ್ತಿರದ ಶೆಡ್‌ಗೆ ಕರೆದೊಯ್ದ ಆರೋಪಿ ಅವರ ಮೇಲೆ ಅತ್ಯಾಚಾರ ಮಾಡಲು ಪ್ರಯತ್ನಿಸಿದ್ದರು.

ಈ ವೇಳೆ ಜೋರಾಗಿ ಕೂಗಿದ್ದ ಬಾಲಕಿಯ ಶಬ್ಧ ಕೇಳಿ ಸ್ಥಳೀಯರು ಅನುಮಾನಗೊಂಡು ಅವರನ್ನು ರಕ್ಷಿಸಲು ಶೆಡ್‌ಗೆ ಧಾವಿಸಿದ್ದರು. ಆದರೆ, ಸ್ಥಳದಿಂದ ಓಡಿಹೋಗುವ ಮೊದಲು ಆರೋಪಿ ಮಗುವನ್ನು ಕತ್ತು ಹಿಸುಕಿ ಕೊಲೆ ಮಾಡಿದ್ದಾಗಿ ಪೊಲೀಸರು ತಿಳಿಸಿದ್ದಾರೆ. ಈ ವೇಳೆ ಸ್ಥಳೀಯರು ಅವನನ್ನು ಸ್ವಲ್ಪ ದೂರದವರೆಗೆ ಬೆನ್ನಟ್ಟಿದ್ದರೂ, ಆರೋಪಿ ತಪ್ಪಿಸಿಕೊಂಡಿದ್ದ. ಅದಾಗ್ಯೂ, ಕೆಲವೇ ನಿಮಿಷಗಳಲ್ಲಿ ಮತ್ತೊಂದು ಗುಂಪು ರಿತೇಶ್‌ನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದರು.

ಈ ಮಧ್ಯೆ, ಬಾಲಕಿಯನ್ನು ಕೆಎಂಸಿ-ಆರ್‌ಐಗೆ ಕರೆದೊಯ್ಯಲಾಯಿತು, ಅಲ್ಲಿ ವೈದ್ಯರು ಅವರು ಮೃತಪಟ್ಟಿದ್ದಾರೆ ಎಂದು ಘೋಷಿಸಿದ್ದಾರೆ. ಸುದ್ದಿ ಹರಡುತ್ತಿದ್ದಂತೆ, ಅಶೋಕ್ ನಗರ, ವಿಶ್ವೇಶ್ವರ ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳ ನಿವಾಸಿಗಳು ಆರೋಪಿಯನ್ನು ತಮ್ಮ ವಶಕ್ಕೆ ಒಪ್ಪಿಸುವಂತೆ ಅಥವಾ ಆತನನ್ನು ಎನ್ಕೌಂಟರ್ ಮಾಡುವಂತೆ ಒತ್ತಾಯಿಸಿ ದಿನವಿಡೀ ಪ್ರತಿಭಟನೆ ನಡೆಸಿದ್ದರು.

ಪ್ರತಿಭಟನೆಯನ್ನು ಹಿಂತೆಗೆದುಕೊಳ್ಳುವಂತೆ ಪೊಲೀಸ್ ಉನ್ನತ ಅಧಿಕಾರಿಗಳು ಪದೇ ಪದೇ ಮನವಿ ಮಾಡಿದರೂ ಯಾವುದೇ ಫಲಿತಾಂಶ ಸಿಕ್ಕಿರಲಿಲ್ಲ ಮತ್ತು ಸಮಯ ಕಳೆದಂತೆ ಪ್ರತಿಭಟನೆ ತೀವ್ರಗೊಳ್ಳಲು ಪ್ರಾರಂಭವಾಯಿತು. ಸಂಜೆ 6:00 ರ ಸುಮಾರಿಗೆ, ಕೆಎಂಸಿ-ಆರ್‌ಐ ಪ್ರವೇಶ ದ್ವಾರದ ಮುಂದೆ ಜಮಾಯಿಸಿದ ಜನರು ಎರಡು ಗಂಟೆಗಳಿಗೂ ಹೆಚ್ಚು ಕಾಲ ಹುಬ್ಬಳ್ಳಿ-ಧಾರವಾಡ ರಸ್ತೆಯನ್ನು ತಡೆದಿದ್ದರು. ಈ ವೇಳೆ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಲು ಅವರು ಟೈರ್‌ಗಳನ್ನು ಸಹ ಸುಟ್ಟು ಹಾಕಿದ್ದಾರೆ ಎಂದು ವರದಿಯಾಗಿದೆ.

ಆಸ್ಪತ್ರೆಗೆ ಭೇಟಿ ನೀಡಿದ ಪೊಲೀಸ್ ಆಯುಕ್ತ ಎನ್. ಶಶಿ ಕುಮಾರ್, ಆರೋಪಿ ರಿತೇಶ್ ಕುಮಾರ್ ಗುಂಡೇಟಿನಿಂದ ಸಾವನ್ನಪ್ಪಿದ್ದಾರೆ ಎಂದು ದೃಢಪಡಿಸಿದ್ದಾರೆ. ನಂತರ ಪ್ರತಿಭಟನೆಯನ್ನು ಹಿಂತೆಗೆದುಕೊಳ್ಳಲಾಗಿದೆ ಎಂದು ವರದಿಯಾಗಿದೆ. ಹುಬ್ಬಳ್ಳಿ ಬಾಲಕಿ ಅಪಹರಣ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಅಂಬೇಡ್ಕರ್ ಜನ್ಮದಿನ ವಿಶೇ‍ಷ: ಅಂಬೇಡ್ಕರ್ ಪರಿಭಾವಿಸಿದ ಭಾರತ V/s ವರ್ತಮಾನ ಭಾರತ

ಅಂಬೇಡ್ಕರ್ ಜನ್ಮದಿನ ವಿಶೇ‍ಷ: ಅಂಬೇಡ್ಕರ್ ಪರಿಭಾವಿಸಿದ ಭಾರತ V/s ವರ್ತಮಾನ ಭಾರತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...