Homeಕರ್ನಾಟಕಹುಬ್ಬಳ್ಳಿಯಲ್ಲಿ ಕ್ರಿಮಿನಲ್‌ ಪರ ಪ್ರತಿಭಟನೆ: ಆರ್‌.ಅಶೋಕ್‌ ಸೇರಿ 43 ಮಂದಿ ವಿರುದ್ಧ ಪ್ರಕರಣ ದಾಖಲು

ಹುಬ್ಬಳ್ಳಿಯಲ್ಲಿ ಕ್ರಿಮಿನಲ್‌ ಪರ ಪ್ರತಿಭಟನೆ: ಆರ್‌.ಅಶೋಕ್‌ ಸೇರಿ 43 ಮಂದಿ ವಿರುದ್ಧ ಪ್ರಕರಣ ದಾಖಲು

- Advertisement -
- Advertisement -

ಹುಬ್ಬಳ್ಳಿಯಲ್ಲಿ 1992ರ ಗಲಭೆ ಪ್ರಕರಣದ ಆರೋಪಿ, ಕ್ರಿಮಿನಲ್‌ ಹಿನ್ನೆಲೆ ಹೊಂದಿದ್ದ ಶ್ರೀಕಾಂತ ಪೂಜಾರಿಯ ಬಂಧನವನ್ನು ರಾಜಕೀಯ ಅಸ್ತ್ರವಾಗಿ ಬಳಸಿ ಪ್ರತಿಭಟನೆ ನಡೆಸಿದ್ದ ಬಿಜೆಪಿ ನಾಯಕ ಆರ್‌.ಅಶೋಕ್‌ ಸೇರಿ 43 ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ.

15 ಪ್ರಕರಣಗಳ ಆರೋಪಿ ಶ್ರೀಕಾಂತ ಪೂಜಾರಿಯನ್ನು 1992ರಲ್ಲಿ ಹುಬ್ಬಳ್ಳಿಯಲ್ಲಿ ಮಳಿಗೆಗೆ ಬೆಂಕಿ ಹಚ್ಚಿ ಹಿಂಸಾಚಾರವನ್ನು ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿ ಹಳೇ ಕೇಸ್‌ ವಿಲೇವಾರಿ ದೃಷ್ಟಿಯಲ್ಲಿ ಪೊಲೀಸರು ಬಂಧಿಸಿದ್ದರು. ಕ್ರಿಮಿನಲ್‌ ಓರ್ವನ ಬಂಧನದ ಬೆನ್ನಲ್ಲಿ ಆತನನ್ನು ‘ಕರಸೇವಕ’ ಎಂದು ಹೆಸರಿಟ್ಟು ಬಿಜೆಪಿ ರಾಜಕೀಯ ಫಸಲು ತೆಗೆಯಲು ಮುಂದಾಗಿತ್ತು. ಇದರ ಭಾಗವಾಗಿಯೇ ಹುಬ್ಬಳ್ಳಿಯ ಶಹರ ಪೊಲೀಸ್‌ ಠಾಣೆ ಎದುರು ಜ. 3ರಂದು ಪ್ರತಿಭಟನೆ ನಡೆಸಿತ್ತು.

ಪ್ರತಿಭಟನೆ ವೇಳೆ ಮುಖ್ಯಮಂತ್ರಿ ವಿರುದ್ಧ ಅವಾಚ್ಯ ಪದಗಳನ್ನು ಬಳಸಿ ಘೋಷಣೆ ಕೂಗಿ, ಪ್ರಚೋದನಕಾರಿ ಭಾಷಣ ಮಾಡಿದ್ದಾರೆ ಆರೋಪಿಸಿ ಎಂದು ಹುಬ್ಬಳ್ಳಿ-ಧಾರವಾಡ ಮಹಾನಗರ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಅಲ್ತಾಫ್‌ ಹಳ್ಳೂರು ಜ.5ರಂದು ಪೊಲೀಸರಿಗೆ ದೂರು ನೀಡಿದ್ದಾರೆ. ದೂರಿನಲ್ಲಿ ಆರ್‌.ಅಶೋಕ್‌, ಶಾಸಕರಾದ ಅರವಿಂದ ಬೆಲ್ಲದ, ಮಹೇಶ ಟೆಂಗಿನಕಾಯಿ, ಎಂ.ಆರ್‌. ಪಾಟೀಲ, ವಿಧಾನಪರಿಷತ್‌ ಸದಸ್ಯ ಪ್ರದೀಪ ಶೆಟ್ಟರ್, ಪಾಲಿಕೆ ಸದಸ್ಯರಾದ ಸಂತೋಷ ಚವ್ಹಾಣ್‌, ಶಿವು ಮೆಣಸಿನಕಾಯಿ, ರೂಪಾ ಶೆಟ್ಟಿ, ಉಮೇಶಗೌಡ ಕೌಜಲಗಿ, ತಿಪ್ಪಣ್ಣ ಮಜ್ಜಗಿ ಸೇರಿದಂತೆ ಬಿಜೆಪಿಯ ಇತರ ಮುಖಂಡರ ಹಾಗೂ ಕಾರ್ಯಕರ್ತರು ಸೇರಿ 43 ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ.

ರೌಡಿಶೀಟರ್‌ ಶ್ರೀಕಾಂತ ಪೂಜಾರಿ ಬಂಧನ ವಿರೋಧಿಸಿ ಬಿಜೆಪಿ ಮುಖಂಡರು ಪ್ರತಿಭಟನೆ ನೆಪದಲ್ಲಿ ಜ.3ರಂದು ಶಹರ ಪೊಲೀಸ್‌ ಠಾಣೆ ಎದುರು ಆರು ಕೋಟಿ ಜನರ ಪ್ರತಿನಿಧಿಯಾದ ಮುಖ್ಯಮಂತ್ರಿ ಸಿದ್ದರಾಮಯ್ಯರ ವಿರುದ್ಧ ಘೋಷಣೆ ಕೂಗಿದ್ದಾರೆ. ಮುಖ್ಯಮಂತ್ರಿಗೆ ಹಾಗೂ ಕಾಂಗ್ರೆಸ್‌ ಪಕ್ಷಕ್ಕೆ ಅವಾಚ್ಯ ಪದಗಳಿಂದ ನಿಂದಿಸಿ ಅವಮಾನ ಮಾಡಿದ್ದಾರೆ. ಠಾಣೆಗೆ ಮುತ್ತಿಗೆ ಹಾಕಲು ಯತ್ನಿಸಿ ನಾಗರಿಕ ವಿರೋಧಿ ಚಟುವಟಿಕೆ ನಡೆಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಕ್ರಿಮಿನಲ್ಹಿನ್ನೆಲೆ ಹೊಂದಿದ್ದ ಆರೋಪಿ:

ಹುಬ್ಬಳ್ಳಿ ಶಹರ ಠಾಣೆ ಪೊಲೀಸರಿಂದ ಬಂಧಿತ ಶ್ರೀಕಾಂತ ಪೂಜಾರಿಯ ಹಿನ್ನೆಲೆ ನೋಡಿದಾಗ ಆತ ಕ್ರಿಮಿನಲ್‌ ಎನ್ನುವುದು ಬಯಲಾಗಿದೆ. ಆತನ ಮೇಲೆ ಒಟ್ಟು 15 ಪ್ರಕರಣಗಳಿರುವ ಬಗ್ಗೆ ವರದಿಯಾಗಿತ್ತು. ಹುಬ್ಬಳ್ಳಿಯ ಕಸಬಾಪೇಟೆ ಪೊಲೀಸ್ ಠಾಣೆ, ಹಳೇಹುಬ್ಬಳ್ಳಿ ಪೊಲೀಸ್ ಠಾಣೆ, ವಿದ್ಯಾನಗರ ಪೊಲೀಸ್ ಠಾಣೆ ಹಾಗೂ ಶಹರ ಪೊಲೀಸ್‌ ಠಾಣೆಯಲ್ಲಿ ಆತನ ವಿರುದ್ಧ ಪ್ರಕರಣಗಳಿವೆ. ಇದರಲ್ಲಿ 11 ಕೇಸ್ ಗಳು ಅಕ್ರಮ ಸರಾಯಿ ಮಾರಾಟದ ಕುರಿತು ಕೇಸ್‌ಗಳಾಗಿದೆ. ಕಸಬಾಪೇಟೆ ಪೊಲೀಸ್ ಠಾಣೆಯಲ್ಲಿ 3 ಕೇಸ್ ಹಾಗೂ ಶಹರ ಠಾಣೆಯಲ್ಲಿ ಅಂಗಡಿಗೆ ಬೆಂಕಿ ಹಚ್ಚಿದ ಕೇಸ್ ದಾಖಲಾಗಿದೆ.

1992ರಲ್ಲಿ ಮಳಿಗೆಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ 31 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಶ್ರೀಕಾಂತ ಪೂಜಾರಿಯನ್ನು 2023ರ ಡಿಸೆಂಬರ್‌ 29ರಂದು ಬಂಧಿಸಲಾಗಿತ್ತು. ಶ್ರೀಕಾಂತ್ ಪೂಜಾರಿ ಜೈಲಿನಿಂದ ಶನಿವಾರ ಬಿಡುಗಡೆಯಾಗಿದ್ದಾನೆ.  ಹುಬ್ಬಳ್ಳಿಯ ಒಂದನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯವು ಶುಕ್ರವಾರ ಆತನಿಗೆ ಜಾಮೀನು ಮಂಜೂರು ಮಾಡಿತ್ತು.

ಇದನ್ನು ಓದಿ: ರಾಜಕೀಯಕ್ಕಾಗಿ ಕ್ರಿಮಿನಲ್‌ಗಳ ಪರ ‘ಬಿಜೆಪಿ’ ಪ್ರತಿಭಟನೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿಡಿಯೋ ತೆಗೆದುಹಾಕಿದ ಪ್ರಕರಣ: ಮಾರ್ಕ್ ಝುಕರ್‌ಬರ್ಗ್‌ ಕ್ಷಮೆಯಾಚಣೆಗೆ ಒತ್ತಾಯಿಸಿದ ಸಂಸದೀಯ ಸಮಿತಿ; 3 ದಿನಗಳ ಗಡುವು

ಪ್ರಧಾನಿ ನರೇಂದ್ರ ಮೋದಿಯವರ ವೀಡಿಯೊವನ್ನು ಫೇಸ್‌ಬುಕ್‌ನಿಂದ ತೆಗೆದುಹಾಕಿದ್ದಕ್ಕೆ ಸಂಬಂಧಿಸಿದಂತೆ ಮೆಟಾ ಮುಖ್ಯಸ್ಥ ಮಾರ್ಕ್ ಜುಕರ್‌ಬರ್ಗ್ ಕ್ಷಮೆಯಾಚಿಸಬೇಕೆಂದು ಸಂಸದೀಯ ಸ್ಥಾಯಿ ಸಮಿತಿ ಒತ್ತಾಯಿಸಿದ್ದು, ಈ ಕ್ರಮವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಹೇಳಿದೆ. ಇಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ...

ಜನರ ಆತಂಕಗಳಿಗೆ ಧ್ವನಿಯಾಗಲು CJP ಸಿದ್ಧತೆ: ಮಹಾರಾಷ್ಟ್ರದಲ್ಲಿ ಅಭಿಜೀತ್ ದೀಪ್ಕೆ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

ಕಾಕ್ರೋಚ್ ಜನತಾ ಪಾರ್ಟಿ (CJP) ಸದ್ಯಕ್ಕೆ ಒತ್ತಡದ ಗುಂಪಾಗಿ ಕೆಲಸ ಮಾಡಲಿದ್ದು, ಪ್ರಸಕ್ತ ಭಾರತಕ್ಕೆ ಬೇಕಾಗಿರುವುದು ಕೂಡ ಅದೇ ಆಗಿದೆ ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಬುಧವಾರ ಸ್ಪಷ್ಟಪಡಿಸಿದ್ದಾರೆ. ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ...

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಆಲ್ ಇಂಡಿಯಾ ಬಿಎಸ್‌ಪಿ ಹಾಗೂ ಜನಪರ ಸಂಘಟನೆಗಳ ತೀವ್ರ ಆಕ್ರೋಶ 

ರಾಯಚೂರು ಜಿಲ್ಲೆಯಲ್ಲಿ ದಲಿತ ಯುವ ನಾಯಕನೊಬ್ಬನ ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ಇಡೀ ಜಿಲ್ಲೆಯಲ್ಲಿ ತೀವ್ರ ಆತಂಕ, ಕಾವು ಮತ್ತು ಆಕ್ರೋಶದ ವಾತಾವರಣ ನಿರ್ಮಾಣವಾಗಿದೆ. ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ನಿವಾಸಿ, ಮಾದಿಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’ ಎಂಬ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನೀಡಿರುವ ಈ ಹೇಳಿಕೆಯು...

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...