Homeಕರ್ನಾಟಕಹುಬ್ಬಳ್ಳಿ ಮರ್ಯಾದೆಗೇಡು ಹತ್ಯೆ: ನೊಂದ ಕುಟಂಬವನ್ನು ಭೇಟಿಯಾದ ಮಾವಳ್ಳಿ ಶಂಕರ್

ಹುಬ್ಬಳ್ಳಿ ಮರ್ಯಾದೆಗೇಡು ಹತ್ಯೆ: ನೊಂದ ಕುಟಂಬವನ್ನು ಭೇಟಿಯಾದ ಮಾವಳ್ಳಿ ಶಂಕರ್

- Advertisement -
- Advertisement -

ಮಾದಿಗ ಸಮುದಾಯದ ಯುವಕನನ್ನು ಮದುವೆಯಾಗಿದ್ದಕ್ಕೆ ತಂದೆಯಿಂದಲೇ ಭೀಕರವಾಗಿ ಹತ್ಯೆಗೀಡಾದ ಗರ್ಭಿಣಿ ಯುವತಿ ಮಾನ್ಯ ಪಾಟೀಲ್ ಅವರ ಪತಿ ವಿವೇಕಾನಂದ ಮತ್ತು ಹಲ್ಲೆಗೆ ಒಳಗಾದ ಕುಟುಂಬದ ಸದಸ್ಯರನ್ನು ಹಿರಿಯ ದಲಿತ ನಾಯಕ ಮಾವಳ್ಳಿ ಶಂಕರ್ ಭೇಟಿಯಾಗಿ ಸಾಂತ್ವನ ಹೇಳಿದರು.

ಹುಬ್ಬಳ್ಳಿಯ ತಾಲ್ಲೂಕಿನ ಇನಾಮ್ ಇರಾಪುರ ಗ್ರಾಮಕ್ಕೆ ಸೋಮವಾರ (29-12-2026) ರಂದು ಭೇಟಿ ನೀಡಿದ ದಲಿತ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ರಾಜ್ಯ ಪ್ರಧಾನ ಸಂಚಾಲಕರಾದ ಮಾವಳ್ಳಿ ಶಂಕರ್, “ಈ ಘಟನೆಯನ್ನು ನಾವೆಲ್ಲರೂ ಖಂಡಿಸುತ್ತೇವೆ. ತಂದೆಯಿಂದಲೇ ಕೊಲೆಯಾದ ಮಹಿಳೆಗೆ ನ್ಯಾಯ ಸಿಗಬೇಕು. ಕೊಂದವರಿಗೆ ಗಲ್ಲು ಶಿಕ್ಷೆ ಯಾಗಗುವಂತೆ, ಅವರು ಕಾನೂನಿನ ಕುಣಿಕೆಯಿಂದ ತಪ್ಪಿಸಿಕೊಳ್ಳದಂತೆ ಪೊಲೀಸ್ ಇಲಾಖೆ ನೋಡಿಕೊಳ್ಳಬೇಕು. ಅನ್ಯಾಯಕ್ಕೆ ಒಳಗಾದ ಕುಟುಂಬಕ್ಕೆ ರಕ್ಷಣೆ ಕೊಡುವ ಜೊತೆಗೆ ಸರ್ಕಾರ ಎಲ್ಲ ರೀತಿಯ ಸಹಕಾರ ನೀಡಬೇಕು” ಎಂದು ಆಗ್ರಹಿಸಿದರು.

“ಲಿಂಗಾಯಿತ ಸಮುದಾಯದ ಯುವತಿ ಮಾನ್ಯ ಎಂಬಾಕೆ ದಲಿತ ಯುವಕ ವಿವೇಕಾನಂದನನ್ನು ವಿವಾಹವಾಗಿದ್ದ ಕಾರಣಕ್ಕೆ ಆಕೆ ಗರ್ಭಿಣಿಯಿದ್ದಾಗಲೇ ತಂದೆ ಪ್ರಕಾಶಗೌಡ ಪಾಟೀಲ್ ಬರ್ಬರವಾಗಿ ಕೊಲೆ ಮಾಡಿರುವುದು ನಾಗರಿಕ ಸಮಾಜ ತಲೆತಗ್ಗಿಸುವಂತದ್ದು. ಮರ್ಯಾದೆಗೇಡು ಹತ್ಯೆಗಳ ನಿಗ್ರಹಕ್ಕಾಗಿ ಸರ್ಕಾರ ಕೂಡಲೇ ಪ್ರತ್ಯೇಕ ಮತ್ತು ಕಟ್ಟುನಿಟ್ಟಿನ ಕಾಯ್ದೆ ರೂಪಿಸಬೇಕು” ಎಂದು ಅವರು ಈ ಸಂದರ್ಭದಲ್ಲಿ ಒತ್ತಾಯಿಸಿದರು.

“ಮರ್ಯಾದೆ ಹೆಸರಿನಲ್ಲಿ ನಡೆಯುತ್ತಿರುವ ಇಂತಹ ಹತ್ಯೆಗಳಲ್ಲಿ ಯಾವುದೇ ಗೌರವ ಅಡಗಿಲ್ಲ, ಇದೊಂದು ಜಾತಿಗ್ರಸ್ತ ಸಮಾಜ ಎಸಗುವ ಕ್ರೂರ ಕೊಲೆಯಷ್ಟೇ. ಜಾತಿ ಮತ್ತು ಪಿತೃಪ್ರಭುತ್ವದ ಅಹಂನಿಂದ ಮಹಿಳೆಯರ ಸ್ವಾತಂತ್ರ್ಯವನ್ನು ಹತ್ತಿಕ್ಕುವ ಪ್ರಯತ್ನ ನಿರಂತರವಾಗಿ ನಡೆಯುತ್ತಿದೆ. ಸ್ವಂತ ಮಗಳ ಜೀವ ತೆಗೆಯುವುದು ಜಾತಿ ವ್ಯವಸ್ಥೆಯ ಕ್ರೌರ್ಯದ ಪರಮಾವಧಿಯಾಗಿದ್ದು, ಇಂತಹ ಕೃತ್ಯಗಳು ಸಂವಿಧಾನದ ಆಶಯಗಳಾದ ಸಮಾನತೆ ಮತ್ತು ಭ್ರಾತೃತ್ವಕ್ಕೆ ದೊಡ್ಡ ಹೊಡೆತ ನೀಡುತ್ತಿವೆ” ಎಂದು ಅವರು ವಿಷಾದ ವ್ಯಕ್ತಪಡಿಸಿದರು.

“ಸುಪ್ರೀಂ ಕೋರ್ಟ್ ಮರ್ಯಾದೆ ಹತ್ಯೆಗಳನ್ನು ಅನಾಗರಿಕ ಕೃತ್ಯ ಎಂದು ಕರೆದಿದ್ದರೂ, ಜಾತಿ ರಾಜಕಾರಣದಲ್ಲಿ ಮುಳುಗಿರುವ ಸರ್ಕಾರಗಳು ಇಂತಹ ವ್ಯವಸ್ಥೆಯನ್ನು ಪೋಷಿಸುತ್ತಿವೆ. ಅಂತರ್ಜಾತಿ ವಿವಾಹಗಳು ರಾಷ್ಟ್ರೀಯ ಹಿತಾಸಕ್ತಿಯನ್ನು ಬಲಪಡಿಸುತ್ತವೆ ಎಂದು ನ್ಯಾಯಾಲಯ ಹೇಳಿದ್ದರೂ, ಇಂತಹ ಹೇಯ ಕೃತ್ಯಗಳು ಮರುಕಳಿಸುತ್ತಿರುವುದು ಸರ್ಕಾರದ ವೈಫಲ್ಯಕ್ಕೆ ಸಾಕ್ಷಿಯಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಹತ್ಯೆಯಾದ ಮಾನ್ಯ ಪತಿ ವಿವೇಕಾನಂದ ದೊಡ್ಡಮನಿ, ದಸಂಸ ರಾಜ್ಯ ಸಂಘಟನಾ ಸಂಚಾಲಕರಾದ ರಾಮಣ್ಣ ಕಲ್ಲದೇವನಹಳ್ಳಿ, ರಾಜ್ಯ ಸಮಿತಿ ಸದಸ್ಯರಾದ ನಾಗಣ್ಣ ಬಡಿಗೇರ, ದಸಂಸ ಧಾರವಾಡ ಜಿಲ್ಲಾ ಪ್ರಧಾನ ಸಂಚಾಲಕ ಮಂಜುನಾಥ ಶರೇವಾಡ, ಲಕ್ಷ್ಮಣ ದೊಡ್ಡಮನಿ, ಭರತರಾಜ ಅರವೇಡ ಸೇರಿದಂತೆ ಸಂಘಟನೆಯ ಹಲವು ಪದಾಧಿಕಾರಿಗಳು ಹಾಗೂ ಗ್ರಾಮದ ಮುಖಂಡರು ಉಪಸ್ಥಿತರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಎಚ್‌.ಡಿ ರೇವಣ್ಣ ಖುಲಾಸೆ

ಮನೆ ಕೆಲಸದ ಮಹಿಳೆಯ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೆಡಿಎಸ್‌ ಶಾಸಕ ಎಚ್‌.ಡಿ ರೇವಣ್ಣ ಅವರನ್ನು ಬೆಂಗಳೂರಿನ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯವು ಸೋಮವಾರ (ಡಿ.29) ಆರೋಪ ಮುಕ್ತಗೊಳಿಸಿ ಮಹತ್ವದ ಆದೇಶ ನೀಡಿದೆ. ಕಳೆದ ತಿಂಗಳು...

ಅಧಿಕಾರಕ್ಕೆ ಬಂದರೆ ಬಂಗಾಳವನ್ನು ನುಸುಳುಕೋರರಿಂದ ಮುಕ್ತಗೊಳಿಸುತ್ತೇವೆ: ಅಮಿತ್ ಶಾ

ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಯ ನಂತರ ಪಕ್ಷವು ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೆ, ಪಶ್ಚಿಮ ಬಂಗಾಳವನ್ನು ನುಸುಳುಕೋರರಿಂದ ಮುಕ್ತಗೊಳಿಸುವುದು ಬಿಜೆಪಿಯ ಮೊದಲ ಕೆಲಸ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಮಂಗಳವಾರ...

ಅಂಜೆಲ್ ಚಕ್ಮಾ ಜನಾಂಗೀಯ ಹತ್ಯೆ: ತ್ರಿಪುರಾದಲ್ಲಿ ತೀವ್ರಗೊಂಡ ಪ್ರತಿಭಟನೆ; ಮೇಣದಬತ್ತಿ ಮೆರವಣಿಗೆ

ಅಂಜೆಲ್ ಚಕ್ಮಾ ಜನಾಂಗೀಯ ಹತ್ಯೆ ಖಂಡಿಸಿ ತ್ರಿಪುರಾದಲ್ಲಿ ಪ್ರತಿಭಟನೆಗಳು, ಮೇಣದಬತ್ತಿ ಜಾಗೃತಿ ಮುಂದುವರೆದಿದೆ. ಹತ್ಯೆ ಸಂಬಂಧ ಪೊಲೀಸರು ಆರಂಭದಲ್ಲಿ ಎಫ್‌ಐಆರ್ ದಾಖಲಿಸುವಲ್ಲಿ ವಿಫಲರಾಗುವ ಮೂಲಕ ಅಪರಾಧದ ಸಾಕ್ಷಿಗಳನ್ನು ದುರ್ಬಲಗೊಳಿಸಲು ಪ್ರಯತ್ನಿಸಿದ್ದಾರೆ ಎಂದು ಅಖಿಲ...

ತಮಿಳುನಾಡು: ವಿಶ್ವವಿದ್ಯಾಲಯ ತಿದ್ದುಪಡಿ ಮಸೂದೆ ವಾಪಸ್ ಕಳುಹಿಸಿದ ದ್ರೌಪದಿ ಮುರ್ಮು: ಸ್ಟಾಲಿನ್ ಸರ್ಕಾರಕ್ಕೆ ಹಿನ್ನೆಡೆ

ಚೆನ್ನೈ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ತಮಿಳುನಾಡು ವಿಶ್ವವಿದ್ಯಾಲಯದ ಮದ್ರಾಸ್ ತಿದ್ದುಪಡಿ ಮಸೂದೆಯನ್ನು ಹಿಂದಿರುಗಿಸಿದ್ದಾರೆ, ಇದು ರಾಜ್ಯ ಸರ್ಕಾರಕ್ಕೆ ತನ್ನ ಉಪಕುಲಪತಿಯನ್ನು ನೇಮಿಸಲು ಅಧಿಕಾರ ನೀಡುತ್ತದೆ ಎಂದು ಅಧಿಕೃತ ಮೂಲಗಳು ಮಂಗಳವಾರ ತಿಳಿಸಿವೆ. ಏಪ್ರಿಲ್...

ತಲವಾರು ವಿತರಣೆ : ಹಿಂದೂ ರಕ್ಷಾ ದಳದ 10 ದುಷ್ಕರ್ಮಿಗಳ ಬಂಧನ

ಉತ್ತರ ಪ್ರದೇಶದ ಗಾಝಿಯಾಬಾದ್‌ನ ಶಾಲಿಮಾರ್ ಗಾರ್ಡನ್ ಕಾಲೋನಿಯಲ್ಲಿ ತಲವಾರು ವಿತರಿಸಿದ ಆರೋಪದ ಮೇಲೆ ಹಿಂದೂ ರಕ್ಷಾ ದಳದ ಹತ್ತು ದುಷ್ಕರ್ಮಿಗಳನ್ನು ಪೊಲೀಸರು ಸೋಮವಾರ (ಡಿ.29) ಬಂಧಿಸಿದ್ದಾರೆ ಎಂದು ವರದಿಯಾಗಿದೆ. ಶಾಲಿಮಾರ್...

‘ಭಾರತ-ಪಾಕಿಸ್ತಾನ ಯುದ್ಧ ನಿಂತಿತು’: ನೆತನ್ಯಾಹು ಭೇಟಿಯ ಸಂದರ್ಭದಲ್ಲಿ ತಮ್ಮ ಶಾಂತಿಪ್ರಿಯ ಹೇಳಿಕೆಯನ್ನು ಪುನರಾವರ್ತಿಸಿದ ಟ್ರಂಪ್

ವಿಶ್ವ ನಾಯಕರೊಂದಿಗಿನ ಸಭೆಗಳ ಸಮಯದಲ್ಲಿ ಪರಮಾಣು ಶಸ್ತ್ರಸಜ್ಜಿತ ದಕ್ಷಿಣ ಏಷ್ಯಾದ ನೆರೆಹೊರೆಯವರ ನಡುವಿನ ಸಂಘರ್ಷವನ್ನು ಕೊನೆಗೊಳಿಸಿದ ಕೀರ್ತಿಯನ್ನು ಅಮೆರಿಕ ಅಧ್ಯಕ್ಷರು ಪಡೆದುಕೊಂಡಿದ್ದಾರೆ ಮತ್ತು ತಮ್ಮ ವಿದೇಶ ಪ್ರವಾಸಗಳ ಸಮಯದಲ್ಲಿ ಅದೇ ಹೇಳಿಕೆಯನ್ನು ಪುನರಾವರ್ತಿಸಿದ್ದಾರೆ. ಭಾರತಕ್ಕೆ...

ಮುಂಬೈ: ಬೆಸ್ಟ್ ಬಸ್ ಹಿಮ್ಮುಖವಾಗಿ ಚಲಿಸುವಾಗ ಪಾದಚಾರಿಗಳಿಗೆ ಡಿಕ್ಕಿ: ನಾಲ್ವರ ಸಾವು, 10 ಜನರಿಗೆ ಗಾಯ

ಮುಂಬೈನ ನಾಗರಿಕ ಸಾರಿಗೆ ಸಂಸ್ಥೆಯ ಬೆಸ್ಟ್‌ನ ಬಸ್ ಸೋಮವಾರ ರಾತ್ರಿ ಮುಂಬೈನ ಭಾಂಡಪ್ ಪ್ರದೇಶದಲ್ಲಿ ಹಿಮ್ಮುಖವಾಗಿ ಚಲಿಸುತ್ತಿದ್ದಾಗ ಪಾದಚಾರಿಗಳ ಮೇಲೆ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ ನಾಲ್ವರು ಸಾವನ್ನಪ್ಪಿ,10 ಮಂದಿ ಗಾಯಗೊಂಡಿದ್ದಾರೆ. ಡಿಸೆಂಬರ್ 9,...

ಕೋಗಿಲು ಪ್ರಕರಣ | ಸೂರು ಕಳೆದುಕೊಂಡವರಿಗೆ ಬೈಯ್ಯಪ್ಪನಹಳ್ಳಿಯಲ್ಲಿ ಪರ್ಯಾಯ ಮನೆ ಹಂಚಿಕೆ : ಸಿಎಂ ಸಿದ್ದರಾಮಯ್ಯ

ಕೋಗಿಲು ಬಡಾವಣೆಯಲ್ಲಿ ಜಿಬಿಎ ನಡೆಸಿದ ತೆರವು ಕಾರ್ಯಾಚರಣೆಯಿಂದ ಸೂರು ಕಳೆದುಕೊಂಡವರಿಗೆ ಬೈಯ್ಯಪ್ಪನಹಳ್ಳಿಯಲ್ಲಿ ಪರ್ಯಾಯ ಮನೆ ಹಂಚಿಕೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಸೋಮವಾರ (ಡಿ.29) ಗೃಹ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು,...

ಬಾಂಗ್ಲಾದೇಶದ ಮೊದಲ ಮಹಿಳಾ ಪ್ರಧಾನಿ ಖಾಲಿದಾ ಝಿಯಾ ನಿಧನ

ಬಾಂಗ್ಲಾದೇಶದ ಮೊದಲ ಮಹಿಳಾ ಪ್ರಧಾನಿ ಖಾಲಿದಾ ಝಿಯಾ ದೀರ್ಘಕಾಲದ ಅನಾರೋಗ್ಯದ ನಂತರ ಮಂಗಳವಾರ (ಡಿಸೆಂಬರ್ 30, 2025) ಬೆಳಗಿನ ಜಾವ ನಿಧನರಾದರು. ಅವರಿಗೆ 80 ವರ್ಷ ವಯಸ್ಸಾಗಿತ್ತು. ಖಾಲಿದಾ ಅವರು ಬಾಂಗ್ಲಾದೇಶದ ವಿರೋಧ ಪಕ್ಷ...

‘ಆತ ಗಲ್ಲಿಗೇರುವವರೆಗೆ ಹೋರಾಟ ಮುಂದುವರಿಸುತ್ತೇನೆ’ : ಸುಪ್ರೀಂ ಕೋರ್ಟ್ ಆದೇಶ ಸ್ವಾಗತಿಸಿದ ಉನ್ನಾವೋ ಅತ್ಯಾಚಾರ ಸಂತ್ರಸ್ತೆ

ಅಪರಾಧಿ ಕುಲದೀಪ್ ಸಿಂಗ್ ಸೆಂಗಾರ್‌ ಜೀವಾವಧಿ ಶಿಕ್ಷೆ ಅಮಾನತಿಗೆ ತಡೆ ನೀಡಿರುವ ಸುಪ್ರೀಂ ಕೋರ್ಟ್‌ ಆದೇಶವನ್ನು ಉನ್ನಾವೋ ಅತ್ಯಾಚಾರ ಸಂತ್ರಸ್ತೆ ಸ್ವಾಗತಿಸಿದ್ದು, ಸೆಂಗಾರ್‌ ಗಲ್ಲಿಗೇರುವವರೆಗೆ ತನ್ನ ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿದ್ದಾರೆ. "ಈ...