Homeಕರ್ನಾಟಕಹುಬ್ಬಳ್ಳಿ ಮರ್ಯಾದೆಗೇಡು ಹತ್ಯೆ ಪ್ರಕರಣ: ಪ್ರತ್ಯೇಕ ಕಾಯ್ದೆಗೆ ಪ್ರಗತಿಪರ ಸಂಘಟನೆಗಳ ಆಗ್ರಹ

ಹುಬ್ಬಳ್ಳಿ ಮರ್ಯಾದೆಗೇಡು ಹತ್ಯೆ ಪ್ರಕರಣ: ಪ್ರತ್ಯೇಕ ಕಾಯ್ದೆಗೆ ಪ್ರಗತಿಪರ ಸಂಘಟನೆಗಳ ಆಗ್ರಹ

- Advertisement -
- Advertisement -

ಮಾದಿಗ ಸಮುದಾಯದ ಯುವಕನನ್ನು ಮದುವೆಯಾಗಿದ್ದ ಲಿಂಗಾಯತ ಸಮುದಾಯದ ಮಾನ್ಯ ಪಾಟೀಲ್ ಎಂಬ ಯುವತಿಯ ಮರ್ಯಾದಾಗೇಡು ಹತ್ಯೆ ಪ್ರಕರಣವನ್ನು ಖಂಡಿಸಿ ಸಮಾನ ಮನಸ್ಕ ಪ್ರಗತಿಪರ ಸಂಘಟನೆಗಳು ಶುಕ್ರವಾರ (ಡಿ.26) ಸಂಜೆ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದವು.

ಹುಬ್ಬಳ್ಳಿಯ ಲಿಂಗಾಯಿತ ಸಮುದಾಯದ ಯುವತಿ ಮಾನ್ಯ ಎಂಬಾಕೆ ವಿವೇಕಾನಂದ ಎನ್ನುವ ದಲಿತ ಸಮುದಾಯದ ಯುವಕನನ್ನು ವಿವಾಹವಾಗಿದ್ದ ಕಾರಣಕ್ಕೆ, ಇದೇ ಡಿಸೆಂಬರ್ 21 ರಂದು ಆಕೆ ಗರ್ಭಿಣಿಯಿದ್ದಾಗಲೇ ಅವಳ ತಂದೆ ಹುಬ್ಬಳ್ಳಿಯಲ್ಲಿ ಬರ್ಬರವಾಗಿ ಕೊಲೆ ಮಾಡಿ, ಆಕೆಯ ಗಂಡ ಮತ್ತವನ ತಂದೆತಾಯಿಗಳ ಮೇಲೂ ದೈಹಿಕವಾಗಿ ದಾಳಿ ನಡೆಸಿದ್ದಾರೆ. ಕೃತ್ಯವನ್ನು ಖಂಡಿಸುವ ಜೊತೆಗೆ, ಮರ್ಯಾದೆಗೇಡು ಹತ್ಯೆಗಳ ನಿಗ್ರಹಕ್ಕೆ ಪ್ರತ್ಯೇಕ ಕಾಯ್ದೆ ರೂಪಿಸಬೇಕು ಎಂದು ಹೋರಾಟಗಾರರು ಆಗ್ರಹಿಸಿದರು.

“ಮರ್ಯಾದೆಯ ಹೆಸರಿನಲ್ಲಿ ನಡೆಯುತ್ತಿರುವ ಇಂತಹ ಹತ್ಯೆಗಳಲ್ಲಿ ಯಾವ ಗೌರವದ ವಿಚಾರವೂ ಇಲ್ಲ. ಇದೊಂದು ಜಾತಿಗ್ರಸ್ತ ಸಮಾಜ ಎಸಗುವ ಕ್ರೂರ ಕೊಲೆಯಷ್ಟೇ. ಈ ಹತ್ಯೆಗಳು ಜಾತಿ ಮತ್ತು ಪಿತೃಪ್ರಭುತ್ವ ಸಮಾಜದ ಸಾಧನಗಳಾಗಿವೆ. ಭಯ ಮತ್ತು ಭಯೋತ್ಪಾದನೆಯ ಮೂಲಕ ಜಾತಿ ವ್ಯವಸ್ಥೆಯನ್ನು ಹೇರುವ, ಮಹಿಳೆಯರ ದೇಹ ಮತ್ತು ಸ್ವಾತಂತ್ರ್ಯವನ್ನು ನಿಯಂತ್ರಿಸಲು ನಿರಂತರವಾಗಿ ಯತ್ನಿಸಲಾಗುತ್ತಿದೆ. ಸ್ವಂತ ಮಗಳ ಜೀವ ತೆಗೆಯುವುದು ಜಾತಿ ವ್ಯವಸ್ಥೆಯ ಕ್ರೌರ್ಯ. ಇಂತಹ ಕೃತ್ಯಗಳು ಸಂವಿಧಾನದ ಆಶಯವಾದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವದ ಮೂಲಭೂತ ಮೌಲ್ಯಗಳಿಗೆ ಹೊಡೆತ ನೀಡುತ್ತವೆ ಎಂದು ಕಿಡಿಕಾರಿದ್ದಾರೆ.

“ಮರ್ಯಾದೆಗೇಡು ಹತ್ಯೆಗಳು ಕಠಿಣ ಶಿಕ್ಷೆಗೆ ಅರ್ಹವಾದ ಅನಾಗರಿಕ ಮತ್ತು ನಾಚಿಕೆಗೇಡಿನ ಕೊಲೆ ಕೃತ್ಯಗಳು ಎಂದು ಸುಪ್ರೀಂ ಕೋರ್ಟ್‌ ಹೇಳಿದೆ. ಜಾತಿ ವ್ಯವಸ್ಥೆಯು ಭಾರತಕ್ಕೆ ಎದುರಾಗಿರುವ ಶಾಪವಾಗಿದೆ. ಅಂತರ್ಜಾತಿ ವಿವಾಹಗಳು ರಾಷ್ಟ್ರೀಯ ಹಿತಾಸಕ್ತಿ ಮತ್ತು ಸಂವಿಧಾನದ ಆಶಯವನ್ನು ಬಲಪಡಿಸುತ್ತವೆ ಎಂಬುದನ್ನು ಸುಪ್ರೀಂ ಕೋರ್ಟ್ ಒತ್ತಿ ಹೇಳಿದೆ. ಮರ್ಯಾದೆಗೇಡು ಹತ್ಯೆಗಳು ಮತ್ತು ಜಾತಿ ದೌರ್ಜನ್ಯಗಳನ್ನು ತಡೆಗಟ್ಟಲು, ಪರಿಹಾರ ಕ್ರಮಗಳನ್ನು ರೂಪಿಸಲು ಹಾಗೂ ಶಿಕ್ಷಾರ್ಹ ಕ್ರಮಗಳನ್ನು ಜಾರಿಗೊಳಿಸಲು ನ್ಯಾಯಾಲಯವು ಸರ್ಕಾರಗಳಿಗೆ ಸೂಚನೆ ನೀಡಿದೆ. ಆದರೆ, ಜಾತಿ ರಾಜಕಾರಣದಲ್ಲಿ ಮುಳುಗಿರುವ ಸರ್ಕಾರಗಳು ಜಾತಿ ವ್ಯವಸ್ಥೆಯನ್ನು ಪೋಷಿಸುತ್ತಿವೆ. ಪರಿಣಾಮ, ಇಂತಹ ಹೇಯ ಕೃತ್ಯಗಳು ನಡೆಯುತ್ತಿವೆ” ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರತಿಭಟನೆಯಲ್ಲಿ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ವಾದ), ದಸಂಸ ಒಕ್ಕೂಟ, ದಲಿತ ಸಂಘರ್ಷ ಸಮಿತಿ (ಸಂಯೋಜಕ), ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಹೋರಾಟ ಸಮಿತಿ, ತಮಟೆ ಮೀಡಿಯಾ, ಎಐಎಸ್‌ಎ, ಸ್ಲಂ ಜನಾಂದೋಲನ – ಕರ್ನಾಟಕ, ಸ್ಲಂ ಜನರ ಸಂಘಟನೆ – ಕರ್ನಾಟಕ, ಜನವಾದಿ ಮಹಿಳಾ ಸಂಘಟನೆ, ಬಯಲು ಬಳಗ, ಎಐಸಿಸಿಟಿಯು, ಎಐಎಂಎಸ್‌ಎಸ್‌, ಎಐಪಿಡಬ್ಲ್ಯೂಎ, ಎನ್‌ಎಫ್‌ಐಡಬ್ಲ್ಯೂ, ಬಹುತ್ವ ಕರ್ನಾಟಕ, ನಾವೆದ್ದು ನಿಲ್ಲದಿದ್ದರೆ, ಎಸ್‌ಎಫ್‌ಐ, ಡಿಎಚ್‌ಎಸ್‌, ಗಮನ ಮಹಿಳಾ ಸಮೂಹ, ಪಿ.ಯು.ಸಿ.ಎಲ್ – ಕರ್ನಾಟಕ , ಕರ್ನಾಟಕ ಜನಶಕ್ತಿ, ಕರ್ನಾಟಕ ವಿದ್ಯಾರ್ಥಿ ಸಂಘಟನೆಗಳ ಮುಖಂಡರು ಭಾಗವಹಿಸಿದ್ದರು.

ಹಕ್ಕೊತ್ತಾಯಗಳು:

  1. ಮಾನ್ಯ ಅವರ ಪತಿಯ ಕುಟುಂಬಕ್ಕೆ ಸರ್ಕಾರವು ರಕ್ಷಣೆ ಮತ್ತು ಪರಿಹಾರ ನೀಡಬೇಕು.
  2. ವಿವೇಕಾನಂದ ಅವರ ಬದುಕಿನ ಖಾತ್ರಿಗಾಗಿ ಅವರಿಗೆ ಸರ್ಕಾರಿ ಉದ್ಯೋಗ ಒದಗಿಸಬೇಕು.
  3. ಪ್ರಕರಣದಲ್ಲಿ ಸರ್ಕಾರವು ನ್ಯಾಯಯುತ, ತ್ವರಿತ ಹಾಗೂ ನಿಷ್ಪಕ್ಷಪಾತ ತನಿಖೆ ನಡೆಸಬೇಕು. ಕೃತ್ಯ ಎಸಗಿದ
  4. ಕೃತ್ಯಕ್ಕೆ ಪ್ರೋತ್ಸಾಹ ನೀಡಿದ ಎಲ್ಲ ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು.
  5. ರಾಜ್ಯ ಸರ್ಕಾರವು ಸಾರ್ವಜನಿಕ ಸಮಾಲೋಚನೆ ಸೇರಿದಂತೆ ತಕ್ಷಣದ ಕ್ರಮಗಳನ್ನು ತೆಗೆದುಕೊಳ್ಳಬೇಕು.
  6. ಇದರಲ್ಲಿ ಮರ್ಯಾದೆಗೇಡು ಅಪರಾಧಗಳನ್ನು ತಡೆಗಟ್ಟುವಿಕೆ, ಸಂತ್ರಸ್ತರ ರಕ್ಷಣೆ, ಸಾಕ್ಷಿಗಳ ರಕ್ಷಣೆ, ಪರಿಹಾರ
  7. ಕ್ರಮಗಳು ಹಾಗೂ ವಿವಾಹ ಆಯ್ಕೆಯ ಸ್ವಾತಂತ್ರ್ಯದ ಸಾಂವಿಧಾನಿಕ ಹಕ್ಕನ್ನು ದೃಢೀಕರಿಸಲು ಮತ್ತು ರಕ್ಷಿಸಲು ಅಗತ್ಯ ಕ್ರಮಗಳನ್ನು ಒಳಗೊಂಡಿರಬೇಕು.
  8. ಮರ್ಯಾದೆಗೇಡು ಹತ್ಯೆಗಳ ತಡೆಗೆ ಸಂಬಧಿಸಿದಂತೆ ಸುಪ್ರೀಂ ಕೋರ್ಟ್‌ನ ನಿರ್ದೇಶನಗಳನ್ನು ಸರ್ಕಾರಗಳು ಕಟ್ಟುನಿಟ್ಟಾಗಿ ಪಾಲಿಸಬೇಕು.
  9. ಜಾತಿ ಆಧಾರಿತ ಹಿಂಸೆ ಮತ್ತು ಪಿತೃಪ್ರಧಾನ ಧೋರಣೆಗಳು ಎದುರಿಸಲು ಮತ್ತು ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವದ ಸಾಂವಿಧಾನಿಕ ಮೌಲ್ಯಗಳನ್ನು ಉತ್ತೇಜಿಸಲು ಪೊಲೀಸ್, ಸ್ಥಳೀಯ ಅಧಿಕಾರಿಗಳು ಹಾಗೂ ಸಾರ್ವಜನಿಕರನ್ನು ಒಳಗೊಂಡ ಜಾಗೃತಿ ಕಾರ್ಯಕ್ರಮಗಳನ್ನು ನಡೆಸಬೇಕು.
  10. ಸಂವಿಧಾನದ ಸಮಾನತೆ, ಸ್ವಾತಂತ್ರ್ಯ ಹಾಗೂ ಭ್ರಾತೃತ್ವದ ಆಶಯಗಳನ್ನು ಖಾತ್ರಿಪಡಿಸಲು ಸರ್ಕಾರಗಳು ಜಾತಿಯ ಸಂಪೂರ್ಣ ನಿರ್ಮೂಲನೆಗೆ ಮುಂದಾಗಬೇಕು.

ಬಳ್ಳಾರಿ | ಪ್ರಭಾವ, ಗೂಂಡಾಗಿರಿ ಮೂಲಕ ಬಡ ಜನರ ಭೂ ಕಬಳಿಕೆ : ಬುಡಾ ಮಾಜಿ ಅಧ್ಯಕ್ಷನ ವಿರುದ್ಧ ಗಂಭೀರ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...

ಬಿಹಾರದ ನಳಂದ ಜಿಲ್ಲೆಯ ಶೀತ್ಲಾ ದೇವಸ್ಥಾನದಲ್ಲಿ ಕಾಲ್ತುಳಿತ: ಎಂಟು ಮಹಿಳೆಯರು ಸಾವು; ಹಲವು ಮಂದಿಗೆ ಗಾಯ 

ಬಿಹಾರದ ನಳಂದ ಜಿಲ್ಲೆಯ ಶೀತ್ಲಾ ದೇವಸ್ಥಾನದಲ್ಲಿ ಮಂಗಳವಾರ ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ ಎಂಟು ಮಹಿಳೆಯರು ಸಾವನ್ನಪ್ಪಿದ್ದು, ಹಲವಾರು ಮಂದಿ ಗಾಯಗೊಂಡಿರುವುದಾಗಿ ವರದಿಯಾಗಿದೆ.  ಪೂಜೆಗಾಗಿ ದೇವಾಲಯದಲ್ಲಿ ಹೆಚ್ಚಿನ ಸಂಖ್ಯೆಯ ಭಕ್ತರು ಜಮಾಯಿಸಿದಾಗ ಈ ಘಟನೆ ಸಂಭವಿಸಿದ್ದು,...

ದಲಿತ ಕ್ರೈಸ್ತರ ಎಸ್‌ಸಿ ಸ್ಥಾನಮಾನ ರದ್ದು ಆದೇಶ; ಸುಪ್ರೀಂ ಕೋರ್ಟ್ ತೀರ್ಪು ಖಂಡಿಸಿದ ಮಂದಕೃಷ್ಣ ಮಾದಿಗ

ದಲಿತರು ಕ್ರೈಸ್ತರಾದರೆ ಅವರ ಎಸ್‌ಸಿ ಸ್ಥಾನಮಾನ ರದ್ದುಗೊಳ್ಳಲಿದೆ ಎಂಬ ಸುಪ್ರೀಂ ಕೋರ್ಟ್ ತೀರ್ಪನ್ನು ಬಲವಾಗಿ ಖಂಡಿಸುತ್ತೇವೆ ಎಂದು ಎಂಆರ್‌ಪಿಎಸ್ ಫೌಂಡೇಶನ್ ಅಧ್ಯಕ್ಷ ಮಂದಕೃಷ್ಣ ಮಾದಿಗ ಹೇಳಿದರು. "ದೇಶದಲ್ಲಿ ಜಾತಿ ವ್ಯವಸ್ಥೆಯನ್ನು ನಿರ್ಮೂಲನೆ ಮಾಡಬೇಕು,...

ಜಾರ್ಖಂಡ್: ರಾಮನವಮಿ ಘರ್ಷಣೆಗೆ ಸಂಬಂಧಿಸಿದ 19 ಜನರನ್ನು ಬಂಧಿಸಿ, ಕೈಕೋಳ ಹಾಕಿ ಸಾರ್ವಜನಿಕ ಮೆರವಣಿಗೆ ಮಾಡಿದ ಪೊಲೀಸರು

ಜಾರ್ಖಂಡ್‌ನ ಗರ್ವಾ ಜಿಲ್ಲೆಯಲ್ಲಿ ರಾಮನವಮಿ ಮೆರವಣಿಗೆಯ ಸಂದರ್ಭದಲ್ಲಿ ಎರಡು ಸಮುದಾಯಗಳ ನಡುವೆ ನಡೆದ ಘರ್ಷಣೆಯ ನಂತರ ಕನಿಷ್ಠ 19 ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.  ಭದ್ರತಾ ಪಡೆಗಳನ್ನು ಭಾರೀ ಪ್ರಮಾಣದಲ್ಲಿ ನಿಯೋಜಿಸಿದ ನಂತರ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ : ಹೊಸ ಮಸೂದೆ ಅಂಗೀಕರಿಸಿದ ಇಸ್ರೇಲ್ ಸಂಸತ್ತು

ಇಸ್ರೇಲ್ ಸಂಸತ್ತು ಸೋಮವಾರ (ಮಾರ್ಚ್ 30, 2026) ಹೊಸ ಮಸೂದೆಯೊಂದನ್ನು ಅಂಗೀಕರಿಸಿದೆ. ಇದರ ಪ್ರಕಾರ, ಮಿಲಿಟರಿ ನ್ಯಾಯಾಲಯದಲ್ಲಿ ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಲಾಗಿದೆ. ಪ್ರಧಾನಿ ಬೆಂಜಮಿನ್...

ಇರಾನ್ ಮೇಲೆ ದಾಳಿ : ಅಮೆರಿಕ ವಿಮಾನಗಳಿಗೆ ತನ್ನ ವಾಯುಪ್ರದೇಶ ಮುಚ್ಚಿದ ಸ್ಪೇನ್

ಇರಾನ್ ಮೇಲಿನ ದಾಳಿಗಳಲ್ಲಿ ಭಾಗಿಯಾಗಿರುವ ಅಮೆರಿಕದ ವಿಮಾನಗಳಿಗೆ ಸ್ಪೇನ್ ತನ್ನ ವಾಯುಪ್ರದೇಶವನ್ನು ನಿರ್ಬಂಧಿಸಿದೆ ಎಂದು ರಕ್ಷಣಾ ಸಚಿವೆ ಮಾರ್ಗರಿಟಾ ರೋಬಲ್ಸ್ (ಮಾ.30) ಸೋಮವಾರ ತಿಳಿಸಿದ್ದಾರೆ. ಜಂಟಿಯಾಗಿ ನಿರ್ವಹಿಸುವ ಸೇನಾ ನೆಲೆಗಳನ್ನು ಬಳಸಲು ಈ...

ಜನಗಣತಿ-2027 : ‘ಸ್ಥಿರ’ ಲಿವ್-ಇನ್ ಜೋಡಿಗೆ ವೈವಾಹಿಕ ಸ್ಥಾನಮಾನ

ತಮ್ಮ ಸಂಬಂಧ 'ಸ್ಥಿರ' ಎಂದು ಹೇಳಿಕೊಳ್ಳುವ ಲಿವ್-ಇನ್ ಜೋಡಿಗಳನ್ನು 2027ರ ಜನಗಣತಿಯಲ್ಲಿ ವಿವಾಹಿತ ದಂಪತಿಯೆಂದು ಪರಿಗಣಿಸಲಾಗುತ್ತದೆ ಎಂದು ವರದಿಯಾಗಿದೆ. ಜನಗಣತಿ ವೆಬ್‌ಸೈಟ್‌ನ FAQ (ಪದೇ ಪದೇ ಕೇಳಲಾಗುವ ಪ್ರಶ್ನೆಗಳು) ವಿಭಾಗದಲ್ಲಿ ಈ ಬಗ್ಗೆ ಸ್ಪಷ್ಟನೆ...

ಉನ್ನತ ಸಾಂಸ್ಥಿಕ ಹುದ್ದೆಗಳಲ್ಲಿ ‘ಬಹುಜನ’ ಪ್ರಾತಿನಿಧ್ಯದ ಕೊರತೆ: ವ್ಯವಸ್ಥಿತ ತಾರತಮ್ಯದ ರೂಪ ಎಂದ ರಾಹುಲ್ ಗಾಂಧಿ 

ಉನ್ನತ ಸಂಸ್ಥೆಗಳ ಹಿರಿಯ ನಾಯಕತ್ವದಲ್ಲಿ "ಬಹುಜನ" ಸಮುದಾಯಗಳಿಗೆ ಪ್ರಾತಿನಿಧ್ಯದ ಕೊರತೆಯಿದೆ ಎಂದು ರಾಹುಲ್ ಗಾಂಧಿ ಸೋಮವಾರ ಆರೋಪಿಸಿದ್ದಾರೆ. ಇದು ವ್ಯವಸ್ಥಿತ ತಾರತಮ್ಯದ ಒಂದು ರೂಪವಾಗಿದ್ದು ಅದನ್ನು ಪರಿಹರಿಸಬೇಕು ಎಂದು ಹೇಳಿದ್ದಾರೆ.  ಲೋಕಸಭೆಯ ವಿರೋಧ ಪಕ್ಷದ...

ಗಾಯಗಳ ತೀವ್ರತೆಯಿಂದಾಗಿ ನೌಕಾಪಡೆಯ ಮುಖ್ಯಸ್ಥ ತಂಗ್ಸಿರಿ ಸಾವನ್ನಪ್ಪಿದ್ದಾರೆ: ದೃಢಪಡಿಸಿದ ಇರಾನ್

ತಾನು ನಡೆಸಿದ ದಾಳಿಯಿಂದ ಇರಾನ್‌ ನೌಕಾಪಡೆಯ ರಿಯರ್ ಅಡ್ಮಿರಲ್ ಅಲಿರೆಜಾ ತಂಗ್ಸಿರಿ ಸಾವನ್ನಪ್ಪಿದ್ದಾರೆ ಎಂದು ಕಳೆದ ಗುರುವಾರ (ಮಾ.26) ಇಸ್ರೇಲ್ ಹೇಳಿಕೊಂಡಿತ್ತು. ಸುದ್ದಿ ಖಷಿತಪಡಿಸಿರುವ ಇರಾನ್, ದಾಳಿಯಿಂದ ಸಂಭವಿಸಿದ ತೀವ್ರ ಗಾಯಗಳಿಂದ ತಂಗ್ಸಿರಿ...

ಬಹುಭಾಷಾ ನಟ ಪ್ರಕಾಶ್ ರಾಜ್‌ ತಾಯಿ ಸ್ವರ್ಣಲತಾ ನಿಧನ

ಬಹುಭಾಷಾ ನಟ ಪ್ರಕಾಶ್ ರಾಜ್ ಅವರ ತಾಯಿ ಸ್ವರ್ಣಲತಾ ಅವರು ತಮ್ಮ 86 ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಅವರು ವಯೋಸಹಜ ಅನಾರೋಗ್ಯದಿಂದ ಸಾವನ್ನಪ್ಪಿದ್ದಾರೆ. ನಟ ಪ್ರಕಾಶ್‌ ರಾಜ್‌ ಅವರು ತಮ್ಮ ತಾಯಿಯೊಂದಿಗೆ ಇದ್ದ...