Homeಕರ್ನಾಟಕಹುಬ್ಬಳ್ಳಿ ಮರ್ಯಾದೆಗೇಡು ಹತ್ಯೆ: ನೊಂದ ಕುಟಂಬವನ್ನು ಭೇಟಿಯಾದ ಮಾವಳ್ಳಿ ಶಂಕರ್

ಹುಬ್ಬಳ್ಳಿ ಮರ್ಯಾದೆಗೇಡು ಹತ್ಯೆ: ನೊಂದ ಕುಟಂಬವನ್ನು ಭೇಟಿಯಾದ ಮಾವಳ್ಳಿ ಶಂಕರ್

- Advertisement -
- Advertisement -

ಮಾದಿಗ ಸಮುದಾಯದ ಯುವಕನನ್ನು ಮದುವೆಯಾಗಿದ್ದಕ್ಕೆ ತಂದೆಯಿಂದಲೇ ಭೀಕರವಾಗಿ ಹತ್ಯೆಗೀಡಾದ ಗರ್ಭಿಣಿ ಯುವತಿ ಮಾನ್ಯ ಪಾಟೀಲ್ ಅವರ ಪತಿ ವಿವೇಕಾನಂದ ಮತ್ತು ಹಲ್ಲೆಗೆ ಒಳಗಾದ ಕುಟುಂಬದ ಸದಸ್ಯರನ್ನು ಹಿರಿಯ ದಲಿತ ನಾಯಕ ಮಾವಳ್ಳಿ ಶಂಕರ್ ಭೇಟಿಯಾಗಿ ಸಾಂತ್ವನ ಹೇಳಿದರು.

ಹುಬ್ಬಳ್ಳಿಯ ತಾಲ್ಲೂಕಿನ ಇನಾಮ್ ಇರಾಪುರ ಗ್ರಾಮಕ್ಕೆ ಸೋಮವಾರ (29-12-2026) ರಂದು ಭೇಟಿ ನೀಡಿದ ದಲಿತ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ರಾಜ್ಯ ಪ್ರಧಾನ ಸಂಚಾಲಕರಾದ ಮಾವಳ್ಳಿ ಶಂಕರ್, “ಈ ಘಟನೆಯನ್ನು ನಾವೆಲ್ಲರೂ ಖಂಡಿಸುತ್ತೇವೆ. ತಂದೆಯಿಂದಲೇ ಕೊಲೆಯಾದ ಮಹಿಳೆಗೆ ನ್ಯಾಯ ಸಿಗಬೇಕು. ಕೊಂದವರಿಗೆ ಗಲ್ಲು ಶಿಕ್ಷೆ ಯಾಗಗುವಂತೆ, ಅವರು ಕಾನೂನಿನ ಕುಣಿಕೆಯಿಂದ ತಪ್ಪಿಸಿಕೊಳ್ಳದಂತೆ ಪೊಲೀಸ್ ಇಲಾಖೆ ನೋಡಿಕೊಳ್ಳಬೇಕು. ಅನ್ಯಾಯಕ್ಕೆ ಒಳಗಾದ ಕುಟುಂಬಕ್ಕೆ ರಕ್ಷಣೆ ಕೊಡುವ ಜೊತೆಗೆ ಸರ್ಕಾರ ಎಲ್ಲ ರೀತಿಯ ಸಹಕಾರ ನೀಡಬೇಕು” ಎಂದು ಆಗ್ರಹಿಸಿದರು.

“ಲಿಂಗಾಯಿತ ಸಮುದಾಯದ ಯುವತಿ ಮಾನ್ಯ ಎಂಬಾಕೆ ದಲಿತ ಯುವಕ ವಿವೇಕಾನಂದನನ್ನು ವಿವಾಹವಾಗಿದ್ದ ಕಾರಣಕ್ಕೆ ಆಕೆ ಗರ್ಭಿಣಿಯಿದ್ದಾಗಲೇ ತಂದೆ ಪ್ರಕಾಶಗೌಡ ಪಾಟೀಲ್ ಬರ್ಬರವಾಗಿ ಕೊಲೆ ಮಾಡಿರುವುದು ನಾಗರಿಕ ಸಮಾಜ ತಲೆತಗ್ಗಿಸುವಂತದ್ದು. ಮರ್ಯಾದೆಗೇಡು ಹತ್ಯೆಗಳ ನಿಗ್ರಹಕ್ಕಾಗಿ ಸರ್ಕಾರ ಕೂಡಲೇ ಪ್ರತ್ಯೇಕ ಮತ್ತು ಕಟ್ಟುನಿಟ್ಟಿನ ಕಾಯ್ದೆ ರೂಪಿಸಬೇಕು” ಎಂದು ಅವರು ಈ ಸಂದರ್ಭದಲ್ಲಿ ಒತ್ತಾಯಿಸಿದರು.

“ಮರ್ಯಾದೆ ಹೆಸರಿನಲ್ಲಿ ನಡೆಯುತ್ತಿರುವ ಇಂತಹ ಹತ್ಯೆಗಳಲ್ಲಿ ಯಾವುದೇ ಗೌರವ ಅಡಗಿಲ್ಲ, ಇದೊಂದು ಜಾತಿಗ್ರಸ್ತ ಸಮಾಜ ಎಸಗುವ ಕ್ರೂರ ಕೊಲೆಯಷ್ಟೇ. ಜಾತಿ ಮತ್ತು ಪಿತೃಪ್ರಭುತ್ವದ ಅಹಂನಿಂದ ಮಹಿಳೆಯರ ಸ್ವಾತಂತ್ರ್ಯವನ್ನು ಹತ್ತಿಕ್ಕುವ ಪ್ರಯತ್ನ ನಿರಂತರವಾಗಿ ನಡೆಯುತ್ತಿದೆ. ಸ್ವಂತ ಮಗಳ ಜೀವ ತೆಗೆಯುವುದು ಜಾತಿ ವ್ಯವಸ್ಥೆಯ ಕ್ರೌರ್ಯದ ಪರಮಾವಧಿಯಾಗಿದ್ದು, ಇಂತಹ ಕೃತ್ಯಗಳು ಸಂವಿಧಾನದ ಆಶಯಗಳಾದ ಸಮಾನತೆ ಮತ್ತು ಭ್ರಾತೃತ್ವಕ್ಕೆ ದೊಡ್ಡ ಹೊಡೆತ ನೀಡುತ್ತಿವೆ” ಎಂದು ಅವರು ವಿಷಾದ ವ್ಯಕ್ತಪಡಿಸಿದರು.

“ಸುಪ್ರೀಂ ಕೋರ್ಟ್ ಮರ್ಯಾದೆ ಹತ್ಯೆಗಳನ್ನು ಅನಾಗರಿಕ ಕೃತ್ಯ ಎಂದು ಕರೆದಿದ್ದರೂ, ಜಾತಿ ರಾಜಕಾರಣದಲ್ಲಿ ಮುಳುಗಿರುವ ಸರ್ಕಾರಗಳು ಇಂತಹ ವ್ಯವಸ್ಥೆಯನ್ನು ಪೋಷಿಸುತ್ತಿವೆ. ಅಂತರ್ಜಾತಿ ವಿವಾಹಗಳು ರಾಷ್ಟ್ರೀಯ ಹಿತಾಸಕ್ತಿಯನ್ನು ಬಲಪಡಿಸುತ್ತವೆ ಎಂದು ನ್ಯಾಯಾಲಯ ಹೇಳಿದ್ದರೂ, ಇಂತಹ ಹೇಯ ಕೃತ್ಯಗಳು ಮರುಕಳಿಸುತ್ತಿರುವುದು ಸರ್ಕಾರದ ವೈಫಲ್ಯಕ್ಕೆ ಸಾಕ್ಷಿಯಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಹತ್ಯೆಯಾದ ಮಾನ್ಯ ಪತಿ ವಿವೇಕಾನಂದ ದೊಡ್ಡಮನಿ, ದಸಂಸ ರಾಜ್ಯ ಸಂಘಟನಾ ಸಂಚಾಲಕರಾದ ರಾಮಣ್ಣ ಕಲ್ಲದೇವನಹಳ್ಳಿ, ರಾಜ್ಯ ಸಮಿತಿ ಸದಸ್ಯರಾದ ನಾಗಣ್ಣ ಬಡಿಗೇರ, ದಸಂಸ ಧಾರವಾಡ ಜಿಲ್ಲಾ ಪ್ರಧಾನ ಸಂಚಾಲಕ ಮಂಜುನಾಥ ಶರೇವಾಡ, ಲಕ್ಷ್ಮಣ ದೊಡ್ಡಮನಿ, ಭರತರಾಜ ಅರವೇಡ ಸೇರಿದಂತೆ ಸಂಘಟನೆಯ ಹಲವು ಪದಾಧಿಕಾರಿಗಳು ಹಾಗೂ ಗ್ರಾಮದ ಮುಖಂಡರು ಉಪಸ್ಥಿತರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಿಮಂತ ಬಿಸ್ವಾ ಶರ್ಮಾ ‘ಗುಂಡು ಹಾರಿಸುವ’ ವಿಡಿಯೋ ವಿರುದ್ಧದ ಅರ್ಜಿ; ವಿಚಾರಣೆಗೆ ಸಮ್ಮತಿಸಿದ ಸುಪ್ರೀಂ ಕೋರ್ಟ್

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ನಿರ್ದಿಷ್ಟ ಸಮುದಾಯದ ಸದಸ್ಯರ ಮೇಲೆ ಗುರಿಯಿಟ್ಟು ರೈಫಲ್‌ನಿಂದ ಗುಂಡು ಹಾರಿಸುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಎಡಪಂಥೀಯ...

ನರವಾಣೆಯ ಅಪ್ರಕಟಿತ ಆತ್ಮಚರಿತ್ರೆ ಪ್ರಸಾರ ಆರೋಪ : ಎಫ್‌ಐಆರ್‌ ದಾಖಲಿಸಿದ ದೆಹಲಿ ಪೊಲೀಸರು

ಮಾಜಿ ಭೂಸೇನಾ ಮುಖ್ಯಸ್ಥ ಎಂ.ಎಂ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ "ಫೋರ್ ಸ್ಟಾರ್ಸ್ ಆಫ್ ಡೆಸ್ಟಿನಿ"ಯ ಪ್ರಸಾರ ಆರೋಪದ ಮೇಲೆ ದೆಹಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎಂದು ವರದಿಯಾಗಿದೆ. ಇದೇ ಪುಸ್ತಕದ ವಿಷಯಗಳನ್ನು ಪ್ರತಿಪಕ್ಷ...

ನರವಾಣೆ ಅವರ ಆತ್ಮಚರಿತ್ರೆಯ ಯಾವುದೇ ಪ್ರತಿಗಳು ಸಾರ್ವಜನಿಕವಾಗಿ ಲಭ್ಯವಿಲ್ಲ: ಪೆಂಗ್ವಿನ್ ಪ್ರಕಾಶನ ಸ್ಪಷ್ಟನೆ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಆತ್ಮಚರಿತ್ರೆ 'ಫೋರ್ ಸ್ಟಾರ್ಸ್ ಆಫ್ ಡೆಸ್ಟಿನಿ'ಗೆ ವಿಶೇಷ ಪ್ರಕಾಶನ ಹಕ್ಕುಗಳನ್ನು ಹೊಂದಿದ್ದೇವೆ ಎಂದು ಪೆಂಗ್ವಿನ್ ರಾಂಡಮ್ ಹೌಸ್ ಇಂಡಿಯಾ (ಪಿಆರ್‌ಎಚ್‌ಐ) ಹೇಳಿದ್ದು,...

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಿದ ಪ್ರತಿಪಕ್ಷಗಳು

ವಿರೋಧ ಪಕ್ಷಗಳು ಪ್ರತಿಭಟನೆ ಮುಂದುವರಿಸಿದ ಹಿನ್ನೆಲೆ, ಲೋಕಸಭೆಯ ಬಜೆಟ್ ಅಧಿವೇಶನದ 10ನೇ ದಿನದ ಕಲಾಪವೂ ಸೋಮವಾರ (ಫೆ.10) ಪದೇ ಪದೇ ಮುಂದೂಡಿಕೆಯಾಯಿತು. ಎಂದಿನಂತೆ ಬೆಳಿಗ್ಗೆ 11 ಗಂಟೆಗೆ ಕಲಾಪ ಆರಂಭವಾದಾಗ ವಿರೋಧ ಪಕ್ಷಗಳ ಸದಸ್ಯರು...

ರಾಜಸ್ಥಾನ| ಅನಧಿಕೃತ ಧರ್ಮೋಪದೇಶದ ಆರೋಪ; 12 ತಬ್ಲಿಘಿ ಜಮಾತ್ ಸದಸ್ಯರ ಬಂಧನ

ಗುಜರಾತ್‌ನ ಗೋಧ್ರಾದಿಂದ ಬಂದಿದ್ದ 10 ರಿಂದ 12 ಜನರ ಗುಂಪು ಕಳೆದ ಎರಡು ದಿನಗಳಿಂದ ಬಾಗಿಡೋರಾ ಪ್ರದೇಶದಲ್ಲಿ ಓಡಾಡುತ್ತಿದೆ ಎಂದು ಸ್ಥಳೀಯ ಪೊಲೀಸರಿಗೆ ಮಾಹಿತಿ ಬಂದ ನಂತರ ಅವರನ್ನು ಬಂಧಿಸಲಾಗಿದೆ. ಅಧಿಕಾರಿಗಳಿಗೆ ಮಾಹಿತಿ...

ಕೆನಡಾದಲ್ಲಿ ನೆಲಮಂಗಲ ಮೂಲದ 37ವರ್ಷದ ಟೆಕ್ಕಿಯನ್ನು ಗುಂಡಿಟ್ಟು ಹತ್ಯೆ ಮಾಡಿದ ಅಪರಿಚಿತ ಗುಂಪು 

ಬೆಂಗಳೂರು: ಕೆನಡಾದ ಟೊರೊಂಟೊದಲ್ಲಿರುವ ಜನನಿಬಿಡ ಶಾಪಿಂಗ್ ಸೆಂಟರ್‌ನ ಪಾರ್ಕಿಂಗ್ ಸ್ಥಳದಲ್ಲಿ ಅಪರಿಚಿತ ವ್ಯಕ್ತಿಗಳು ಗುಂಡು ಹಾರಿಸಿ ಬೆಂಗಳೂರು ಮೂಲದ 37 ವರ್ಷದ ಟೆಕ್ಕಿಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ನೆಲಮಂಗಲ ಬಳಿಯ ತ್ಯಾಮಗೊಂಡ್ಲು ನಿವಾಸಿ...

ತೆಲಂಗಾಣ| ಪುರಸಭೆ ಚುನಾವಣೆಗೆ ಸ್ಪರ್ಧಿಸಿದ್ದ ಬಿಜೆಪಿ ಅಭ್ಯರ್ಥಿ ಆತ್ಮಹತ್ಯೆಗೆ ಶರಣು; ಕುಟುಂಬದಿಂದ ಬೆದರಿಕೆ ಆರೋಪ

ಪುರಸಭೆ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷದ (ಬಿಜೆಪಿ) ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ವ್ಯಕ್ತಿಯೊಬ್ಬ ಆತ್ಮಹತ್ಯೆಯಿಂದ ಸಾವನ್ನಪ್ಪಿರುವ ಘಟನೆ ತೆಲಂಗಾಣದಿಂದ ವರದಿಯಾಗಿದೆ. ಸೋಮವಾರ ತಡರಾತ್ರಿ ನಾರಾಯಣಪೇಟೆ ಜಿಲ್ಲೆಯ ಮಕ್ತಲ್ ಪುರಸಭೆಯಲ್ಲಿ ಈ ಘಟನೆ ನಡೆದಿದೆ. ಮಕ್ತಲ್ ಪುರಸಭೆಯ...

ದ್ವೇಷ ಭಾಷಣ : ಅಸ್ಸಾಂ ಸಿಎಂ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಕಮ್ಯುನಿಸ್ಟ್ ಪಕ್ಷಗಳು

ಮುಸ್ಲಿಮರ ವಿರುದ್ಧ ಪದೇ ಪದೇ ದ್ವೇಷ ಕಾರುತ್ತಿರುವ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಕಮ್ಯುನಿಷ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕಿಸ್ಟ್ -ಸಿಪಿಐ (ಎಂ)) ಮತ್ತು ಕಮ್ಯುನಿಷ್ಟ್...

ಬಿಹಾರ: ಬಹುಜನ ಸಮುದಾಯಗಳಲ್ಲಿ ಉನ್ನತ ಶಿಕ್ಷಣವನ್ನು ಉತ್ತೇಜಿಸುವ ನಿಟ್ಟಿನಲ್ಲಿ ಬೋಧ್ ಗಯಾದಲ್ಲಿ ಬಹುಜನ ವಿದ್ವಾಂಸರ ಸಮ್ಮೇಳನ

ಭಾರತದ ಪ್ರಮುಖ ವಿಶ್ವವಿದ್ಯಾಲಯಗಳ ವಿದ್ವಾಂಸರು, ಶಿಕ್ಷಣ ತಜ್ಞರು ಮತ್ತು ಸಾಮಾಜಿಕ ಕಾರ್ಯಕರ್ತರು ಬೋಧ್ ಗಯಾದಲ್ಲಿ ಒಟ್ಟುಗೂಡಿ ಬಹುಜನ ಸಮುದಾಯಕ್ಕೆ ಸಮಾನತೆ ಮತ್ತು ಸಾಮಾಜಿಕ ಪರಿವರ್ತನೆಯನ್ನು ಮುನ್ನಡೆಸುವಲ್ಲಿ ಉನ್ನತ ಶಿಕ್ಷಣದ ಪಾತ್ರದ ಕುರಿತು ಚರ್ಚಿಸಿದರು. ಫೆಬ್ರವರಿ...

ಭಾರತೀಯ ಬಿಷಪ್‌ಗಳ ಸಂಸ್ಥೆಯ ಮುಖ್ಯಸ್ಥರಾಗಿ ದಲಿತ ಕಾರ್ಡಿನಲ್ ಪೂಲಾ ಆಯ್ಕೆ

ಭಾರತೀಯ ಬಿಷಪ್‌ಗಳ ಸಂಸ್ಥೆಯ ಮುಖ್ಯಸ್ಥರಾಗಿ ದಲಿತ ಕಾರ್ಡಿನಲ್ ಪೂಲಾ ಅವರು ಆಯ್ಕೆಯಾಗಿದ್ದಾರೆ. ಭಾರತದ ಕ್ಯಾಥೋಲಿಕ್‌ಗಳಲ್ಲಿ ಸುಮಾರು ಮೂರನೇ ಎರಡರಷ್ಟು ಜನಸಂಖ್ಯೆ ದಲಿತರೇ ಇದ್ದಾರೆ ಎಂದು ನಂಬಲಾಗಿದ್ದರೂ, ಅವರು ಧಾರ್ಮಿಕ ಆಚರಣೆ ಮತ್ತು ಬಿಷಪ್‌...