Homeಕರ್ನಾಟಕಹುಬ್ಬಳ್ಳಿ ಬಾಲಕಿ ಅಪಹರಣ, ಕೊಲೆ ಪ್ರಕರಣ | ಆರೋಪಿ ಬಿಹಾರದ ವಲಸೆ ಕಾರ್ಮಿಕ 'ಎನ್‌ಕೌಂಟರ್'ನಲ್ಲಿ ಹತ

ಹುಬ್ಬಳ್ಳಿ ಬಾಲಕಿ ಅಪಹರಣ, ಕೊಲೆ ಪ್ರಕರಣ | ಆರೋಪಿ ಬಿಹಾರದ ವಲಸೆ ಕಾರ್ಮಿಕ ‘ಎನ್‌ಕೌಂಟರ್’ನಲ್ಲಿ ಹತ

- Advertisement -
- Advertisement -

ಐದು ವರ್ಷದ ಬಾಲಕಿಯನ್ನು ಕೊಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದ್ದ ವ್ಯಕ್ತಿಯನ್ನು ಪೊಲೀಸ್‌ ‘ಎನ್‌ಕೌಂಟರ್‌’ನಲ್ಲಿ ಹುಬ್ಬಳ್ಳಿಯಲ್ಲಿ ಭಾನುವಾರ ಮೃತರಾಗಿದ್ದಾರೆ. ಪೊಲೀಸರ ಮೇಲೆ ದಾಳಿ ಮಾಡಿ ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದಾಗ ಪೊಲೀಸರು ‘ಎನ್‌ಕೌಂಟರ್’ ಮಾಡಿದ್ದಾಗಿ ಹೇಳಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ. ಹುಬ್ಬಳ್ಳಿ ಬಾಲಕಿ ಅಪಹರಣ

ಕೊಲೆ ಆರೋಪಿಯನ್ನು ಬಿಹಾರದ ಪಾಟ್ನಾ ಮೂಲದ ವಲಸೆ ಕಾರ್ಮಿಕ ರಿತೇಶ್ ಕುಮಾರ್ ಎಂದು ಗುರುತಿಸಲಾಗಿದೆ. ವಿಚಾರಣೆಯ ಸಮಯದಲ್ಲಿ ಪೊಲೀಸರ ಮೇಲೆ ಕಲ್ಲು ತೂರಿ ತಪ್ಪಿಸಿಕೊಳ್ಳಲು ಯತ್ನಿಸಿದಾಗ ಪೊಲೀಸರು ಕೊಲೆ ಆರೋಪಿಯ ಮೇಲೆ ಗುಂಡು ಹಾರಿಸಬೇಕಾಯಿತು ಎಂದು ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಎನ್. ಶಶಿ ಕುಮಾರ್ ಹೇಳಿದ್ದಾರೆ.

ಆರೋಪಿಯನ್ನು ಬಂಧಿಸಲು ಪ್ರಯತ್ನ ನಡೆಸಲು ಪೊಲೀಸರು ಆತನ ಕಾಲಿಗೆ ಮತ್ತು ನಂತರ ಬೆನ್ನಿಗೆ ಗುಂಡು ಹಾರಿಸಿದ್ದಾಗಿ ಪೊಲೀಸರು ಹೇಳಿದ್ದು, ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಆರೋಪಿಯನ್ನು ಕೆಎಂಸಿ-ಆರ್‌ಐಗೆ ಕರೆತರಲಾಯಿತು ಎಂದು ತಿಳಿಸಿದ್ದಾರೆ.

ಅದಾಗ್ಯೂ, ತೀವ್ರ ರಕ್ತಸ್ರಾವದಿಂದ ಆರೋಪಿ ಸಾವನ್ನಪ್ಪಿದ್ದಾಗಿ ವೈದ್ಯರು ತಿಳಿಸಿದ್ದಾರೆ. ಘಟನೆಯಲ್ಲಿ ಮಹಿಳಾ ಪಿಎಸ್‌ಐ ಸೇರಿದಂತೆ ಮೂವರು ಪೊಲೀಸರಿಗೆ ಗಾಯಗಳಾಗಿದ್ದು, ಅವರಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಐದು ವರ್ಷದ ಬಾಲಕಿಯೊಬ್ಬರು ತನ್ನ ತಾಯಿ ಮನೆ ಮುಂದೆ ಆಟವಾಡುತ್ತಿದ್ದಾಗ ಆರೋಪಿ ಅವರನ್ನು ಅಪಹರಿಸಿದ್ದರು ಎಂದು ಪೊಲೀಸ್ ಇಲಾಖೆಯ ಮೂಲಗಳು ತಿಳಿಸಿವೆ. ಬಾಲಕಿಯನ್ನು ನಂತರ ಹತ್ತಿರದ ಶೆಡ್‌ಗೆ ಕರೆದೊಯ್ದ ಆರೋಪಿ ಅವರ ಮೇಲೆ ಅತ್ಯಾಚಾರ ಮಾಡಲು ಪ್ರಯತ್ನಿಸಿದ್ದರು.

ಈ ವೇಳೆ ಜೋರಾಗಿ ಕೂಗಿದ್ದ ಬಾಲಕಿಯ ಶಬ್ಧ ಕೇಳಿ ಸ್ಥಳೀಯರು ಅನುಮಾನಗೊಂಡು ಅವರನ್ನು ರಕ್ಷಿಸಲು ಶೆಡ್‌ಗೆ ಧಾವಿಸಿದ್ದರು. ಆದರೆ, ಸ್ಥಳದಿಂದ ಓಡಿಹೋಗುವ ಮೊದಲು ಆರೋಪಿ ಮಗುವನ್ನು ಕತ್ತು ಹಿಸುಕಿ ಕೊಲೆ ಮಾಡಿದ್ದಾಗಿ ಪೊಲೀಸರು ತಿಳಿಸಿದ್ದಾರೆ. ಈ ವೇಳೆ ಸ್ಥಳೀಯರು ಅವನನ್ನು ಸ್ವಲ್ಪ ದೂರದವರೆಗೆ ಬೆನ್ನಟ್ಟಿದ್ದರೂ, ಆರೋಪಿ ತಪ್ಪಿಸಿಕೊಂಡಿದ್ದ. ಅದಾಗ್ಯೂ, ಕೆಲವೇ ನಿಮಿಷಗಳಲ್ಲಿ ಮತ್ತೊಂದು ಗುಂಪು ರಿತೇಶ್‌ನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದರು.

ಈ ಮಧ್ಯೆ, ಬಾಲಕಿಯನ್ನು ಕೆಎಂಸಿ-ಆರ್‌ಐಗೆ ಕರೆದೊಯ್ಯಲಾಯಿತು, ಅಲ್ಲಿ ವೈದ್ಯರು ಅವರು ಮೃತಪಟ್ಟಿದ್ದಾರೆ ಎಂದು ಘೋಷಿಸಿದ್ದಾರೆ. ಸುದ್ದಿ ಹರಡುತ್ತಿದ್ದಂತೆ, ಅಶೋಕ್ ನಗರ, ವಿಶ್ವೇಶ್ವರ ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳ ನಿವಾಸಿಗಳು ಆರೋಪಿಯನ್ನು ತಮ್ಮ ವಶಕ್ಕೆ ಒಪ್ಪಿಸುವಂತೆ ಅಥವಾ ಆತನನ್ನು ಎನ್ಕೌಂಟರ್ ಮಾಡುವಂತೆ ಒತ್ತಾಯಿಸಿ ದಿನವಿಡೀ ಪ್ರತಿಭಟನೆ ನಡೆಸಿದ್ದರು.

ಪ್ರತಿಭಟನೆಯನ್ನು ಹಿಂತೆಗೆದುಕೊಳ್ಳುವಂತೆ ಪೊಲೀಸ್ ಉನ್ನತ ಅಧಿಕಾರಿಗಳು ಪದೇ ಪದೇ ಮನವಿ ಮಾಡಿದರೂ ಯಾವುದೇ ಫಲಿತಾಂಶ ಸಿಕ್ಕಿರಲಿಲ್ಲ ಮತ್ತು ಸಮಯ ಕಳೆದಂತೆ ಪ್ರತಿಭಟನೆ ತೀವ್ರಗೊಳ್ಳಲು ಪ್ರಾರಂಭವಾಯಿತು. ಸಂಜೆ 6:00 ರ ಸುಮಾರಿಗೆ, ಕೆಎಂಸಿ-ಆರ್‌ಐ ಪ್ರವೇಶ ದ್ವಾರದ ಮುಂದೆ ಜಮಾಯಿಸಿದ ಜನರು ಎರಡು ಗಂಟೆಗಳಿಗೂ ಹೆಚ್ಚು ಕಾಲ ಹುಬ್ಬಳ್ಳಿ-ಧಾರವಾಡ ರಸ್ತೆಯನ್ನು ತಡೆದಿದ್ದರು. ಈ ವೇಳೆ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಲು ಅವರು ಟೈರ್‌ಗಳನ್ನು ಸಹ ಸುಟ್ಟು ಹಾಕಿದ್ದಾರೆ ಎಂದು ವರದಿಯಾಗಿದೆ.

ಆಸ್ಪತ್ರೆಗೆ ಭೇಟಿ ನೀಡಿದ ಪೊಲೀಸ್ ಆಯುಕ್ತ ಎನ್. ಶಶಿ ಕುಮಾರ್, ಆರೋಪಿ ರಿತೇಶ್ ಕುಮಾರ್ ಗುಂಡೇಟಿನಿಂದ ಸಾವನ್ನಪ್ಪಿದ್ದಾರೆ ಎಂದು ದೃಢಪಡಿಸಿದ್ದಾರೆ. ನಂತರ ಪ್ರತಿಭಟನೆಯನ್ನು ಹಿಂತೆಗೆದುಕೊಳ್ಳಲಾಗಿದೆ ಎಂದು ವರದಿಯಾಗಿದೆ. ಹುಬ್ಬಳ್ಳಿ ಬಾಲಕಿ ಅಪಹರಣ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಅಂಬೇಡ್ಕರ್ ಜನ್ಮದಿನ ವಿಶೇ‍ಷ: ಅಂಬೇಡ್ಕರ್ ಪರಿಭಾವಿಸಿದ ಭಾರತ V/s ವರ್ತಮಾನ ಭಾರತ

ಅಂಬೇಡ್ಕರ್ ಜನ್ಮದಿನ ವಿಶೇ‍ಷ: ಅಂಬೇಡ್ಕರ್ ಪರಿಭಾವಿಸಿದ ಭಾರತ V/s ವರ್ತಮಾನ ಭಾರತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...