Homeಕರ್ನಾಟಕಹುಬ್ಬಳ್ಳಿ-ಅಂಕೋಲಾ ರೈಲು ಮಾರ್ಗ; ವನ್ಯ ಜೀವಿಗಳ ಮೇಲಾಗುವ ಪರಿಣಾಮ ಸಮೀಕ್ಷೆಗೆ ಹೈಕೋರ್ಟ್ ನಿರ್ದೇಶನ

ಹುಬ್ಬಳ್ಳಿ-ಅಂಕೋಲಾ ರೈಲು ಮಾರ್ಗ; ವನ್ಯ ಜೀವಿಗಳ ಮೇಲಾಗುವ ಪರಿಣಾಮ ಸಮೀಕ್ಷೆಗೆ ಹೈಕೋರ್ಟ್ ನಿರ್ದೇಶನ

- Advertisement -
- Advertisement -

ಅಂಕೋಲಾ-ಹುಬ್ಬಳ್ಳಿ ಬ್ರಾಡ್‌ಗೇಜ್ ರೈಲು ಮಾರ್ಗ ನಿರ್ಮಾಣದಿಂದ ಪಶ್ಚಿಮ ಘಟ್ಟಗಳಲ್ಲಿನ ವನ್ಯ ಜೀವಿಗಳ ಮೇಲಾಗುವ ಪರಿಣಾಮದ ಸಾಧಕ-ಭಾದಕಗಳ ಸಮೀಕ್ಷೆ ಸ್ವತಂತ್ರವಾಗಿ ನಡೆಸಿ ವರದಿ ಸಲ್ಲಿಸುವಂತೆ ರಾಷ್ಟ್ರೀಯ ವನ್ಯ ಜೀವಿ ಮಂಡಳಿಗೆ ಹೈಕೋರ್ಟ್ ನಿರ್ದೇಶನ ನೀಡಿದೆ.

ಕರ್ನಾಟಕದ ಕರಾವಳಿ ಮತ್ತು ಉತ್ತರ ಕರ್ನಾಟಕ ಜೋಡಿಸುವ ಹುಬ್ಬಳ್ಳಿ-ಅಂಕೋಲಾ ರೈಲು ಮಾರ್ಗ ಯೋಜನೆ ಈ ಭಾಗದ ಜನರ ಬಹು ದಿನದ ಕನಸು. ದಶಕಗಳಿಂದ ನೆನೆಗುದಿಗೆ ಬಿದ್ದಿರುವ ಸದರಿ ರೈಲು ಮಾರ್ಗಕ್ಕಾಗಿ ಸುದೀರ್ಘ ಹೋರಾಟ ನಡೆಯುತ್ತ ಬಂದಿದೆ. ಆದರೆ ಇದನ್ನು ಪರಿಸರವಾದಿಗಳು ನಿರಂತರವಾಗಿ ವಿರೋಧಿಸ್ತುತ್ತಿದ್ದಾರೆ. ಹಲವು ವರ್ಷಗಳ ಹಿಂದೆಯೆ ಅರ್ಧಕ್ಕೆ ಬಂದುನಿಂತಿರುವ ಅಂಕೋಲಾ-ಹುಬ್ಬಳ್ಳಿ ನಡುವಿನ 164.44 ಕಿ.ಮೀ. ಉದ್ದದ ರೈಲು ಮಾರ್ಗ ನಿಮಾಣಕ್ಕೆ 20-3-2020ರಂದು ಕರ್ನಾಟಕ ರಾಜ್ಯ ವನ್ಯ ಜೀವಿ ಮಂಡಳಿ ಅನುಮತಿ ಕೊಟ್ಟಿತ್ತು.

ಇದನ್ನು ಪ್ರಶ್ನಿಸಿ ಪ್ರಾಜೆಕ್ಟ್ ವೃಕ್ಷ ಪೌಂಡೇಶನ್ ಮತ್ತು ಗಿರಿಧರ್ ಕುಲಕರ್ಣಿ ಎಂಬವರು ಪ್ರತ್ಯೇಕವಾಗಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಇವೆರಡು ಅರ್ಜಿಗಳು ಬುಧವಾರ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ನೇತೃತ್ವದ ವಿಭಾಗಿಯ ಪೀಠದ ಮುಂದೆ ಬಂದಿದ್ದವು. ವಾದ ಆಲಿಸಿದ ನ್ಯಾಯಪೀಠ “ಅಭಿವೃದ್ಧಿಯಾಗಬೇಕು, ಆದರೆ ಅದರಿಂದ ವನ್ಯ ಜೀವಿ ಸಂಪತ್ತಿಗೆ ತೊಂದರೆಯಾಗಬಾರದು. ಆದ್ದರಿಂದ ರಾಷ್ಟ್ರೀಯ ವನ್ಯಜೀವಿ ಮಂಡಳಿ ಯೋಜನೆಯ ಸಾಧಕ-ಬಾಧಕಗಳ ಮೌಲ್ಯಮಾಪನ ಮಾಡಿ ವರದಿ ಸಲ್ಲಿಸಬೇಕು. ಲಭ್ಯವಿರುವ ಸಮೀಕ್ಷೆ ಮತ್ತು ವರದಿ ಪರಿಶೀಲಿಸಬೇಕು. ತಜ್ಞರ ನೆರವು ಬೇಕಿದ್ದರೆ ಪಡೆದುಕೊಳ್ಳಬಹುದು” ಎಂದು ಅಭಿಪ್ರಾಯಪಟ್ಟಿತು.

ಉಚ್ಛ ನ್ಯಾಯಾಲಯದ ತೀರ್ಪನ್ನು ಹುಬ್ಬಳ್ಳಿ-ಅಂಕೋಲಾ ರೈಲು ಹೋರಾಟ ಕ್ರಿಯಾ ಸಮಿತಿ ಸ್ವಾಗತಿಸಿದ್ದು, ಹೈಕೋರ್ಟ್ ನಿರ್ದೇಶನವು ಯೋಜನೆ ಜಾರಿಗಾಗಿ ಸಮಿತಿ ನಡೆಸುತ್ತಿರುವ ಸುದೀರ್ಘ ಹೋರಾಟಕ್ಕೆ ಶಕ್ತಿ ತುಂಬಿದೆ. ಮುಖ್ಯ ಮಂತ್ರಿಗಳನ್ನು ಭೇಟಿಯಾಗಿ ಸರ್ಕಾರದ ವತಿಯಿಂದ ಯೋಜನೆಗೆ ಪೂರಕವಾಗಿ ಇರುವ ವಿವಿಧ ಅಧ್ಯಯನ ವರದಿಗಳನ್ನು ರಾಷ್ಟ್ರೀಯ ವನ್ಯಜೀವಿ ಮಂಡಳಿಗೆ ಒದಗಿಸಲು ಕ್ರಮಕೈಗೊಳ್ಳುವಂತೆ ವಿನಂತಿಸಲಾಗುವುದೆಂದು ಹೋರಾಟ ಸಮಿತಿಯ ಅಧ್ಯಕ್ಷ ರಮಾನಂದ ನಾಯಕ, ಕಾರ್ಯದರ್ಶಿ ವಿಠ್ಠಲದಾಸ ಕಾಮತ್ ಮತ್ತು ಪದಾಧಿಕಾರಿಗಳು ತಿಳಿಸಿದ್ದಾರೆ.

ಹೈಕೋರ್ಟ್ ನಿರ್ದೇಶನವನ್ನು ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಮಂತ್ರಿ ಶಿವರಾಮ ಹೆಬ್ಬಾರ್ ಮತ್ತು ಕಾರವಾರದ ಶಾಸಕಿ ರೂಪಾಲಿ ನಾಯ್ಕ್ ಸ್ವಾಗತಿಸಿದ್ದಾರೆ. ರಾಜ್ಯ ಸರ್ಕಾರ ತಡೆಯಾಜ್ಞೆ ತೆರವಿಗಾಗಿ ವಿಶೇಷ ವಕೀಲರನ್ನು ನೇಮಿಸಿತ್ತು. ಹುಬ್ಬಳ್ಳಿ-ಅಂಕೋಲಾ ರೈಲು ಮಾರ್ಗ ಯೋಜನೆ ಎಷ್ಟು ಲಾಭದಾಯಕ ಮತ್ತು ಪರಿಸರ ಪೂರಕವೆಂಬುದನ್ನು ಸರ್ಕಾರ ರಾಷ್ಟ್ರೀಯ ವನ್ಯಜೀವಿ ಮಂಡಳಿಗೂ ಮನವರಿಕೆ ಮಾಡಿಕೊಡಲಿದೆಯೆಂದು ಹೆಬ್ಬಾರ್ ಹೇಳಿದ್ದಾರೆ.


ಇದನ್ನೂ ಓದಿ: ಜೇನುಕುರುಬ ಆದಿವಾಸಿ ಯುವಕನಿಗೆ ಅರಣ್ಯ ಸಿಬ್ಬಂದಿಯಿಂದ ಗುಂಡೇಟು: ಭುಗಿಲೆದ್ದ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. Hubli 🔁Ankola railway route plan is the best one for the goods and passangers also… So plz expand the surroundung lines connect with Hubli Dividion SSS

  2. Hubli 🔁Ankola railway route plan is the best one for the goods and passangers also… So plz expand the surroundung lines connect with Hubli Dividion SSS.

LEAVE A REPLY

Please enter your comment!
Please enter your name here

- Advertisment -

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...