Homeಕರ್ನಾಟಕಹುಬ್ಬಳ್ಳಿ-ಅಂಕೋಲಾ ರೈಲು ಮಾರ್ಗ; ವನ್ಯ ಜೀವಿಗಳ ಮೇಲಾಗುವ ಪರಿಣಾಮ ಸಮೀಕ್ಷೆಗೆ ಹೈಕೋರ್ಟ್ ನಿರ್ದೇಶನ

ಹುಬ್ಬಳ್ಳಿ-ಅಂಕೋಲಾ ರೈಲು ಮಾರ್ಗ; ವನ್ಯ ಜೀವಿಗಳ ಮೇಲಾಗುವ ಪರಿಣಾಮ ಸಮೀಕ್ಷೆಗೆ ಹೈಕೋರ್ಟ್ ನಿರ್ದೇಶನ

- Advertisement -
- Advertisement -

ಅಂಕೋಲಾ-ಹುಬ್ಬಳ್ಳಿ ಬ್ರಾಡ್‌ಗೇಜ್ ರೈಲು ಮಾರ್ಗ ನಿರ್ಮಾಣದಿಂದ ಪಶ್ಚಿಮ ಘಟ್ಟಗಳಲ್ಲಿನ ವನ್ಯ ಜೀವಿಗಳ ಮೇಲಾಗುವ ಪರಿಣಾಮದ ಸಾಧಕ-ಭಾದಕಗಳ ಸಮೀಕ್ಷೆ ಸ್ವತಂತ್ರವಾಗಿ ನಡೆಸಿ ವರದಿ ಸಲ್ಲಿಸುವಂತೆ ರಾಷ್ಟ್ರೀಯ ವನ್ಯ ಜೀವಿ ಮಂಡಳಿಗೆ ಹೈಕೋರ್ಟ್ ನಿರ್ದೇಶನ ನೀಡಿದೆ.

ಕರ್ನಾಟಕದ ಕರಾವಳಿ ಮತ್ತು ಉತ್ತರ ಕರ್ನಾಟಕ ಜೋಡಿಸುವ ಹುಬ್ಬಳ್ಳಿ-ಅಂಕೋಲಾ ರೈಲು ಮಾರ್ಗ ಯೋಜನೆ ಈ ಭಾಗದ ಜನರ ಬಹು ದಿನದ ಕನಸು. ದಶಕಗಳಿಂದ ನೆನೆಗುದಿಗೆ ಬಿದ್ದಿರುವ ಸದರಿ ರೈಲು ಮಾರ್ಗಕ್ಕಾಗಿ ಸುದೀರ್ಘ ಹೋರಾಟ ನಡೆಯುತ್ತ ಬಂದಿದೆ. ಆದರೆ ಇದನ್ನು ಪರಿಸರವಾದಿಗಳು ನಿರಂತರವಾಗಿ ವಿರೋಧಿಸ್ತುತ್ತಿದ್ದಾರೆ. ಹಲವು ವರ್ಷಗಳ ಹಿಂದೆಯೆ ಅರ್ಧಕ್ಕೆ ಬಂದುನಿಂತಿರುವ ಅಂಕೋಲಾ-ಹುಬ್ಬಳ್ಳಿ ನಡುವಿನ 164.44 ಕಿ.ಮೀ. ಉದ್ದದ ರೈಲು ಮಾರ್ಗ ನಿಮಾಣಕ್ಕೆ 20-3-2020ರಂದು ಕರ್ನಾಟಕ ರಾಜ್ಯ ವನ್ಯ ಜೀವಿ ಮಂಡಳಿ ಅನುಮತಿ ಕೊಟ್ಟಿತ್ತು.

ಇದನ್ನು ಪ್ರಶ್ನಿಸಿ ಪ್ರಾಜೆಕ್ಟ್ ವೃಕ್ಷ ಪೌಂಡೇಶನ್ ಮತ್ತು ಗಿರಿಧರ್ ಕುಲಕರ್ಣಿ ಎಂಬವರು ಪ್ರತ್ಯೇಕವಾಗಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಇವೆರಡು ಅರ್ಜಿಗಳು ಬುಧವಾರ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ನೇತೃತ್ವದ ವಿಭಾಗಿಯ ಪೀಠದ ಮುಂದೆ ಬಂದಿದ್ದವು. ವಾದ ಆಲಿಸಿದ ನ್ಯಾಯಪೀಠ “ಅಭಿವೃದ್ಧಿಯಾಗಬೇಕು, ಆದರೆ ಅದರಿಂದ ವನ್ಯ ಜೀವಿ ಸಂಪತ್ತಿಗೆ ತೊಂದರೆಯಾಗಬಾರದು. ಆದ್ದರಿಂದ ರಾಷ್ಟ್ರೀಯ ವನ್ಯಜೀವಿ ಮಂಡಳಿ ಯೋಜನೆಯ ಸಾಧಕ-ಬಾಧಕಗಳ ಮೌಲ್ಯಮಾಪನ ಮಾಡಿ ವರದಿ ಸಲ್ಲಿಸಬೇಕು. ಲಭ್ಯವಿರುವ ಸಮೀಕ್ಷೆ ಮತ್ತು ವರದಿ ಪರಿಶೀಲಿಸಬೇಕು. ತಜ್ಞರ ನೆರವು ಬೇಕಿದ್ದರೆ ಪಡೆದುಕೊಳ್ಳಬಹುದು” ಎಂದು ಅಭಿಪ್ರಾಯಪಟ್ಟಿತು.

ಉಚ್ಛ ನ್ಯಾಯಾಲಯದ ತೀರ್ಪನ್ನು ಹುಬ್ಬಳ್ಳಿ-ಅಂಕೋಲಾ ರೈಲು ಹೋರಾಟ ಕ್ರಿಯಾ ಸಮಿತಿ ಸ್ವಾಗತಿಸಿದ್ದು, ಹೈಕೋರ್ಟ್ ನಿರ್ದೇಶನವು ಯೋಜನೆ ಜಾರಿಗಾಗಿ ಸಮಿತಿ ನಡೆಸುತ್ತಿರುವ ಸುದೀರ್ಘ ಹೋರಾಟಕ್ಕೆ ಶಕ್ತಿ ತುಂಬಿದೆ. ಮುಖ್ಯ ಮಂತ್ರಿಗಳನ್ನು ಭೇಟಿಯಾಗಿ ಸರ್ಕಾರದ ವತಿಯಿಂದ ಯೋಜನೆಗೆ ಪೂರಕವಾಗಿ ಇರುವ ವಿವಿಧ ಅಧ್ಯಯನ ವರದಿಗಳನ್ನು ರಾಷ್ಟ್ರೀಯ ವನ್ಯಜೀವಿ ಮಂಡಳಿಗೆ ಒದಗಿಸಲು ಕ್ರಮಕೈಗೊಳ್ಳುವಂತೆ ವಿನಂತಿಸಲಾಗುವುದೆಂದು ಹೋರಾಟ ಸಮಿತಿಯ ಅಧ್ಯಕ್ಷ ರಮಾನಂದ ನಾಯಕ, ಕಾರ್ಯದರ್ಶಿ ವಿಠ್ಠಲದಾಸ ಕಾಮತ್ ಮತ್ತು ಪದಾಧಿಕಾರಿಗಳು ತಿಳಿಸಿದ್ದಾರೆ.

ಹೈಕೋರ್ಟ್ ನಿರ್ದೇಶನವನ್ನು ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಮಂತ್ರಿ ಶಿವರಾಮ ಹೆಬ್ಬಾರ್ ಮತ್ತು ಕಾರವಾರದ ಶಾಸಕಿ ರೂಪಾಲಿ ನಾಯ್ಕ್ ಸ್ವಾಗತಿಸಿದ್ದಾರೆ. ರಾಜ್ಯ ಸರ್ಕಾರ ತಡೆಯಾಜ್ಞೆ ತೆರವಿಗಾಗಿ ವಿಶೇಷ ವಕೀಲರನ್ನು ನೇಮಿಸಿತ್ತು. ಹುಬ್ಬಳ್ಳಿ-ಅಂಕೋಲಾ ರೈಲು ಮಾರ್ಗ ಯೋಜನೆ ಎಷ್ಟು ಲಾಭದಾಯಕ ಮತ್ತು ಪರಿಸರ ಪೂರಕವೆಂಬುದನ್ನು ಸರ್ಕಾರ ರಾಷ್ಟ್ರೀಯ ವನ್ಯಜೀವಿ ಮಂಡಳಿಗೂ ಮನವರಿಕೆ ಮಾಡಿಕೊಡಲಿದೆಯೆಂದು ಹೆಬ್ಬಾರ್ ಹೇಳಿದ್ದಾರೆ.


ಇದನ್ನೂ ಓದಿ: ಜೇನುಕುರುಬ ಆದಿವಾಸಿ ಯುವಕನಿಗೆ ಅರಣ್ಯ ಸಿಬ್ಬಂದಿಯಿಂದ ಗುಂಡೇಟು: ಭುಗಿಲೆದ್ದ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. Hubli 🔁Ankola railway route plan is the best one for the goods and passangers also… So plz expand the surroundung lines connect with Hubli Dividion SSS

  2. Hubli 🔁Ankola railway route plan is the best one for the goods and passangers also… So plz expand the surroundung lines connect with Hubli Dividion SSS.

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...