Homeಕರ್ನಾಟಕಹುಬ್ಬಳ್ಳಿ ಮರ್ಯಾದೆಗೇಡು ಹತ್ಯೆ ಪ್ರಕರಣ: ಪ್ರತ್ಯೇಕ ಕಾಯ್ದೆಗೆ ಪ್ರಗತಿಪರ ಸಂಘಟನೆಗಳ ಆಗ್ರಹ

ಹುಬ್ಬಳ್ಳಿ ಮರ್ಯಾದೆಗೇಡು ಹತ್ಯೆ ಪ್ರಕರಣ: ಪ್ರತ್ಯೇಕ ಕಾಯ್ದೆಗೆ ಪ್ರಗತಿಪರ ಸಂಘಟನೆಗಳ ಆಗ್ರಹ

- Advertisement -
- Advertisement -

ಮಾದಿಗ ಸಮುದಾಯದ ಯುವಕನನ್ನು ಮದುವೆಯಾಗಿದ್ದ ಲಿಂಗಾಯತ ಸಮುದಾಯದ ಮಾನ್ಯ ಪಾಟೀಲ್ ಎಂಬ ಯುವತಿಯ ಮರ್ಯಾದಾಗೇಡು ಹತ್ಯೆ ಪ್ರಕರಣವನ್ನು ಖಂಡಿಸಿ ಸಮಾನ ಮನಸ್ಕ ಪ್ರಗತಿಪರ ಸಂಘಟನೆಗಳು ಶುಕ್ರವಾರ (ಡಿ.26) ಸಂಜೆ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದವು.

ಹುಬ್ಬಳ್ಳಿಯ ಲಿಂಗಾಯಿತ ಸಮುದಾಯದ ಯುವತಿ ಮಾನ್ಯ ಎಂಬಾಕೆ ವಿವೇಕಾನಂದ ಎನ್ನುವ ದಲಿತ ಸಮುದಾಯದ ಯುವಕನನ್ನು ವಿವಾಹವಾಗಿದ್ದ ಕಾರಣಕ್ಕೆ, ಇದೇ ಡಿಸೆಂಬರ್ 21 ರಂದು ಆಕೆ ಗರ್ಭಿಣಿಯಿದ್ದಾಗಲೇ ಅವಳ ತಂದೆ ಹುಬ್ಬಳ್ಳಿಯಲ್ಲಿ ಬರ್ಬರವಾಗಿ ಕೊಲೆ ಮಾಡಿ, ಆಕೆಯ ಗಂಡ ಮತ್ತವನ ತಂದೆತಾಯಿಗಳ ಮೇಲೂ ದೈಹಿಕವಾಗಿ ದಾಳಿ ನಡೆಸಿದ್ದಾರೆ. ಕೃತ್ಯವನ್ನು ಖಂಡಿಸುವ ಜೊತೆಗೆ, ಮರ್ಯಾದೆಗೇಡು ಹತ್ಯೆಗಳ ನಿಗ್ರಹಕ್ಕೆ ಪ್ರತ್ಯೇಕ ಕಾಯ್ದೆ ರೂಪಿಸಬೇಕು ಎಂದು ಹೋರಾಟಗಾರರು ಆಗ್ರಹಿಸಿದರು.

“ಮರ್ಯಾದೆಯ ಹೆಸರಿನಲ್ಲಿ ನಡೆಯುತ್ತಿರುವ ಇಂತಹ ಹತ್ಯೆಗಳಲ್ಲಿ ಯಾವ ಗೌರವದ ವಿಚಾರವೂ ಇಲ್ಲ. ಇದೊಂದು ಜಾತಿಗ್ರಸ್ತ ಸಮಾಜ ಎಸಗುವ ಕ್ರೂರ ಕೊಲೆಯಷ್ಟೇ. ಈ ಹತ್ಯೆಗಳು ಜಾತಿ ಮತ್ತು ಪಿತೃಪ್ರಭುತ್ವ ಸಮಾಜದ ಸಾಧನಗಳಾಗಿವೆ. ಭಯ ಮತ್ತು ಭಯೋತ್ಪಾದನೆಯ ಮೂಲಕ ಜಾತಿ ವ್ಯವಸ್ಥೆಯನ್ನು ಹೇರುವ, ಮಹಿಳೆಯರ ದೇಹ ಮತ್ತು ಸ್ವಾತಂತ್ರ್ಯವನ್ನು ನಿಯಂತ್ರಿಸಲು ನಿರಂತರವಾಗಿ ಯತ್ನಿಸಲಾಗುತ್ತಿದೆ. ಸ್ವಂತ ಮಗಳ ಜೀವ ತೆಗೆಯುವುದು ಜಾತಿ ವ್ಯವಸ್ಥೆಯ ಕ್ರೌರ್ಯ. ಇಂತಹ ಕೃತ್ಯಗಳು ಸಂವಿಧಾನದ ಆಶಯವಾದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವದ ಮೂಲಭೂತ ಮೌಲ್ಯಗಳಿಗೆ ಹೊಡೆತ ನೀಡುತ್ತವೆ ಎಂದು ಕಿಡಿಕಾರಿದ್ದಾರೆ.

“ಮರ್ಯಾದೆಗೇಡು ಹತ್ಯೆಗಳು ಕಠಿಣ ಶಿಕ್ಷೆಗೆ ಅರ್ಹವಾದ ಅನಾಗರಿಕ ಮತ್ತು ನಾಚಿಕೆಗೇಡಿನ ಕೊಲೆ ಕೃತ್ಯಗಳು ಎಂದು ಸುಪ್ರೀಂ ಕೋರ್ಟ್‌ ಹೇಳಿದೆ. ಜಾತಿ ವ್ಯವಸ್ಥೆಯು ಭಾರತಕ್ಕೆ ಎದುರಾಗಿರುವ ಶಾಪವಾಗಿದೆ. ಅಂತರ್ಜಾತಿ ವಿವಾಹಗಳು ರಾಷ್ಟ್ರೀಯ ಹಿತಾಸಕ್ತಿ ಮತ್ತು ಸಂವಿಧಾನದ ಆಶಯವನ್ನು ಬಲಪಡಿಸುತ್ತವೆ ಎಂಬುದನ್ನು ಸುಪ್ರೀಂ ಕೋರ್ಟ್ ಒತ್ತಿ ಹೇಳಿದೆ. ಮರ್ಯಾದೆಗೇಡು ಹತ್ಯೆಗಳು ಮತ್ತು ಜಾತಿ ದೌರ್ಜನ್ಯಗಳನ್ನು ತಡೆಗಟ್ಟಲು, ಪರಿಹಾರ ಕ್ರಮಗಳನ್ನು ರೂಪಿಸಲು ಹಾಗೂ ಶಿಕ್ಷಾರ್ಹ ಕ್ರಮಗಳನ್ನು ಜಾರಿಗೊಳಿಸಲು ನ್ಯಾಯಾಲಯವು ಸರ್ಕಾರಗಳಿಗೆ ಸೂಚನೆ ನೀಡಿದೆ. ಆದರೆ, ಜಾತಿ ರಾಜಕಾರಣದಲ್ಲಿ ಮುಳುಗಿರುವ ಸರ್ಕಾರಗಳು ಜಾತಿ ವ್ಯವಸ್ಥೆಯನ್ನು ಪೋಷಿಸುತ್ತಿವೆ. ಪರಿಣಾಮ, ಇಂತಹ ಹೇಯ ಕೃತ್ಯಗಳು ನಡೆಯುತ್ತಿವೆ” ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರತಿಭಟನೆಯಲ್ಲಿ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ವಾದ), ದಸಂಸ ಒಕ್ಕೂಟ, ದಲಿತ ಸಂಘರ್ಷ ಸಮಿತಿ (ಸಂಯೋಜಕ), ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಹೋರಾಟ ಸಮಿತಿ, ತಮಟೆ ಮೀಡಿಯಾ, ಎಐಎಸ್‌ಎ, ಸ್ಲಂ ಜನಾಂದೋಲನ – ಕರ್ನಾಟಕ, ಸ್ಲಂ ಜನರ ಸಂಘಟನೆ – ಕರ್ನಾಟಕ, ಜನವಾದಿ ಮಹಿಳಾ ಸಂಘಟನೆ, ಬಯಲು ಬಳಗ, ಎಐಸಿಸಿಟಿಯು, ಎಐಎಂಎಸ್‌ಎಸ್‌, ಎಐಪಿಡಬ್ಲ್ಯೂಎ, ಎನ್‌ಎಫ್‌ಐಡಬ್ಲ್ಯೂ, ಬಹುತ್ವ ಕರ್ನಾಟಕ, ನಾವೆದ್ದು ನಿಲ್ಲದಿದ್ದರೆ, ಎಸ್‌ಎಫ್‌ಐ, ಡಿಎಚ್‌ಎಸ್‌, ಗಮನ ಮಹಿಳಾ ಸಮೂಹ, ಪಿ.ಯು.ಸಿ.ಎಲ್ – ಕರ್ನಾಟಕ , ಕರ್ನಾಟಕ ಜನಶಕ್ತಿ, ಕರ್ನಾಟಕ ವಿದ್ಯಾರ್ಥಿ ಸಂಘಟನೆಗಳ ಮುಖಂಡರು ಭಾಗವಹಿಸಿದ್ದರು.

ಹಕ್ಕೊತ್ತಾಯಗಳು:

  1. ಮಾನ್ಯ ಅವರ ಪತಿಯ ಕುಟುಂಬಕ್ಕೆ ಸರ್ಕಾರವು ರಕ್ಷಣೆ ಮತ್ತು ಪರಿಹಾರ ನೀಡಬೇಕು.
  2. ವಿವೇಕಾನಂದ ಅವರ ಬದುಕಿನ ಖಾತ್ರಿಗಾಗಿ ಅವರಿಗೆ ಸರ್ಕಾರಿ ಉದ್ಯೋಗ ಒದಗಿಸಬೇಕು.
  3. ಪ್ರಕರಣದಲ್ಲಿ ಸರ್ಕಾರವು ನ್ಯಾಯಯುತ, ತ್ವರಿತ ಹಾಗೂ ನಿಷ್ಪಕ್ಷಪಾತ ತನಿಖೆ ನಡೆಸಬೇಕು. ಕೃತ್ಯ ಎಸಗಿದ
  4. ಕೃತ್ಯಕ್ಕೆ ಪ್ರೋತ್ಸಾಹ ನೀಡಿದ ಎಲ್ಲ ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು.
  5. ರಾಜ್ಯ ಸರ್ಕಾರವು ಸಾರ್ವಜನಿಕ ಸಮಾಲೋಚನೆ ಸೇರಿದಂತೆ ತಕ್ಷಣದ ಕ್ರಮಗಳನ್ನು ತೆಗೆದುಕೊಳ್ಳಬೇಕು.
  6. ಇದರಲ್ಲಿ ಮರ್ಯಾದೆಗೇಡು ಅಪರಾಧಗಳನ್ನು ತಡೆಗಟ್ಟುವಿಕೆ, ಸಂತ್ರಸ್ತರ ರಕ್ಷಣೆ, ಸಾಕ್ಷಿಗಳ ರಕ್ಷಣೆ, ಪರಿಹಾರ
  7. ಕ್ರಮಗಳು ಹಾಗೂ ವಿವಾಹ ಆಯ್ಕೆಯ ಸ್ವಾತಂತ್ರ್ಯದ ಸಾಂವಿಧಾನಿಕ ಹಕ್ಕನ್ನು ದೃಢೀಕರಿಸಲು ಮತ್ತು ರಕ್ಷಿಸಲು ಅಗತ್ಯ ಕ್ರಮಗಳನ್ನು ಒಳಗೊಂಡಿರಬೇಕು.
  8. ಮರ್ಯಾದೆಗೇಡು ಹತ್ಯೆಗಳ ತಡೆಗೆ ಸಂಬಧಿಸಿದಂತೆ ಸುಪ್ರೀಂ ಕೋರ್ಟ್‌ನ ನಿರ್ದೇಶನಗಳನ್ನು ಸರ್ಕಾರಗಳು ಕಟ್ಟುನಿಟ್ಟಾಗಿ ಪಾಲಿಸಬೇಕು.
  9. ಜಾತಿ ಆಧಾರಿತ ಹಿಂಸೆ ಮತ್ತು ಪಿತೃಪ್ರಧಾನ ಧೋರಣೆಗಳು ಎದುರಿಸಲು ಮತ್ತು ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವದ ಸಾಂವಿಧಾನಿಕ ಮೌಲ್ಯಗಳನ್ನು ಉತ್ತೇಜಿಸಲು ಪೊಲೀಸ್, ಸ್ಥಳೀಯ ಅಧಿಕಾರಿಗಳು ಹಾಗೂ ಸಾರ್ವಜನಿಕರನ್ನು ಒಳಗೊಂಡ ಜಾಗೃತಿ ಕಾರ್ಯಕ್ರಮಗಳನ್ನು ನಡೆಸಬೇಕು.
  10. ಸಂವಿಧಾನದ ಸಮಾನತೆ, ಸ್ವಾತಂತ್ರ್ಯ ಹಾಗೂ ಭ್ರಾತೃತ್ವದ ಆಶಯಗಳನ್ನು ಖಾತ್ರಿಪಡಿಸಲು ಸರ್ಕಾರಗಳು ಜಾತಿಯ ಸಂಪೂರ್ಣ ನಿರ್ಮೂಲನೆಗೆ ಮುಂದಾಗಬೇಕು.

ಬಳ್ಳಾರಿ | ಪ್ರಭಾವ, ಗೂಂಡಾಗಿರಿ ಮೂಲಕ ಬಡ ಜನರ ಭೂ ಕಬಳಿಕೆ : ಬುಡಾ ಮಾಜಿ ಅಧ್ಯಕ್ಷನ ವಿರುದ್ಧ ಗಂಭೀರ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಜಿಹಾದಿ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...

ಹನೂರು ಶೂಟೌಟ್ ಪ್ರಕರಣ: ಮೂವರು ಅರಣ್ಯ ಸಿಬ್ಬಂದಿಗೆ ನಿರೀಕ್ಷಣಾ ಜಾಮೀನು.!

ಕಾವೇರಿ ವನ್ಯಜೀವಿ ಅಭಯಾರಣ್ಯದ ಹನೂರು ವ್ಯಾಪ್ತಿಯಲ್ಲಿ ಮೂವರು ಮೃತಪಟ್ಟಿದ್ದ ವಿವಾದಾತ್ಮಕ ಗುಂಡಿನ ದಾಳಿ ಪ್ರಕರಣಕ್ಕೆ ಇದೀಗ ಕಾನೂನು ತಿರುವು ಸಿಕ್ಕಿದೆ. ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಮೂವರು ಅರಣ್ಯ ಸಿಬ್ಬಂದಿಗೆ ಕೊಳ್ಳೇಗಾಲದ ಮೊದಲ ಹೆಚ್ಚುವರಿ...

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...