Homeಮುಖಪುಟನೇಹಾ ಕೊಲೆ ಪ್ರಕರಣ: 'ತನಿಖೆ ದಿಕ್ಕು ತಪ್ಪುತ್ತಿದೆ' ಎಂದು ಆರೋಪಿಸಿದ್ದ ತಂದೆ ಕ್ಷಮೆಯಾಚನೆ

ನೇಹಾ ಕೊಲೆ ಪ್ರಕರಣ: ‘ತನಿಖೆ ದಿಕ್ಕು ತಪ್ಪುತ್ತಿದೆ’ ಎಂದು ಆರೋಪಿಸಿದ್ದ ತಂದೆ ಕ್ಷಮೆಯಾಚನೆ

- Advertisement -
- Advertisement -

ಹುಬ್ಬಳ್ಳಿಯ ನೇಹಾ ಕೊಲೆ ಪ್ರಕರಣದ ತನಿಖೆ ದಿಕ್ಕು ತಪ್ಪುತ್ತಿದೆ ಎಂದು ಆರೋಪಿಸಿದ್ದ ಆಕೆಯ ತಂದೆ ನಿರಂಜನಯ್ಯ ಹಿರೇಮಠ ಇದೀಗ ತಮ್ಮ ಹೇಳಿಕೆಗೆ ಕ್ಷಮೆಯಾಚಿಸಿದ್ದಾರೆ. ಮಾಹಿತಿಯ ಕೊರತೆಯಿಂದ ಮಗಳ ಕೊಲೆ ಪ್ರಕರಣದ ತನಿಖೆ ದಿಕ್ಕು ತಪ್ಪುತ್ತಿದೆ ಎಂದು ಭಾವಿಸಿದ್ದೆ, ನನ್ನಿಂದಾದ ತಪ್ಪಿಗೆ ಕ್ಷಮೆ ಕೇಳುತ್ತಿದ್ದೇನೆ ಎಂದು ಹೇಳಿದ್ದಾರೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ನಿರಂಜನಯ್ಯ ಹಿರೇಮಠ, ‘ಮಗಳು ಕೊಲೆಯಾದ ನಂತರ ನಾನು ದುಃಖದಲ್ಲಿ ಇದ್ದೆ. ಮಗಳ ಅಂತ್ಯಕ್ರಿಯೆವರೆಗೂ ನನ್ನ ಜೊತೆಯಲ್ಲಿದ್ದ ನನ್ನವರು, ನಂತರ ಕಂಡಿರಲಿಲ್ಲ. ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದು ಭಾವಿಸಿ, ಮಾಹಿತಿಯ ಕೊರತೆಯಿಂದ ಸರ್ಕಾರದ ವಿರುದ್ಧ ಮಾತನಾಡಿದ್ದೆ. ಪ್ರಕರಣದ ಕುರಿತು ಎಲ್ಲಾ ಮಾಹಿತಿಯನ್ನು ನಮ್ಮ ಪಕ್ಷದವರೇ ಸರ್ಕಾರಕ್ಕೆ ಒದಗಿಸಿದ್ದಾರೆ, ನನ್ನಿಂದ ತಪ್ಪಾಗಿದೆ ಎಂದು ಹೇಳಿದ್ದಾರೆ.

ನಮ್ಮ ಪಕ್ಷದವರು ತೆರೆಮರೆಯಲ್ಲಿ ನನ್ನ ಮಗಳಿಗೆ ನ್ಯಾಯ ಕೊಡಿಸುವಲ್ಲಿ ಪ್ರಯತ್ನ ಮಾಡುತ್ತಿದ್ದಾರೆ. ಇದೀಗ ಪ್ರಕರಣ ಸಿಐಡಿಗೆ ವಹಿಸುವಲ್ಲಿಯೂ ಅವರ ಪಾತ್ರ ವಹಿಸಿದ್ದಾರೆ. ಪೊಲೀಸ್ ಕಮಿಷನರ್ ಕೂಡ ಸರಿಯಾದ ದಿಕ್ಕಿನಲ್ಲಿ ತನಿಖೆ ನಡೆಸುತ್ತಿದ್ದಾರೆ. ಅವರ ವಿರುದ್ಧವೂ ನಾನು ಅಸಮಧಾನ ವ್ಯಕ್ತಪಡಿಸಿದ್ದೆ. ಮಗಳನ್ನು ಕಳೆದುಕೊಂಡ ದುಃಖದಲ್ಲಿದ್ದ ನಾನು ಏನೇ ತಪ್ಪು ಮಾತನಾಡಿದರೂ ಅನ್ಯಥಾ ಭಾವಿಸದೆ ನನ್ನಿಂದಾದ ತಪ್ಪಿಗೆ ಎಲ್ಲರಿಂದಲೂ ಕ್ಷಮೆ ಕೇಳುತ್ತಿದ್ದೇನೆ ಎಂದು ಹೇಳಿದ್ದಾರೆ.

ಇಂತಹ ಪ್ರಕರಣಗಳು ನಡೆದಾಗ ಸೂಕ್ತ ಕ್ರಮ ಕೈಗೊಳ್ಳಲು ವಿಶೇಷ ಕಾನೂನು ರಚಿಸುವ ಕುರಿತು ಸರ್ಕಾರದ ಮೇಲೆ ಒತ್ತಡ ಹೇರಲಾಗುತ್ತಿದೆ. ಆ ಕಾನೂನಿಗೆ ‘ನೇಹಾ ಹಿರೇಮಠ ಕಾಯ್ದೆ’ ಎಂದು ಹೆಸರಿಡಬೇಕು. ಅಂತಹ ಕಾಯ್ದೆ ಜಾರಿಗೆ ಬಂದರೆ ಅಪರಾಧ ಮಾಡುವ ಮನಸ್ಥಿತಿಯವರಿಗೆ ಭಯ ಹುಟ್ಟಿಸುತ್ತದೆ. ಮತ್ತೊಂದು ಇಂತಹ ಪ್ರಕರಣ ಎಲ್ಲಿಯೂ ಮರುಕಳಿಸಬಾರದು. ಎಲ್ಲಾ ಹೆಣ್ಣು ಮಕ್ಕಳು ನಿರ್ಭಯದಿಂದ ಕಾಲೇಜಿಗೆ ಹೋಗುವಂತಾಗಬೇಕು ಎಂದು ಹೇಳಿದ್ದಾರೆ.

ಪ್ರಕರಣ ಸಿಐಡಿ ತನಿಖೆಗೆ: 

ಹುಬ್ಬಳ್ಳಿಯ ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಸಿಐಡಿಗೆ ವಹಿಸಿ ಆದೇಶಿಸಿದೆ. ಸಿಐಡಿಯ ಎಸ್ಪಿ ವೆಂಕಟೇಶ್ ನೇತೃತ್ವದಲ್ಲಿ ತನಿಖೆ ಪ್ರಾರಂಭವಾಗಿದೆ.

ಏಪ್ರಿಲ್ 18ರಂದು ಸಂಜೆ ಹುಬ್ಬಳ್ಳಿಯ ಬಿವಿಬಿ ಕಾಲೇಜು ಕ್ಯಾಂಪಸ್‌ನಲ್ಲಿ ವಿದ್ಯಾರ್ಥಿ ನೇಹಾ ಹಿರೇಮಠ ಅವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಪ್ರಕರಣ ಸಂಬಂಧ ಫಯಾಝ್ ಬಾಬಾಸಾಹೇಬ್ ಖೊಂಡಾನಾಯಕ್ ಎಂಬಾತನನ್ನು ಹುಬ್ಬಳ್ಳಿಯ ವಿದ್ಯಾನಗರ ಪೊಲೀಸರು ಬಂಧಿಸಿದ್ದರು.

ಇದನ್ನು ಓದಿ: ಜಾಗತಿಕ ಮಾದ್ಯಮಗಳಲ್ಲಿ ಸುದ್ದಿಯಾದ ಪ್ರಧಾನಿಯ ದ್ವೇಷ ಭಾಷಣ: ಅಂತರಾಷ್ಟ್ರೀಯ ಮಟ್ಟದಲ್ಲಿ ಮತ್ತೆ ಟೀಕೆಗೆ ಗುರಿಯಾದ ಮೋದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...